ನಮ್ಮ ಉಳಿತಾಯ ಹೀಗಿದ್ದರೆ ಚೆನ್ನ


Team Udayavani, Jan 10, 2021, 1:15 AM IST

tdy-14

ಕೋವಿಡ್‌ ಜಗತ್ತಿಗೆ ಹಲವು ಪಾಠಗ ಳನ್ನು ಕಲಿಸಿದೆ. ಅದರಲ್ಲೂ ವಿಶೇಷ ವಾಗಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ನಾವು ಕಳೆದ ವರ್ಷ ಕಲಿತ ಪಾಠಗಳನ್ನು ಈ ವರ್ಷ ಕಾರ್ಯ ರೂಪಕ್ಕೆ ತಂದರೆ ಮುಂಬರುವ ಆರ್ಥಿಕ ಸಂಕಷ್ಟಗಳಿಂದ ಪಾರಾಗ ಬಹುದು. ಅವುಗಳಲ್ಲಿ ಪ್ರಮುಖವಾಗಿ ಉಳಿತಾಯಕ್ಕೆ ಸಂಬಂಧಿಸಿ ಪ್ರತಿಯೊ ಬ್ಬರೂ ಕೆಲವೊಂದು ವಿಷಯಗಳನ್ನು ನೆನಪಿಡಲೇಬೇಕು.

ಭವಿಷ್ಯಕ್ಕೊಂದಿಷ್ಟು  ಉಳಿತಾಯ: ಕೋವಿಡ್‌ ಹಿನ್ನೆಲೆಯಲ್ಲಿ ಉದ್ಯೋಗ ಕಡಿತ, ವೇತನ ಕಡಿತದಿಂದಾಗಿ ಅನೇಕ ಕುಟುಂಬಗಳ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡುವಂತಾಗಿದೆ. ತಿಂಗಳ ಭತ್ತೆಯಲ್ಲಿ ಒಂದಿಷ್ಟು ಉಳಿತಾಯ ಮಾಡಬೇಕು ಎಂಬ ಸತ್ಯದ ಅರಿವು ಎಲ್ಲರಿಗೂ ಆಗಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ ತಮ್ಮ ಆದಾಯಕ್ಕನುಗುಣವಾಗಿ ಖರ್ಚು ಮಾಡುವುದು ಸೂಕ್ತ.

ವಿವಿಧೆಡೆ ಹೂಡಿಕೆ: ಹೂಡಿಕೆ ಮಾಡುವಾಗ ಒಂದೇ ವಲಯದಲ್ಲಿ ಹಣ ತೊಡಗಿಸುವುದು ಅಪಾಯ ಕಾರಿ ಎಂಬುದನ್ನು ಕೋವಿಡ್‌ ಕಾಲ ಸಾಬೀತು ಪಡಿಸಿದೆ. ಉದಾಹರ ಣೆಗೆ ಚಿನ್ನದ ಮೇಲೆ ಹಣ ಹೂಡು ವುದು ವ್ಯರ್ಥ ಎಂಬುದು ಕೆಲವರ ಅಭಿಪ್ರಾಯವಾಗಿತ್ತು. 2020 ರಲ್ಲಿ ಬಂಗಾರದ ಬೆಲೆ ದಾಖಲೆ ಮಟ್ಟ ದಲ್ಲಿ ಏರಿಕೆ ಕಂಡಿದೆ. ಷೇರಿನಲ್ಲಿ ಹೂಡಿಕೆ ಮಾಡಿದವರು ಕೋವಿಡ್‌ ಆರಂಭದಲ್ಲಿ ನಷ್ಟದಲ್ಲಿದ್ದರೂ ಬಳಿಕ ಚಿರತೆಯಂತೆ ನೆಗೆದಿದೆ. ಹೀಗಾಗಿ ಒಂದೇ ವಲಯದಲ್ಲಿ ಹೂಡಿಕೆ ಮಾಡುವ ಬದಲು ಬದಲು ಬೇರೆ ಬೇರೆ ಕ್ಷೇತ್ರಗಳಲ್ಲಿ ಹಣ ತೊಡಗಿಸಿದರೆ ರಿಸ್ಕ್ ಕಡಿಮೆ ಎಂಬುದನ್ನು ನಾವು ಇನ್ನಾದರೂ ಅರ್ಥೈಸಿಕೊಳ್ಳುವುದೊಳಿತು.

