ಆರೋಗ್ಯ ಕಾರ್ಡ್‌ ನೋಂದಣಿ ಚುರುಕು: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈಗ ಹೊಸ ನಿಯಮದಿಂದ ಕಾರ್ಡ್‌ಗೆ ಬೇಡಿಕೆ ಹೆಚ್ಚಿದೆ.

Team Udayavani, Dec 29, 2021, 10:40 AM IST

ಆರೋಗ್ಯ ಕಾರ್ಡ್‌ ನೋಂದಣಿ ಚುರುಕು: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ದಾವಣಗೆರೆ: ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ವೈದ್ಯರ ಶಿಫಾರಸು ಪತ್ರದೊಂದಿಗೆ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಕಾರ್ಡ್‌ (ಎಬಿ-ಎಆರ್‌ಕೆ ) ಒಂದೇ ಸಾಕು ಎನ್ನುವ ರಾಜ್ಯ ಸರಕಾರದ ಇತ್ತೀಚಿನ ನಿಯಮದಿಂದ ರಾಜ್ಯದಲ್ಲಿ ಆರೋಗ್ಯ ಕಾರ್ಡ್‌ ನೋಂದಣಿ ಪ್ರಕ್ರಿಯೆ ಚುರುಕು ಪಡೆದಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ಉಚಿತ ಚಿಕಿತ್ಸೆ ಪಡೆಯಲು ಎಬಿ-ಎಆರ್‌ಕೆ ಕಾರ್ಡ್‌ನೊಂದಿಗೆ ಬಿಪಿಎಲ್‌ ಕಾರ್ಡ್‌, ಆಧಾರ್‌ ಕಾರ್ಡ್‌ ಸೇರಿ ಇನ್ನಿತರ ದಾಖಲೆಗಳನ್ನು ಕೇಳಲಾಗುತ್ತಿತ್ತು. ತುರ್ತು ಸಂದರ್ಭ ಈ ಎಲ್ಲ ದಾಖಲೆಗಳನ್ನು ನೀಡಲಾಗದು ಎನ್ನುವ ಕಾರಣಕ್ಕಾಗಿ ಅನೇಕರು ಎಬಿ-ಎಆರ್‌ಕೆ ಕಾರ್ಡ್‌ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದರು. ಆದರೆ ಈಗ ಹೊಸ ನಿಯಮದಿಂದ ಕಾರ್ಡ್‌ಗೆ ಬೇಡಿಕೆ ಹೆಚ್ಚಿದೆ.

ಆರೋಗ್ಯ ಇಲಾಖೆ ಅಂಕಿ-ಅಂಶಗಳನ್ನು ಗಮನಿಸಿದರೆ ರಾಜ್ಯದಲ್ಲಿ ಎಬಿ-ಎಆರ್‌ಕೆ ಕಾರ್ಡ್‌ ನೋಂದಣಿ ಆಮೆಗತಿಯಲ್ಲಿ ಸಾಗಿದೆ. ಯೋಜನೆ (2018ರಿಂದ) ಆರಂಭವಾದಾಗಿನಿಂದ ಇಲ್ಲಿಯವರೆಗೆ ಕಾರ್ಡ್‌ ಮಾಡಿಸಿಕೊಂಡವರ ಸಂಖ್ಯೆ ಶೇ. 25ನ್ನೂ ದಾಟಿಲ್ಲ. ಸರಕಾರ ಈಗ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನೀಡುವಾಗ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಆರೋಗ್ಯ ಕಾರ್ಡ್‌ ಒಂದನ್ನೇ ಪರಿಗಣಿಸಬೇಕು, ಉಳಿದ ದಾಖಲೆಗಳಿಗಾಗಿ ಒತ್ತಡ ಹೇರಬಾರದೆಂಬ ಹೊಸ ನಿಯಮ ಮಾಡಿದ್ದರಿಂದ ಕಳೆದೆರಡು ವಾರಗಳಿಂದ ಕಾರ್ಡ್‌ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಇತರ ಜಿಲ್ಲೆಗಳ ಪ್ರಗತಿ ಇಂತಿದೆ
ಉತ್ತರಕನ್ನಡ ಜಿಲ್ಲೆ ಶೇ. 42, ಮಂಡ್ಯ ಶೇ. 40, ಶಿವಮೊಗ್ಗ ಶೇ. 39, ದಕ್ಷಿಣ ಕನ್ನಡ ಶೇ. 37, ಹಾಸನ ಶೇ. 33, ರಾಮನಗರ ಶೇ. 33, ಬೆಂಗಳೂರು ಗ್ರಾಮಾಂತರ ಶೇ. 27, ಚಾಮರಾಜನಗರ ಶೇ.25, ಮೈಸೂರು ಶೇ.23, ಬೆಳಗಾವಿ ಶೇ. 20, ಚಿತ್ರದುರ್ಗ ಶೇ. 20, ತುಮಕೂರು ಶೇ. 20, ಧಾರವಾಡ ಶೇ. 19, ಬಾಗಲಕೋಟೆ ಶೇ. 18, ದಾವಣಗೆರೆ ಶೇ. 18, ಹಾವೇರಿ ಶೇ. 17, ಯಾದಗಿರಿ ಶೇ. 17, ಕೊಪ್ಪಳ ಶೇ. 17, ಚಿಕ್ಕಬಳ್ಳಾಪುರ ಶೇ. 17, ಬೀದರ್‌ ಶೇ. 17, ಗದಗ ಶೇ. 16, ವಿಜಯಪುರ ಶೇ. 16, ಕೋಲಾರ ಶೇ. 15, ಕಲಬುರಗಿ ಶೇ. 14, ಬಳ್ಳಾರಿ ಶೇ. 12, ಬೆಂಗಳೂರು ನಗರ ಶೇ. 12, ರಾಯಚೂರು ಶೇ. 10.

