ತಂಬುಳಿ ಸ್ಪೆಶಲ್‌


Team Udayavani, Dec 13, 2017, 1:35 PM IST

13-40.jpg

ಘಮ್ಮೆನ್ನುವ ಒಗ್ಗರಣೆಗೆ ಮಜ್ಜಿಗೆ ಸುರಿದರೆ, ರುಚಿಗೆ ತಕ್ಕಷ್ಟು ಉಪ್ಪು ಹಾಕಿದರೆ ಸಿದ್ಧವಾಗುವುದೇ ತಂಬುಳಿ. ಬೇಸಿಗೆ, ಮಳೆ, ಚಳಿ- ಈ ಮೂರು ಕಾಲಕ್ಕೂ ಸಲ್ಲುವಂತಿರುವುದು ತಂಬುಳಿಯ ಸ್ಪೆಶಾಲಿಟಿ. ಒಗ್ಗರಣೆಯನ್ನು ಒಂದೆರಡು ಬಗೆಯಲ್ಲಲ್ಲ, ಹತ್ತು ಥರದಲ್ಲೂ ಹಾಕಬಹುದು, ಆ ಮೂಲಕ ತಂಬುಳಿಗೆ ಹಲವು ಬಗೆಯ ರುಚಿ ಪಡೆಯಬಹುದು ಎಂಬ ಪಾಕಶಾಸ್ತ್ರದ ಗುಟ್ಟು ತಿಳಿದುಬರುವುದೂ ತಂಬುಳಿ ಸ್ಪೆಶಲ್‌ ಮಾಡಲು ಹೊರಟಾಗಲೇ…

1. ದಾಸವಾಳದ ಹೂವಿನ ತಂಬುಳಿ
ಬೇಕಾಗುವ ಸಾಮಗ್ರಿ: 
ಕೆಂಪು ಅಥವಾ ಬಿಳಿ ದಾಸವಾಳದ ಹೂವು ಹತ್ತು, ಮಜ್ಜಿಗೆ 2-3 ಕಪ್‌, ಇಂಗು- ಚಿಟಿಕೆ, ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣೆಗೆ 3 ಒಣಮೆಣಸಿನಕಾಯಿ, ಉದ್ದಿನ ಬೇಳೆ 1 ಚಮಚ, ತುಪ್ಪ 1 ಚಮಚ. 

ಮಾಡುವ ವಿಧಾನ: 
ದಾಸವಾಳದ ಹೂಗಳನ್ನು ಚಿಕ್ಕದಾಗಿ ಕತ್ತರಿಸಿ. ಮಜ್ಜಿಗೆಗೆ ಇಂಗು ಮತ್ತು ಉಪ್ಪನ್ನು ಹಾಕಿ ಮಿಶ್ರಣ ಮಾಡಿ. ಮಿಶ್ರಣಕ್ಕೆ ದಾಸವಾಳದ ಹೂವುಗಳನ್ನು ಹಾಕಿ. ಬೇಕಿದ್ದರೆ ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಿ. ಈ ಮಿಶ್ರಣಕ್ಕೆ ಸಾಸಿವೆ, ಒಣಮೆಣಸಿನಕಾಯಿ, ಉದ್ದಿನಬೇಳೆ ಹಾಕಿ ತುಪ್ಪದಲ್ಲಿ ಒಗ್ಗರಣೆ ಕೊಡಿ.

2. ದಾಳಿಂಬೆ ಚಿಗುರೆಲೆ ತಂಬುಳಿ
ಬೇಕಾಗುವ ಸಾಮಗ್ರಿ:
 
ದಾಳಿಂಬೆ ಚಿಗುರೆಲೆ ಒಂದು ಹಿಡಿ, ಜೀರಿಗೆ 2 ಚಮಚ, ತುಪ್ಪ 1 ಚಮಚ, ಕಾಳು ಮೆಣಸು 10,  ಮೊಸರು 2 ಕಪ್‌, ಉಪ್ಪು, ರುಚಿಗೆ ತಕ್ಕಷ್ಟು, ಒಗ್ಗರಣೆಗೆ ಒಣಮೆಣಸಿನಕಾಯಿ, ಸಾಸಿವೆ.

ಮಾಡುವ ವಿಧಾನ: 
ಒಂದು ಬಾಣಲೆಯಲ್ಲಿ ಅರ್ಧ ಟೀ ಚಮಚ ತುಪ್ಪ ಹಾಕಿ ಬಿಸಿ ಮಾಡಿ. ಅದರಲ್ಲಿ ದಾಳಿಂಬೆ ಚಿಗುರೆಲೆ ಹಾಕಿ ಹುರಿದುಕೊಳ್ಳಿ. ಹುರಿದ ಸೊಪ್ಪನ್ನು ತೆಗೆದು, ಅದೇ ಬಾಣಲೆಯಲ್ಲಿ ಅರ್ಧ ಟೀ ಚಮಚ ತುಪ್ಪ ಹಾಕಿ ಕಾಳು ಮೆಣಸು, ಜೀರಿಗೆ ಹಾಕಿ ಹುರಿದುಕೊಳ್ಳಿ. ಹುರಿದ ಪದಾರ್ಥಗಳನ್ನು ಮಿಕ್ಸಿಗೆ ಹಾಕಿ, ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಆ ಮಿಶ್ರಣಕ್ಕೆ ಒಂದು ಟೀ ಚಮಚ ತುಪ್ಪ ಹಾಕಿ, ಸಾಸಿವೆ ಮತ್ತು ಒಣಮೆಣಸಿನಕಾಯಿ ಹಾಕಿ ಒಗ್ಗರಣೆ ಮಾಡಿ.

