ವ್ಯಾಕ್ಸಿನೇಷನ್ ಪ್ರಾಮುಖ್ಯತೆ; ಮಕ್ಕಳು ಕೋವಿಡ್ 19 ಲಸಿಕೆ ಪಡೆಯುವ ಅಗತ್ಯವಿದೆಯಾ?


Team Udayavani, Aug 4, 2022, 1:01 PM IST

ವ್ಯಾಕ್ಸಿನೇಷನ್ ಪ್ರಾಮುಖ್ಯತೆ; ಮಕ್ಕಳು ಕೋವಿಡ್ 19 ಲಸಿಕೆ ಪಡೆಯುವ ಅಗತ್ಯವಿದೆಯಾ?

ಕಳೆದ 2 ವರ್ಷಗಳಿಂದ ಕೋವಿಡ್‌ 19 ನಮ್ಮ ಸಮಾಜದಲ್ಲಿ ಅಪಾರ ತೊಂದರೆಯನ್ನು ಉಂಟು ಮಾಡಿದೆ. ಇಡೀ ಜಗತ್ತಿನಲ್ಲಿ 6 ಮಿಲಿಯನ್‌ಗೂ ಹೆಚ್ಚು ಜನರು ಇದರಿಂದಾಗಿ ಸಾವನ್ನಪ್ಪಿದ್ದಾರೆ. 25 ಶೇಕಡಾ ಮಕ್ಕಳಲ್ಲಿ ಕೋವಿಡ್‌ 19 ಕಂಡುಬಂದಿರುವುದಾಗಿ ಅಧ್ಯಯನ ವರದಿ ತಿಳಿಸಿದೆ. ಜುಲೈ 14, 2022 ರಂತೆ ಅಮೆರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಪ್ರಕಾರ ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ 13.91 ದಶಲಕ್ಷಕ್ಕೂ ಹೆಚ್ಚು ಮಕ್ಕಳು ಕೋವಿಡ್ 19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಜನಸಂಖ್ಯಾಶಾಸ್ತ್ರ ಸಂಶೋಧನೆಗಾಗಿನ ಮ್ಯಾಕ್ಸ್‌ ಪ್ಲಾಂಕ್‌ ಸಂಸ್ಥೆ (ಎಂಪಿಐಡಿಆರ್) ಡೇಟಾಬೇಸ್‌ ಪ್ರಕಾರ, 3.4 ಮಿಲಿಯನ್‌ ಕೋವಿಡ್‌ 19 ಮರಣ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 0.4% ರಷ್ಟು ಮಕ್ಕಳು ಮತ್ತು ಹದಿಹರೆಯದವರಲ್ಲಿ ಕಂಡುಬಂದಿದೆ. ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಕೋವಿಡ್‌ 19 ನಿಂದ ಮರಣ ಪ್ರಮಾಣ ಕಡಿಮೆ ಇದ್ದರೂ, ಹೃದಯ, ಲಿವರ್, ಕಿಡ್ನಿ, ಅಪೌಷ್ಠಿಕತೆ ಮತ್ತು ರೋಗನಿರೋಧಕ ಕೊರತೆಗೆ ಸಂಬಂಧಿಸಿದ ದೀರ್ಘಕಾಲೀನ ಸಮಸ್ಯೆಗಳೊಂದಿಗೆ ದೀರ್ಘಕಾಲೀನ ಸಂಕೀರ್ಣತೆಗಳಿಗೆ ಇದು ಕಾರಣವಾಗಬಹುದು.

