ಸರಿಯಾದ ಉಸಿರಾಟ ಅಭ್ಯಾಸವನ್ನು ಕಲಿಸುವ ಪ್ರಾಣಾಯಾಮ

ಬೆನ್ನು ನೇರವಾಗಿ, ದೇಹ ಶಾಂತವಾಗಿ, ಎಡಗೈ ಮೊಣಕಾಲಿನ ಮೇಲೆ ಇರಲಿ

Team Udayavani, Mar 24, 2021, 12:05 PM IST

ಸರಿಯಾದ ಉಸಿರಾಟ ಅಭ್ಯಾಸವನ್ನು ಕಲಿಸುವ ಪ್ರಾಣಾಯಾಮ

ದೇಹದ ಪ್ರತಿಯೊಂದು ಜೀವಕೋಶಕ್ಕೂ ಶಕ್ತಿಯನ್ನು ನೀಡುವ ಪ್ರಣಾಯಾಮದ ಅಭ್ಯಾಸ ಸರಳವಾಗಿ ಕಂಡರೂ ನಿಯಮಿತ ತರಬೇತಿ ಅಗತ್ಯ. ಪ್ರಾಣಾಯಾಮವು ಸಾಮಾನ್ಯವಾಗಿ ಸರಿಯಾದ ಉಸಿರಾಟದ ಅಭ್ಯಾಸವನ್ನು ಕಲಿಸುತ್ತದೆ. ಇದರಲ್ಲಿ ದೇಹದ ಎಲ್ಲ ಭಾಗಗಳೂ ಒಳಗೊಳ್ಳುವುದರಿಂದ ತಾಜಾ ಆಮ್ಲಜನಕ ದೇಹದ ಪ್ರತಿಯೊಂದು ಅಂಗಕ್ಕೂ ತಲುಪುತ್ತದೆ.

ಪ್ರಾಣಾಯಾಮದಿಂದ ದೇಹದ 80 ಸಾವಿರ ನರಗಳ ಶುದ್ಧೀ ಕರಣವಾಗುತ್ತದೆ. ಇದು ದೇಹದಲ್ಲಿ ಶಕ್ತಿಯ ಹರಿವನ್ನು ಸಮ ತೋಲನದಲ್ಲಿರಿಸುತ್ತದೆ. ಸ್ಥಿರವಾದ ಮತ್ತು ನಿಯಮಿತವಾದ ಪ್ರಾಣಾಯಾಮದಿಂದ ಮನಸ್ಸು ಮತ್ತು ದೇಹವನ್ನು ರೋಗ ಮುಕ್ತಗೊಳಿಸಲು ಸಾಧ್ಯವಿದೆ.

ಪ್ರಾಣಾಯಾಮದಿಂದ ಆಮ್ಲಜನಕವು ಎಲ್ಲ ಅಂಗಗಳಿಗೂ ತಲುಪುವುದರಿಂದ ಜೀರ್ಣಾಂಗ ವ್ಯವಸ್ಥೆ ಸಮತೋಲನ ದಲ್ಲಿರುತ್ತದೆ. ಚರ್ಮಕ್ಕೆ ನೈಸರ್ಗಿಕ ಹೊಳಪು ಸಿಗುತ್ತದೆ. ಚೈತನ್ಯವನ್ನು ವೃದ್ಧಿಸುತ್ತದೆ. ಒತ್ತಡವನ್ನು ಕಡಿಮೆ ಮಾಡುವ ಶಕ್ತಿಯೂ ಪ್ರಾಣಾಯಾಮಕ್ಕೆ ಇದೆ.

