Foods: ಆಹಾರ ಸೇವಿಸುವಾಗ ಈ ಅಂಶಗಳನ್ನು ನೆನಪಿನಲ್ಲಿಡಿ


Team Udayavani, Feb 18, 2024, 12:41 PM IST

7-health

ಆಹಾರ ತಯಾರಿ: ಖಾದ್ಯವಸ್ತುಗಳನ್ನು ಸೇವಿಸುವವರ ವಯಸ್ಸಿಗೆ ಸರಿಯಾಗಿ ತುಂಡುಗಳನ್ನು ಮಾಡಿಕೊಡಬೇಕು. ವಿಶೇಷವಾಗಿ ಮಕ್ಕಳಿಗೆ ದುಂಡನೆಯ ತುಂಡುಗಳನ್ನು ಕೊಡಬಾರದು, ಅವು ಅವರಲ್ಲಿ ಆಲಿಕೆಯ ರೂಪದಲ್ಲಿರುವ ವಾಯುಮಾರ್ಗದಲ್ಲಿ ಸೇರಿಕೊಳ್ಳುವ ಅಪಾಯವಿದೆ.

ಗಮನಕೊಟ್ಟು ಆಹಾರ ಸೇವಿಸಿ: ಮಕ್ಕಳಿಗೆ ಉಣ್ಣಿಸಲು ಅಥವಾ ತಿನ್ನಿಸಲು ಮೊಬೈಲ್‌ ಯಾ ಟಿವಿ ಬೇಕೇ ಬೇಕು ಎಂದು ಹೇಳುವ ಅನೇಕ ಹೆತ್ತವರನ್ನು ಕಂಡಿದ್ದೇನೆ. ಹೆತ್ತವರು ಇಂತಹ ಅಭ್ಯಾಸಗಳನ್ನು ಪ್ರೋತ್ಸಾಹಿಸಬಾರದು. ಆಹಾರದ ಮೇಲೆ ಗಮನ ಕೇಂದ್ರೀಕರಿಸಿ, ಆಹಾರ ಜಗಿಯುವ ಸರಿಯಾದ ಪದ್ಧತಿ ರೂಢಿಸಿಕೊಳ್ಳಲು ಮಕ್ಕಳಿಗೆ ತಿಳಿಹೇಳಿ. ವಿಭಿನ್ನ ಮಾದರಿಯ ಆಹಾರಗಳನ್ನು ಜಗಿಯುವ ಉತ್ತಮ ಪದ್ಧತಿಯನ್ನು ಅಭ್ಯಾಸ ಮಾಡಿಕೊಳ್ಳಲು ಹೆತ್ತವರು ಮಾದರಿಯಾಗಬೇಕು. ಹೆಚ್ಚುವರಿ ಆಹಾರವನ್ನು ಬಾಯಿಯಿಂದ ಹೊರಹಾಕುವ ಅಭ್ಯಾಸವನ್ನು ಮೃದುವಾಗಿ ನಿರುತ್ತೇಜಿಸಿ. ನೆನಪಿಡಿ, ಮಕ್ಕಳು ನೀವು ಹೇಳುವುದಕ್ಕಿಂತ ಹೆಚ್ಚಾಗಿ ನೀವು ಮಾಡುವುದನ್ನು ನೋಡಿ ಅನುಸರಿಸುತ್ತಾರೆ.

ಭಂಗಿ: ಸುರಕ್ಷಿತ ಆಹಾರ ಸೇವನೆಗಾಗಿ ಕುಳಿತು ತಿನ್ನುವ – ಉಣ್ಣುವ ಭಂಗಿಯನ್ನು ರೂಢಿಸಿಕೊಳ್ಳಿ. ಆಹಾರ ಸೇವಿಸುವ ಸಮಯದಲ್ಲಿ ಮಕ್ಕಳು ಓಡಾಡುವುದು ಬೇಡ. ವ್ಯಕ್ತಿಯು ಹಾಸಿಗೆಯಲ್ಲಿದ್ದರೆ ಅವರು ಎದ್ದು ಕುಳಿತು ಆಹಾರ ಸೇವಿಸಲಿ. ಯಾವುದೇ ಕಾರಣಕ್ಕೂ ಮಲಗಿರುವ ಭಂಗಿಯಲ್ಲಿ ಆಹಾರ ಸೇವಿಸಬಾರದು.

ದ್ರವಾಹಾರ ಸೇವನೆ: ಬಹುತೇಕ ಮಂದಿ ಗುಟುಕರಿಸಿ ಕುಡಿಯುವುದರ ಬದಲಾಗಿ ಒಂದೇಟಿಗೆ ಗಳಗಳನೆ ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಹೀಗೆ ಗಳಗಳನೆ ಕುಡಿಯುವ ಹೊತ್ತಿನಲ್ಲಿ ಹಲವು ಸೆಕೆಂಡುಗಳ ಕಾಲ ಉಸಿರಾಟ ಸ್ಥಗಿತಗೊಳ್ಳಬೇಕಾಗುತ್ತದೆ, ಇದು ಗಮನಾರ್ಹ ಉದ್ವಿಗ್ನತೆಗೆ ಕಾರಣವಾಗುತ್ತದೆಯಲ್ಲದೆ ವಿಶೇಷವಾಗಿ ಮಕ್ಕಳು ಮತ್ತು ಹಿರಿಯರಲ್ಲಿ ಸಂಕೀರ್ಣ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಆದ್ದರಿಂದ ಸುರಕ್ಷೆ ಮತ್ತು ಆಸ್ವಾದಿಸಿ ಕುಡಿಯುವುದಕ್ಕಾಗಿ ಗುಟುಕರಿಸಿ ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.

ಮಾತಾಡಬಾರದು, ನಗಬಾರದು: ಆಹಾರ ಸೇವನೆ ಮತ್ತು ನಗುವುದು ಅಥವಾ ಮಾತನಾಡುವುದು ಏಕಕಾಲದಲ್ಲಿ ನಡೆಯಲೇಬಾರದು. ಸಾಮಾಜಿಕ ಸಂದರ್ಭಗಳಲ್ಲಿ ಒಂದು ತುತ್ತು ತೆಗೆದುಕೊಳ್ಳುವುದಕ್ಕೆ ಮೊದಲು ಮಾತನಾಡಿ ಅಥವಾ ಜಗಿದು ನುಂಗಿದ ಬಳಿಕ ಮಾತನಾಡಿ. ಊಟ ಉಪಾಹಾರ ಮುಗಿದ ಬಳಿಕ ವಿಸ್ತಾರವಾಗಿ ಮಾತನಾಡುವುದು ಹಿತಕರ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

4-health

Rhinoplasty: ರಿನೊಪ್ಲಾಸ್ಟಿ

9-hearing-screening

Hearing Screening: ಹಿರಿಯ ವಯಸ್ಕರಲ್ಲಿ ಶ್ರವಣ ತಪಾಸಣೆಯ ಅಗತ್ಯ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.