ಕೋವಿಡ್‌ 19 ಗುಣಲಕ್ಷಣಗಳ ನಂತರದಲ್ಲಿ ಮಕ್ಕಳು ಮತ್ತು ಹದಿಹರೆಯದವರ ಜೀವನ ಮಟ್ಟದ ಮೇಲೆ ಪರಿಣಾಮ ಬೀರುತ್ತವೆ. ಅವರ ದೈನಂದಿನ ಚಟುವಟಿಕೆಗಳ ಮೇಲೆ ಇದು ಮಿತಿ ಹೇರಬಹುದು. ದೈಹಿಕ ಚಟುವಟಿಕೆ ಸೀಮಿತವಾಗುವುದು, ಮಾನಸಿಕ ಆರೋಗ್ಯ ಸಮಸ್ಯೆಗಳು, ಶಾಲೆಗೆ ಅಥವಾ ಡೇ ಕೇರ್‌ಗೆ ಮಗು ಹಾಜರಾಗುವ ದಿನಗಳ ಸಂಖ್ಯೆಯಲ್ಲಿ ಇಳಿಕೆ ಕಾಣುವುದು ಮತ್ತು ಕ್ರೀಡೆ ಅಥವಾ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶಗಳು ತಪ್ಪಿ ಹೋಗುವುದು ಇತ್ಯಾದಿ ಸಮಸ್ಯೆಗಳನ್ನು ಮಗು ಎದುರಿಸಬಹುದು. ಹೃದಯ, ಪಿತ್ತಕೋಶ, ಕಿಡ್ನಿಗಳು, ಮಿದುಳು, ಚರ್ಮ, ಕಣ್ಣುಗಳು ಅಥವಾ ಗ್ಯಾಸ್ಟ್ರೋಇಂಟೆಸ್ಟಿನಲ್‌ ಅಂಗಗಳು ಸೇರಿದಂತೆ ವಿವಿಧ ದೇಹದ ಭಾಗಗಳ ಉರಿಯೂತಕ್ಕೆ ಕಾರಣವಾಗುವ ಮಲ್ಟಿಸಿಸ್ಟಮ್‌ ಇನ್‌ಫ್ಲಮೇಟರಿ ಸಿಂಡ್ರೋಮ್ (ಎಂಐಎಸ್‌ ಸಿ) ರೀತಿಯ ಗಂಭೀರ ಸಂಕೀರ್ಣತೆಗಳನ್ನೂ ಇದು ಉಂಟು ಮಾಡಬಹುದು. ಸಾಂಕ್ರಾಮಿಕ ರೋಗ ಕಾಣಿಸಿಕೊಂಡಂದಿನಿಂದ ಸಾವಿರಾರು ಎಂಐಎಸ್‌ ಸಿ ಪ್ರಕರಣಗಳು ಕಂಡುಬಂದಿವೆ ಎಂದು ರೋಗ ನಿಯಂತ್ರಣ ಕೇಂದ್ರ (ಸಿಡಿಸಿ) ಯುಎಸ್‌ಎ ವರದಿ ಮಾಡಿದ್ದು, ಅರ್ಧದಷ್ಟು ಪ್ರಕರಣಗಳು 5-11 ವರ್ಷಗಳ ವಯೋ ಸಮೂಹದಲ್ಲಿ ಕಂಡಿವೆ ಎಂದು ಅದು ಹೇಳಿದೆ.

ಮಕ್ಕಳಲ್ಲಿ ಕೋವಿಡ್‌ 19 ಪರಿಣಾಮಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರ್ವಜನಿಕ ಆರೋಗ್ಯ ಅಧಿಕಾರಿಗಳ ವಲಯದಲ್ಲಿ ಲಸಿಕೆ ಅತ್ಯಂತ ಪ್ರಮುಖ ಭಾಗವಾಗಿದೆ. ಕೋವಿಡ್‌ 19 ವಿರುದ್ಧ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು ಮತ್ತು ಕೋವಿಡ್‌ 19 ಲಸಿಕೆ ಬೂಸ್ಟರ್ ಅನ್ನು ಪಡೆದುಕೊಳ್ಳಬೇಕು ಎಂದು ಸಿಡಿಸಿ ಶಿಫಾರಸು ಮಾಡುತ್ತದೆ. ತಮ್ಮ ವಯಸ್ಸಿಗೆ ಬಳಸಲು ಅನುಮತಿ ಹೊಂದಿರುವ ಲಸಿಕೆಗೆ ಪ್ರತಿ ಗುಣಲಕ್ಷಣಗಳನ್ನು ಹೊಂದಿಲ್ಲದಿದ್ದರೆ ಎಲ್ಲ ಮಕ್ಕಳು ಮತ್ತು ಹದಿಹರೆಯದವರು ಕೋವಿಡ್‌ 19 ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಅಮೆರಿಕದ ಮಕ್ಕಳ ಅಕಾಡೆಮಿ ಕೂಡ ಶಿಫಾರಸು ಮಾಡಿದೆ. ಪ್ರಸ್ತುತ, ಫೈಜರ್‌ ಬಯೋಎನ್‌ಟೆಕ್‌ ಯುನೈಟೆಡ್‌ ಸ್ಟೇಟ್ಸ್‌ನಲ್ಲಿ ಮಕ್ಕಳ ಲಸಿಕೆ ನೀಡುವುದಕ್ಕೆ ಅನುಮತಿ ಹೊಂದಿದೆ. ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಮಕ್ಕಳು ಮತ್ತು ಹದಿಹರೆಯದವರಿಗೆ ಲಸಿಕೆಗಳನ್ನು ಎನ್‌ಎಚ್‌ಎಸ್‌ ಪರಿಣಿತರು ಶಿಫಾರಸು ಮಾಡಿದ್ದಾರೆ.

