HIGH blood sugar:ಅತೀಯಾದ ಮಧುಮೇಹ ಇದ್ದರೂ ಈ 6 ಆಹಾರ ಸೇವನೆಯಿಂದ ಆರೋಗ್ಯಕ್ಕೆ ಅನುಕೂಲ
ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಉತ್ತಮ ಆಹಾರವಾಗಿದೆ.
Team Udayavani, Jan 14, 2023, 4:09 PM IST
ರಕ್ತದಲ್ಲಿರುವ ಗ್ಲುಕೋಸ್ ಅಥವಾ ಸಕ್ಕರೆ ಅಂಶವು ಹೆಚ್ಚಾದಾಗ ಡಯಾಬಿಟೀಸ್ ಸಮಸ್ಯೆ ಉಂಟಾಗಲು ಕಾರಣವಾಗುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಂಬಂಧಿ ಕಾಯಿಲೆಗಳಿಗೂ ಆಹ್ವಾನ ನೀಡಿದಂತಾಗುತ್ತದೆ. ಮಧುಮೇಹ ಅಥವಾ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಹಲವಾರು ಅನಾರೋಗ್ಯಕ್ಕೆ ಮೂಲವಾಗುತ್ತದೆ. ಈ ನಿಟ್ಟಿನಲ್ಲಿ ನಿಯಮಿತವಾಗಿ ತಪಾಸಣೆ ಮಾಡಿಕೊಳ್ಳುವುದು ಉತ್ತಮ. ಡಯಾಬಿಟೀಸ್ ಅಥವಾ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗಿ ಆರೋಗ್ಯ ಸಂಪೂರ್ಣ ಹದಗೆಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ತುಂಬಾ ಮುಖ್ಯವಾದದ್ದು.
ಇದನ್ನೂ ಓದಿ:
ಪೌಷ್ಠಿಕ್ ತಜ್ಞ ಲೋವ್ ನೀತ್ ಬಾತ್ರಾ ನೀಡಿರುವ ಮಾಹಿತಿ ಪ್ರಕಾರ, ಸಕ್ಕರೆ, ಸಂಸ್ಕರಿಸಿದ ಆಹಾರ, ಕಾರ್ಬೋಹೈಡ್ರೇಟ್ ಗಳ ಅತೀಯಾದ ಸೇವನೆ ರಕ್ತದಲ್ಲಿನ ಸಕ್ಕರೆ ಕಾಯಿಲೆಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ನಿರಂತರ ತಪಾಸಣೆಯಲ್ಲಿದ್ದರೆ ವೈದ್ಯರು ಅವರು ಸೇವಿಸುವ ಆಹಾರದ ಬಗ್ಗೆ ಮಾಹಿತಿ ನೀಡುವ ಮೂಲಕ ಡಯಾಬಿಟೀಸ್ ಅನ್ನು ತಡೆಯಬಹುದಾಗಿದೆ.
ಅತೀಯಾದ ಮಧುಮೇಹ ಇದ್ದರೂ ಈ 6 ಆಹಾರ ಸೇವನೆಯಿಂದ ಅನುಕೂಲ:
- ಬಾರ್ಲಿ: ಅಪಾರ ಪ್ರಮಾಣದಲ್ಲಿ ಬೀಟಾ-ಗ್ಲುಕೋನ್ ಹೊಂದಿರುವ ಬಾರ್ಲಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿರಿಸಲು ನೆರವಾಗುತ್ತದೆ. ಅದೇ ರೀತಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಉತ್ತಮ ಆಹಾರವಾಗಿದೆ.
