Heart Health: ಹೃದಯ ಆರೋಗ್ಯ ಪೂರಕ ಆಯ್ಕೆಗಳು

ಹೃದ್ರೋಗದ ಕೌಟುಂಬಿಕ ಹಿನ್ನೆಲೆ ನಿಮಗಿದೆಯೇ?

Team Udayavani, Feb 25, 2024, 1:45 PM IST

10-heart-health

ನಮ್ಮ ಹೃದಯದ ಆರೋಗ್ಯಕ್ಕೆ ಸಂಬಂಧಿಸಿ ಆರೋಗ್ಯಕರ ಆಹಾರ, ಆರೋಗ್ಯಕರ ಜೀವನ ಶೈಲಿ ಅನುಸರಣೆಯಂತಹ ಅಂಶಗಳನ್ನು ನಾವು ಅನುಸರಿಸಬಹುದು. ಆದರೆ ವಯಸ್ಸು, ಕೌಟುಂಬಿಕ ಹಿನ್ನೆಲೆಯಂತಹ ಅಂಶಗಳು ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಆದರೂ ಹೃದಯದ ಆರೋಗ್ಯಕ್ಕೆ ಪೂರಕವಾದ ಜೀವನಶೈಲಿಯನ್ನು ಅನುಸರಿಸುವುದು, ಆರೋಗ್ಯದ ಮೇಲೆ ನಿಗಾ ಇರಿಸುವುದರಿಂದ ನಮ್ಮ ಹೃದಯವನ್ನು ರಕ್ಷಿಸಿಕೊಳ್ಳಬಹುದು. ಹೃದಯದ ಆರೋಗ್ಯ ಸಮಸ್ಯೆಗಳ ಕೌಟುಂಬಿಕ ಹಿನ್ನೆಲೆಯನ್ನು ಹೊಂದಿರುವವರು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ವಂಶವಾಹಿ ಪರೀಕ್ಷೆಯ ಸಮಾಲೋಚನೆ

ವಂಶವಾಹಿ ಪರೀಕ್ಷೆಗಳ ಬಗ್ಗೆ ನಿಮ್ಮ ವೈದ್ಯರ ಬಳಿ ಸಮಾಲೋಚನೆ ನಡೆಸಬೇಕು. ಕಾರ್ಡಿಯೊಮಯೋಪಥಿ ಮತ್ತು ಅರಿತ್ಮಿಯಾಸ್‌ – ಇವು ವಂಶಪಾರಂಪರ್ಯವಾಗಿ ಬರುವ ಹೃದ್ರೋಗಗಳಾಗಿದ್ದು, ವಂಶವಾಹಿ ಪರೀಕ್ಷೆಯಿಂದ ತಿಳಿದುಕೊಳ್ಳಬಹುದು. ಜೊಲ್ಲು ಅಥವಾ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸುವ ಮೂಲಕ ಹೃದ್ರೋಗಕ್ಕೆ ಕಾರಣವಾಗಬಲ್ಲ ವಂಶವಾಹಿ ಬದಲಾವಣೆಗಳು ಉಂಟಾಗಿವೆಯೇ ಎಂದು ಪತ್ತೆಹಚ್ಚಲಾಗುತ್ತದೆ. ವಂಶವಾಹಿಯಾಗಿ ಬಂದ ಹೃದ್ರೋಗದ ಲಕ್ಷಣಗಳು ನಿಮಗಿದ್ದರೆ ಅಥವಾ ಹೃದ್ರೋಗಿ ಸಂಬಂಧಿಗಳು ನಿಮ್ಮ ಕುಟುಂಬದಲ್ಲಿದ್ದರೆ ನಿಮ್ಮ ವೈದ್ಯರು ವಂಶವಾಹಿ ಪರೀಕ್ಷೆಗೆ ಸೂಚಿಸಬಹುದು. ನಿಮಗೆ ಚಿಕಿತ್ಸೆ ಅಗತ್ಯವೇ ಎಂಬುದನ್ನು ನಿರ್ಧರಿಸಲು ಈ ಪರೀಕ್ಷೆಯ ಫ‌ಲಿತಾಂಶಗಳು ನೆರವಾಗುತ್ತವೆ.

ಹೃದ್ರೋಗದ ಕೌಟುಂಬಿಕ ಹಿನ್ನೆಲೆ ನಿಮಗಿದೆಯೇ?

