ಹಸಿ ಆಹಾರಕ್ಕಿಂತ ಬೇಯಿಸಿರುವುದು ಸುರಕ್ಷಿತ ಇದರ ಪ್ರಯೋಜನಗಳೇನು…

ಹಸಿ ಆಹಾರ ಸೇವನೆಯಿಂದ ಬಹುಬೇಗನೆ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ.

Team Udayavani, Nov 25, 2022, 4:58 PM IST

ಹಸಿ ಆಹಾರಕ್ಕಿಂತ ಬೇಯಿಸಿರುವುದು ಸುರಕ್ಷಿತ ಇದರ ಪ್ರಯೋಜನಗಳೇನು…

ಆರೋಗ್ಯಕರ ಆಹಾರ ಅದರಲ್ಲೂ ಮುಖ್ಯವಾಗಿ ತರಕಾರಿ ಯಾವುದು? ಬೇಯಿಸಿ ತಿನ್ನುವಂಥದ್ದೇ ಅಥವಾ ಹಸಿ ತಿನ್ನುವುದೇ? ಇದು ಸಹಜವಾಗಿ ಕಾಡುವ ಪ್ರಶ್ನೆ.

ಆಹಾರವನ್ನು ಬೇಯಿಸಿ ತಿಂದರೆ ಅದರ ರುಚಿ ಉತ್ತಮವಾಗುತ್ತದೆ. ಆದರೆ ಕೆಲವು ಪೌಷ್ಟಿಕಾಂಶ ಕಳೆದು ಹೋಗುತ್ತದೆ. ಕಚ್ಚಾ ಅಥವಾ ಹಸಿ ಆಹಾರಗಳ ಸೇವನೆ ಉತ್ತಮ. ಆದರೆ ಎಲ್ಲರಿಗೂ ಅಲ್ಲ. ಜತೆಗೆ ಈಗಿನ ಪರಿಸ್ಥಿತಿ ಯಲ್ಲಿ ಬೇಯಿಸಿ ತಿನ್ನುವ ಆಹಾರವೇ ಹೆಚ್ಚು ಸುರಕ್ಷಿತ.

ಕೆಲವು ಆಹಾರಗಳನ್ನು ನಾವು ಬೇಯಿಸಿ ತಿನ್ನಲಾಗುವುದಿಲ್ಲ. ಅದನ್ನು ಹಸಿಯಾಗಿಯೇ ತಿನ್ನ ಬೇಕು. ಅದೇ ರೀತಿ ಕೆಲವು ಆಹಾರಗಳನ್ನು ಹಸಿಯಾಗಿ ತಿನ್ನಲು ಸಾಧ್ಯವಿಲ್ಲ. ಅದನ್ನು ಬೇಯಿಸಿಯೇ ತಿನ್ನಬೇಕು. ಆರೋಗ್ಯದ ಹಿತದೃಷ್ಟಿಯಿಂದ ಎರಡು ಕ್ರಮವೂ ಉತ್ತಮವೇ. ಆದರೆ ಅದನ್ನು ನಾವು ತಿನ್ನಲು ಹೇಗೆ ಬಳಸುತ್ತಿದ್ದೇವೆ ಎನ್ನುವುದು ಇಲ್ಲಿ  ಮುಖ್ಯವಾಗುತ್ತದೆ.

