ತೂಕ ಇಳಿಸುವ ಬಿಲ್ವ ಜ್ಯೂಸ್‌


Team Udayavani, Jun 14, 2019, 4:02 PM IST

b-33

ದೇವರ ಪೂಜೆಗೆ ಅದರಲ್ಲೂ ಶಿವನಿಗೆ ಪ್ರಿಯವಾದ ಬಿಲ್ವಪತ್ರೆ ಭಾರತೀಯ ಸಂಸ್ಕೃತಿ, ಸಂಪ್ರದಾಯದಲ್ಲಿ ವಿಶೇಷ ಸ್ಥಾನಮಾನವನ್ನು ಗಳಿಸಿದೆ. ಇದು ಕೇವಲ ಪೂಜೆಗೆ ಮಾತ್ರವಲ್ಲ, ದೇಹದ ಆರೋಗ್ಯಕ್ಕೂ ಉಪಯುಕ್ತವಾಗಿದೆ. ಬಿಲ್ವಪತ್ರೆ ಮರ ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದ್ದ ಮಾನವನ ಆರೋಗ್ಯಕ್ಕೆ ಪೂರಕವಾಗಿದೆ. ಬಿಲ್ವ ಮರದ ಹಣ್ಣಿನಲ್ಲೂ ಆರೋಗ್ಯವರ್ಧಕ ಅಂಶಗಳಿವೆ. ಇಂಗ್ಲಿಷ್‌ನಲ್ಲಿ ವುಡ್‌ ಆ್ಯಪಲ್‌ ಎಂದು ಕರೆಯುವ ಬಿಲ್ವ ಹಣ್ಣಿನ ಆರೋಗ್ಯ ಪ್ರಯೋಜನಗಳ ಕುರಿತು ಸಾಕಷ್ಟು ಮಂದಿಗೆ ತಿಳಿದಿಲ್ಲ. ಈ ಔಷಧೀಯ ಮರದ ಪ್ರಮುಖ ಗುಣವೆಂದರೆ ತೂಕ ಇಳಿಕೆಗೆ ನೆರವಾಗುವುದು. ಬಿಲ್ವ ಹಣ್ಣಿನ ರಸದಿಂದ ದೇಹದಲ್ಲಿರುವ ಕೊಬ್ಬನ್ನು ಕರಗಿಸಿಕೊಳ್ಳಬಹುದು. ಅದು ಹೇಗೆ ಎಂಬ ಮಾಹಿತಿ ಇಲ್ಲಿದೆ ಓದಿ.

ಜೀರ್ಣಕ್ರಿಯೆಗೆ ಸಹಕಾರಿ
ಈ ಹಣ್ಣಿನಲ್ಲಿ ಫೈಬರ್‌ ಹೇರಳವಾಗಿದ್ದು ಕರುಳುಗಳ ಮೂಲಕ ತ್ಯಾಜ್ಯದ ಮೃದುವಾದ ಚಲನೆಗೆ ಸಹಕಾರಿಯಾಗಿದೆ. ಮಲಬದ್ಧತೆ ತಡೆಯುವಲ್ಲಿ ಸಹಾಯ ಮಾಡುತ್ತದೆ. ಸಂಶೋಧನೆಗಳು ಫೈಬರ್‌ ಸೇವನೆ ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಕಡಿಮೆಗೊಳಿಸುತ್ತದೆ ಎಂಬುದನ್ನು ಸಾಬೀತು ಪಡಿಸಿವೆ.

ನೈಸರ್ಗಿಕ ಸಿಹಿಯ ಅಂಶ
ಬೇಸಗೆ ಶಾಖದಿಂದ ದೇಹ ತಂಪಾಗಿಸಲು ಪರಿಪೂರ್ಣ ಪಾನೀಯವಲ್ಲದಿದ್ದರೂ ನೈಸರ್ಗಿಕ ಸಿಹಿ ಅಂಶವನ್ನು ಹೊಂದಿದೆ. ತೂಕ ಕಳೆದುಕೊಳ್ಳಲು ಇದು ಸೂಕ್ತ. ರುಚಿ ಹೆಚ್ಚಿಸಲು ರಸಕ್ಕೆ ಹೆಚ್ಚುವರಿ ಸಕ್ಕರೆಯನ್ನು ಸೇರಿಸುವ ಅಗತ್ಯವಿಲ್ಲ. ತೂಕ ಇಳಿಕೆಗೆ ಹೆಚ್ಚು ಸಕ್ಕರೆ ಎಂದಿಗೂ ಪೂರಕವಲ್ಲ.

ಕ್ಯಾಲೋರಿಗೆ ಗುಡ್‌ಬೈ
ವ್ಯಾಯಾಮದ ಅನಂತರ ಎನರ್ಜಿ ಪಾನೀಯಕ್ಕಾಗಿ ಉತ್ತಮ ನೈಸರ್ಗಿಕ ಪಾನೀಯ ಹುಡುಕುತ್ತಿದ್ದರೇ ಈ ಹಣ್ಣಿನ ರಸವನ್ನು ಆಯ್ದುಕೊಳ್ಳಿ. ಫೈಬರ್‌ ಅಂಶವಿರುವ ಈ ಹಣ್ಣಿನ ರಸ ಕ್ಯಾಲೋರಿ ತಗ್ಗಿಸುತ್ತದೆ.ದೇಹ‌ದಲ್ಲಿನ ಆರಂಭಿಕ ನೀರಿನ ತೂಕವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. 250 ಎಂಎಲ್‌ ನಷ್ಟು ರಸ ಸುಮಾರು 140-150 ಕ್ಯಾಲೋರಿ ಹೊಂದಿದೆ. ಶಕ್ತಿ ಹೆಚ್ಚಳ ಒಂದು ಲೋಟದಷ್ಟು ಬಿಲ್ವ ಹಣ್ಣಿನ ರಸ ಟ್ಯಾನಿನ್‌, ಕ್ಯಾಲ್ಸಿಯಮ್‌, ಪಾಸ್ಫರಸ್‌, ಪ್ರೊಟೀನ್‌, ವಿಟಮಿನ್‌ ಸಿ ಹಾಗೂ ಕಬ್ಬಿಣದಂತ ಪೋಷಕಾಂಶಗಳಿಂದ ಕೂಡಿರುವುದರಿಂದ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಈ ಹಣ್ಣಿನ ರಸ ಹೊಟ್ಟೆ ಪೂರ್ಣವಾಗಿರುವ ಅನುಭವವನ್ನು ನೀಡುತ್ತದೆ.

-   ಆರ್‌.ಕೆ

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.