ಸರಳ ಯೋಗಾಸನಗಳು ದೈಹಿಕ, ಮಾನಸಿಕ ಚಟುವಟಿಕೆಗಳು ಸರಾಗ

ಹೃದಯ ಮತ್ತು ಶ್ವಾಸಕೋಶಗಳು ಚೈತನ್ಯಗೊಳ್ಳುವುದು. ಉಸಿರಾಟದ ಕ್ರಿಯೆ ಸರಾಗವಾಗಿ ನಡೆಯುವುದು.

Team Udayavani, Jul 5, 2021, 8:34 AM IST

ಸರಳ ಯೋಗಾಸನಗಳು ದೈಹಿಕ, ಮಾನಸಿಕ ಚಟುವಟಿಕೆಗಳು ಸರಾಗ

ಕೋವಿಡ್‌-19 ಎನ್ನುವುದು ಒಂದು ಸೋಂಕು ರೋಗ. ಈ ರೋಗದ ಬಗ್ಗೆ ನಾವು ಅತಿಯಾದ ಕಾಳಜಿ ವಹಿಸಬೇಕಾಗಿದೆ. ಸೋಂಕು ತಗಲಿ ಸಂಪೂರ್ಣ ಚಿಕಿತ್ಸೆಯ ಅನಂತರ ಅನೇಕ ಜನರು ದೈಹಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಖನ್ನತೆಗೆ ಒಳಗಾಗುತ್ತಾರೆ. ಇದಕ್ಕಾಗಿ ನಮ್ಮ ಜೀವನ ಶೈಲಿ, ಆಹಾರ ಕ್ರಮವನ್ನು ಬದಲಾಯಿಸುವುದು ಸೂಕ್ತವಾಗಿರುತ್ತದೆ.

ದೈಹಿಕವಾಗಿ, ಮಾನಸಿಕವಾಗಿ ದೈನಂದಿನ ಚಟುವಟಿಕೆಗಳನ್ನು ಸರಳವಾಗಿ ನಿರ್ವಹಿಸಲು ಯೋಗಾಭ್ಯಾಸವು ಅತೀ ಆವಶ್ಯಕವಾಗಿದೆ. ಯೋಗವೆಂಬುದು ಕೇವಲ ವ್ಯಾಯಾಮವಲ್ಲ. ಅದೊಂದು ಜೀವನಶೈಲಿ. ಯೋಗ ಭಾರತದ 4,000 ವರ್ಷಗಳಷ್ಟು ಹಿಂದಿನ ಪುರಾತನ ತಣ್ತೀ. ಯೋಗದ ಪ್ರಕಾರ ದೇಹವು ಪಂಚಕೋಶಗಳಿಂದ ಮಾಡಲ್ಪಟ್ಟಿದೆ. ಅವುಗಳೆಂದರೆ ಅನ್ನಮಯ, ಪ್ರಾಣಮಯ, ಮನೋಮಯ, ವಿಜ್ಞಾನಮಯ ಹಾಗೂ ಆನಂದಮಯಕೋಶ. ಈ ಪಂಚಕೋಶಗಳಲ್ಲಿ ಉಂಟಾದ ಆರೋಗ್ಯದ ವ್ಯತ್ಯಾಸವನ್ನು ಯೋಗ ಚಿಕಿತ್ಸೆಯ ಮೂಲಕ ಗುಣಪಡಿಸಬಹುದು.

ವಿಭಾಗೀಯ ಪ್ರಾಣಾಯಾಮ
ವಿಭಾಗೀಯ ಪ್ರಾಣಾಯಾಮದಲ್ಲಿ ಮೂರು ಹಂತಗಳಿವೆ. ಮೊದಲನೇದಾಗಿ ಉದರ ಭಾಗದ ಉಸಿರಾಟದ ಕ್ರಿಯೆ. ಎರಡನೇದಾಗಿ ಎದೆ ಭಾಗದ ಉಸಿರಾಟದ ಕ್ರಿಯೆ, ಮೂರನೇದಾಗಿ ಭುಜಭಾಗದ ಉಸಿರಾಟ ಕ್ರಿಯೆ. ಈ ಎಲ್ಲ ಅಭ್ಯಾಸಗಳನ್ನು ಅ. ಉ.ಮ ಕಾರದೊಂದಿಗೆ ಅಭ್ಯಾಸ ಮಾಡುವುದರಿಂದ ಅನೇಕ ಉಪಯೋಗಗಳನ್ನು ಪಡೆಯಬಹುದು.
ಮಾನಸಿಕ ಒತ್ತಡ ನಿವಾರಣೆ.
ಉಸಿರಾಟದ ಕ್ರಿಯೆ ಸುಧಾರಣೆ
ಉರಿಯೂತ ಕಡಿಮೆಯಾಗುವುದರೊಂದಿಗೆ ದೇಹಕ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಕಪಾಲಭಾತಿ ಪ್ರಾಣಾಯಾಮ:
ಶ್ವಾಸಕೋಶಗಳನ್ನು ಬಲಗೊಳಿಸುವುದು ಈ ಪ್ರಾಣಾಯಾಮದ ಅತೀ ಪ್ರಮುಖ ಪ್ರಯೋಜನವಾಗಿದೆ. ಅಧಿಕ ರಕ್ತದೊತ್ತಡ ಇರುವವರು ಈ ಅಭ್ಯಾಸವನ್ನು ಮಾಡಬಾರದು.

