ಕೋವಿಡ್ ಸೋಂಕಿನಿಂದ ರಕ್ಷಣೆ ಮಾಡುತ್ತದೆಯೇ ಸ್ಟೀಮಿಂಗ್..!? ಅಧ್ಯಯನಗಳು ಏನು ಹೇಳುತ್ತವೆ..?


Team Udayavani, Apr 22, 2021, 11:34 AM IST

Is steam inhalation helpful in fighting COVID? All you need to know

ನವ ದೆಹಲಿ : ಕೋವಿಡ್ ನ ಎರಡನೇ ಅಲೆ ಮತ್ತೆ ಇಡೀ ವಿಶ್ವವನ್ನೇ ಅಡಿಮೇಲಾಗಿಸಿದೆ. ನಾಗರಿಕ ವ್ಯವಸ್ಥೆ ಚೇತರಿಕೆಗೊಳ್ಳುತ್ತಿದೆ ಎಂಬಷ್ಟರಲ್ಲೇ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ ಕೋವಿಡ್ ರೂಪಾಂತರಿ ಅಲೆ.

ವಿಶ್ವಾದ್ಯಂತ 143 ದಶಲಕ್ಷಕ್ಕೂ ಹೆಚ್ಚು ಜನರು ತೀವ್ರವಾದ ಉಸಿರಾಟದ SARS-CoV-2 ಕೋವಿಡ್ ಸೋಂಕಿಗೆ  ಒಳಗಾಗಿದ್ದಾರೆ ಮತ್ತು 3 ದಶಲಕ್ಷಕ್ಕೂ ಹೆಚ್ಚು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಈ ನಡುವೆ, ಜನರು ತಮ್ಮನ್ನು ತಾವು ಮಾರಣಾಂತಿಕ ವೈರಸ್‌ ನಿಂದ ರಕ್ಷಿಸಿಕೊಳ್ಳುವ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಾದ್ಯಂತ ಟ್ರೆಂಡ್ ಆಗುತ್ತಿದೆ ಎಂದು ಸುದ್ದಿಯಾಗಿದ್ದು, ಸ್ಟೀಮ್ ಇನ್ ಹೇಲಿಂಗ್ ಅಥವಾ ಉಗಿ ಉಸಿರಾಡುವಿಕೆಯ ಕಾರಣದಿಂದಾಗಿ ಕೋವಿಡ್ ಸೊಂಕನ್ನು ದೂರ ಮಾಡಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ

ಆದರೆ, ಯು.ಎಸ್. ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಷನ್ (ಸಿಡಿಸಿ) ಅಥವಾ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌ ಒ) ನಿಂದ ಕೋವಿಡ್ ಸೋಂಕನ್ನು ದೂರ ಮಾಡಲು ಅಥವಾ ಅದರಿಂದ ರಕ್ಷಿಸಿಕೊಳ್ಳಲು ಸ್ಟೀಮ್ ಸಹಾಐ ಮಾಡುತ್ತದೆ ಎಂಬ ಯಾವುದೇ ಅಧಿಕೃತವಾಗಿ ಹೇಳಿಲ್ಲ ಎಂಬುವುದಾಗಿ  ಸುದ್ದಿ ಸಂಸ್ಥೆ ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ಸುದ್ದಿ ಸಂಸ್ಥೆ ರಾಯಿಟರ್ಸ್ ಗೆ ಪ್ರತಿಕ್ರಿಯೆ ನೀಡಿದ ಸಿಡಿಸಿಯ ಪ್ರತಿನಿಧಿಯೊಬ್ಬರು, ಕೋವಿಡ್ ಸೋಂಕಿಗೆ ಸ್ಟೀಮ್ ಇನ್ ಹೇಲಿಂಗ್  ಸಹಾಯ ಮಾಡುತ್ತದೆ ಎನ್ನುವುದರ ಬಗ್ಗೆ ಯಾವುದೇ ವೈಜ್ಞಾನಿಕ ಅಧ್ಯಯನಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಶೀತಗಳು ಮತ್ತು ಮೇಲ್ಭಾಗದ ಶ್ವಾಸ ಕೋಶದ ಸಮಸ್ಯೆಗಳಿಗೆ ಸಾಮಾನ್ಯವಾಗಿ ಪರಿಹಾರ ಮಾರ್ಗವಾಗಿ ಈ ಸ್ಟೀಮ್ ಇನ್ ಹೇಲಿಂಗ್ ಅಥವಾ  ಉಗಿ ಉಸಿರಾಡುವಿಕೆಯನ್ನು ಬಳಸಲಾಗುತ್ತದೆ.

ಆದರೆ ವೈಜ್ಞಾನಿಕ ಅಧ್ಯಯನಗಳು ಇದು ಕೆಲವು ಪ್ರಯೋಜನಗಳನ್ನು ಹೊಂದಿದೆ ಎಂದು ಸಾಬೀತು ಪಡಿಸಿದೆ. ಆದರೇ, ಚರ್ಮ ಸಂಬಂಧಿ ಕೆಲವು ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ತಿಳಿಸಿವೆ.

“ಬಿಸಿನೀರಿನಿಂದ ತುಂಬಿದ ಪ್ಯಾನ್ ಮೇಲೆ ಟವೆಲ್ ಅಥವಾ ಬೆಡ್ ಶೀಟ್ ನ ಸಹಾಯದಿಂದ ತಲೆ  ಮುಚ್ಚಿಕೊಂಡು ಉಗಿಯನ್ನು ಸೇವಿಸುವ ಸಾಮಾನ್ಯ ತಂತ್ರ ಇದಾಗಿದ್ದು, ಬಿಸಿ ದ್ರವ ಅಥವಾ ಕಂಟೇನರ್‌ ನ ಸಂಭಾವ್ಯ ಸಂಪರ್ಕದಿಂದಾಗಿ ಅಪಾಯಕಾರಿ” ಎಂದು ಸ್ಪ್ಯಾನಿಷ್ ಪೀಡಿಯಾಟ್ರಿಕ್ಸ್ ಅಸೋಸಿಯೇಷನ್‌ ನ ಅಧ್ಯಯನವು ಹೇಳಿದೆ.

ಇನ್ನು, ಬರ್ಮಿಂಗ್ ಹ್ಯಾಮ್ ನ ಮಕ್ಕಳ ಆಸ್ಪತ್ರೆ  ಸ್ಟೀಮ್ ಇನ್ ಹೇಲೇಷನ್  ಗೆ ಸಂಬಂಧಿಸಿದ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದೆ.

ಕೋವಿಡ್ ನಂತಹ ಮಾರಣಾಂತಿಕ ಸೋಂಕನ್ನು ಸ್ಟೀಮ್ ಇನ್ ಹೇಲೇಷನ್  ಗುಣಪಡಿಸದಿದ್ದರೂ ಸಹ, ನಿಮ್ಮ ದೇಹವು ಆರಾಮವಾಗುವಂತೆ ಮಾಡುತ್ತದೆ ಎನ್ನುತ್ತಾರೆ ಕೆಲವು ತಜ್ಞ ವೈದ್ಯರು.

ಇದನ್ನೂ ಓದಿ : ಭಾರತ: ಕಳೆದ 24ಗಂಟೆಗಳಲ್ಲಿ ದಾಖಲೆಯ 3.14 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.