ಪ್ರಸ್ತುತ, ಭಾರತದಲ್ಲಿ ಮಕ್ಕಳಿಗೆ 3 ಲಸಿಕೆಗಳನ್ನು ಅನುಮೋದಿಸಲಾಗಿದೆ. ಅವುಗಳೆಂದರೆ ಸೀರಮ್ ಇನ್‌ಸ್ಟಿಟ್ಯೂಟ್‌ನ (ಎಸ್‌ಐಐಪಿಎಲ್‌ ಕೋವೋವ್ಯಾಕ್ಸ್‌, ಬಯೋಲಾಜಿಕಲ್‌ ನಿಂದ ಕೋರ್ಬೆವ್ಯಾಕ್ಸ್‌ ಮತ್ತು ಭಾರತ್‌ ಬಯೋಟೆಕ್‌ನ ಕೋವ್ಯಾಕ್ಸಿನ್‌. ಈ ಪೈಕಿ ಕೋವೋವ್ಯಾಕ್ಸ್‌ನ ದಕ್ಷತೆಯು ಮಕ್ಕಳಲ್ಲಿ ಮಂದ್ರ, ಮಧ್ಯಮ ಹಾಗೂ ತೀವ್ರ ಕೋವಿಡ್‌ 19 ನಲ್ಲಿ 80% ಇದ್ದು, ಇದು ಅತಿ ಹೆಚ್ಚಿನ ದರವಾಗಿದೆ.

ಪ್ರಸ್ತುತ ಭಾರತದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 12 ರಿಂದ 17 ವರ್ಷಗಳ ಮಕ್ಕಳಿಗೆ ಲಸಿಕೆ ನೀಡಲು ಅನುಮೋದನೆ ನೀಡಲಾಗಿದೆ. 7-11 ವರ್ಷಗಳವರು ಮತ್ತು 2-6 ವರ್ಷದ ಮಕ್ಕಳಿಗೆ ಶೀಘ್ರದಲ್ಲೇ ಲಸಿಕೆ ನೀಡುವುದಕ್ಕೆ ಭಾರತದ ನಿಯಂತ್ರಕ ಸಂಸ್ಥೆಗಳು ಅನುಮತಿ ನೀಡುವ ನಿರೀಕ್ಷೆಯಿದೆ. 2 ವರ್ಷ ವಯಸ್ಸಿನ ಮಕ್ಕಳಲ್ಲಿ ಪರೀಕ್ಷಿಸಲಾಗುತ್ತಿರುವ ವಿಶ್ವದ ಕೆಲವೇ ಲಸಿಕೆಗಳಲ್ಲಿ ಕೋವೊವಾಕ್ಸ್  ಕೂಡಾ ಒಂದಾಗಿದೆ.

ವಯಸ್ಕರು ಮತ್ತು ಮಕ್ಕಳಲ್ಲಿ ವ್ಯಾಪಕವಾಗಿ ಲಸಿಕೆ ಪರೀಕ್ಷೆ ಮಾಡಲಾಗಿದೆ. ಚಿಕಿತ್ಸಾ ಅಧ್ಯಯನಗಳಲ್ಲಿ ಲಸಿಕೆ ಸುರಕ್ಷಿತ ಎಂದು ಸಾಬೀತಾಗಿದೆ. ಯುಎಸ್‌ನಲ್ಲಿ 2,200 ಹದಿಹರೆಯದವರಲ್ಲಿ (12-17 ವರ್ಷಗಳು) ನಡೆಸಿದ ಅಧ್ಯಯನವೊಂದರಲ್ಲಿ ಅಧಿಕ ದಕ್ಷತೆ ಮತ್ತು ರೋಗನಿರೋಧಕತೆಯನ್ನು ತೋರಿಸಿದೆ. 2-17 ವರ್ಷಗಳ 920 ಮಕ್ಕಳಲ್ಲಿ ಕೋವೋವ್ಯಾಕ್ಸ್‌ ಬಳಸಿ ಇನ್ನೊಂದು ಅಧ್ಯಯನ ಭಾರತದಲ್ಲಿ ಪ್ರಸ್ತುತ ಚಾಲ್ತಿಯಲ್ಲಿದೆ. ಲಸಿಕೆ ಸುರಕ್ಷಿತವಾಗಿ ಮತ್ತು ಉತ್ತಮ ರೋಗನಿರೋಧಕತೆಯನ್ನು ಹೊಂದಿದೆ ಎಂದು ಈ ಅಧ್ಯಯನದ ಆಂತರಿಕ ವಿಶ್ಲೇಷಣೆಯು ಅನಾವರಣಗೊಳಿಸಿದೆ.

