Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ


Team Udayavani, Apr 17, 2024, 7:55 AM IST

5-ginger

ನೀವು ಪ್ರತೀದಿನ ಶುಂಠಿಯನ್ನು ಸೇವಿಸುವ ಆಲೋಚನೆಯನ್ನು ಹೊಂದಿರುವಿರಾ?

ಹಣ್ಣು ಹಂಪಲುಗಳು ಮತ್ತು ತರಕಾರಿಗಳು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಅತ್ಯಗತ್ಯ ಎಂಬುದು ನಮಗೆ ತಿಳಿದಿದೆ. ವಿವಿಧ ನೈಸರ್ಗಿಕ ಬಣ್ಣಗಳನ್ನು ಹೊಂದಿರುವ ಇಂತಹ ಹಣ್ಣು, ತರಕಾರಿ, ಸೊಪ್ಪು ತರಕಾರಿಗಳನ್ನು ದಿನದಲ್ಲಿ ಹಲವು ಬಾರಿ ಸೇವಿಸುವುದು ನಮ್ಮ ಆರೋಗ್ಯಕ್ಕೆ ಅತ್ಯುತ್ತಮ ಎಂಬುದು ನಮಗೆ ಗೊತ್ತಿದೆ. ಆದರೆ ಕೆಲವು ಮಸಾಲೆ ವಸ್ತುಗಳು ಕೂಡ ಆರೋಗ್ಯಕ್ಕೆ ಉಪಕಾರಿ ಎಂಬುದು ಎಷ್ಟು ಜನರಿಗೆ ತಿಳಿದಿದೆ?

ಉದಾಹರಣೆಗೆ ಶುಂಠಿಯನ್ನೇ ತೆಗೆದುಕೊಳ್ಳಿ. ಪ್ರತೀ ದಿನವೂ ನಾವು ಶುಂಠಿಯನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ಅಪಾರ ಲಾಭಗಳಿವೆ. ನಮ್ಮ ದೇಹ ಮತ್ತು ಮೆದುಳಿಗೆ ಶಕ್ತಿಯುತ ಪ್ರಯೋಜನಗಳನ್ನು ಒದಗಿಸುವ ಅನೇಕ ಪೌಷ್ಟಿಕಾಂಶಗಳು ಶುಂಠಿಯಲ್ಲಿವೆ.

“ಸೂಪರ್‌ ಫ‌ುಡ್‌’ ಎಂದು ವರ್ಣಿಸಬಹುದಾದ ಅಪೂರ್ವ ಆಹಾರವಸ್ತುಗಳಲ್ಲಿ ಶುಂಠಿಯೂ ಒಂದು. ನಮ್ಮ ಆರೋಗ್ಯದ ವಿಚಾರದಲ್ಲಿ ಅನೇಕ ಪವಾಡಗಳನ್ನು ಉಂಟು ಮಾಡಬಹುದಾದ ಸೂಪರ್‌ಫ‌ುಡ್‌ ಇದು. ಶುಂಠಿಯು ತೀಕ್ಷ್ಣವಾದ ರುಚಿ ಮತ್ತು ಅನೇಕ ಔಷಧೀಯ ಮೌಲ್ಯಗಳನ್ನು ಹೊಂದಿರುವ ಸಂಬಾರವಸ್ತು. ಶತಮಾನಗಳ ಹಿಂದೆ ಎಲ್ಲ ಬಗೆಯ ಅನಾರೋಗ್ಯಗಳನ್ನು ಗುಣಪಡಿಸಲು ಶುಂಠಿಯನ್ನು ಉಪಯೋಗಿಸಲಾಗುತ್ತಿತ್ತು.

ಇದರ ಜತೆಗೆ ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದಲೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು, ನಮ್ಮನ್ನು ನಾವು ಆರೋಗ್ಯಯುತವಾಗಿ ಇರಿಸಿಕೊಳ್ಳಬಹುದು. ನೀವು ಪ್ರತೀ ದಿನ ಶುಂಠಿಯನ್ನು ಸೇವಿಸುವ ಆಲೋಚನೆಯನ್ನು ಹೊಂದಿದ್ದರೆ ಅದಕ್ಕೆ ನಮ್ಮ ಪ್ರೋತ್ಸಾಹವಿದೆ. ಪ್ರತೀದಿನ ಶುಂಠಿಯನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಲಾಭಗಳಿವೆ.

ಗಮನಿಸಿ: ಪ್ರತೀದಿನ ಒಂದು ತುಂಡು ಶುಂಠಿಯನ್ನೇ ಸೇವಿಸಬೇಕೆಂದೇನಿಲ್ಲ. ಶುಂಠಿಯನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಅಥವಾ ಜಜ್ಜಿ ಜ್ಯೂಸ್‌, ಚಹಾ ಅಥವಾ ಇತರ ಖಾದ್ಯ ಪದಾರ್ಥಗಳ ಜತೆಗೆ ಸೇರಿಸಿ ಸೇವಿಸಬಹುದು. ಇಂತಹ ಶುಂಠಿ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳನ್ನು ಉಂಟು ಮಾಡುತ್ತದೆ ಎಂಬುದನ್ನು ಗಮನಿಸೋಣ. ­

ಉರಿಯೂತ ನಿವಾರಕ (ಆ್ಯಂಟಿ ಇನ್‌ಫ್ಲಮೇಟರಿ): ಶುಂಠಿಯ ಪರಿಣಾಮದಿಂದಾಗಿ ದೇಹದ ಯಾವುದೇ ಭಾಗದಲ್ಲಿ ಉಂಟಾಗಿರುವ ಉರಿಯೂತವು ಕಡಿಮೆಯಾಗುತ್ತದೆ. ­

ವಾಕರಿಕೆ ಮಾಯವಾಗುತ್ತದೆ: ಕೆಲವೊಮ್ಮೆ ನಿಮಗೆ ಬೆಳಗ್ಗೆ ವಾಕರಿಕೆಯ ಅನುಭವ ಆಗುತ್ತಿದೆಯೇ? ಪ್ರತೀ ದಿನ ಶುಂಠಿಯನ್ನು ಸೇವಿಸುವುದರಿಂದ ಇದು ನಿವಾರಣೆಯಾಗುತ್ತದೆ. ವಿಶೇಷವಾಗಿ ಗರ್ಭಿಣಿಯರು ಮತ್ತು ಕಿಮೊಥೆರಪಿಗೆ ಒಳಗಾಗುತ್ತಿರುವವರು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ.

 ಸ್ನಾಯು ನೋವು ಕಡಿಮೆಯಾಗುತ್ತದೆ: ನಿಮಗೆ ಸ್ನಾಯು ನೋವು ಅಥವಾ ಕಾಲುಗಳಲ್ಲಿ ನೋವು ಇದೆಯೇ? ಶುಂಠಿಯನ್ನು ಸೇವಿಸುವುದರಿಂದ ಇದು ಕಡಿಮೆಯಾಗಬಲ್ಲುದು. ಪ್ರತೀ ದಿನ ಶುಂಠಿಯನ್ನು ಸೇವಿಸುವುದರಿಂದ ಸ್ನಾಯು ನೋವು ಕ್ರಮೇಣ ಕಡಿಮೆಯಾಗುತ್ತದೆ. ­

ಮಲ ವಿಸರ್ಜನೆಗೆ ಸಹಾಯ ಮಾಡುತ್ತದೆ: ಪ್ರತೀ ದಿನ ಶುಂಠಿ ಸೇವನೆಯಿಂದ ಮಲ ವಿಸರ್ಜನೆಗೆ ಸಹಾಯವಾಗುತ್ತದೆ. ನೀವು ಆಗಾಗ ಮಲಬದ್ಧತೆಯನ್ನು ಅನುಭವಿಸುತ್ತಿರುವಿರಾ? ಹಾಗಾದರೆ ಶುಂಠಿಯಿಂದ ನಿಮಗೆ ಸಹಾಯವಾಗಬಹುದು. ­