ಬೇಯಿಸಿದ ಆಹಾರ: ಬೇಯಿಸಿದ ಆಹಾರದಲ್ಲಿ ಪೋಷಕಾಂಶಗಳಲ್ಲಿ ಸ್ವಲ್ಪ ವ್ಯತ್ಯಾಸವಾಗುವುದು ಸಹಜ. ಇಲ್ಲಿ ಆಹಾರವನ್ನು ಹೇಗೆ ಸ್ವತ್ಛಗೊಳಿಸುತ್ತೇವೆ, ಹೇಗೆ ಕತ್ತರಿಸುತ್ತೇವೆ, ಹೇಗೆ ಬೇಯಿಸುತ್ತೇವೆ, ಎಷ್ಟು ಪ್ರಮಾಣದ ನೀರು ಬಳಕೆ ಮಾಡುತ್ತೇವೆ ಎಂಬುದು ಮುಖ್ಯವಾಗು ತ್ತದೆ. ಧಾನ್ಯಗಳನ್ನು ಹೆಚ್ಚು ಬಾರಿ ತೊಳೆದರೆ ಅದರಲ್ಲಿರುವ ಪೋಷಕಾಂಶ ನಷ್ಟವಾಗುತ್ತದೆ. ಅದಕ್ಕಾಗಿ ಸಮಪ್ರಮಾ ಣದ ನೀರು ಬಳಸಿ ಎರಡು ಅಥವಾ ಮೂರು ಬಾರಿ ತೊಳೆದರೆ ಸಾಕು. ಇನ್ನು ತರಕಾರಿಗಳನ್ನು ಸಣ್ಣದಾಗಿ ಹಚ್ಚುವುದರಿಂದಲೂ ಅದರ ಪೋಷಕಾಂಶ ಹೊರಟು ಹೋಗುತ್ತದೆ. ಹೀಗಾಗಿ ದೊಡ್ಡದೊಡ್ಡ ಹೋಳುಗಳನ್ನು ಮಾಡಿ ಉಪಯೋಗಿಸುವುದು ಒಳ್ಳೆಯದು. ಕೆಲವರು ತರಕಾರಿಗಳನ್ನು ಬೇಯಿಸಿ ಅದರ ನೀರನ್ನು ಚೆಲ್ಲುತ್ತಾರೆ. ಇದು ಸರಿಯಲ್ಲ. ಇದರಿಂದ ಪೋಷಕಾಂಶಗಳೆಲ್ಲ ನಾಶ ವಾಗುತ್ತದೆ. ಇನ್ನು ಕೆಲವೊಮ್ಮೆ ಆಹಾರಗಳನ್ನು ಪಾತ್ರೆಗಳ ಮುಚ್ಚಳ ಹಾಕದೆ ಬೇಯಿಸುತ್ತೇವೆ. ಇದರಿಂದಲೂ ಪೋಷಕಾಂಶ ನಷ್ಟವಾಗುತ್ತದೆ. ಜತೆಗೆ ನೀರಿನ ಪ್ರಮಾಣ ಅಧಿಕವಾದರೆ, ಹೆಚ್ಚು ಹೊತ್ತು, ಪದೇಪದೆ ಬೇಯಿಸಿದರೆ ಅದರಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತದೆ. ಕೆಲವು ತರಕಾರಿಗಳನ್ನು ಸಿಪ್ಪೆ ಸಹಿತ ಬೇಯಿಸಿ ಬಳಿಕ ಸಿಪ್ಪೆ ತೆಗೆಯುವುದರಿಂದ ಅದರ ಪೋಷಕಾಂಶಗಳನ್ನು ಉಳಿಸಿಕೊಳ್ಳಬಹುದು.

ಪ್ರಯೋಜನಗಳು :

ಹಸಿ ಆಹಾರಗಳು ಜೀರ್ಣಾಂಗ ವ್ಯವಸ್ಥೆಗೆ ಒತ್ತಡ ಉಂಟು ಮಾಡುತ್ತದೆ. ಆದರೆ ಬೇಯಿಸಿದ ಆಹಾರ ಸೇವನೆಯು ಕರುಳಿಗೆ ಸಹಾಯ ಮಾಡುತ್ತದೆ. ಹೊಟ್ಟೆ ಉಬ್ಬುವಿಕೆ, ಗ್ಯಾಸ್ಟ್ರಿಕ್‌, ಅಜೀರ್ಣ, ಅನಿಯಮಿತ ಕರುಳಿನ ಚಲನೆ, ಮಲಬದ್ಧತೆ, ಪೋಷಕಾಂಶಗಳ ಕೊರತೆ ಇದ್ದರೆ ಹೆಚ್ಚು ಬೇಯಿಸಿದ ಆಹಾರ ಸೇವನೆ ಉತ್ತಮ. ಆಹಾರವನ್ನು ಬೇಯಿಸುವುದರಿಂದ ಅದರಲ್ಲಿರುವ ನಾರಿನಾಂಶವು ದೇಹಕ್ಕೆ ಪೋಷಕಾಂಶ ಹೀರಲು ಸಹಾಯ ಮಾಡುತ್ತದೆ.

ಕೆಲವು ತರಕಾರಿಗಳಲ್ಲಿ ಆ್ಯಂಟಿ ಆಕ್ಸಿಡೆಂಟ್‌ಗಳು ಆಹಾರ ಬೇಯಿಸಿದ ಅನಂತರ ಸೇರಿಕೊಳ್ಳುತ್ತದೆ. ಉದಾ- ಶತಾವರಿಯಲ್ಲಿರುವ ಫೆರುಲಿಕ್‌ ಆಮ್ಲ, ಕಿತ್ತಳೆ, ಕೆಂಪು ಬಣ್ಣದ ತರಕಾರಿಗಳಲ್ಲಿರುವ ಬೀಟಾ ಕ್ಯಾರೋಟಿನ್‌. ಆಹಾರವನ್ನು ಬೇಯಿಸುವುದರಿಂದ ಅದರಲ್ಲಿರುವ ಬ್ಯಾಕ್ಟೀರಿಯಾ, ರೋಗಕಾರಕ ಅಂಶಗಳು ನಾಶವಾಗುತ್ತವೆ.