ವಿವಿಧ ದೇಶಗಳಲ್ಲಿನ 4 ಚಿಕಿತ್ಸಾ ಅಧ್ಯಯನದಲ್ಲಿ 50,000 ಕ್ಕೂ ಹೆಚ್ಚು ವಯಸ್ಕರಲ್ಲಿ ಇದನ್ನು ಪರೀಕ್ಷೆ ಮಾಡಲಾಗಿದೆ. ಮಧ್ಯಮ ಮತ್ತು ತೀವ್ರ ಕೋವಿಡ್‌ 19 ರೋಗದ ವಿರುದ್ಧ ಲಸಿಕೆ 100% ಸುರಕ್ಷಿತ ಎಂದು ಸಾಬೀತಾಗಿದೆ. ವಯಸ್ಕರಲ್ಲಿ ನೀಡುವುದಕ್ಕೆ ಡಬ್ಲ್ಯೂಎಚ್‌ಒ ಅನುಮತಿಯನ್ನೂ ನೀಡಿದೆ. ಇದೇ ಲಸಿಕೆಯನ್ನು ನುವಾಕ್ಸೋವಿಡ್‌ ಬ್ರ್ಯಾಂಡ್‌ ಹೆಸರಿನ ಅಡಿಯಲ್ಲಿ ಯುನೈಟೆಡ್‌ ಕಿಂಗ್‌ಡಮ್‌, ಆಸ್ಟ್ರೇಲಿಯಾ, ಜಪಾನ್‌, ನ್ಯೂಜಿಲ್ಯಾಂಡ್‌, ಸಿಂಗಾಪುರ ಮತ್ತು ಇತರ ದೇಶಗಳಲ್ಲಿ ವಯಸ್ಕರಿಗೆ ನೀಡುವುದಕ್ಕೆ ಅನುಮತಿ ನೀಡಲಾಗಿದೆ.

ಒಟ್ಟಾರೆಯಾಗಿ, ವಯಸ್ಕರಿಗೆ ಹೋಲಿಸಿದರೆ ಕೋವಿಡ್‌ 19 ತೀವ್ರತೆಯು ಮಕ್ಕಳಲ್ಲಿ ಕಡಿಮೆ ಇದ್ದರೂ, ಇತರ ರೋಗಗಳು ಇದ್ದಾಗ ಮಕ್ಕಳಲ್ಲಿ ದೀರ್ಘಕಾಲೀನ ಪರಿಣಾಮಗಳನ್ನು ಉಂಟು ಮಾಡಬಹುದು. ಹೀಗಾಗಿ, ಸುರಕ್ಷಿತ, ರೋಗನಿರೋಧಕತೆ ಹೊಂದಿರುವ ಮತ್ತು ಪರಿಣಾಮಕಾರಿಯಾಗಿರುವ ಲಸಿಕೆಯನ್ನು ಮಕ್ಕಳಿಗೆ ನೀಡುವುದು ಅತ್ಯಂತ ಮುಖ್ಯವಾಗಿದೆ.

(ಡಾ ರಶ್ಮಿ ದೇವರಾಜ್, ಎಂಬಿಬಿಎಸ್, ಎಂಡಿ ಪೀಡಿಯಾಟ್ರಿಕ್ಸ್, ಡಿಎಂ ನ್ಯೂರಾಲಜಿ, ಕನ್ಸಲ್ಟೆಂಟ್ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ , ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆ, ಬೆಂಗಳೂರು)

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.