Heart Health: ಹೃದಯ ಆರೋಗ್ಯ ಪೂರಕ ಆಯ್ಕೆಗಳು

ಹೃದ್ರೋಗದ ಕೌಟುಂಬಿಕ ಹಿನ್ನೆಲೆ ನಿಮಗಿದೆಯೇ?

Team Udayavani, Feb 25, 2024, 1:45 PM IST

10-heart-health

ನಮ್ಮ ಹೃದಯದ ಆರೋಗ್ಯಕ್ಕೆ ಸಂಬಂಧಿಸಿ ಆರೋಗ್ಯಕರ ಆಹಾರ, ಆರೋಗ್ಯಕರ ಜೀವನ ಶೈಲಿ ಅನುಸರಣೆಯಂತಹ ಅಂಶಗಳನ್ನು ನಾವು ಅನುಸರಿಸಬಹುದು. ಆದರೆ ವಯಸ್ಸು, ಕೌಟುಂಬಿಕ ಹಿನ್ನೆಲೆಯಂತಹ ಅಂಶಗಳು ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಆದರೂ ಹೃದಯದ ಆರೋಗ್ಯಕ್ಕೆ ಪೂರಕವಾದ ಜೀವನಶೈಲಿಯನ್ನು ಅನುಸರಿಸುವುದು, ಆರೋಗ್ಯದ ಮೇಲೆ ನಿಗಾ ಇರಿಸುವುದರಿಂದ ನಮ್ಮ ಹೃದಯವನ್ನು ರಕ್ಷಿಸಿಕೊಳ್ಳಬಹುದು. ಹೃದಯದ ಆರೋಗ್ಯ ಸಮಸ್ಯೆಗಳ ಕೌಟುಂಬಿಕ ಹಿನ್ನೆಲೆಯನ್ನು ಹೊಂದಿರುವವರು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ವಂಶವಾಹಿ ಪರೀಕ್ಷೆಯ ಸಮಾಲೋಚನೆ

ವಂಶವಾಹಿ ಪರೀಕ್ಷೆಗಳ ಬಗ್ಗೆ ನಿಮ್ಮ ವೈದ್ಯರ ಬಳಿ ಸಮಾಲೋಚನೆ ನಡೆಸಬೇಕು. ಕಾರ್ಡಿಯೊಮಯೋಪಥಿ ಮತ್ತು ಅರಿತ್ಮಿಯಾಸ್‌ – ಇವು ವಂಶಪಾರಂಪರ್ಯವಾಗಿ ಬರುವ ಹೃದ್ರೋಗಗಳಾಗಿದ್ದು, ವಂಶವಾಹಿ ಪರೀಕ್ಷೆಯಿಂದ ತಿಳಿದುಕೊಳ್ಳಬಹುದು. ಜೊಲ್ಲು ಅಥವಾ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸುವ ಮೂಲಕ ಹೃದ್ರೋಗಕ್ಕೆ ಕಾರಣವಾಗಬಲ್ಲ ವಂಶವಾಹಿ ಬದಲಾವಣೆಗಳು ಉಂಟಾಗಿವೆಯೇ ಎಂದು ಪತ್ತೆಹಚ್ಚಲಾಗುತ್ತದೆ. ವಂಶವಾಹಿಯಾಗಿ ಬಂದ ಹೃದ್ರೋಗದ ಲಕ್ಷಣಗಳು ನಿಮಗಿದ್ದರೆ ಅಥವಾ ಹೃದ್ರೋಗಿ ಸಂಬಂಧಿಗಳು ನಿಮ್ಮ ಕುಟುಂಬದಲ್ಲಿದ್ದರೆ ನಿಮ್ಮ ವೈದ್ಯರು ವಂಶವಾಹಿ ಪರೀಕ್ಷೆಗೆ ಸೂಚಿಸಬಹುದು. ನಿಮಗೆ ಚಿಕಿತ್ಸೆ ಅಗತ್ಯವೇ ಎಂಬುದನ್ನು ನಿರ್ಧರಿಸಲು ಈ ಪರೀಕ್ಷೆಯ ಫ‌ಲಿತಾಂಶಗಳು ನೆರವಾಗುತ್ತವೆ.

ಹೃದ್ರೋಗದ ಕೌಟುಂಬಿಕ ಹಿನ್ನೆಲೆ ನಿಮಗಿದೆಯೇ?