ಬೇಯಿಸಿದ ಆಹಾರವು ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಯಾಕೆಂದರೆ ಮನೆಯೂಟ ಎನ್ನುವುದು ಬೌದ್ಧಿಕವಾಗಿ ನಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ಇದರಿಂದ ಆಹಾರ ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಮೂಡುತ್ತದೆ. ಮನಸ್ಸನ್ನು ಸಂತೋಷವಾಗಿರಿಸುತ್ತದೆ.

ಹಸಿ ಆಹಾರ: ಹಸಿ ತರಕಾರಿಗಳ ಸೇವನೆ ಉತ್ತಮ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಹಣ್ಣು, ತರಕಾರಿಗಳಿಗೂ ರಾಸಾಯನಿಕ ಸಿಂಪಡಿಸಿಯೇ ಬೆಳೆಸಲಾಗುತ್ತದೆ ಮತ್ತು ಸಂಗ್ರಹಿಸಲಾಗುತ್ತದೆ. ಹೀಗಾಗಿ ಅವುಗಳನ್ನು ಚೆನ್ನಾಗಿ ಸ್ವತ್ಛಗೊಳಿಸಿಯೇ ತಿನ್ನಬೇಕು. ಇಲ್ಲವಾದರೆ ಕ್ಯಾನ್ಸರ್‌ ಸಂಬಂಧಿ ಕಾಯಿಲೆಗಳಿಗೆ ನಾವು ಆಹ್ವಾನ ನೀಡಿದಂತಾಗುತ್ತದೆ. ಈ ಬಗ್ಗೆ ಆತಂಕವಿರುವು ದರಿಂದ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಸೊಪ್ಪು, ತರಕಾರಿಗಳನ್ನು ಬೇಯಿಸಿ ತಿನ್ನಲು ಸಲಹೆ ನೀಡುತ್ತೇವೆ.

ಟೊಮೆಟೋ, ಕ್ಯಾರೆಟ್‌, ಮೂಲಂಗಿ, ಮುಳ್ಳು ಸೌತೆ, ಕೆಲವೊಂದು ಸೊಪ್ಪನ್ನು ಹಸಿಯಾಗಿ ತಿನ್ನಬಹುದು. ಆದರೆ ಅದನ್ನು ಆದಷ್ಟು ಸ್ವತ್ಛಗೊಳಿಸುವುದು ಮುಖ್ಯವಾಗುತ್ತದೆ. ಅದಕ್ಕಾಗಿ ತಂದ ಬಳಿಕ ಸ್ವಲ್ಪ ಹೊತ್ತು ಉಗುರು ಬೆಚ್ಚಗಿನ ಉಪ್ಪು ನೀರಿನಲ್ಲಿ ನೆನೆಹಾಕಿ ಬಳಿಕ ಚೆನ್ನಾಗಿ ತೊಳೆದು ಉಪಯೋಗಿಸುವುದು ಒಳ್ಳೆಯದು. ತರಕಾರಿಗಳನ್ನು ಸಿಪ್ಪೆ ಸಮೇತ ತಿನ್ನಬೇಕು ಎಂದು ಹೇಳುತ್ತೇವೆ. ಆದರೆ ಈಗ ಅದನ್ನು ಹೇಳುವುದು ಅಸಾಧ್ಯ. ಯಾಕೆಂದರೆ ಇದರಲ್ಲೂ ರಾಸಾಯನಿಕ ಸೇರಿರಬಹುದು. ಅದಕ್ಕಾಗಿ ತರಕಾರಿಗಳ ತೊಟ್ಟು, ತೆಳ್ಳಗೆ ಸಿಪ್ಪೆ ತೆಗೆದು ಬಳಿಕ ಹಸಿ ತರಕಾರಿಗಳನ್ನು ಬಳಸುವುದು ಉತ್ತಮ.

ಪ್ರಯೋಜನಗಳು

ಹಸಿ ಆಹಾರವು ಕೆಲವು ಜೀವಂತ ಮತ್ತು ಜೀರ್ಣಕಾರಿ ಕಿಣ್ವಗಳನ್ನು ಹೊಂದಿದ್ದು ಅದು ಆಹಾರದ ಸಂಪೂರ್ಣ ಪೋಷಕಾಂಶ ದೇಹ ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ಹಸಿ ಆಹಾರ ಸೇವನೆಯಿಂದ ಬಹುಬೇಗನೆ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ. ಇದರಲ್ಲಿರುವ ಫೈಬರ್‌ ಅಂಶ ದೇಹದ ತೂಕವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ.

