ಮುಟ್ಟಿನ ಕಪ್‌ ಬಳಕೆ ಸುಲಭ, ಕಿರಿಕಿರಿಯೂ ಇಲ್ಲ

ಬಟ್ಟೆ, ಸ್ಯಾನಿಟರಿ ಪ್ಯಾಡ್‌ ಬದಲುಪರಿಸರ ಸ್ನೇಹಿ ಮುಟ್ಟಿನ ಕಪ್‌ ಬಳಸಿ

Team Udayavani, May 28, 2023, 5:07 PM IST

TDY-18

ಬೆಂಗಳೂರು: ಹೆಣ್ಣುಮಕ್ಕಳು ಋತುಮತಿಯಾದಾಗ ಬಟ್ಟೆ, ಸ್ಯಾನಿಟರಿ ಪ್ಯಾಡ್‌ ಬಳಸುವುದು ಸಹಜ. ಆದರೆ, ಇತ್ತೀಚಿನ ದಿನಗಳಲ್ಲಿ ಮುಟ್ಟಿನ ಕಪ್‌ ಬಳಸುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಹೌದು, ಮುಟ್ಟಿನ ನೈರ್ಮಲ್ಯದ ಬಗ್ಗೆ ಹೆಚ್ಚಿನ ತಿಳಿವಳಿಕೆ ಹಾಗೂ ವಿದ್ಯಾವಂತ ಯುವತಿಯರು ಮುಟ್ಟಿನ ಕಪ್‌ಗ್ಳನ್ನು ಬಳಸಲು ಮುಂದಾಗಿದ್ದು, ಇದಕ್ಕೆ ಬೆಂಗಳೂರು ನಗರ ಪೊಲೀಸ್‌ ಮತ್ತು ವನಿತಾ ಸಹಾಯವಾಣಿ ಸಾಥ್‌ ನೀಡಿದೆ. ನಗರದ ಮಹಿಳಾ ಟ್ರಾಫಿಕ್‌ ಪೊಲೀಸ್‌ ಸಿಬ್ಬಂದಿಗೆ ಉಚಿತ ಮೆನ್‌ಸ್ಟ್ರೆವಲ್‌ (ಮುಟ್ಟಿನ) ಕಪ್‌ ವಿತರಿಸಲಾಗಿದೆ.

ಮಹಿಳೆಯ ಮುಟ್ಟಿನ ಚಕ್ರವು 28 ದಿನಗಳಿಗೊಮ್ಮೆ ಹಾಗೂ ತಿಂಗಳಲ್ಲಿ ಸಾಮನ್ಯವಾಗಿ ಐದು ದಿನಗಳ ಕಾಲ ರಕ್ತಸ್ರಾವ ಉಂಟಾಗುವುದರಿಂದ ಪ್ರತಿ ವರ್ಷ ಮೇ 28ರಂದು “ಮುಟ್ಟಿನ ನೈರ್ಮಲ್ಯ ದಿನ’ವನ್ನಾಗಿ ಆಚರಿಸಲಾಗುತ್ತದೆ.

ಒಬ್ಬ ಮಹಿಳೆ ತನ್ನ ಜೀವಿತಾವಧಿಯಲ್ಲಿ ಸುಮಾರು ಆರು ವರ್ಷಗಳಷ್ಟು ಅವಧಿ ಋತುಚಕ್ರದಲ್ಲಿಯೇ ಕಳೆಯುತ್ತಾಳೆ. ಮಹಿಳೆಯರು ಋತುಮತಿಯಾದಾಗ ಕಡಿಮೆ ಎಂದರೂ ದಿನಕ್ಕೆ ಮೂರು ಪ್ಯಾಡ್‌ಗಳನ್ನು ಉಪಯೋಗಿಸುವುದರಿಂದ ತನ್ನ ಜೀವಿತಾವಧಿಯಲ್ಲಿ 10 ರಿಂದ 12 ಸಾವಿರ ಪ್ಯಾಡ್‌ಗಳನ್ನು ಬಳಸುತ್ತಾಳೆ. ಸಾಮಾನ್ಯವಾಗಿ ಪ್ಯಾಡ್‌ಗಳಲ್ಲಿ ಶೇ.90ರಷ್ಟು ಪ್ಲಾಸ್ಟಿಕ್‌ ಬಳಸಿರುತ್ತಾರೆ. ಇದರಿಂದಾಗಿ ನೂರಾರು ವರ್ಷಗಳಾದರೂ ಮಣ್ಣಿನಲ್ಲಿ ಕೊಳೆಯುವುದಿಲ್ಲ ಹಾಗೂ ಪ್ಯಾಡ್‌ಗಳನ್ನು ಸುಡುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಜತೆಗೆ ಪ್ಯಾಡ್‌ಗಳಲ್ಲಿ ಹೆಚ್ಚು ರಕ್ತವನ್ನು ಹೀರಿಕೊಳ್ಳಲು ಹೆಚ್ಚು ರಾಸಾಯನಿಕಗಳನ್ನು ಬಳಸುತ್ತಾರೆ. ಇದರಿಂದ ಶಿಲೀಂದ್ರಗಳ ಸೋಂಕು, ಬಂಜೆತನ, ಮೂತ್ರದ ಸೋಂಕು, ಕ್ಯಾನ್ಸರ್‌ ಬರುವ ಸಾಧ್ಯತೆಗಳೂ ಇವೆ ಎಂದು ಸ್ತ್ರೀರೋಗ ತಜ್ಞೆ ಡಾ. ಹೇಮಾವತಿ ತಿಳಿಸುತ್ತಾರೆ.

