ಥಂಡಾ ಥಂಡಾ ಕೂಲ್‌ ಕೂಲ್‌!


Team Udayavani, Mar 6, 2019, 12:30 AM IST

z-7.jpg

ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಎಷ್ಟು ನೀರು ಕುಡಿದರೂ ದಾಹ ತಣಿಯುತ್ತಿಲ್ಲ. ಸಿಹಿ, ಸಿಹಿಯ ಪಾನೀಯಗಳನ್ನು ಮನಸ್ಸು ಬಯಸುತ್ತಿದೆ. ತಾಜಾ ಹಣ್ಣಿನ ಜ್ಯೂಸ್‌ಗಳು ಬಾಯಾರಿಕೆ ತಣಿಸುವುದಷ್ಟೇ ಅಲ್ಲ, ಬೇಸಿಗೆಯಲ್ಲಿ ನಮ್ಮ ಆರೋಗ್ಯವನ್ನೂ ಚೆನ್ನಾಗಿಡುತ್ತವೆ. ಜ್ಯೂಸ್‌ ಕುಡಿಯಲು ಜ್ಯೂಸ್‌ ಸೆಂಟರ್‌ಗೆ ಹೋಗಬೇಕಲ್ಲ ಎನ್ನಬೇಡಿ; ತುಂಬ ಸುಲಭವಾಗಿ ಮನೆಯಲ್ಲೇ ಸ್ವಾದಿಷ್ಟ ಪಾನೀಯಗಳನ್ನು ತಯಾರಿಸಬಹುದು. ಅಂಥ ಕೆಲವು ಜ್ಯೂಸ್‌ಗಳ ರೆಸಿಪಿ ಇಲ್ಲಿದೆ. 

1. ಅನಾನಸ್‌ ಮಿಲ್ಕ್ ಶೇಕ್‌
ಬೇಕಾಗುವ ಸಾಮಗ್ರಿ:
ಅನಾನಸ್‌ ತುಣುಕು- 2 ಕಪ್‌, ಕ್ಯಾರೆಟ್‌ ತುಣುಕು- 1 ಕಪ್‌, ಬಾಳೆಹಣ್ಣು- 1, ಹಾಲು- 1/2 ಕಪ್‌

ಮಾಡುವ ವಿಧಾನ: ಅನಾನಸ್‌ ಮತ್ತು ಕ್ಯಾರೆಟ್‌ ತುಣುಕುಗಳನ್ನು ಮಿಕ್ಸಿಗೆ ಹಾಕಿ ಪೇಸ್ಟ್‌ ಮಾಡಿಕೊಳ್ಳಿ. ಬಾಳೆಹಣ್ಣನ್ನು ಕಿವುಚಿ, ಹಾಲಿನೊಂದಿಗೆ ಸೇರಿಸಿ, ಪೇಸ್ಟ್‌ ಮಾಡಿ. ಎರಡೂ ಬಗೆಯ ಪೇಸ್ಟ್‌ಅನ್ನು ಸರಿಯಾಗಿ ಬೆರೆಸಿದರೆ ಅನಾನಸ್‌ ಮಿಲ್ಕ್ ಶೇಕ್‌ ರೆಡಿ. 

2. ಮಾವು-ಕ್ಯಾರೆಟ್‌ ಜ್ಯೂಸ್‌ 
ಬೇಕಾಗುವ ಸಾಮಗ್ರಿ:
ಮಾವಿನ ಹಣ್ಣು- 2, ಜೇನುತುಪ್ಪ- 1 ಚಮಚ (ಸಕ್ಕರೆಯ ಬದಲು) ಕ್ಯಾರೆಟ್‌- 2