ಸಮತೋಲಿತ ಆಹಾರ ಕೌಟುಂಬಿಕ ಹಿನ್ನೆಲೆಯಿಂದಾಗಿ ಹೃದ್ರೋಗಕ್ಕೆ ತುತ್ತಾಗುವ ಅಪಾಯ ನಿಮಗಿದ್ದರೂ ಹೃದಯದ ಆರೋಗ್ಯಕ್ಕೆ ಪೂರಕವಾದ ಆಹಾರ ಕ್ರಮವನ್ನು ಅನುಸರಿಸುವ ಮೂಲಕ ಹೃದ್ರೋಗ ಅಪಾಯವನ್ನು ಕಡಿಮೆ ಮಾಡಿಕೊಳ್ಳಬಹುದು. ಕೆಲವು ಆಹಾರ ಕ್ರಮಗಳು ಹೃದಯದ ಆರೋಗ್ಯಸ್ನೇಹಿಯಾಗಿವೆ. ಸ್ಯಾಚುರೇಟೆಡ್‌ ಕೊಬ್ಬು, ಟ್ರಾನ್ಸ್‌ ಕೊಬ್ಬು, ಕೊಲೆಸ್ಟರಾಲ್‌, ಸಕ್ಕರೆ ಮತ್ತು ಉಪ್ಪುಭರಿತ ಆಹಾರಗಳು ಹೃದ್ರೋಗ ಉಂಟಾಗುವ ಅಪಾಯವನ್ನು ಹೆಚ್ಚಿಸುತ್ತವೆ.

ನಿಯಮಿತ ವ್ಯಾಯಾಮ

ವಂಶಪಾರಂಪರ್ಯವಾಗಿ ಬರಬಲ್ಲ ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡಿಕೊಳ್ಳಲು ನಿಯಮಿತವಾಗಿ ವ್ಯಾಯಾಮ, ದೈಹಿಕ ಶ್ರಮದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ನಿಯಮಿತವಾಗಿ ವ್ಯಾಯಾಮ ಮಾಡುವವರಿಗೆ ಹೃದ್ರೋಗಗಳು, ಲಕ್ವಾ ಅಪಾಯ ಕಡಿಮೆ.

ದೇಹತೂಕದ ಬಗ್ಗೆ ಗಮನ ಹರಿಸಿ

ಬೊಜ್ಜು ಅಥವಾ ಹೆಚ್ಚು ಬಿಎಂಐ ಹೊಂದಿರುವುದು ಹೃದಯದ ಒಟ್ಟು ಆರೋಗ್ಯಕ್ಕೆ ಅಪಾಯಕಾರಿ. ಅಪಧಮನಿಯಲ್ಲಿ ರಕ್ತಪ್ರವಾಹಕ್ಕೆ ತಡೆಯಾಗುವ ರಚನೆಗಳು ರೂಪುಗೊಳ್ಳಲು ಕಾರಣವಾಗುವುದು ಬೊಜ್ಜು ಅಥವಾ ಅಧಿಕ ಬಿಎಂಐ ಹೊಂದಿರುವುದರ ಒಂದು ಅಪಾಯ.

ಅಲ್ಲದೆ, ಹೃದಯ ಆರೋಗ್ಯಕ್ಕೆ ಮಾರಕವಾಗಿರುವ ಧೂಮಪಾನ, ಮದ್ಯಪಾನದಂತಹ ಚಟಗಳಿಂದ ದೂರವಿರಬೇಕು. ರಕ್ತದೊತ್ತಡ, ಕೊಲೆಸ್ಟರಾಲ್‌, ಮಧುಮೇಹದ ಮೇಲೆ ನಿಯಮಿತವಾಗಿ ನಿಗಾ-ನಿಯಂತ್ರಣ ಇರಿಸಿಕೊಳ್ಳಬೇಕು. ಅಲ್ಲದೆ ನಿಯಮಿತವಾಗಿ ಹೃದಯ ಆರೋಗ್ಯ ತಪಾಸಣೆಗೆ ಒಳಗಾಗುತ್ತಿರಬೇಕು.

ಡಾ| ಟಾಮ್‌ ದೇವಸ್ಯ ಪ್ರೊಫೆಸರ್‌ ಮತ್ತು ಯುನಿಟ್‌ ಹೆಡ್‌ ಕಾರ್ಡಿಯಾಲಜಿ ವಿಭಾಗ, ಕೆಎಂಸಿ, ಮಾಹೆ, ಮಣಿಪಾಲ ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಕಾರ್ಡಿಯಾಲಜಿ ವಿಭಾಗ, ಕೆಎಂಸಿ , ಮಂಗಳೂರು

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

4-health

Rhinoplasty: ರಿನೊಪ್ಲಾಸ್ಟಿ

9-hearing-screening

Hearing Screening: ಹಿರಿಯ ವಯಸ್ಕರಲ್ಲಿ ಶ್ರವಣ ತಪಾಸಣೆಯ ಅಗತ್ಯ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.