ಹೀಗಾಗಿ ಮನಸ್ಸು ಶಾಂತವಾಗಿ ಏಕಾಗ್ರತೆ ವೃದ್ಧಿಸುತ್ತದೆ. ಮಾನಸಿಕ ನರಗಳು ಶಾಂತವಾಗಿ ರಕ್ತ ಪರಿಚಲನೆ ವೃದ್ಧಿ ಯಾಗುವುದು. ಇದರಿಂದ ಮಾನಸಿಕ, ದೈಹಿಕ ಒತ್ತಡ ದೂರವಾಗುವುದು. ಅಧಿಕ ರಕ್ತದೊತ್ತಡ ಸಮಸ್ಯೆ ಯಿಂದ ಬಳಲುತ್ತಿರುವವರಿಗೆ ಪ್ರಾಣಾಯಾಮ ಅಭ್ಯಾಸ ಉತ್ತಮ. ದೇಹವನ್ನು ಶಾಂತಗೊಳಿಸಿ ಸಂಪೂರ್ಣ ವಿಶ್ರಾಂತಿ ಒದಗಿಸುವ ಹಾರ್ಮೋನ್‌ ಅನ್ನು ಬಿಡುಗಡೆ ಮಾಡುತ್ತದೆ. ರಕ್ತದೊತ್ತಡದ ಜತೆಗೆ ಮಧುಮೇಹ, ಖಿನ್ನತೆಯನ್ನೂ ದೂರ ಮಾಡುತ್ತದೆ.

ವ್ಯಕ್ತಿಯ ದೀರ್ಘಾಯುಷ್ಯವು ಉಸಿರಾಟದ ಪ್ರಮಾಣವನ್ನು ಅವಲಂಬಿಸಿರುತ್ತದೆ. ಹೀಗಾಗಿ ಪ್ರಾಣಾಯಾಮದಿಂದ ಆಯುಷ್ಯವನ್ನು ವೃದ್ಧಿಸಲು ಸಾಧ್ಯವಿದೆ. ದೇಹ ಮತ್ತು ಮನ ಸ್ಸಿನ ಮೇಲೆ ಹಿಡಿತ ಸಾಧಿಸಲು ನೆರವಾಗುವ ಪ್ರಾಣಾಯಾಮವು ತೂಕ ಇಳಿಸಲು ನೆರವಾಗುತ್ತದೆ. ನಿರಂತರವಾಗಿ ಪ್ರಾಣಾಯಾಮವನ್ನು ಅಭ್ಯಾಸ ಮಾಡುವುದರಿಂದ ಆಹಾರ ಸೇವನೆಯಲ್ಲಿ ಸಮತೋಲನ ಸಾಧಿಸಲು ಸಾಧ್ಯವಿದೆ.

ಪ್ರಾಣಾಯಾಮ ಮಾಡುವುದು ಹೇಗೆ?
*ಯೋಗ ಮ್ಯಾಟ್‌ ಮೇಲೆ ಧ್ಯಾನಸ್ಥ ಭಂಗಿಯಲ್ಲಿ ಕಾಲು ಮಡಚಿ ಕುಳಿತುಕೊಳ್ಳಿ
*ಹೆಬ್ಬೆರಳಿನಿಂದ ಬಲ ಮೂಗಿನ ಹೊಳ್ಳೆಯನ್ನು ಮುಚ್ಚಿ ಎಡ ಮೂಗಿನ ಹೊಳ್ಳೆಯಿಂದ ಉಸಿರಾಡಿ.
*ಬೆನ್ನು ನೇರವಾಗಿ, ದೇಹ ಶಾಂತವಾಗಿ, ಎಡಗೈ ಮೊಣಕಾಲಿನ ಮೇಲೆ ಇರಲಿ.
*ಬಳಿಕ ಎಡ ಮೂಗಿನ ಹೊಳ್ಳೆಯನ್ನು ಬಲಗೈಯ ಉಂಗುರದ ಬೆರಳಿನಿಂದ ಮುಚ್ಚಿ. ಬಲ ಮೂಗಿನಿಂದ ಉಸಿರಾಡಿ.
*15 ನಿಮಿಷಗಳ ಕಾಲ ಇದನ್ನು ಪುನರಾವರ್ತಿಸಿ. ಅಗತ್ಯವಿದ್ದರೆ ಪ್ರತಿ 5 ನಿಮಿಷಕ್ಕೊಮ್ಮೆ ವಿರಾಮ ಪಡೆಯಿರಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.