ಮುಟ್ಟಿನ ಕಪ್‌ ತಯಾರಿಕೆ, ಉಪಯೋಗ: ಮೊದಲು ಮುಟ್ಟಿನ ಕಪ್‌ ಅನ್ನು ರಬ್ಬರ್‌ನಿಂದ ಮಾಡಲಾಗುತ್ತಿತ್ತು. ಆದರೆ, ಈಗ ‘ಮೆಡಿಕಲ್‌ ಗ್ರೇಡ್‌ ಸಿಲಿಕಾನ್‌’ ಎಂಬ ಪ್ರಮಾಣೀಕರಿಸಿದ ಅಂಶದಿಂದ ತಯಾರಿಸಲಾಗಿದ್ದು, ಯಾವುದೇ ರಾಸಾಯನಿಕಗಳನ್ನು ಬಳಸುವುದಿಲ್ಲ. ಗರ್ಭಕೋಶದಿಂದ ಬರುವ ರಕ್ತವನ್ನು ನೇರವಾಗಿ ಕಪ್‌ನಲ್ಲಿ ಸಂಗ್ರಹವಾಗುತ್ತದೆ. 12 ಗಂಟೆಗೊಂದು ಸಲದಂತೆ ದಿನಕ್ಕೆ ಎರಡು ಬಾರಿ ತೊಳೆದರೆ ಮತ್ತೆ ಪುನರ್‌ಬಳಕೆ ಮಾಡಬಹುದು. ಇದರಂತೆ ಒಂದು ಕಪ್‌ ಅನ್ನು ಸುಮಾರು ಹತ್ತು ವರ್ಷಗಳ ಕಾಲ ಬಳಸಬಹುದು. ಈ ಕಪ್‌ನಲ್ಲಿ ಸ್ಮಾಲ್‌, ಮೀಡಿಯಂ ಮತ್ತು ಲಾರ್ಜ್‌ ಅಳತೆಯ ಕಪ್‌ ಗಳನ್ನು ನಾವು ಕಾಣಬಹುದು. 180 ರೂ.ನಿಂದ 4,000 ರೂ.ವರೆಗೂ ಸಿಗುತ್ತವೆ. ಉತ್ತಮ ಗುಣಮಟ್ಟದ ಕಪ್‌ ಬಳಸುವುದರಿಂದ ಪೀರಿಯಡ್ಸ್‌ ಆಗಿರುವುದು ಭಾಸವಾಗುವುದಿಲ್ಲ. ಜತೆಗೆ ಬೀಚ್‌ ಹಾಗೂ ನೀರಿನ ಪ್ರದೇಶಗಳಲ್ಲಿಯೂ ಬಳಕೆ ಮಾಡಬಹುದು ಎಂದು ಮುಟ್ಟಿನ ಕಪ್‌ ತಯಾರಿಕಾ ಸಂಸ್ಥೆಯ ಸಂಸ್ಥಾಪಕಿ ದಿವ್ಯಾ ತಿಳಿಸುತ್ತಾರೆ.

ಉಪಯೋಗಗಳು: ನೈರ್ಮಲ್ಯ, ಪರಿಸರ ಸ್ನೇಹಿ, ಶೂನ್ಯ ತ್ಯಾಜ್ಯ, 10 ವರ್ಷಗಳ ಕಾಲ ಮರುಬಳಕೆ, ವ್ಯಾಯಾಮ ಮತ್ತು ಈಜುವಾಗಲೂ ಧರಿಸಬಹುದು, ಅಲರ್ಜಿ ಮುಕ್ತ, ವೆಜಿನಾದಲ್ಲಿನ ಪಿಎಚ್‌ ಅಂಶದ ಸಮತೋಲನವನ್ನು ಕಾಪಾಡುತ್ತದೆ.

