ಅಸಿಡಿಟಿ ನಿವಾರಣೆಗಾಗಿ ಕೆಲವು ಸಲಹೆಗಳು
ಅಸಿಡಿಟಿ ನಿವಾರಣೆಗೆ ಅತ್ಯುತಮ ಆಹಾರಗಳು
Team Udayavani, Jan 2, 2022, 5:47 AM IST
ಬೀಜಗಳು: ಬಾದಾಮಿ, ಒಣ ಅಂಜೂರ ಮತ್ತು ಒಣ ದ್ರಾಕ್ಷಿಗಳು ಹೊಟ್ಟೆಯಲ್ಲಿನ ಉರಿಯುವ ಸಂವೇದನೆಯನ್ನು ತಗ್ಗಿಸಲು ಸಹಾಯ ಮಾಡುತ್ತವೆ.
ಏಲಕ್ಕಿ: ಏಲಕ್ಕಿಯು ಜೀರ್ಣಕ್ರಿಯೆಯನ್ನು ಉತ್ತಮಪಡಿಸುತ್ತದೆ ಮತ್ತು ಹೊಟ್ಟೆಯ ಸೆಡೆತವನ್ನು ಉಪಶಮನಗೊಳಿಸುತ್ತದೆ. ಮಾತ್ರವಲ್ಲದೆ ಇದು ಹೊಟ್ಟೆಯ ಒಳಪದರವನ್ನು ಶಮನಗೊಳಿಸಿ ಅಧಿಕ ಆಮ್ಲವು ಉತ್ಪತ್ತಿಯಾದ ಪರಿಣಾಮವನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ.
ಬೆಲ್ಲ: ನಿಮ್ಮ ಬಾಯಿಯಲ್ಲಿ ಬೆಲ್ಲದ ಸಣ್ಣ ತುಂಡನ್ನು ಇರಿಸಿಕೊಳ್ಳಿ ಮತ್ತು ಅದನ್ನು ನಿಧಾನವಾಗಿ ಚೀಪುತ್ತಾ ಇರಿ. ಬೆಲ್ಲದ ಸಿಹಿ ರಸವು ಅಸಿಡಿಟಿಯನ್ನು ಸಂಪೂರ್ಣವಾಗಿ ಮರೆಮಾಡುತ್ತದೆ.
ತಣ್ಣಗಿನ ಹಾಲು: ಹಾಲಿನಲ್ಲಿ ಕ್ಯಾಲ್ಸಿಯಂ ವಿಶೇಷ ಪ್ರಮಾಣದಲ್ಲಿದ್ದು ಅದು ಆಮ್ಲದ ಹೆಚ್ಚಳವನ್ನು ತಡೆಯುತ್ತದೆ ಮತ್ತು ಉತ್ಪತ್ತಿಯಾದ ಹೆಚ್ಚುವರಿ ಆಮ್ಲವನ್ನು ಹೀರಿಕೊಳ್ಳುತ್ತದೆ ಆ ಮೂಲಕ ಆಸಿಡಿಟಿಯ ಲಕ್ಷಣಗಳನ್ನು ತಗ್ಗಿಸುತ್ತದೆ. ತಣ್ಣಗಿನ ಹಾಲು ಕುಡಿಯುವುದರಿಂದ ಅಸಿಡಿಟಿಯ ಬಹುಮುಖ್ಯ ರೋಗಲಕ್ಷಣವಾಗಿರುವ ಎದೆ ಉರಿಯುವಿಕೆಯು ತತ್ಕ್ಷಣ ನಿಲ್ಲುತ್ತದೆ.
ಪುದೀನಾ ಸೊಪ್ಪು : ಪುದೀನಾವು ಹೊಟ್ಟೆಯ ಆಮ್ಲದ ಪ್ರಮಾಣವನ್ನು ತಗ್ಗಿಸಲು ಸಹಾಯ ಮಾಡುತ್ತದೆ ಮತ್ತು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ಶೀತಲಕಾರಿ ಗುಣವು ಅಸಿಡಿಯ ನೋವು ಮತ್ತು ಉರಿಯುವಿಕೆಯನ್ನು ತಗ್ಗಿಸಲು ಸಹಾಯ ಮಾಡುತ್ತದೆ.
ಲವಂಗ: ಲವಂಗವನ್ನು ಜಗಿದಾಗ ಅದರ ತೀಕ್ಷ್ಣ ರುಚಿಗೆ ನಿಮ್ಮ ಸ್ವಾದ ಗ್ರಂಥಿಗಳು ಎಚ್ಚೆತ್ತುಕೊಳ್ಳುತ್ತವೆ ಮತ್ತು ಅಧಿಕ ಲಾಲಾರಸವನ್ನು ಉತ್ಪತ್ತಿ ಮಾಡುತ್ತವೆ, ಇದರ ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಆಸಿಡಿಟಿಯ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.
ಜೀರಿಗೆ: ಜೀರಿಗೆಗೆ ಲಾಲಾರಸವನ್ನು ಉತ್ಪತ್ತಿ ಮಾಡುವ ಲಕ್ಷಣದ್ದು, ಇದು ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆ ಉತ್ತಮಗೊಳ್ಳಲು ಸಹಾಯ ಮಾಡುತ್ತದೆ ಮತ್ತು ವಾಯು ಹಾಗೂ ಇನ್ನಿತರ ಗ್ಯಾಸ್ಟ್ರಿಕ್ ತೊಂದರೆಗಳನ್ನು ಉಪಶಮಗೊಳಿಸುತ್ತದೆ.
ಮೊಟ್ಟೆಯ ಬಿಳಿ ಭಾಗ: ಮೊಟ್ಟೆ ಪ್ರೋಟೀನಿನ ಅತ್ಯುತ್ತಮ ಮೂಲ ಮತ್ತು ಅದರಲ್ಲಿ ಆಮ್ಲದ ಅಂಶ ಇರುವುದು ಬಹಳ ಕಡಿಮೆ. ಆದರೆ ಮೊಟ್ಟೆ ಸೇವಿಸುವಾಗ ಅದರ ಹಳದಿ ಯನ್ನು ಸೇವಿಸಬೇಡಿ ಯಾಕೆಂದರೆ ಇದು ಆಸಿಡಿಟಿಯ ರೋಗಲಕ್ಷಣಗಳನ್ನು ಉಂಟು ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
Cholesterol: ಕೊಲೆಸ್ಟರಾಲ್ ತಗ್ಗಿಸುವ ಔಷಧ ಸ್ಟಾಟಿನ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