Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?
ತರಕಾರಿ ಜ್ಯೂಸ್ ಸೇವನೆಯಿಂದ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು
Team Udayavani, May 20, 2023, 6:22 PM IST
ಮನುಷ್ಯನಿಗೆ ಕಣ್ಣುಗಳು ತುಂಬ ಮುಖ್ಯ. ನೇತ್ರಗಳಿಲ್ಲದ ಬದುಕು ಊಹಿಸಿಕೊಂಡರೆ ಭಯ ಆಗುತ್ತದೆ. ನಮ್ಮ ದೇಹದಲ್ಲಿರುವ ಅತೀ ಸೂಕ್ಷ್ಮ ಭಾಗಗಳಲ್ಲಿ ಕಣ್ಣುಗಳು ಹೌದು. ಇವುಗಳನ್ನು ಎಚ್ಚರಿಕೆಯಿಂದ ಬಹು ಜೋಪಾನವಾಗಿ ಕಾಯ್ದುಕೊಂಡು ಹೋಗುವುದು ಅತೀ ಅಗತ್ಯ.
ನಮ್ಮ ಕಣ್ಣುಗಳು ಆಗಾಗ ಹಲವು ಕಾಯಿಲೆಗಳಿಗೆ ತುತ್ತಾಗುತ್ತಿರುತ್ತವೆ. ‘ಮದ್ರಾಸ್ ಐ’ ಸೋಂಕು, ಕಣ್ಣುಗಳಲ್ಲಿ ನಿರಂತರ ನೀರು ಸುರಿಯುವುದು, ಊದಿಕೊಳ್ಳುವುದು ಹೀಗೆ ಹಲವು ತೊಂದರೆ ಕಾಣಿಸಿಕೊಳ್ಳುತ್ತವೆ. ಇಂದು ನಾವು ಕಣ್ಣುಗಳು ಊದಿಕೊಳ್ಳುಲು ಕಾರಣ ಹಾಗೂ ಅದನ್ನು ಶಮನಗೊಳಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಕೆಲವರ ಕಣ್ಣು ಉಬ್ಬಿಕೊಂಡು ಕೆಂಪಾಗಿರುತ್ತದೆ. ಕೆಲವು ಬಾರಿ ಲಿಂಫಾಟಿಕ್ ಗ್ರಂಥಿಗಳಲ್ಲಿ ನೀರು (ಫ್ಲ್ಯುಯ್ಡ್) ಶೇಖರಗೊಂಡು ಹೀಗಾಗುತ್ತದೆ. ನಿದ್ರಾಹೀನತೆ, ನೀರು ಸಾಕಷ್ಟು ಕುಡಿಯದಿರುವುದು, ಆಗಾಗ ಕಣ್ಣುಗಳನ್ನು ಉಜ್ಜಿಕೊಳ್ಳುವುದು, ಕಣ್ಣುಗಳಿಗೆ ಪೆಟ್ಟು ಬಿದ್ದಾಗ ಹಾಗೂ ಕಣ್ಣೀರಿನ ನಾಳಗಳಿಗೆ ತೊಂದರೆಯಾದಾಗ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.
ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?
ಕಣ್ಣಿನ ಊತ ಕಡಿಮೆ ಪ್ರಮಾಣದಲ್ಲಿದ್ದರೆ ಅಥವಾ ಯಾವಾಗಲಾದರೂ ಒಮ್ಮೆ ಕಾಣಿಸಿಕೊಂಡರೆ ಭಯ ಪಡುವ ಅಗತ್ಯ ಇಲ್ಲ. ನೀವು ವೈದ್ಯರ ಬಳಿ ಹೋಗುವುದು ಬೇಡ. ಮನೆಯಲ್ಲಿಯೇ ಕೆಲವೊಂದು ಕ್ರಮ ಕೈಗೊಳ್ಳುವುದರಿಂದ ಊದಿಕೊಂಡಿರುವ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು.
ಮೊದಲನೇಯದಾಗಿ ಅತೀ ಹೆಚ್ಚು ನೀರಿನ ಪ್ರಮಾಣ ಹೊಂದಿರುವ ತರಕಾರಿ ಹಾಗೂ ಹಣ್ಣುಗಳನ್ನು ಸೇವಿಸಬೇಕು. ಇದರಿಂದ ನಿರ್ಜಲಿಕರಣ ದೂರವಾಗುತ್ತದೆ. ಪರಿಣಾಮ ಕಣ್ಣುಗಳು ಆರಾಮದಾಯಕವಾಗುತ್ತವೆ. ಟೀ, ಕಾಫಿ, ಎನರ್ಜಿ ಡ್ರಿಂಕ್ಸ್ ಹಾಗೂ ಮದ್ಯ ಸೇವನೆ ಕಡಿಮೆ ಮಾಡಬೇಕು.
ಈ ಮೇಲಿನ ಕ್ರಮಗಳನ್ನು ಅನುಸರಿಸುವುದರ ಜತೆಗೆ ತರಕಾರಿ ಜ್ಯೂಸ್ ಸೇವನೆಯಿಂದ ಕಣ್ಣಿನ ಊತ ಕಡಿಮೆ ಮಾಡಿಕೊಳ್ಳಬಹುದು. ಹಾಗಾದರೆ ಜ್ಯೂಸ್ ತಯಾರಿಸುವುದು ಹೇಗೆ ? ಅದಕ್ಕೆ ಬೇಕಾಗುವ ಪದಾರ್ಥಗಳು ಯಾವುದು ?
- ಸೌತೆ ಕಾಯಿ
- ಸೆಲರಿ ಸೊಪ್ಪು
- ಒಂದು ಟೊಮೆಟೊ
- ನಿಂಬೆ ರಸ
ಈ ಮೇಲಿನ ಪದಾರ್ಥಗಳನ್ನು ಚೆನ್ನಾಗಿ ತೊಳೆದು ಮಿಕ್ಸರ್ ಸಹಾಯದಿಂದ ಜ್ಯೂಸ್ ತಯಾರಿಸಿ ಸೇವನೆ ಮಾಡುವುದರಿಂದ ಕಣ್ಣಿನ ಊತ ( ಊದಿಕೊಳ್ಳುವುದು) ಕಡಿಮೆ ಮಾಡಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