ಕಪ್ಪಾ ವೈರಸ್‌ : ಲಸಿಕೆಯ ಎರಡೂ ಡೋಸ್‌ ಪಡೆದಲ್ಲಿ ರಕ್ಷಣೆ ಸಾಧ್ಯ


Team Udayavani, Jul 17, 2021, 7:05 AM IST

ಕಪ್ಪಾ ವೈರಸ್‌ : ಲಸಿಕೆಯ ಎರಡೂ ಡೋಸ್‌ ಪಡೆದಲ್ಲಿ ರಕ್ಷಣೆ ಸಾಧ್ಯ

ಕೊರೊನಾ ವೈರಸ್‌ನ ಹೊಸ ಹೊಸ ರೂಪಾಂತರಗಳು ವಿಜ್ಞಾನಿಗಳು ಮತ್ತು ವೈದ್ಯಕೀಯ ಸಂಶೋಧಕರಿಗೆ ನಿರಂತರವಾಗಿ ಸವಾಲೊಡ್ಡುತ್ತಿವೆ. ಡೆಲ್ಟಾ ಪ್ಲಸ್‌ ರೂಪಾಂತರಿ ಪ್ರಕರಣಗಳ ನಡುವೆ ದೇಶದಲ್ಲಿ ಕೊರೊನಾದ ಕಪ್ಪಾ ರೂಪಾಂತರಿಯ 7 ಪ್ರಕರಣಗಳು ದೃಢಪಟ್ಟಿದ್ದು ಜನರಲ್ಲಿ ತುಸು ಕಳವಳನ್ನುಂಟು ಮಾಡಿದೆ. ಇತ್ತೀಚೆಗೆ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಈ ರೂಪಾಂತರಿ ವೈರಸ್‌ ಪತ್ತೆಯಾಗಿದ್ದು, ಡೆಲ್ಟಾದಂತೆಯೇ ಕಪ್ಪಾ ಕೂಡ ಎರಡನೇ ಬಾರಿಗೆ ರೂಪಾಂತರಗೊಂಡ ಕೊರೊನಾ ವೈರಸ್‌ ಆಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಿಳಿಸಿದೆ.

ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಜೈಪುರದ ಎಸ್‌ಎಂಎಸ್‌ ವೈದ್ಯಕೀಯ ಕಾಲೇಜು, ದಿಲ್ಲಿ ಲ್ಯಾಬ್‌ ಮತ್ತು ಪುಣೆಯ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ ಜೀನೋಮ್‌ಗೆ ಕಳುಹಿಸಲಾಗಿದ್ದ 174 ಮಾದರಿಗಳಲ್ಲಿ 166 ಮಾದರಿಗಳು ಡೆಲ್ಟಾ ರೂಪಾಂತರಿ ಮತ್ತು 5 ಕಪ್ಪಾ ರೂಪಾಂತರಿ ವೈರಸ್‌ ಎಂಬುದು ದೃಢಪಟ್ಟಿದೆ. ಅಲ್ಲದೆ ಲಕ್ನೋದ ಕಿಂಗ್‌ ಜಾರ್ಜ್‌ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದ್ದ 109 ಮಾದರಿಗಳಲ್ಲಿ 107 ಡೆಲ್ಟಾ ಪ್ಲಸ್‌ ಮತ್ತು 2 ಮಾದರಿಗಳು ಕಪ್ಪಾ ರೂಪಾಂತರಿಗಳೆಂದು ಕಂಡು ಬಂದಿವೆ.

ಏನಿದು ಕಪ್ಪಾ ರೂಪಾಂತರಿ ವೈರಸ್‌?
ಈಗಾಗಲೇ ದೇಶದಲ್ಲಿ ಎರಡನೇ ಅಲೆಯ ವೇಳೆ ಜನರನ್ನು ತೀವ್ರವಾಗಿ ಬಾಧಿಸಿದ ಡೆಲ್ಟಾ ವೈರಸ್‌ನಂತೆ ಕಪ್ಪಾ ಕೂಡ ಕೊರೊನಾ ವೈರಸ್‌ನ ದ್ವಿ ರೂಪಾಂತರಿಯಾಗಿದೆ, ಈ ವೈರಸ್‌ ಎರಡು ಬಾರಿ ಮಾರ್ಪಾಡು ಕಂಡಿದ್ದು ಇದನ್ನು ಬಿ.1.617.1 ಎಂದೂ ಕರೆಯಲಾಗುತ್ತದೆ. E484Q ಮತ್ತು L453R ಈ ವೈರಸ್‌ನ ಎರಡು ರೂಪಾಂತರಿಗಳಾಗಿವೆ. ಇದು ಕೊರೊನಾದ ಹೊಸ ರೂಪಾಂತರಿಯೇನಲ್ಲ. ಡಬ್ಲ್ಯುಎಚ್‌ಒ ಪ್ರಕಾರ ಕಪ್ಪಾ ರೂಪಾಂತರಿ ವೈರಸ್‌ ಭಾರತದಲ್ಲಿ 2020ರ ಅಕ್ಟೋಬರ್‌ನಲ್ಲಿ ಡೆಲ್ಟಾ ರೂಪಾಂತರಿಯ ಜತೆಯಲ್ಲಿಯೇ ಪತ್ತೆಯಾಗಿತ್ತು. ಈ ರೂಪಾಂತರಿಯ ಆನುವಂಶಿಕ ಬದಲಾವಣೆಯ ಬಗೆಗೆ ಅರಿವಿರುವುದರಿಂದ ಇದು ಅಷ್ಟೇನೂ ಅಪಾಯಕಾರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದು ಕೊರೊನಾ ವೈರಸ್‌ನ ಇತರ ರೂಪಾಂತರಿಯಂತೆ ಸಹಜವಾಗಿದ್ದು ಈ ವೈರಸ್‌ನ ಹರಡುವಿಕೆಯ ತೀವ್ರತೆ, ಅದು ಮಾನವನ ದೇಹದ ಮೇಲೆ ಬೀರಬಹುದಾದ ಪರಿಣಾಮ ಇತ್ಯಾದಿಗಳ ಬಗ್ಗೆ ಸ್ಪಷ್ಟತೆ ಇರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಜನತೆಗೆ ವೈದ್ಯರು ಧೈರ್ಯ ತುಂಬಿದ್ದಾರೆ. ಆದರೆ ಈ ರೂಪಾಂತರಿ ವೈರಸ್‌ ಈಗಾಗಲೇ ಅನೇಕ ದೇಶಗಳಲ್ಲಿ ಪತ್ತೆಯಾಗಿದ್ದು ಸಮುದಾಯವನ್ನು ವ್ಯಾಪಿಸುವ ಸಾಧ್ಯತೆಗಳಿವೆಯಾದರೂ ಈ ಸೋಂಕು ತಗಲಿದವರು ಸೂಕ್ತ ಚಿಕಿತ್ಸೆ ಪಡೆದುಕೊಂಡದ್ದೇ ಆದಲ್ಲಿ ಶೀಘ್ರ ಗುಣಮುಖರಾಗಲು ಸಾಧ್ಯ.

