ಅಡುಗೆಗೆ ಮಾತ್ರ ಬಳಸೋದಲ್ಲ… ಜಾಯಿಕಾಯಿಯಲ್ಲಿದೆ ಹಲವು ಔಷಧೀಯ ಗುಣ…
ಅಜ್ಜಿಕಾಲದ ಮನೆಮದ್ದು ಎಂದು ಮೂಗು ಮುರಿಯಬೇಡಿ
Team Udayavani, Nov 28, 2022, 12:48 PM IST
ಜಾಯಿಕಾಯಿ, ಹಿಂದಿನಿಂದಲೂ ಭಾರತೀಯರು ಸಾಮಾನ್ಯವಾಗಿ ಬಳಸುವ ಮಸಾಲ ವಸ್ತು. ಅಡಕೆಯಂತೆ ಕಾಣುವ, ಸುವಾಸನಾಭರಿತ ಕಾಯಿಯನ್ನು ಅಡುಗೆಯಲ್ಲಷ್ಟೇ ಅಲ್ಲ, ಆಯುರ್ವೇದದಲ್ಲೂ ಬಳಸುತ್ತಾರೆ. ಓಹ್, ಇದಾ? ಇದು, ಅಜ್ಜಿಕಾಲದ ಮನೆಮದ್ದು ಎಂದು ಮೂಗು ಮುರಿಯಬೇಡಿ. ಯಾಕಂದ್ರೆ, ಜಾಯಿಕಾಯಿಯಲ್ಲಿ ಔಷಧೀಯ ಗುಣಗಳಿರುವುದು ವೈಜ್ಞಾನಿಕ ಸಂಶೋಧನೆಗಳಲ್ಲೂ ದೃಢಪಟ್ಟಿವೆ.
– ಆ್ಯಂಟಿ ಆಕ್ಸಿಡೆಂಟ್ಸ್ಗಳ ಪ್ರಮಾಣ ಹೆಚ್ಚಿರುವುದರಿಂದ ಜಾಯಿಕಾಯಿಯು, ನರಕೋಶಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ.
-ಪಿತ್ಥ, ವಾಕರಿಕೆ, ಹೊಟ್ಟೆನೋವು ಕಾಡಿದಾಗ ಜಾಯಿಕಾಯಿಯ ಕಷಾಯ ಕುಡಿಯಬಹುದು.
-ಹಸಿವು ಹೆಚ್ಚಿಸುವ ಗುಣವೂ ಇದಕ್ಕಿದೆ.
-ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಅಂಶಗಳನ್ನು ಹೊಂದಿರುವ ಜಾಯಿಕಾಯಿಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
-ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವ ಗುಣ ಜಾಯಿಕಾಯಿಗಿದೆ.
-ಜಾಯಿಕಾಯಿಯಲ್ಲಿ ಬಿ-ಕಾಂಪ್ಲೆಕ್ಸ್, ವಿಟಮಿನ್ ಸಿ, ಫಾಲಿಕ್ ಆ್ಯಸಿಡ್ ಹೇರಳವಾಗಿವೆ.
-ಜಾಯಿಕಾಯಿಯನ್ನು ತೇಯ್ದು, ಹಚ್ಚಿದರೆ ಕಣ್ಣಿನ ಸುತ್ತಲಿನ ಕಪ್ಪು ವರ್ತುಲ ಕಡಿಮೆಯಾಗುತ್ತದೆ.
-ಹಲ್ಲು ಮತ್ತು ಬಾಯಿಗೆ ಸಂಬಂಧಿಸಿದ ಔಷಧಗಳಲ್ಲಿ ಜಾಯಿಕಾಯಿಯನ್ನು ಬಳಸುತ್ತಾರೆ.
-ಜಾಯಿಕಾಯಿಯ ಪುಡಿಯನ್ನು ಮೈಗೆ ಉಜ್ಜಿ ಸ್ನಾನ ಮಾಡುವುದರಿಂದ, ಕಜ್ಜಿ, ತುರಿಕೆ, ಮೊಡವೆಯಂಥ ಚರ್ಮರೋಗಗಳು ಗುಣವಾಗುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