ಮಳೆಗಾಲ; ಶೀತ -ಕೆಮ್ಮಿಗೆ ಈರುಳ್ಳಿಯೇ ಮದ್ದು

ಈರುಳ್ಳಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ.

Team Udayavani, Jul 2, 2022, 4:46 PM IST

ಶೀತ -ಕೆಮ್ಮಿಗೆ ಈರುಳ್ಳಿಯೇ ಮದ್ದು

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಅನೇಕ ರೋಗಗಳು ಬರುವುದು ಸಾಮಾನ್ಯ. ಮಳೆಯಿಂದಾಗಿ ಶೀತ ಕೆಮ್ಮು ಹೆಚ್ಚುತ್ತವೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಔಷಧ ತೆಗೆದುಕೊಂಡು ಬರಲು ಸಾಧ್ಯವಿಲ್ಲ. ಇದಕ್ಕೆ ಮನೆಯಲ್ಲಿ ಇರುವ ತರಕಾರಿಗಳು ನೆಗಡಿ, ಕೆಮ್ಮಿಗೆ ಉತ್ತಮ ಮದ್ದು.

ಈರುಳ್ಳಿಯನ್ನು ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಬಳಸುತ್ತೇವೆ. ಇದು ಅಡುಗೆಗೆ ಮಾತ್ರವಲ್ಲ ಮಳೆಗಾಲದಲ್ಲಿ ಕಂಡು ಬರುವ ಶೀತ, ಕೆಮ್ಮನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಹೇಗೆ ಹಿತ?
ಈರುಳ್ಳಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ. ಇದು ಕೆಲವು ಫೈಟೋಕೆಮಿಕಲ್ಗಳನ್ನು ಹೊಂದಿದ್ದು, ದೇಹದೊಳಗಿನ ವಿಟಮಿನ್‌ ಸಿ ಗೆ ಉತ್ತೇಜಕವಾಗಿ ಕಾರ್ಯನಿರ್ವಹಿಸುತ್ತದೆ. ಹಲವಾರು ರೋಗಗಳು ಮತ್ತು ದೀರ್ಘ‌ಕಾಲದ ಕಾಯಿಲೆಗಳಿಗೆ ಕಾರಣವಾಗುವ ಜೀವಾಣುಗಳ ವಿರುದ್ಧ ಹೋರಾಡುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಿಸ್ಟಮೈನ್‌ ನಿಯಂತ್ರಿಸುವ ಗುಣವನ್ನು ಹೊಂದಿದೆ.

ಗಂಟಲು ನೋವಿಗೆ ಸಹಕಾರಿ
ಈರುಳ್ಳಿ ಸಲ್ಫರ್‌ ಸಂಯುಕ್ತವನ್ನು ಹೊಂದಿರುವುದರಿಂದ ಲೋಳೆಯ ವಿರುದ್ಧ ಹೋರಾಡಲು ಮತ್ತು ಅಜೀರ್ಣ, ವಾಯುವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಇವು ಬ್ಯಾಕ್ಟೀರಿಯಾ ಗಳಿಂದ ಬರುವ ಸೋಂಕುಗಳನ್ನು ನಿವಾರಿಸಿ ಗಂಟಲನ್ನು ಸರಾಗಗೊಳಿಸುತ್ತದೆ.

ಈರುಳ್ಳಿಯನ್ನು ಚಿಕ್ಕದಾಗಿ ಹೆಚ್ಚಿಕೊಂಡು ಅದಕ್ಕೆ ಸ್ವಲ್ಪ ಶುಂಠಿ ಸೇರಿಸಿ ಅದನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ಕುಡಿಯುವ ನೀರಿನ ಜತೆಗೆ ಸೇರಿಸಿ ಪ್ರತಿ ದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವದರಿಂದ ಕಫಾ ಕಟ್ಟುವುದು ಮತ್ತು ಜ್ವರ, ಕೈ ಕಾಲು ನೋವುಗಳಿದ್ದಲ್ಲಿ ಶಮನವಾಗುತ್ತದೆ. ಆಹಾರಗಳಲ್ಲಿ ಬಳಸುವುದರಿಂದ ಸಾಂಕ್ರಾಮಿಕ ರೋಗಗಳಿಂದ ಬರಬಹುದಾದ ರೋಗಗಳನ್ನು ತಡೆಗಟ್ಟಿ ಉತ್ತಮ ಆರೋಗ್ಯ ಹೊಂದಬಹುದು.

ಕೆಮ್ಮಿನ ಉಪಶಮನ
ಈರುಳ್ಳಿಯನ್ನು ಬೆಳಗ್ಗಿನ ಹೊತ್ತಿನಲ್ಲಿ ಈರುಳ್ಳಿಯನ್ನು ಒಂದು ಬಟ್ಟಲಿನಲ್ಲಿ ತುಂಡು ಮಾಡಿ ಅದನ್ನು ನೀವು ಕುಡಿಯುವ ನೀರಿಗೆ ಹಾಕಿ 10 ನಿಮಿಷಗಳ ಬಳಿಕ ಅದನ್ನು ಚಮಚದ ಸಹಾಯದಿಂದ 3 ರಿಂದ 4 ಬಾರಿ ಸೇವಿಸಬೇಕು. ಈ ಮಿಶ್ರಣ ಕಫ‌ವನ್ನು ಕರಗಿಸಿ ಕೆಮ್ಮು ಬರದಂತೆ ತಡೆಯುವುದಲ್ಲದೆ ಗಂಟಲು ಕೆರೆತವನ್ನು ಕಡಿಮೆ ಮಾಡುತ್ತದೆ. ಆದರೆ ಇದನ್ನು ತಾಜಾ ತಾಜಾ ಇರುವಂತೆ ಸೇವಿಸಬೇಕು ಯಾವುದೇ ಕಾರಣಕ್ಕೂ ಇದು ತುಂಬಾ ಸಮಯ ನೀರಿನಲ್ಲಿ ಇಡಬಾರದು.

•ಪ್ರೀತಿ ಭಟ್ ಗುಣವಂತೆ

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.