Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ


Team Udayavani, May 19, 2024, 2:13 PM IST

9-pregnant

ಗರ್ಭಾವಸ್ಥೆ ಹಾಗೂ ಬಾಣಂತನವು ಮಹಿಳೆಯ ಜೀವನದಲ್ಲಿ ಮಹತ್ವದ ಘಟನೆಗಳಾಗಿವೆ. ಗರ್ಭಾವಸ್ಥೆ ಹಾಗೂ ಬಾಣಂತನದ ಅವಧಿಯ ಮಾನಸಿಕ ಆರೋಗ್ಯವು ಗರ್ಭಧಾರಣೆಯ ಸಮಯದಿಂದ ಹೆರಿಗೆಯ ಅನಂತರದ ಮೊದಲ ವರ್ಷದವರೆಗಿನ ಮಹಿಳೆಯ ಮಾನಸಿಕ ಸ್ಥಿತಿಯಾಗಿದೆ. ಈ ಅವಧಿಯಲ್ಲಿ ಮಹಿಳೆಯರು ದೈಹಿಕ ಸಂಕಷ್ಟದ ಜತೆಗೆ ಮಾನಸಿಕ ಅಸ್ವಸ್ಥತೆಗಳಿಗೆ ಹೆಚ್ಚು ಗುರಿಯಾಗುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತೀ ಐವರು ಮಹಿಳೆಯರಲ್ಲಿ ಒಬ್ಬರು ಗರ್ಭಾವಸ್ಥೆಯಲ್ಲಿ ಅಥವಾ ಮಗು ಜನನದ ಅನಂತರದ ವರ್ಷದಲ್ಲಿ ಮಾನಸಿಕ ಅನಾರೋಗ್ಯದ ಸ್ಥಿತಿಯನ್ನು ಅನುಭವಿಸುತ್ತಾರೆ. ಪ್ರಪಂಚದಾದ್ಯಂತ ಗರ್ಭಾವಸ್ಥೆಯಲ್ಲಿ ಸುಮಾರು ಶೇ. 10 ಮಹಿಳೆಯರು ಮತ್ತು ಹೆರಿಗೆಯ ಅನಂತರ ಶೇ. 13 ಮಹಿಳೆಯರು ಮಾನಸಿಕ ಅಸ್ವಸ್ಥತೆ, ಪ್ರಾಥಮಿಕವಾಗಿ ಖನ್ನತೆಯನ್ನು ಅನುಭವಿಸುತ್ತಾರೆ. ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಇದು ಇನ್ನೂ ಹೆಚ್ಚಾಗಿರುತ್ತದೆ, ಅಂದರೆ ಗರ್ಭಾವಸ್ಥೆಯಲ್ಲಿ ಶೇ. 15.6 ಮತ್ತು ಹೆರಿಗೆಯ ಅನಂತರ ಶೇ. 19.8. ಒತ್ತಡ, ಖನ್ನತೆ ಮತ್ತು ಆತಂಕದಂತಹ ಕೆಲವು ಗರ್ಭಿಣಿ ಹಾಗೂ ಬಾಣಂತಿಯರ ಮಾನಸಿಕ ಅಸ್ವಸ್ಥತೆಗಳು ಮಹಿಳೆಯರು, ಮಕ್ಕಳು ಮತ್ತು ಕುಟುಂಬಗಳ ಮೇಲೆ ಹಲವಾರು ಋಣಾತ್ಮಕ ಪರಿಣಾಮಗಳನ್ನು ಉಂಟುಮಾಡುತ್ತವೆ.

ಇದರಲ್ಲಿ ಕಳಪೆ ತಾಯಿ-ಭ್ರೂಣದ ಬಾಂಧವ್ಯ ಮತ್ತು ಪ್ರತಿಕೂಲ ತಾಯಿಯ ಮತ್ತು ನವಜಾತ ಶಿಶುವಿನ ಫಲಿತಾಂಶಗಳು ಸೇರಿವೆ. ಮಹಿಳೆಯರು ಆಹಾರವನ್ನು ತೆಗೆದುಕೊಳ್ಳಲು ಅಥವಾ ತಮ್ಮನ್ನು ಸರಿಯಾಗಿ ನೋಡಿಕೊಳ್ಳಲು ಆಸಕ್ತಿ ಹೊಂದಿಲ್ಲದಿರಬಹುದು. ಅಲ್ಲದೆ ಅವರು ಖನ್ನತೆ, ತೀವ್ರ ಅನಾರೋಗ್ಯ ಅಥವಾ ಆತ್ಮಹತ್ಯೆಯ ಗಂಭೀರ ಅಪಾಯಗಳಿಗೆ ಒಳಗಾಗಬಹುದು. ಹೆಚ್ಚುವರಿಯಾಗಿ ಅವರ ಶಿಶುಗಳು ಸರಿಯಾದ ಪೋಷಣೆ ಮತ್ತು ಭಾವನಾತ್ಮಕ ಬೆಂಬಲವನ್ನು ಪಡೆಯಲು ಸಾಧ್ಯವಾಗದಿರಬಹುದು.