ನಾನು ಮೂರು ವರ್ಷಗಳಿಂದ ಮುಟ್ಟಿನ ಕಪ್‌ ಬಳಸುತ್ತಿದ್ದು, ತುಂಬಾ ಉಪಯುಕ್ತವಾಗಿದೆ.  ಮೊದಲು ಪ್ಯಾಡ್‌ ಬಳಸುತ್ತಿರುವಾಗ ಬದಲಾಯಿಸಲು 15ರಿಂದ 20 ನಿಮಿಷ ಹೆಚ್ಚು ಕಡಿಮೆಯಾದರೂ, ಎಲ್ಲಿ ಲೀಕ್‌ ಆಗಿದೆ ಎಂದು ಕಿರಿಕಿರಿ ಆಗುತ್ತಿತ್ತು. ನಿದ್ದೆಯಲ್ಲಿ ಪದೇ ಪದೆ ಎಚ್ಚರಗೊಂಡು ಬಟ್ಟೆಗೆ ತಗುಲಿದೆಯಾ ಎಂದು ನೋಡಿಕೊಳ್ಳಬೇಕಿತ್ತು. ಆದರೆ, ಕಪ್‌ ಬಳಸಲು ಪ್ರಾರಂಭಿಸಿದಾಗಿನಿಂದಲೂ ಪಿರಿಯಡ್ಸ್‌ ಆಗಿರುವುದೇ ಗೊತ್ತಾಗುವುದಿಲ್ಲ. ಸವಿತಾ

ಪೊಲೀಸ್‌ ಸಿಬ್ಬಂದಿಗೆ ನಿಗದಿತ ಸಮಯ ಇರುವುದಿಲ್ಲ. ಟ್ರಾಫಿಕ್‌ ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಸರಿಯಾದ ಶೌಚಾಲಯದ ವ್ಯವಸ್ಥೆ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಪೀರಿಯಡ್ಸ್‌ ಆದರೆ ಕಷ್ಟವಾಗುತ್ತದೆ. ಆದರೆ ಕಪ್‌ ಬಳಸುವುದರಿಂದ ಕಿರಿಕಿರಿ ಇರುವುದಿಲ್ಲ. 8ರಿಂದ 10 ಗಂಟೆಗಳ ವರೆಗೆ ಸಲೀಸಾಗಿ ಬಳಸಬಹುದು. ಎರಡು ವರ್ಷಗಳಿಂದ ಉಪಯೋಗಿಸಲಾಗಿದ್ದು, ಯಾವುದೇ ರೀತಿಯ ರ್ಯಾಶಸ್‌, ಹೊಟ್ಟೆ ನೋವು, ದುರ್ವಾಸನೆ ಇಲ್ಲ. ಅನಿತಾ, ಪಿಎಸ್‌

ಒಮ್ಮೊಮ್ಮೆ ಕಚೇರಿಗಳಲ್ಲಿ ಡಸ್ಟ್‌ಬಿನ್‌ಗಳೇ ಸರಿಯಾಗಿ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಪ್ಯಾಡ್‌ಗಳನ್ನು ಎಲ್ಲೆಂದರಲ್ಲಿ ಹಾಕಲಾಗು ವುದಿಲ್ಲ. ಆದರೆ, ಕಪ್‌ ಬಳಸಲು ಆರಂಭಿಸಿದಾಗಿನಿಂದ ತೊಂದರೆ ಆಗಿಲ್ಲ. ಆರಾಮಾಗಿ ಕಚೇರಿಗೆ ಹೋಗಿಬಂದು ಮನೆಯಲ್ಲಿ ಸ್ವತ್ಛಗೊಳಿಸುತ್ತೇನೆ. ವಿದ್ಯಾ

ಭಾರತಿ ಸಜ್ಜನ್‌

ಟಾಪ್ ನ್ಯೂಸ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

rape

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hepatitis a

Hepatitis A; ಮಕ್ಕಳಲ್ಲಿ ಹೆಚ್ಚುತ್ತಿವೆ ಹೆಪಟೈಟಿಸ್ ಎ ಪ್ರಕರಣಗಳು: ತಡೆಗಟ್ಟುವ ವಿಧಾನವೇನು?

1-sadasdsa

Heart; ಹೆಚ್ಚುತ್ತಿವೆಯೇ ಹೃದಯಾಘಾತಗಳು?: ವೈಜ್ಞಾನಿಕ ಸಮೀಕ್ಷೆ ಕೈಗೊಳ್ಳುವ ಅಗತ್ಯ

6-health

Auditory Neuropathy: ಶಿಶುಗಳಲ್ಲಿ ಆಡಿಟರಿ ನ್ಯುರೋಪತಿ ಸ್ಪೆಕ್ಟ್ರಮ್‌ ತೊಂದರೆಗಳು

5-dengue-fever

Dengue Fever: ಲಕ್ಷಣಗಳು ಮತ್ತು ಮುನ್ನೆಚ್ಚರಿಕೆಗಳು

4-health

Suicide prevention: ಆತ್ಮಹತ್ಯೆ ತಡೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1wqeqw

Reliance Jio: ಐಫೋನ್ 15 ಖರೀದಿಸಿದರೆ ಆರು ತಿಂಗಳು ಫ್ರೀ ಪ್ಲಾನ್

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

1-asdsaas

Chikodi; ಪಟಾಕಿ ಸಿಡಿಸುವ ವೇಳೆ ಯುವಕನ ಕೈ ನುಜ್ಜು ಗುಜ್ಜು

gtd

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

supreem

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.