ಸಮತೋಲಿತ ಆಹಾರ ಕೌಟುಂಬಿಕ ಹಿನ್ನೆಲೆಯಿಂದಾಗಿ ಹೃದ್ರೋಗಕ್ಕೆ ತುತ್ತಾಗುವ ಅಪಾಯ ನಿಮಗಿದ್ದರೂ ಹೃದಯದ ಆರೋಗ್ಯಕ್ಕೆ ಪೂರಕವಾದ ಆಹಾರ ಕ್ರಮವನ್ನು ಅನುಸರಿಸುವ ಮೂಲಕ ಹೃದ್ರೋಗ ಅಪಾಯವನ್ನು ಕಡಿಮೆ ಮಾಡಿಕೊಳ್ಳಬಹುದು. ಕೆಲವು ಆಹಾರ ಕ್ರಮಗಳು ಹೃದಯದ ಆರೋಗ್ಯಸ್ನೇಹಿಯಾಗಿವೆ. ಸ್ಯಾಚುರೇಟೆಡ್‌ ಕೊಬ್ಬು, ಟ್ರಾನ್ಸ್‌ ಕೊಬ್ಬು, ಕೊಲೆಸ್ಟರಾಲ್‌, ಸಕ್ಕರೆ ಮತ್ತು ಉಪ್ಪುಭರಿತ ಆಹಾರಗಳು ಹೃದ್ರೋಗ ಉಂಟಾಗುವ ಅಪಾಯವನ್ನು ಹೆಚ್ಚಿಸುತ್ತವೆ.

ನಿಯಮಿತ ವ್ಯಾಯಾಮ

ವಂಶಪಾರಂಪರ್ಯವಾಗಿ ಬರಬಲ್ಲ ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡಿಕೊಳ್ಳಲು ನಿಯಮಿತವಾಗಿ ವ್ಯಾಯಾಮ, ದೈಹಿಕ ಶ್ರಮದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ನಿಯಮಿತವಾಗಿ ವ್ಯಾಯಾಮ ಮಾಡುವವರಿಗೆ ಹೃದ್ರೋಗಗಳು, ಲಕ್ವಾ ಅಪಾಯ ಕಡಿಮೆ.

ದೇಹತೂಕದ ಬಗ್ಗೆ ಗಮನ ಹರಿಸಿ

ಬೊಜ್ಜು ಅಥವಾ ಹೆಚ್ಚು ಬಿಎಂಐ ಹೊಂದಿರುವುದು ಹೃದಯದ ಒಟ್ಟು ಆರೋಗ್ಯಕ್ಕೆ ಅಪಾಯಕಾರಿ. ಅಪಧಮನಿಯಲ್ಲಿ ರಕ್ತಪ್ರವಾಹಕ್ಕೆ ತಡೆಯಾಗುವ ರಚನೆಗಳು ರೂಪುಗೊಳ್ಳಲು ಕಾರಣವಾಗುವುದು ಬೊಜ್ಜು ಅಥವಾ ಅಧಿಕ ಬಿಎಂಐ ಹೊಂದಿರುವುದರ ಒಂದು ಅಪಾಯ.

ಅಲ್ಲದೆ, ಹೃದಯ ಆರೋಗ್ಯಕ್ಕೆ ಮಾರಕವಾಗಿರುವ ಧೂಮಪಾನ, ಮದ್ಯಪಾನದಂತಹ ಚಟಗಳಿಂದ ದೂರವಿರಬೇಕು. ರಕ್ತದೊತ್ತಡ, ಕೊಲೆಸ್ಟರಾಲ್‌, ಮಧುಮೇಹದ ಮೇಲೆ ನಿಯಮಿತವಾಗಿ ನಿಗಾ-ನಿಯಂತ್ರಣ ಇರಿಸಿಕೊಳ್ಳಬೇಕು. ಅಲ್ಲದೆ ನಿಯಮಿತವಾಗಿ ಹೃದಯ ಆರೋಗ್ಯ ತಪಾಸಣೆಗೆ ಒಳಗಾಗುತ್ತಿರಬೇಕು.

ಡಾ| ಟಾಮ್‌ ದೇವಸ್ಯ ಪ್ರೊಫೆಸರ್‌ ಮತ್ತು ಯುನಿಟ್‌ ಹೆಡ್‌ ಕಾರ್ಡಿಯಾಲಜಿ ವಿಭಾಗ, ಕೆಎಂಸಿ, ಮಾಹೆ, ಮಣಿಪಾಲ ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಕಾರ್ಡಿಯಾಲಜಿ ವಿಭಾಗ, ಕೆಎಂಸಿ , ಮಂಗಳೂರು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.