ಮಾಡುವ ವಿಧಾನ : ಮಾವಿನ ಹಣ್ಣು ಮತ್ತು ಕ್ಯಾರೆಟ್‌ ಅನ್ನು ಚೆನ್ನಾಗಿ ತೊಳೆಯಿರಿ. ಕ್ಯಾರೆಟ್‌ನ ಸಿಪ್ಪೆ ತೆಗೆದು ಸಣ್ಣದಾಗಿ ಹೆಚ್ಚಿಕೊಳ್ಳಿ. ಅದನ್ನು ಮಾವಿನ ಹಣ್ಣಿನ ಜೊತೆ ಸೇರಿಸಿ, ಮಿಕ್ಸಿಯಲ್ಲಿ ರುಬ್ಬಿ.  ಆ ಮಿಶ್ರಣಕ್ಕೆ ಜೇನುತುಪ್ಪ ಬೆರೆಸಿ, ಸಮನಾಗಿ ಕಲಕಿದರೆ ಸ್ವಾದಿಷ್ಟಕರವಾದ ಜ್ಯೂಸ್‌ ಸಿದ್ಧ. 

3. ದಾಳಿಂಬೆ ಜ್ಯೂಸ್‌
ಬೇಕಾಗುವ ಸಾಮಗ್ರಿ:
ದಾಳಿಂಬೆ ಕಾಳು- ಒಂದು ಕಪ್‌, ಲಿಂಬೆರಸ- ಎರಡು ಚಮಚ, ಪುದೀನಾ ಸೊಪ್ಪು, ಸಕ್ಕರೆ, ಕಾಳುಮೆಣಸಿನ ಪುಡಿ- 1/2 ಚಮಚ.

ಮಾಡುವ ವಿಧಾನ: ದಾಳಿಂಬೆ ಕಾಳನ್ನು, ರುಚಿಗೆ ತಕ್ಕಷ್ಟು ಸಕ್ಕರೆ ಮತ್ತು ಸ್ವಲ್ಪ ನೀರು ಬೆರೆಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಿ. ಅದಕ್ಕೆ ಲಿಂಬೆರಸ, ಕಾಳುಮೆಣಸಿನ ಪುಡಿ ಬೆರೆಸಿ, ಪುದೀನಾ ಎಲೆಯನ್ನು ಉದುರಿಸಿ. (ರುಬ್ಬುವಾಗಲೇ ಪುದೀನಾ ಸೊಪ್ಪನ್ನು ಸೇರಿಸಬಹುದು) 

4. ಕ್ಯಾರೆಟ್‌-ಬೀಟ್‌ರೂಟ್‌ ಜ್ಯೂಸ್‌
ಬೇಕಾಗುವ ಸಾಮಗ್ರಿ:
ಕ್ಯಾರೆಟ್‌- 1, ಬೀಟ್‌ರೂಟ್‌- 2, ಕಪ್ಪುದ್ರಾಕ್ಷಿ- 15, ಸಕ್ಕರೆ/ ಜೇನುತುಪ್ಪ, ನೀರು

ಮಾಡುವ ವಿಧಾನ: ಕ್ಯಾರೆಟ್‌ ಹಾಗೂ ಬೀಟ್‌ರೂಟ್‌ ತುರಿದು, ದ್ರಾಕ್ಷಿಯ ಜೊತೆ ಸೇರಿಸಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ನಿಮಗೆ ಬೇಕಾದಷ್ಟು ನೀರು ಸೇರಿಸಿ. ಅದನ್ನು ಸೋಸಿ, ಜೇನುತುಪ್ಪ ಅಥವಾ ಸಕ್ಕರೆ ಹಾಕಿ, ಕರಗಿಸಿ. ಈ ಜ್ಯೂಸ್‌ನಲ್ಲಿ ಝಿಂಕ್‌ ಹಾಗೂ ವಿಟಮಿನ್‌ ಎ ಅಧಿಕವಾಗಿದ್ದು, ಬೇಸಿಗೆಯಲ್ಲಿ ಕೂದಲು ಉದುರುವ ಸಮಸ್ಯೆಯನ್ನು ತಡೆಯಬಲ್ಲದು.  

ಭಾಗ್ಯಶ್ರೀ, ವಿಜಯಪುರ

ಟಾಪ್ ನ್ಯೂಸ್

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.