ನಾಡಿ ಶೋಧನ ಪ್ರಾಣಾಯಾಮ: ಈ ಪ್ರಾಣಾಯಾಮದ ಅಭ್ಯಾಸದಿಂದ ಹೃದಯನಾಳಗಳ ಆರೋಗ್ಯ ಸುಧಾರಣೆ, ಅಧಿಕ ರಕ್ತದೊತ್ತಡ ನಿಯಂತ್ರಣ, ಶ್ವಾಸಕೋಶಗಳ ಬಲವರ್ಧನೆ, ಖನ್ನತೆ ನಿವಾರಕ ಹೀಗೆ ಹಲವಾರು ಉಪಯೋಗಗಳನ್ನು ಪಡೆಯಬಹುದು.

ಭ್ರಾಮರಿ ಪ್ರಾಣಾಯಾಮ: ಭ್ರಮರ ಎಂದರೆ ಜೇನುದುಂಬಿ, ಜೇನು ನೋಣದ ಝೇಂಕಾರ ಶಬ್ಧವನ್ನು ಮಾಡುವ ಕಾರಣ ಈ ಪ್ರಾಣಾಯಾಮಕ್ಕೆ ಭ್ರಾಮರಿ ಎಂಬ ಹೆಸರು. ಈ ಪ್ರಾಣಾಯಾಮ ಮಾಡುವುದರಿಂದ ನಿದ್ರಾಹೀನತೆ ನಿವಾರಣೆಗೊಳ್ಳುತ್ತದೆ. ಮೆದುಳಿಗೆ ಮತ್ತು ಮನಸ್ಸಿಗೆ ಶಾಂತಿ ದೊರೆಯುತ್ತದೆ.

ಸೂಕ್ತ ಯೋಗಾಭ್ಯಾಸಗಳು
ಕೋವಿಡ್‌-19 ಸೋಂಕಿನಲ್ಲಿ ಗುಣಮುಖವಾದ ಅನಂತರ ಮಾನಸಿಕ ಒತ್ತಡ ನಿವಾರಣೆ ಹಾಗೂ ವಿವಿಧ ಮಾನವ ಕ್ರಿಯಾತ್ಮಕ ವ್ಯವಸ್ಥೆಯನ್ನು ವೃದ್ಧಿಸಿಕೊಳ್ಳಲು ಈ ಯೋಗಾಭ್ಯಾಸವನ್ನು ಮಾಡುವುದು ಸೂಕ್ತ.

ತಾಡಾಸನ: ನಿಂತು ಮಾಡುವ ಆಸನಗಳಲ್ಲಿ ಒಂದಾದ ತಾಡಾಸನ ಅಭ್ಯಾಸ ಮಾಡುವುದರಿಂದ ದೇಹದ ಸಮತೋಲನವನ್ನು ಕಾಪಾಡಿಕೊಳ್ಳಬಹುದು.

ವೀರಭದ್ರಾಸನ: ನಿಂತು ಮಾಡುವ ಆಸನಗಳಲ್ಲಿ ಒಂದಾದ ವೀರಭದ್ರಾಸನವು ಎದೆಯ ಭಾಗವನ್ನು ವಿಸ್ತರಣೆ ಮಾಡುವ ಮೂಲಕ ಶ್ವಾಸಕೋಶದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಸರಳ ಭುಜಂಗಾಸನ: ಭುಜಂಗ ಎಂದರೆ ಹೆಡೆ ಎತ್ತಿದ ಸರ್ಪ; ಈ ಆಸನವನ್ನು ಅಭ್ಯಾಸ ಮಾಡುವುದರಿಂದ ಬೆನ್ನು, ಎದೆ, ಹೊಟ್ಟೆ ಭಾಗದ ನರಗಳನ್ನು ಬಲಪಡಿಸಬಹುದು ಹಾಗೂ ಹೃದಯ ಮತ್ತು ಶ್ವಾಸಕೋಶಗಳು ಚೈತನ್ಯಗೊಳ್ಳುವುದು. ಉಸಿರಾಟದ ಕ್ರಿಯೆ ಸರಾಗವಾಗಿ ನಡೆಯುವುದು.

ಅರ್ಧ ಉಷ್ಟ್ರಾಸನ: ಈ ಆಸನ ಅಭ್ಯಾಸದಿಂದ ಜೀರ್ಣಕ್ರಿಯೆಯು ಹಾಗೂ ಉಸಿರಾಟ ಕ್ರಿಯೆಯು ಸುಧಾರಣೆಗೊಳ್ಳುತ್ತದೆ.
– ಡಾ| ಕುಸುಮಾ ಎ.ಎಸ್‌.,
ಎಸ್‌ಯುವೈಎಎಸ್‌ಎ, ಸಹಾಯಕ
ಉಪನ್ಯಾಸಕಿ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.