ಜೀವಕ್ಕೆ ಶಕ್ತಿ ತುಂಬುವ ಪ್ರಾಣಾಯಾಮ

ದೇಹದಲ್ಲಿ ಶಕ್ತಿಯ ಹರಿವನ್ನು ಸಮತೋಲನಗೊಳಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

Team Udayavani, Jan 26, 2021, 11:36 AM IST

ಜೀವಕ್ಕೆ ಶಕ್ತಿ ತುಂಬುವ ಪ್ರಾಣಾಯಾಮ

ಪ್ರಾಣಾಯಾಮ ದೇಹದ ಪ್ರತಿಯೊಂದು ಜೀವಕೋಶಕ್ಕೂ ಶಕ್ತಿಯನ್ನು ಒದಗಿಸುತ್ತದೆ. ಹೀಗಾಗಿ ಇದನ್ನು ಜೀವ ಶಕ್ತಿ ಎಂದೇ ಪರಿಗಣಿಸಲಾಗಿದೆ. ಪ್ರಾಣಾಯಾಮದ ಅಭ್ಯಾಸ ಸರಳ ಎಂದು ಬಹುತೇಕ ಮಂದಿ ಭಾವಿಸುತ್ತಾರೆ. ಆದರೆ ಇದಕ್ಕೂ ನಿಯಮಿತ ತರಬೇತಿ ಅಗತ್ಯ. ಇಲ್ಲಿ ಉಸಿರನ್ನು ತೆಗೆದುಕೊಳ್ಳುವ ಮತ್ತು ಬಿಡುವ ಬಗ್ಗೆ ಸರಿಯಾದ ಕ್ರಮವನ್ನು ತಿಳಿಸಲಾಗುತ್ತದೆ. ಇದು ದೇಹದ ಎಲ್ಲ ಭಾಗಗಳನ್ನು ಒಳಗೊಂಡಿರುತ್ತದೆ. ಪ್ರಣಾಯಾಮದ ಮೂಲಕ ತಾಜಾ ಆಮ್ಲಜನಕವು ದೇಹದ ಪ್ರತಿಯೊಂದು ಅಂಗವನ್ನು ತಲುಪುತ್ತದೆ.

ಇದನ್ನೂ ಓದಿ:ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

ಪ್ರಾಣಾಯಾಮದ ಪ್ರಯೋಜನಗಳು
*ದೇಹದ 80 ಸಾವಿರ ನರಗಳನ್ನು ಶುದ್ಧೀಕರಿಸುತ್ತದೆ. ದೇಹದಲ್ಲಿ ಶಕ್ತಿಯ ಹರಿವನ್ನು ಸಮತೋಲನಗೊಳಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ಪ್ರಾಣಾಯಾಮದ ನಿರಂತರ ಅಭ್ಯಾಸದಿಂದ ಮನಸ್ಸು ಮತ್ತು ರೋಗ ಮುಕ್ತವಾಗುತ್ತದೆ.

*ದೈಹಿಕ ಸಾಮರ್ಥ್ಯ ವೃದ್ಧಿಸಲು ಪ್ರಾಣಾಯಾಮ ಸಹಕಾರಿ. ದೇಹದ ಎಲ್ಲ ಅಂಗಗಳಿಗೆ ಅಮ್ಲಜನಕ ದೊರೆಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸಮತೋಲನದಲ್ಲಿರುತ್ತದೆ ಮತ್ತು ಚರ್ಮಕ್ಕೆ ನೈಸರ್ಗಿಕ ಹೊಳಪು ಸಿಗುತ್ತದೆ. ಅಲ್ಲದೇ ಚೈತನ್ಯವನ್ನು ವೃದ್ಧಿಸುತ್ತದೆ.

*ನಿರಂತರವಾಗಿ ಪ್ರಾಣಾಯಾಮ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಏಕಾಗ್ರತೆ ವೃದ್ಧಿಸುತ್ತದೆ. ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ. ದಿನವೀಡಿ ಉಲ್ಲಾಸದಿಂದ ಇರಲು ಮನಸ್ಸು ಆರೋಗ್ಯವಾಗಿರುವುದು ಬಹಳ ಮುಖ್ಯ. ಇದಕ್ಕೆ ಪ್ರಾಣಾಯಾಮ ಸಹಾಯ ಮಾಡುತ್ತದೆ. ನರಗಳಿಗೆ ಶಾಂತಿ ದೊರೆತು ರಕ್ತಪರಿಚಲನೆ ಹೆಚ್ಚಾಗಿ ಒತ್ತಡ ನಿವಾರಣೆಯಾಗುವುದು.

*ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಪ್ರಾಣಾಯಾಮ ಅಭ್ಯಾಸ ಮಾಡುವುದು ಅತ್ಯುತ್ತಮ. ವೇಗದಲ್ಲಿ ಹೆಚ್ಚಾಗುವ ರಕ್ತದೊತ್ತಡವನ್ನು ಕೂಡಲೇ
ನಿಯಂತ್ರಣಕ್ಕೆ ತರಲು ಪ್ರಾಣಾಯಾಮ ಅಭ್ಯಾಸದಿಂದ ಸಾಧ್ಯವಾಗುತ್ತದೆ. ಇದು ಧ್ಯಾನಸ್ಥ ಸ್ಥಿತಿಯಾಗಿರುವುದರಿಂದ ದೇಹವನ್ನು ಸಂಪೂರ್ಣ ವಿಶ್ರಾಂತಿಗೆ ತರುವ
ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಅಲ್ಲದೇ ಮಧುಮೇಹ, ಖನ್ನತೆಯ ತೊಂದರೆಯನ್ನೂ ನಿವಾರಿಸುತ್ತದೆ.

*ವ್ಯಕ್ತಿಯ ಆಯುಷ್ಯವು ಉಸಿರಾಟದ ಪ್ರಮಾಣವನ್ನು ಅವಲಂಬಿಸಿರುತ್ತದೆ. ಪ್ರಾಣಾಯಾಮದಿಂದ ಉಸಿರಾಟವನ್ನು ವ್ಯವಸ್ಥಿತವಾಗಿ ಮಾಡಲು ಸಹಾಯ ಮಾಡುತ್ತದೆ. ಹೀಗಾಗಿ ಪ್ರಾಣಾಯಾಮವು ವ್ಯಕ್ತಿಯ ಜೀವಿತಾವಧಿಯನ್ನು ಹೆಚ್ಚಿಸುತ್ತದೆ ಎಂಬುದು ಅಧ್ಯಯನಗಳಿಂದಲೂ ಸಾಬೀತಾಗಿದೆ.

*ದೇಹದ ತೂಕ ಇಳಿಸ ಬಯಸುವವರು ಪ್ರಾಣಾಯಾಮವನ್ನು ಅಭ್ಯಾಸ ಮಾಡಬೇಕು. ಇದು ದೇಹ ಮತ್ತು ಮನಸ್ಸಿನ ಮೇಲೆ ಹಿಡಿತ ಸಾಧಿಸಲು
ಸಹಾಯ ಮಾಡುತ್ತದೆ.ನಿಯಮಿತವಾಗಿ ಇದನ್ನು ಅಭ್ಯಾಸ ಮಾಡುವುದರಿಂದ ದೇಹದಲ್ಲಿನ ಅಸಮತೋಲನ ನಿವಾರಣೆಯಾಗುತ್ತದೆ. ಆಹಾರ ತಿನ್ನಬೇಕು ಎಂಬ ಹಂಬಲವನ್ನು ಕಡಿಮೆಗೊಳಿಸುತ್ತದೆ. ದೇಹವು ದಣಿದ, ಆಯಾಸಗೊಂಡ ಸ್ಥಿತಿಯಲ್ಲಿರುವಾಗ ನಾವು ಆನಾರೋಗ್ಯಕರ ಆಹಾರವನ್ನು ಸೇವಿಸುತ್ತೇವೆ. ಪ್ರಾಣಾಯಾಮವು ಸಮತೋಲನವನ್ನು ಅಭ್ಯಾಸ ಮಾಡಿಸುತ್ತದೆ ಮತ್ತು ನಾವು ಸೇವಿಸುವ ಆಹಾರದ ಬಗ್ಗೆ ಅರಿವು ಹೆಚ್ಚಿಸುತ್ತದೆ.

ಪ್ರಾಣಾಯಾಮ ಮಾಡುವ ವಿಧಾನ
*ಯೋಗ ಮ್ಯಾಟ್‌ನ ಮೇಲೆ ಪದ್ಮಾಸನ ಭಂಗಿಯಲ್ಲಿ ಕುಳಿತುಕೊಳ್ಳಿ.

*ಹೆಬ್ಬೆರಳಿನಿಂದ ಬಲ ಮೂಗಿನ ಹೊಳ್ಳೆಯನ್ನು ಮುಚ್ಚಿ. ಎಡ ಮೂಗಿನ ಹೊಳ್ಳೆಯಿಂದ ಉಸಿರಾಡಿ.

*ಬೆನ್ನು ನೇರವಾಗಿ, ದೇಹ ಶಾಂತವಾಗಿರಿಸಿ ಎಡಗೈಯನ್ನು ಎಡ ಮೊಣಕಾಲಿನ ಮೇಲೆ ಇಡಿ.

*ಎಡಗಡೆಯ ಮೂಗಿನ ಹೊಳ್ಳೆಯನ್ನು ಬಲಗೈಯ ಉಂಗುರದ ಬೆರಳಿನಿಂದ ಮುಚ್ಚಿ. ಅನಂತರ ಬಲ ಮೂಗಿನ ಹೊಳ್ಳೆಯಿಂದ ಉಸಿರನ್ನು ಬಿಡುಗಡೆ ಮಾಡಿ.

*ಇದನ್ನು 15 ನಿಮಿಷಗಳ ಕಾಲ ಪುನರಾವರ್ತಿಸಿ. ಬೇಕಿದ್ದರೆ ಐದು ನಿಮಿಷಕ್ಕೆ ವಿರಾಮ ಪಡೆಯಬಹುದು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.