ಅಜೀರ್ಣವನ್ನು ನಿವಾರಿಸುತ್ತದೆ: ನಿಮಗೆ ದೀರ್ಘ‌ಕಾಲೀನ ಅಜೀರ್ಣವಿದ್ದರೆ ಶುಂಠಿಯಿಂದ ನಿಮಗೆ ಉಪಶಮನ ಸಿಗಬಹುದಾಗಿದೆ. ಊಟ-ಉಪಾಹಾರಕ್ಕೆ ಮುನ್ನ ಶುಂಠಿಯನ್ನು ಸೇವಿಸಿದರೆ ಜೀರ್ಣಾಂಗ ಬೇಗನೆ ಖಾಲಿಯಾಗುತ್ತದೆ, ಇದರಿಂದ ಆಹಾರವು ಜೀರ್ಣಾಂಗದಲ್ಲಿ ಇರುವ ಸಮಯ ಕಡಿಮೆಯಾಗುವ ಮೂಲಕ ಸಮಸ್ಯೆ ನಿವಾರಣೆಯಾಗುತ್ತದೆ. ­

ಮುಟ್ಟಿನ ನೋವಿನಿಂದ ಉಪಶಮನ: ನಿಮ್ಮ ಮುಟ್ಟಿನ ಅವಧಿಯಲ್ಲಿ ನೋವು ತೊಂದರೆ ನೀಡುತ್ತದೆಯೇ? ಇದಕ್ಕೂ ಪ್ರತೀದಿನ ಶುಂಠಿ ಸೇವಿಸುವುದರಿಂದ ಪರಿಹಾರ ಸಿಗಬಲ್ಲುದು. ಶುಂಠಿಯು ನೋವನ್ನು ಕಡಿಮೆ ಮಾಡುವ ನೋವು ನಿವಾರಕ ಗುಣವನ್ನು ಹೊಂದಿದ್ದು, ಹೊಟ್ಟೆ ನೋವು ಕಡಿಮೆಯಾಗಬಲ್ಲುದು. ­

ಕೊಲೆಸ್ಟರಾಲ್‌ ಮತ್ತು ರಕ್ತದಲ್ಲಿ ಸಕ್ಕರೆಯ ಮಟ್ಟ ಕಡಿಮೆ ಮಾಡುತ್ತದೆ: ಒಂದು ತಿಂಗಳು ಕಾಲ ಪ್ರತೀ ದಿನ ಶುಂಠಿಯನ್ನು ಸೇವಿಸುವುದರಿಂದ ‘ಕೆಟ್ಟ’ ಕೊಲೆಸ್ಟರಾಲ್‌ ಮತ್ತು ಟ್ರೈಗ್ಲಿಸರೈಡ್‌ ಗಳು ಕಡಿಮೆಯಾಗುತ್ತವೆ.

ರೋಗ ನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ: ಶುಂಠಿಯಲ್ಲಿರುವ ಉರಿಯೂತ ನಿವಾರಕ ಗುಣವು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಸದೃಢಗೊಳಿಸುತ್ತದೆ. ನಿಮಗೆ ಶೀತ ಬಾಧೆ ಅಥವಾ ವೈರಾಣು ಸೋಂಕು ಉಂಟಾಗಿದೆಯೇ? ಬೇಗನೆ ಗುಣಹೊಂದಲು ನಿಮಗೆ ಶುಂಠಿ ಸಹಾಯ ಮಾಡಬಹುದಾಗಿದೆ.

ನಮ್ಮನ್ನು ಆರೋಗ್ಯಯುತವಾಗಿ ಇರಿಸುವ ಆಹಾರವಸ್ತುಗಳು ನಮಗೆ ಅಗತ್ಯ. ಇಂತಹ “ಸೂಪರ್‌ ಫ‌ುಡ್‌’ಗಳಲ್ಲಿ ಶುಂಠಿಯೂ ಒಂದು.

ಸುಷ್ಮಾ ಐತಾಳ,

ಪಥ್ಯಾಹಾರ ತಜ್ಞೆ,

ಕೆಎಂಸಿ ಆಸ್ಪತ್ರೆ, ಅತ್ತಾವರ,

ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಪಥ್ಯಾಹಾರ ವಿಭಾಗ, ಕೆಎಂಸಿ, ಮಂಗಳೂರು)

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.