ಹೆಚ್ಚು ಹೊತ್ತು ಆಹಾರ ಅಗಿಯಬೇಕಿರುವುದರಿಂದ ನಾವು ಕಡಿಮೆ ತಿನ್ನುತ್ತೇವೆ ಮತ್ತು ಹೆಚ್ಚು ಸಮಯ ದವರೆಗೆ ವಿಸ್ತರಿಸುತ್ತೇವೆ. ಇದು ಜೀರ್ಣಾಂಗ ವ್ಯವಸ್ಥೆ ಪ್ರಯೋಜನಕಾರಿಯಾಗಿದೆ. ಆಹಾರ ಅಗಿಯುವಾಗ ಹೆಚ್ಚು ಸಮಯ ತೆಗೆದುಕೊಂಡರೆ ಸಾಕಷ್ಟು ತಿಂದ ಅನುಭವವಾಗುತ್ತದೆ ಮತ್ತು ಹೊಟ್ಟೆ ತುಂಬಿದೆ ಎಂಬ ಸಂಕೇತ ಮೆದುಳಿಗೆ ಸಿಗುತ್ತದೆ.

ಹಸಿ ಆಹಾರದಿಂದ ಸಾಕಷ್ಟು ಪೋಷಕಾಂಶಗಳು ದೊರೆಯುತ್ತದೆ. ಉದಾ- ಫೈಟೊನ್ಯೂಟ್ರಿಯೆಂಟ್ಸ್‌, ಆ್ಯಂಟಿ ಆಕ್ಸಿಡೆಂಟ್ಸ್‌, ಕಿಣ್ವಗಳು, ನೀರಿನಲ್ಲಿ ಕರಗುವ ಜೀವಸತ್ವಗಳು- ಬಿ, ಸಿ ಇತ್ಯಾದಿ.

ಕೆಲವು ಆಹಾರಗಳನ್ನು ಬೇಯಿಸಿಯೇ ತಿನ್ನಬೇಕು. ಇನ್ನು ಕೆಲವನ್ನು ಹಸಿಯಾಗಿಯೇ ತಿನ್ನಬೇಕು. ಉದಾ- ಆಲೂಗಡ್ಡೆ ಬೇಯಿಸಿ ತಿಂದರೆ ಉತ್ತಮ. ಅದೇ ರೀತಿ ಕ್ಯಾರೆಟ್‌ ಹಸಿಯಾಗಿ ತಿನ್ನುವುದು ಒಳ್ಳೆಯದು. ಯಾಕೆಂದರೆ ಕ್ಯಾರೆಟ್‌ ಬೇಯಿಸಿದಾಗ ಅದರಲ್ಲಿ ಸಕ್ಕರೆ ಅಂಶ ಅಧಿಕವಾಗುತ್ತದೆ. ಹಸಿ ಕ್ಯಾರೆಟ್‌ ಅನ್ನು ಮಧುಮೇಹಿಗಳೂ ಸೇವಿಸಬಹುದು. ಇನ್ನು ಯಾವ ಸಮಯದಲ್ಲಿ ಯಾವ ಆಹಾರ ಸೇವನೆ ಮಾಡುತ್ತೇವೆ ಎನ್ನುವುದು ಮುಖ್ಯವಾಗುತ್ತದೆ.

ಒಂದೇ ರೀತಿಯ ಆಹಾರವನ್ನು ಯಾರೂ ಇಷ್ಟಪಡು ವುದಿಲ್ಲ. ಅದಕ್ಕಾಗಿ ಆಹಾರದಲ್ಲಿ ವೈವಿಧ್ಯತೆ ಇರಲಿ. ಬೇಯಿಸಿದ ಅಥವಾ ಹಸಿ ಆಹಾರ ತನ್ನದೇ ಆದ ಗುಣ ಸ್ವಭಾವವನ್ನು ಹೊಂದಿದ್ದು, ಎರಡೂ ನಮ್ಮ ಆಹಾರ ಕ್ರಮಗಳೂ ನಮ್ಮ ಭಾಗವಾಗಿರಲಿ. ಇದರಿಂದ ಆರೋಗ್ಯ ವೃದ್ಧಿ ಸಾಧ್ಯ.

-ಡಾ| ಸುವರ್ಣ ಹೆಬ್ಟಾರ್‌ ,ಮುಖ್ಯಸ್ಥರು,

ಪಥ್ಯ ಆಹಾರ ವಿಭಾಗ,

ಕೆಎಂಸಿ ಮಣಿಪಾಲ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.