3. ಮೆಂತೆ ತಂಬುಳಿ
ಬೇಕಾಗುವ ಸಾಮಗ್ರಿ: 

ಮೆಂತೆ 1/2 ಚಮಚ, ತುಪ್ಪ 1/2 ಚಮಚ, ತೆಂಗಿನ ತುರಿ 1/4 ಕಪ್‌, ಮಜ್ಜಿಗೆ 2 ಕಪ್‌, ರುಚಿಗೆ ತಕ್ಕಷ್ಟು ಉಪ್ಪು. ಒಗ್ಗರಣೆಗೆ ಸಾಸಿವೆ, ಒಣ ಮೆಣಸಿನಕಾಯಿ, ಎಣ್ಣೆ ಅಥವಾ ತುಪ್ಪ 1 ಚಮಚ, ಇಂಗು ಚಿಟಿಕೆ

ಮಾಡುವ ವಿಧಾನ: 
ಬಾಣಲೆಗೆ ಮೆಂತೆ ಹಾಕಿ ತುಪ್ಪದಲ್ಲಿ ಹುರಿಯಿರಿ. ಅದನ್ನು ಕಾಯಿ ತುರಿಯೊಂದಿಗೆ ನುಣ್ಣಗೆ ರುಬ್ಬಿ ಮಜ್ಜಿಗೆ, ಉಪ್ಪು ಹಾಕಿ. ಅದಕ್ಕೆ ಸಾಸಿವೆ, ಇಂಗು ಒಗ್ಗರಣೆ ಹಾಕಿ.

4. ಚಿಗುರೆಲೆ ತಂಬುಳಿ
ಬೇಕಾಗುವ ಸಾಮಗ್ರಿ: 
ಕಾಕಿಸೊಪ್ಪಿನ ಚಿಗುರೆಲೆ, ಮೆಣಸಿನ ಸೊಪ್ಪಿನ ಚಿಗುರೆಲೆ, ದಾಳಿಂಬೆ ಸೊಪ್ಪಿನ ಚಿಗುರೆಲೆ, ಲಿಂಬೆ ಚಿಗುರೆಲೆ, ಬ್ರಾಹ್ಮಿ ಅಥವಾ ಒಂದೆಲಗ ಸೊಪ್ಪು, ಹತ್ತಿ ಸೊಪ್ಪಿನ ಚಿಗುರೆಲೆ ಹೀಗೆ ಎಲ್ಲ ಸೇರಿಸಿ 20-30 ಎಲೆಗಳು, ತೆಂಗಿನ ತುರಿ 1/4 ಕಪ್‌, ಜೀರಿಗೆ 1 ಚಮಚ, ಕಾಳು ಮೆಣಸು 1 ಚಮಚ, ಮಜ್ಜಿಗೆ 2 ಕಪ್‌, ತುಪ್ಪ 1 ಚಮಚ, ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣೆಗೆ ಸಾಸಿವೆ, ಒಣಮೆಣಸಿನ ಕಾಯಿ, ಎಣ್ಣೆ ಅಥವಾ ತುಪ್ಪ.

ಮಾಡುವ ವಿಧಾನ: 
ಬಾಣಲೆಯಲ್ಲಿ ತುಪ್ಪ ಹಾಕಿ ಬಿಸಿ ಮಾಡಿ. ಅದರಲ್ಲಿ ಕಾಳುಮೆಣಸು, ಜೀರಿಗೆ ಹಾಕಿ ಹುರಿಯಿರಿ. ನಂತರ ಸೊಪ್ಪುಗಳನ್ನು ಹಾಕಿ ಬಾಡಿಸಿ. ಈ ಮಿಶ್ರಣಕ್ಕೆ ಕಾಯಿತುರಿ, ಉಪ್ಪು ಹಾಕಿ ನುಣ್ಣಗೆ ರುಬ್ಬಿ. ಆ ಮಿಶ್ರಣಕ್ಕೆ ಮಜ್ಜಿಗೆ ಬೆರೆಸಿ ನಂತರ ಸಾಸಿವೆ, ಒಣಮೆಣಸಿನಕಾಯಿಯ ಒಗ್ಗರಣೆ ಹಾಕಿ.

ವೇದಾವತಿ ಹೆಚ್‌. ಎಸ್‌.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.