ಹಲ್ಲು ನೋವಿಗೆ ಇಲ್ಲಿದೆ ಸರಳ ಪರಿಹಾರ
Team Udayavani, Mar 5, 2021, 7:11 PM IST
ಹಲ್ಲುಗಳ ಆರೋಗ್ಯವು ನಮ್ಮ ಸಂಪೂರ್ಣ ದೇಹದ ಆರೋಗ್ಯಕ್ಕೆ ಅತೀ ಮುಖ್ಯವಾದ ಅಂಶ. ನಾವು ಸೇವಿಸುವ ಎಲ್ಲಾ ವಿಧವಾದ ಆಹಾರವನ್ನು ನಿಗದಿತ ಪ್ರಮಾಣದಲ್ಲಿ ಅಗಿದು ನಮ್ಮಲ್ಲಿ ಜೀರ್ಣಕ್ರಿಯೆ ಸುಗಮವಾಗಿ ಆಗುವಂತೆ ಮಾಡುವಲ್ಲಿ ಹಲ್ಲುಗಳು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಇಂತಹ ಹಲ್ಲುಗಳಲ್ಲಿ ನೋವು ಕಾಣಿಸಿಕೊಂಡರೆ ಅದು ನಮ್ಮ ಆರೋಗ್ಯದ ಮೇಲಷ್ಟೇ ಅಲ್ಲದೆ ನಮ್ಮ ದೈನಂದಿನ ಕೆಲಸಗಳ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ.
ಉಪ್ಪು ನೀರು ಬಳಸಿ
ಸಾಮಾನ್ಯವಾಗಿ ಹಲ್ಲುಗಳು ಹುಳುಕಾಗಿ, ಆ ಜಾಗದಲ್ಲಿ ಆಹಾರ ಪದಾರ್ಥಗಳು ಸೇರಿಕೊಂಡು ಕೊಳೆತು ಹಲ್ಲಿನಲ್ಲಿ ಸೋಂಕು ಕಂಡುಬರುತ್ತದೆ. ಹಾಗಾಗಿ ಉಪ್ಪುನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಈ ನೋವಿಗೆ ಕಾರಣವಾಗುವ ಬ್ಯಾಕ್ಟೀರಿಯಾಗಳನ್ನು ನಾಶಪಡಿಸಿ ಹಲ್ಲುನೋವಿನಿಂದ ಉಪಶಮನವನ್ನು ಕಾಣಬಹುದಾಗಿದೆ.
ವಿಧಾನ: ಒಂದು ಲೋಟದಷ್ಟು ಉಗುರುಬೆಚ್ಚಗಿನ ನೀರಿಗೆ ಸ್ಪಲ್ಪ ಉಪ್ಪನ್ನು ಬೆರಸಿ ಉಪ್ಪುನೀರನ್ನು ತಯಾರಿಸಿಕೊಳ್ಳಿ. ನಂತರ ಹಲ್ಲಿನ ಸಂದುಗಳಲ್ಲಿರುವ ಆಹಾರ ಪದಾರ್ಥಗಳು ಹೋಗುವಂತೆ ಹಲವು ಬಾರಿ ಬಾಯಿ ಮುಕ್ಕಳಿಸಿ. ಹಲ್ಲು ನೋವಿನ ಸಮಯದಲ್ಲಿ ಪ್ರತಿ ಗಂಟೆಗೊಮ್ಮ ಹೀಗೆ ಬಾಯಿ ಮುಕ್ಕಳಿಸಿದರೆ ಬಹುಬೇಗ ನೋವು ಕಡಿಮೆಯಾಗುತ್ತದೆ.
ಬೆಳ್ಳುಳ್ಳಿ ಬಳಸಿ
ಬೆಳ್ಳುಳ್ಳಿಯಲ್ಲಿ ಹಲವಾರು ರೋಗನಿರೋಧಕ ಸತ್ವಗಳಿದ್ದು, ಇದು ಹಲ್ಲನ್ನು ಹುಳುಕು ಮಾಡುವ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುತ್ತದೆ.
ಹಲ್ಲು ನೋವಿನ ಸಮಯದಲ್ಲಿ ಬೆಳ್ಳುಳ್ಳಿಯನ್ನು ಚೆನ್ನಾಗಿ ಅರೆದು ನೋವಿರುವ ಭಾಗಕ್ಕೆ ಹಚ್ಚಬೇಕು. ಬೆಳ್ಳುಳ್ಳಿಯ ಜೊತೆಗೆ ಉಪ್ಪನ್ನೂ ಸೇರಿಸಬಹುದು. ಒಂದು ವೇಳೆ ಬೆಳ್ಳುಳ್ಳಿಯನ್ನು ಅರೆಯಲು ಸಾಧ್ಯವಾಗದ ಸಮಯದಲ್ಲಿ ಒಂದೆರಡು ಎಸಳು ಬೆಳ್ಳುಳ್ಳಿಯನ್ನು ಅಗಿದು ಅದರ ರಸವನ್ನು ಸ್ಪಲ್ಪ ಹೊತ್ತು ಬಾಯಲ್ಲಿ ಇಟ್ಟುಕೊಳ್ಳಬೇಕು.
ಇದನ್ನೂ ಓದಿ:ಕಾಂಗ್ರೆಸ್ ಎಲ್ಲವನ್ನೂ ಕೊಟ್ಟಿದ್ದರೆ, ಮೋದಿ ಅಧಿಕಾರದಲ್ಲಿ ಇರುತ್ತಿರಲಿಲ್ಲ: ಯೋಗೇಂದ್ರ ಯಾದವ್
ಲವಂಗ ಬಳಸಿ
ಲವಂಗವು ಹಲ್ಲುನೋವಿಗೆ ರಾಮಬಾಣವಾಗಿ ಕಾರ್ಯನಿರ್ಹಿಸುತ್ತದೆ. ಒಂದೆರಡು ಲವಂಗವನ್ನು ಸ್ಪಲ್ಪ ಜಜ್ಜಿ ನೋವಿರುವ ಹಲ್ಲಿನ ಬಳಿ ಇಟ್ಟುಕೊಳ್ಳಬೇಕು. ಇದು ನೋವಿಗೆ ಕಾರಣವಾದ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುತ್ತದೆ.
ಕಿರಾತಕನ ಕಡ್ಡಿ ಬಳಸಿ
ಗ್ರಾಮೀಣ ಪ್ರದೇಶಗಳಲ್ಲಿ ಕಿರಾತಕನ ಕಟ್ಟಿ ಎಂದು ಕರೆಯಲ್ಪಡುವ ಔಷಧಿಯ ಗಿಡಮೂಲಿಕೆ ದೊರೆಯುತ್ತದೆ ಅದನ್ನು ಅರೆದು ನೋವಿರುವ ಹಲ್ಲಿನ ಬಳಿ ಇಟ್ಟುಕೊಳ್ಳುವುದರಿಂದ ನೋವು ಗುಣಮುಖವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