ಉಗ್ಗುವಿಕೆ: ಬೇಡ ಜಿಗುಪ್ಸೆ, ಪಡೆಯಿರಿ ಚಿಕಿತ್ಸೆ


Team Udayavani, Dec 4, 2022, 5:25 AM IST

ಉಗ್ಗುವಿಕೆ: ಬೇಡ ಜಿಗುಪ್ಸೆ, ಪಡೆಯಿರಿ ಚಿಕಿತ್ಸೆ

ಉಗ್ಗುವಿಕೆಯು ಶಬ್ದಗಳು ಉಚ್ಛಾರಾಂಶಗಳು ಅಥವಾ ಪದಗಳ ಪುನರಾವರ್ತನೆಯನ್ನು ಒಳಗೊಂಡಂತಹ ಮಾತಿನ ತೊಂದರೆಯಾಗಿದೆ. ಸಾಮಾನ್ಯವಾಗಿ ಸುಗಮವಾದ ನಿರರ್ಗಳ ಮಾತಿನ ಪ್ರಕ್ರಿಯೆಯಲ್ಲಿ ತಡೆ ಉಂಟಾಗುವುದನ್ನು ಉಗ್ಗುವಿಕೆ ಎನ್ನಬಹುದು. ಲೇಖಕ ವ್ಯಾನ್‌ ರೈಪರ್‌ ಅವರ ಪ್ರಕಾರ, “ಮಾತಿನ ಪ್ರಕ್ರಿಯೆಯಲ್ಲಿ ಯಾಂತ್ರಿಕ ಅಡೆತಡೆಗಳು ಉಂಟಾಗಿ ಸುಗಮವಾಗಿ ಹೊರಬರುವಂತಹ ಮಾತಿಗೆ ಅಡಚಣೆ ಉಂಟಾದಾಗ ಉಗ್ಗುವಿಕೆ ಸಂಭವಿಸುತ್ತದೆ’. ಇದೊಂದು ಸಂಪೂರ್ಣವಾದ ಮಾತಿನ ತೊಂದರೆ ಆಗಿದೆ. ಭಾಷಾ ಸಾಮರ್ಥ್ಯದ ಮೇಲೆ ಈ ತೊಂದರೆಯು ಯಾವುದೇ ರೀತಿಯ ಪ್ರಭಾವವನ್ನು ಬೀರುವುದಿಲ್ಲ.

ಉಗ್ಗುವಿಕೆಯ ಗುಣಲಕ್ಷಣಗಳು
ಉಗ್ಗುವಿಕೆಯ ಆರಂಭದ ಹಂತದಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳುವ 3 ಲಕ್ಷಣಗಳು
1. ಪುನರುತ್ಛರಿಸುವಿಕೆ
ಪದಗಳ ಪ್ರಾರಂಭದ ಅಕ್ಷರವನ್ನು 3-4 ಬಾರಿ ಉತ್ಛರಿಸುವುದು.
ಉದಾಹರಣೆ: ಕ ಕ ಕ ಕಪ್ಪು

2. ಅಕ್ಷರಗಳನ್ನು ಸುದೀರ್ಘ‌ವಾಗಿ ಉತ್ಛರಿಸುವುದು
ಕೆಲವು ಶಬ್ದಗಳನ್ನು ಅಥವಾ ಉಚ್ಛಾರಾಂಶಗಳನ್ನು ಎಳೆದು ಮಾತನಾಡುವುದು
ಉದಾಹರಣೆ: ಸೂ…………ಪ್‌

3. ಸ್ತಬ್ಧತೆ

ಮಾತಿನ ಪ್ರಕ್ರಿಯೆಗೆ ಅಗತ್ಯವಿರುವ ಗಾಳಿಯ ಸಂಚಾರ ಕುಂಠಿತವಾಗಿ ಸರಾಗವಾಗಿ

ಕಾರಣಗಳು
ಈ ವಿಷಯದ ಕುರಿತು ಸಾಕಷ್ಟು ಸಂಶೋಧನೆಗಳು ನಡೆದಿದ್ದರೂ ನಡೆಯುತ್ತಿದ್ದರೂ ನಿಖರವಾಗಿ ಇಂಥದ್ದೇ ಕಾರಣದಿಂದ ಉಗ್ಗುವಿಕೆ ಬರಬಹುದು ಎಂದು ತೀರ್ಮಾನಿಸುವುದು ಕಷ್ಟಸಾಧ್ಯ. ವೈಜ್ಞಾನಿಕವಾಗಿ ನೋಡುವುದಾದರೆ ಹಲವಾರು ಕಾರಣಗಳಿಂದ ಉಗ್ಗುವಿಕೆ ಉಂಟಾಬಹುದು.

ಬಹುಕ್ರಿಯಾತ್ಮಕ ಆನುವಂಶೀಯತೆ
ಅಂದರೆ ವಂಶಪಾರಂಪರ್ಯವಾಗಿ ಬಂದಿರುವಂತಹ ಕಾರಣಗಳು. ವಂಶವಾಹಿಗಳ ಮೂಲಕ ಕುಟುಂಬದಲ್ಲಿ ಬೇರೆ ಯಾರಿಗೋ ಉಗ್ಗುವಿಕೆ ಇದ್ದರೆ ಅದು ಕೂಡ ಒಂದು ಕಾರಣವಾಗಬಲ್ಲುದು.