ತುರ್ತು ನಿಧಿ: ಕಾಯಿಲೆ, ಅಪಘಾತ ಅಥವಾ ಇನ್ನಿತರ ಯಾವುದೇ ಆಕಸ್ಮಿಕ ಘಟನೆಗಳ ಸಂದರ್ಭದಲ್ಲಿ ನಮ್ಮ ನೆರವಿಗೆ ಬರುವುದು ತುರ್ತು ನಿಧಿ.  ಇಂಥ ಅನಿರೀಕ್ಷಿತ ಸಂದರ್ಭಗಳಿಗಾಗಿ ತುರ್ತು ನಿಧಿ ಎಂದು ಒಂದಿಷ್ಟು ಉಳಿತಾಯ ಮಾಡುವುದು ಮುಖ್ಯ. ತೀರಾ ಅನಿವಾರ್ಯವಲ್ಲದ ಹೊರತು ಈ ನಿಧಿಯನ್ನು ಇನ್ನಿತರ ಉದ್ದೇಶಗಳಿಗಾಗಿ ಬಳಸಬಾರದು. ಭವಿಷ್ಯದಲ್ಲಿ ಎದುರಾಗುವ ಅನಿರೀಕ್ಷಿತ ವೆಚ್ಚಗಳಿಗಾಗಿ ಪ್ರತೀ ತಿಂಗಳು ಒಂದಿಷ್ಟು ಹಣ ಎತ್ತಿಡುವುದನ್ನು ಇಂದಿನಿಂದಲೇ ಆರಂಭಿಸೋಣ.

ಕಡಿಮೆ ಸಾಲ: ಸಾಲ ಕಡಿಮೆಯಾದಷ್ಟು ನೆಮ್ಮದಿ ಎಂಬ ವಾಸ್ತವ ಕೇವಲ ಜನಸಾಮಾನ್ಯರಿಗೆ ಮಾತ್ರವಲ್ಲ ದೊಡ್ಡ ದೊಡ್ಡ ಉದ್ಯಮಿಗಳಿಗೂ ಇದೀಗ ಅರಿವಾಗಿದೆ. ವೈಯಕ್ತಿಕ ಸಾಲ, ಕ್ರೆಡಿಟ್‌ ಕಾರ್ಡ್‌ ಬಿಲ್‌ಗ‌ಳು ಕಡಿಮೆಯಿದ್ದಷ್ಟು  ಒಳ್ಳೆಯದು.

ವಿಮೆ: 2020ರಲ್ಲಿ ಕೋವಿಡ್‌ ಅಲ್ಲದೆ ಚಂಡಮಾರುತಗಳು, ಪ್ರವಾಹ ಸಹಿತ ಹಲವು ಪ್ರಕೃತಿ ವಿಕೋಪಗಳು ಸಂಭವಿಸಿ ಜನರನ್ನು ತಲ್ಲಣಗೊಳಿಸಿದವು. ಇವೆಲ್ಲವುಗಳಿಂದಾಗಿ ಭಾರೀ ಪ್ರಮಾಣದ ಸಾವು-ನೋವು, ನಷ್ಟ  ಉಂಟಾಗಿದೆ. ಇದರ ಪರಿಣಾಮವಾಗಿ ವಿಮೆ ಎಷ್ಟು ಮುಖ್ಯ ಎಂಬುದರ ಅರಿವು ಜನರಿಗಾಗಿದೆ. ಕೋವಿಡ್‌ ಭಾದಿಸುವ ತನಕ ಆರೋಗ್ಯ ವಿಮೆ ಸಹಿತ ವಿವಿಧ ವಿಮೆಗಳನ್ನು ಮಾಡಿಸುವುದು ವ್ಯರ್ಥ ಎಂಬ ಭಾವನೆ ಹೊಂದಿದ್ದರು. ಆದರೆ ಈಗ ಟ್ರೆಂಡ್‌ ಬದಲಾಗಿದೆ. ಜೀವ ವಿಮೆ ಅತೀ ಆವಶ್ಯಕ ಎಂಬುದನ್ನು ಮನಗಂಡಿದ್ದಾರೆ. ಅಲ್ಲದೆ ವಾಹನ ವಿಮೆಯತ್ತಲೂ ಜನರು ಹೆಚ್ಚಿನ ಗಮನಹರಿಸುವ ತುರ್ತು ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.