ಗರ್ಭಾವಸ್ಥೆ ಹಾಗೂ ಬಾಣಂತನದ ಅವಧಿಯ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಅಪಾಯಕಾರಿ ಅಂಶಗಳು

ಯಾವುದೇ ಮಹಿಳೆಯು ಗರ್ಭಾವಸ್ಥೆ ಹಾಗೂ ಬಾಣಂತನದ ಅವಧಿಯಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಅನುಭವಿಸಬಹುದು. ಆದಾಗ್ಯೂ ಕೆಲವು ಅಂಶಗಳು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತವೆ. ಅವುಗಳೆಂದರೆ: ­

  • ಮಾನಸಿಕ ಆರೋಗ್ಯ ಸಮಸ್ಯೆಗಳ ಇತಿಹಾಸ. ಈ ಮೊದಲು ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಗಳಿರುವಂಥದ್ದು. ­
  • ದೈಹಿಕ ಮತ್ತು ಹಾರ್ಮೋನ್‌ ಬದಲಾವಣೆಗಳ ಪರಿಣಾಮ – ಗರ್ಭಾವಸ್ಥೆಯಲ್ಲಿ ಮತ್ತು ಅನಂತರ ದೇಹವು ಅನೇಕ ದೈಹಿಕ ಮತ್ತು ಹಾರ್ಮೋನ್‌ ಬದಲಾವಣೆಗಳಿಗೆ ಒಳಗಾಗುತ್ತದೆ. ­
  • ಕಷ್ಟಕರವಾದ ಹೆರಿಗೆಯ ಅನುಭವಗಳು ­
  • ದೈಹಿಕ, ಲೈಂಗಿಕ, ಅಥವಾ ಭಾವನಾತ್ಮಕ ನಿಂದನೆ, ಅಥವಾ ನಿರ್ಲಕ್ಷ್ಯ. ­
  • ಅಸ್ಥಿರವಾದ ಕುಟುಂಬದ ಪರಿಸ್ಥಿತಿ, ನಮಗೆ ಹತ್ತಿರವಿರುವ ಯಾರನ್ನಾದರೂ ಕಳೆದುಕೊಳ್ಳುವುದು. ­
  • ಕೌಟುಂಬಿಕ ಹಿಂಸೆ ­
  • ಕೆಳಮಟ್ಟದ ಸಾಮಾಜಿಕ ಆರ್ಥಿಕ ಸ್ಥಿತಿ, ಶಿಕ್ಷಣದ ಕೊರತೆ, ಮತ್ತು ನಿರುದ್ಯೋಗ. ­
  • ಅನಪೇಕ್ಷಿತ ಗರ್ಭಧಾರಣೆ. ­
  • ಗಂಡು ಮಗುವೇ ಬೇಕೆಂಬ ಹಂಬಲ ಹಾಗೂ ಒತ್ತಡ ಮತ್ತು ಹೆಣ್ಣು ಮಗುವಿನ ಜನನ.
  •  ದೈಹಿಕ ಆರೋಗ್ಯದ ಸಮಸ್ಯೆಗಳು. ­
  • ಮಾದಕ ದ್ರವ್ಯ ಸೇವನೆ

ಮುಂದಿನ ವಾರಕ್ಕೆ

ಡಾ| ಸವಿತಾ ಪ್ರಭು,

ಅಸಿಸ್ಟೆಂಟ್‌ ಪ್ರೊಫೆಸರ್‌,

ಸೈಕಿಯಾಟ್ರಿಕ್‌ (ಮೆಂಟಲ್‌ ಹೆಲ್ತ್‌) ನರ್ಸಿಂಗ್‌ ವಿಭಾಗ,

ಮಣಿಪಾಲ ಕಾಲೇಜ್‌ ಆಫ್ ನರ್ಸಿಂಗ್‌,

ಮಾಹೆ, ಮಣಿಪಾಲ

-ಡಾ| ಶ್ಯಾಮಲಾ ಜಿ.

ಪ್ರೊಫೆಸರ್‌ ಮತ್ತು ಯೂನಿಟ್‌ ಮುಖ್ಯಸ್ಥರು

ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗ

ಕೆಎಂಸಿ, ಮಾಹೆ, ಮಣಿಪಾಲ

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಒಬಿಜಿ ಮತ್ತು ಸೈಕಿಯಾಟ್ರಿ ವಿಭಾಗ, ಕೆಎಂಸಿ, ಮಂಗಳೂರು)

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

4-health

Rhinoplasty: ರಿನೊಪ್ಲಾಸ್ಟಿ

9-hearing-screening

Hearing Screening: ಹಿರಿಯ ವಯಸ್ಕರಲ್ಲಿ ಶ್ರವಣ ತಪಾಸಣೆಯ ಅಗತ್ಯ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.