ವಾತಾವರಣದ ಅಂಶಗಳು
ಟಿವಿಯಲ್ಲಿ ನೋಡಿ ಅಥವಾ ಯಾರನ್ನೋ ಅನುಕರಿಸಲೆಂದು ಮೋಜಿಗಾಗಿ ಆರಂಭಿಸಿ ಮತ್ತೆ ಅದೇ ಹವ್ಯಾಸವಾಗಬಹುದು. ಮನೆಯಲ್ಲಿ ಅಣ್ಣ /ತಮ್ಮನನ್ನು ಅನುಕರಿಸಲು ಹೊರಟು ಅದುವೇ ರೂಢಿಯಾಗಬಹುದು. ಮನೆಯ ವಾತಾವರಣ, ಬೇರೆಯವರೊಂದಿಗೆ ನಡೆದುಕೊಳ್ಳುವ ರೀತಿಯಲ್ಲಿ ವ್ಯತ್ಯಾಸವಾದರೂ ಕೂಡ ಉಗ್ಗುವಿಕೆ ಬರಬಹುದು.

ಅಂತಾರಾಷ್ಟ್ರೀಯ ಉಗ್ಗುವಿಕೆ ಜಾಗೃತಿ ಮಾಸ ಅಕ್ಟೋಬರ್‌
ಕನ್ನಡದಲ್ಲಿ ಈ ತೊಂದರೆಯನ್ನು ಉಗ್ಗುವಿಕೆ ಅಥವಾ ತೊದಲುವಿಕೆಯೆಂದು ಕರೆಯುತ್ತಾರೆ. ಉಗ್ಗುವಿಕೆಗೆ ತೊದಲುವಿಕೆ ಎಂಬ ಪದವನ್ನು ಕೂಡ ಪರ್ಯಾಯವಾಗಿ ಬಳಸಲಾಗುತ್ತದೆ. ಆದರೆ ವಿವರಣೆಯ ಮೂಲಕ ನೋಡುವುದಾದರೆ ತೊದಲುವಿಕೆ ಎಂದರೆ ಉತ್ಛರಣೆಯ ದೋಷ; ಉಗ್ಗುವಿಕೆ ಎಂದರೆ ಸರಾಗವಾದ ಮಾತಿನ ಪ್ರಕ್ರಿಯೆಯಲ್ಲಿ ಉಂಟಾಗುವ ಅಡಚಣೆಯಾಗಿದೆ. ಆಂಗ್ಲ ಭಾಷೆಯಲ್ಲಿ “ಸ್ಟಟರಿಂಗ್‌’ ಅಥವಾ “ಸ್ಟಾಮರಿಂಗ್‌’ ಎಂದು ಕರೆಯುತ್ತಾರೆ.

ಪ್ರತೀ ವರ್ಷ ಅಕ್ಟೋಬರ್‌ 22ರಂದು ಅಂತಾರಾಷ್ಟ್ರೀಯ ಉಗ್ಗುವಿಕೆ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. 1998ನೇ ಇಸವಿಯಲ್ಲಿ ಇಂಗ್ಲೆಂಡ್‌ ಮತ್ತು ಐರ್ಲಂಡ್‌ನ‌ಲ್ಲಿ ಪ್ರಪ್ರಥಮವಾಗಿ ಈ ದಿನವನ್ನು ಉಗ್ಗುವಿಕೆ ಜಾಗೃತಿ ದಿನವನ್ನಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು ಜನಸಾಮಾನ್ಯರಲ್ಲಿ ಉಗ್ಗುವಿಕೆಯ ಕುರಿತು ಜಾಗೃತಿಯನ್ನು ಮೂಡಿಸುವಂತಹ ಉದ್ದೇಶವನ್ನು ಹೊಂದಿದೆ. ಮಕ್ಕಳಲ್ಲಿ ಅಥವಾ ವಯಸ್ಕರಲ್ಲಿ ಉಗ್ಗುವಿಕೆಯ ತೊಂದರೆ ಇದ್ದರೆ ಅದನ್ನು ಆರಂಭದ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ನೀಡುವ ಗುರಿಯನ್ನು ಈ ಕಾರ್ಯಕ್ರಮವು ಹೊಂದಿದೆ.

– ಡಾ| ರಾಕೇಶ್‌ ಚೌಕಳ್ಳಿ ವೀರಭದ್ರಪ್ಪ, ಸಹ ಪ್ರಾಧ್ಯಾಪಕರು
– ದೀಪಿಕಾ ಕೆ. ಕ್ಲಿನಿಕಲ್‌ ಸೂಪರ್‌ವೈಸರ್‌ ವಾಕ್‌ ಶ್ರವಣ ವಿಭಾಗ, ಎಂಸಿಎಚ್‌ಪಿ, ಮಾಹೆ, ಮಣಿಪಾಲ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.