- ಓಟ್ಸ್ ಬ್ರಾನ್: ಓಟ್ಸ್ ಫೈಬರ್ ಬೀಟಾ ಗ್ಲುಕನ್ಸ್ ಅನ್ನು ಹೊಂದಿದ್ದು, ಇದು ಇನ್ಸುಲಿನ್ ಪರಿಣಾಮಗಳನ್ನು ಸಕ್ರಿಯಗೊಳಿಸಲು ಕಾರ್ಯನಿರ್ವಹಿಸುತ್ತದೆ. ಪ್ರೊಟೀನ್ ಅಂಶ ಹೆಚ್ಚಾಗಿರುವುದರಿಂದ ರಕ್ತದಲ್ಲಿರುವ ಗ್ಲುಕೋಸ್ ಪ್ರಮಾಣವನ್ನು ಸಮತೋಲನದಲ್ಲಿ ಇರಿಸಲು ಪ್ರಮುಖ ಪಾತ್ರ ವಹಿಸುತ್ತದೆ.
- ಕೆಂಪು ಹರಿವೆ ಸೊಪ್ಪಿನ ಬೀಜ: ಕೆಂಪು ಹರಿವೆ ಸೊಪ್ಪು ಮತ್ತು ಬೀಜದಲ್ಲಿ ಇತರ ಎಲ್ಲಾ ಧಾನ್ಯಗಳಿಗಿಂತ ಹೆಚ್ಚಿನ ಪ್ರೊಟೀನ್ ಅಂಶ ಅಂಶವನ್ನೊಳಗೊಂಡಿದೆ. ಮಧುಮೇಹಿಗಳಿಗೆ ಇದು ಅತ್ಯುತ್ತಮ ಆಹಾರಗಳಲ್ಲಿ ಒಂದಾಗಿದೆ ಎಂಬುದು ಬಾತ್ರಾ ನುಡಿಯಾಗಿದೆ.
- ರಾಗಿ: ಸಾಸಿವೆಯನ್ನು ಹೋಲುವ ರಾಗಿ ಅತ್ಯಂತ ಪೌಷ್ಠಿಂಕಾಂಶ ಹೊಂದಿದ್ದು, ಇದು ಕೇವಲ ರಕ್ತದಲ್ಲಿ ಅಧಿಕ ಸಕ್ಕರೆ ಅಂಶ ಹೊಂದಿರವವರಿಗೆ ಮಾತ್ರವಲ್ಲ, ಹೆಚ್ಚಿನ ಕೊಲೆಸ್ಟ್ರಾಲ್ ಕಡಿಮೆ ಮಾಡಲು ನೆರವಾಗುತ್ತದೆ.
- ಬಾಜ್ರಾ(ನವಣೆ): ಇದು ಅತ್ಯಧಿಕ ಫೈಬರ್ ಅಂಶಗಳನ್ನೊಂಡಿರುವ ಧಾನ್ಯವಾಗಿದ್ದು, ಇದು ಮಧುಮೇಹ ಇರುವವರಿಗೆ ಉಪಯುಕ್ತವಾಗಿದೆ. ಇದು ಮಲಬದ್ಧತೆ ನಿವಾರಣೆಗೂ ಸಹಾಯಕವಾಗುತ್ತದೆ. ತೂಕ ನಷ್ಟಕ್ಕೆ ನೆರವಾಗಲಿದೆ ಎಂದು ಬಾತ್ರಾ ಮಾಹಿತಿ ನೀಡಿದ್ದಾರೆ.
- ಜೋಳ: ಜೋಳದಲ್ಲಿ ವಿಟಮಿನ್ ಕೆ1 ಸಮೃದ್ಧವಾಗಿದ್ದು, ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೂಳೆ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ನೆರವಾಗುತ್ತದೆ ಎಂದು ಬಾತ್ರಾ ವಿವರಿಸಿದ್ದಾರೆ.
ಸೂಚನೆ: ಈ ಎಲ್ಲಾ ಮಾಹಿತಿಯೂ ತಜ್ಞರ ಹೇಳಿಕೆಯನ್ನು ಆಧರಿಸಿ ಲೇಖನದ್ದಾಗಿದ್ದು, ವೈದ್ಯರ ಸಲಹೆಗೆ ಇದು ಪರ್ಯಾಯವಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