ಕೊರೊನಾ ನಿರೋಧಕ ಲಸಿಕೆಗಳು ಪರಿಣಾಮಕಾರಿಯೇ?
ಕಪ್ಪಾ ರೂಪಾಂತರಿ ವೈರಸ್‌ ಮಾನವ ದೇಹದಲ್ಲಿರುವ ರೋಗನಿರೋಧಕ ಶಕ್ತಿಯನ್ನು ಹಾನಿಗೊಳಿಸುತ್ತದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಬಲವಾದ ಸಾಕ್ಷ್ಯಾಧಾರಗಳಿಲ್ಲ. ಆದರೆ ಕಪ್ಪಾ ರೂಪಾಂತರಿ ವಿರುದ್ಧ ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಲಸಿಕೆ ಪರಿಣಾಮಕಾರಿಯಾಗಿದೆ ಎಂದು ಐಸಿಎಂಆರ್‌ ಹೇಳಿದೆ. ಮತ್ತೂಂದೆಡೆ ಆಕ್ಸ್‌ಫ‌ರ್ಡ್‌ ವಿವಿ ನಡೆಸಿದ ಅಧ್ಯಯನದ ಪ್ರಕಾರ ಕೊವಿಶೀಲ್ಡ್‌ ಕೂಡ ಕಪ್ಪಾ ರೂಪಾಂತರಿಯಿಂದ ರಕ್ಷಣೆ ನೀಡುತ್ತದೆ. ಪ್ರಸ್ತುತ ಭಾರತದ ಹೆಚ್ಚಿನ ಜನರಿಗೆ ಕೊವ್ಯಾಕ್ಸಿನ್‌ ಮತ್ತು ಕೊವಿಶೀಲ್ಡ್‌ ಲಸಿಕೆಯನ್ನು ನೀಡಲಾಗುತ್ತಿದೆ ಎಂಬುದು ಇಲ್ಲಿ ಗಮನಾರ್ಹ. ಕೆಲವೊಂದು ವೈದ್ಯಕೀಯ ಸಂಶೋಧನೆಗಳು ಮತ್ತು ಅಧ್ಯಯನದ ಪ್ರಕಾರ ಕೊರೊನಾ ಲಸಿಕೆಯ ಒಂದು ಡೋಸ್‌ ಸಾಮಾನ್ಯವಾಗಿ ಅಲ್ಫಾ ಮತ್ತು ಡೆಲ್ಟಾ ರೂಪಾಂತರಿಗಳ ಮೇಲೆ ಪರಿಣಾಮ ಬೀರುವುದಿಲ್ಲ. ಒಂದು ಡೋಸ್‌ ಲಸಿಕೆ ತೆಗೆದುಕೊಂಡವರ ಪೈಕಿ ಕೇವಲ ಶೇ.10ರಷ್ಟು ಮಂದಿಗೆ ಮಾತ್ರ ಈ ರೂಪಾಂತರಿಗಳನ್ನು ತಡೆದುಕೊಳ್ಳಲು ಸಾಧ್ಯವಾಗಿದ್ದರೆ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದವರ ಪೈಕಿ ಶೇ. 95ರಷ್ಟು ಮಂದಿ ಡೆಲ್ಟಾ ಮತ್ತು ಬೀಟಾ ವೈರಸ್‌ಗಳಿಂದ ರಕ್ಷಣೆಯನ್ನು ಪಡೆದುಕೊಂಡಿದ್ದಾರೆ. ಕಪ್ಪಾ ರೂಪಾಂತರಿ ಕೂಡ ಡೆಲ್ಟಾದಂತೆ ದ್ವಿ ರೂಪಾಂತರಿ ವೈರಸ್‌ ಆಗಿರುವುದರಿಂದ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದುಕೊಂಡರೆ ಉತ್ತಮ ಅಷ್ಟು ಮಾತ್ರವಲ್ಲದೆ ಎಲ್ಲ ರೀತಿಯ ಕೊರೊನಾ ರೂಪಾಂತರಿ ವೈರಸ್‌ಗಳಿಂದ ರಕ್ಷಣೆ ಸಾಧ್ಯ.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.