ಇದನ್ನೂ ಓದಿ:ಝೊಮ್ಯಾಟೊದಲ್ಲಿ ಕೋಟಿ ಮೋಮೋಸ್‌ ಆರ್ಡರ್‌; ಭಾರತದಲ್ಲಿ ಬಿರಿಯಾನಿಗೇ ಫ‌ಸ್ಟ್‌ ಪ್ಲೇಸ್‌

ಆರೋಗ್ಯ ಇಲಾಖೆ ಅಂಕಿ-ಅಂಶದ ಪ್ರಕಾರ ರಾಜ್ಯದ ಒಟ್ಟು ಏಳು ಕೋಟಿಯಷ್ಟು (2020ಕ್ಕೆ ಆಧರಿಸಿ) ಜನಸಂಖ್ಯೆಯಲ್ಲಿ ಕೇವಲ ಒಂದೂವರೆ ಕೋಟಿಯಷ್ಟು ಜನ ಮಾತ್ರ ಆರೋಗ್ಯ ಕಾರ್ಡ್‌ ಪಡೆದಿದ್ದು, ಶೇ. 21ರಷ್ಟು ಮಾತ್ರ ಪ್ರಗತಿಯಾಗಿದೆ. ಆರೋಗ್ಯ ಇಲಾಖೆ ಒಟ್ಟು ಜನಸಂಖ್ಯೆಯನ್ನು ಆಧರಿಸಿ ಕಾರ್ಡ್‌ಗಳ ಪ್ರಗತಿ ಉಲ್ಲೇಖೀಸಿದ್ದು, ರಾಜ್ಯದ ಬಿಪಿಎಲ್‌ ಕುಟುಂಬದವರನ್ನಷ್ಟೇ ಪರಿಗಣಿಸಿ ಲೆಕ್ಕ ಹಾಕಿದರೆ ರಾಜ್ಯದಲ್ಲಿ ಎಬಿ-ಎಆರ್‌ಕೆ ಕಾರ್ಡ್‌ ಮಾಡಿಸಿಕೊಂಡವರ ಪ್ರಮಾಣ ಸರಾಸರಿ ಶೇ. 40 ಮೀರುವುದಿಲ್ಲ. ಆದರೆ ಈಗ ತುರ್ತು ಸಂದರ್ಭ ಯಾವುದೇ ವಿಳಂಬವಿಲ್ಲದೇ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವಂತಾಗಲು ಸರಕಾರ, ಎಬಿ-ಎಆರ್‌ಕೆ ಕಾರ್ಡ್‌ ಒಂದನ್ನೇ ದಾಖಲೆಯಾಗಿ ಪಡೆಯಬೇಕು ಎಂಬ ನಿಯಮ ಮಾಡಿದ್ದರಿಂದ ಕಾರ್ಡ್‌ ನೋಂದಣಿಯಲ್ಲಿ ಚೇತರಿಕೆ ಕಂಡುಬಂದಿದೆ.

ಜಿಲ್ಲಾವಾರು ಪ್ರಗತಿ
ಆರೋಗ್ಯ ಇಲಾಖೆ (ಡಿಸೆಂಬರ್‌ 16ವರೆಗಿನ) ಮಾಹಿತಿ ಪ್ರಕಾರ ಎಬಿಎಆರ್‌ಕೆ ಕಾರ್ಡ್‌ ಮಾಡಿಸುವಲ್ಲಿ ಉಡುಪಿ ಜಿಲ್ಲೆ ಶೇ. 65ರಷ್ಟು ಸಾಧನೆ ಮಾಡಿ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕೊಡಗು ಜಿಲ್ಲೆ ಶೇ. 58, ಚಿಕ್ಕಮಗಳೂರು ಜಿಲ್ಲೆ ಶೇ. 43ರಷ್ಟು ಜನ ಎಬಿಎಆರ್‌ಕೆ ಕಾರ್ಡ್‌ ಮಾಡಿಕೊಂಡಿದ್ದು, ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನದಲ್ಲಿವೆ. ರಾಯಚೂರು, ಬೆಂಗಳೂರು ನಗರ ಹಾಗೂ ಬಳ್ಳಾರಿ ಜಿಲ್ಲೆಗಳು ಕಾರ್ಡ್‌ ನೋಂದಣಿಯಲ್ಲಿ ಕೊನೆಯ ಸ್ಥಾನದಲ್ಲಿವೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.