ಚರ್ಮ ರೋಗದ ಸಮಸ್ಯೆಯೇ…? ಇಲ್ಲಿದೆ ಸರಳ ಪರಿಹಾರ
ಬೇವಿನ ಬೀಜವನ್ನು ಗೋಮೂತ್ರದ ಜೊತೆ ಸೇರಿಸಿ ಅರೆದು ದೇಹಕ್ಕೆ ಲೇಪಿಸಿ ಸ್ನಾನ ಮಾಡುವುದರಿಂದ ಚರ್ಮದ ಸಮಸ್ಯೆ ಶಮನ
Team Udayavani, Feb 20, 2021, 12:00 PM IST
ಚರ್ಮ ರೋಗಗಳು ಎಲ್ಲರನ್ನೂ ಗಾಢವಾಗಿ ಕಾಡುವ ಸಮಸ್ಯೆಗಳಲ್ಲಿ ಒಂದು. ಕೆಲವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಸ್ಪಲ್ಪ ಪ್ರಮಾಣದಲ್ಲಿ ದೇಹವನ್ನು ಬಾಧಿಸಿದರೆ ಇನ್ನೂ ಕೆಲವು ಚರ್ಮರೋಗಗಳು ದೇಹದ ಮೇಲೆ ಭಾರಿ ಪರಿಣಾಮವನ್ನು ಬೀರುತ್ತದೆ.
ಚರ್ಮ ರೋಗಳನ್ನು ನಮ್ಮ ಸುತ್ತಮುತ್ತಲಿನ ಪ್ರಕೃತಿಯಲ್ಲಿ ದೊರಕುವ ಹಲವು ಗಿಡಮೂಲಿಕೆಗಳು ಮತ್ತು ನೈಸರ್ಗಿಕ ವಸ್ತುಗಳಿಂದ ಪರಿಣಾಮಕಾರಿಯಾಗಿ ಗುಣಪಡಿಸಿಕೊಳ್ಳಬಹುದಾಗಿದೆ.
ಚರ್ಮರೋಗದ ನಿವಾರಣೆಗೆ ಹೀಗೆ ಮಾಡಬಹುದು
1.ನಮ್ಮ ಸುತ್ತಮತ್ತಲು ಒದಗುವ ಬೇವಿನ ಎಲೆಯನ್ನು ಹುರಿದು ಅದನ್ನು ಸ್ಪಲ್ಪ ಹೊಂಗೆ ಎಣ್ಣೆಯೊಂದಿಗೆ ಬೆರಸಿ ದೇಹಕ್ಕೆ ಹಚ್ಚಿ ಸ್ನಾನ ಮಾಡುವುದರಿಂದ ಕಜ್ಜಿಯಂತಹ ಸಮಸ್ಯೆಗಳು ದೂರವಾಗುತ್ತದೆ.
2.ಬೇವಿನಲ್ಲಿ ರೋಗನಿರೋಧಕ ಶಕ್ತಿ ಹೇರಳವಾಗಿ ಇರುವುದರಿಂದ ಬೇವಿನ ತೊಗಟೆಯನ್ನು ನೀರಿನಲ್ಲಿ ಬೆರೆಸಿ ಚೆನ್ನಾಗಿ ಅರೆದು ಇದನ್ನು ಹಚ್ಚಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ದೂರವಾಗುತ್ತದೆ. ಇನ್ನು ಬೇವಿನ ಬೀಜವನ್ನು ಗೋಮೂತ್ರದ ಜೊತೆ ಸೇರಿಸಿ ಅರೆದು ದೇಹಕ್ಕೆ ಲೇಪಿಸಿ ಸ್ನಾನ ಮಾಡುವುದರಿಂದ ಚರ್ಮದ ಸಮಸ್ಯೆಗಳು ಶಮನವಾಗುತ್ತದೆ.
3. ಸೌತೆಕಾಯಿಯನ್ನು ಚೆನ್ನಾಗಿ ಅರೆದು ರಸ ತೆಗೆದು ನಂತರ ಅದನ್ನು ಹಚ್ಚಿ ಸ್ನಾನ ಮಾಡುವುದರಿಂದ, ಸೌತೆಕಾಯಿ ರಸವನ್ನು ಸೇವಿಸುವುದರಿಂದ ಚರ್ಮ ರೋಗದಿಂದ ಪರಿಹಾರ ಪಡೆಯಬಹುದಾಗಿದೆ.
ಇದನ್ನೂ ಓದಿ:ಪಶ್ಚಿಮಬಂಗಾಳ: 100 ಗ್ರಾಂ ಕೊಕೇನ್ ಸಹಿತ ಬಿಜೆಪಿ ಯುವಮೋರ್ಚಾ ನಾಯಕಿ ಬಂಧನ
4.ಅರಶಿನದ ಬೇರನ್ನು ಗೋಮೂತ್ರ ಅಥವಾ ಲಿಂಬೆ ರಸದೊಂದಿಗೆ ಅರೆದು ಅದನ್ನು ಹಚ್ಚಿ ಸ್ನಾನ ಮಾಡುವುದರಿಂದ ತುರಿಕೆ ಸೇರಿದಂತೆ ಹಲವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದಾಗಿದೆ.
ಇದಿಷ್ಟೇ ಅಲ್ಲದೆ ಶ್ರೀಗಂಧವನ್ನು ಅರೆದು ಚೂರ್ಣ ಮಾಡಿಕೊಂಡು ಸ್ನಾನ ಮಾಡುವಾಗ ಈ ಚೂರ್ಣವನ್ನು ಹಚ್ಚಿ ಸ್ನಾನ ಮಾಡುವುದರಿಂದ ಮತ್ತು ಗರಿಕೆ ಹಾಗೂ ಅರಶಿನವನ್ನು ಬೆರೆಸಿ ಚೂರ್ಣ ಮಾಡಿಕೊಂಡು ಸ್ನಾನದ ಸಮಯದಲ್ಲಿ ಲೇಪಿಸುವುದರಿಂದ ಚರ್ಮ ರೋಗಗಳಿಂದ ಪರಿಣಾಮಕಾರಿ ಪರಿಹಾರವನ್ನು ಕಾಣಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