ವೈವಿಧ್ಯಮಯ ದೋಸೆಗಳು


Team Udayavani, Oct 6, 2017, 1:26 PM IST

06-SAP-16.jpg

ದೋಸೆಯಲ್ಲಿ ನಾನಾ ವಿಧಗಳಿವೆ. ಪ್ರತಿಯೊಬ್ಬರಿಗೂ ಬೇರೆಬೇರೆ ರೀತಿಯ ದೋಸೆಗಳೆಂದರೆ ಅಚ್ಚುಮೆಚ್ಚು. ಸಾಮಾನ್ಯವಾಗಿ ಉದ್ದು ಬಳಸಿ ತಯಾರಿಸುವ ವಿವಿಧ ರೀತಿಯ ದೋಸೆಗಳನ್ನು ಹೆಚ್ಚಾಗಿ ಎಲ್ಲರೂ ತಿಂದಿರುತ್ತಾರೆ ಹಾಗೂ ಅವುಗಳನ್ನು ತಯಾರಿಸುವ ಬಗೆಯೂ ಅರಿತಿರುವರು. ಆದರೆ ಕೆಲವೊಂದು ಅಪರೂಪದ ದೋಸೆಗಳ ಬಗ್ಗೆ ತಿಳಿಯುವ ಕುತೂಹಲ ನಿಮ್ಮಲ್ಲಿದೆಯೇ? ಹಾಗಾದರೆ ಇಲ್ಲಿದೆ ಮಾಹಿತಿ.

ಪಪ್ಪಾಯಿ ದೋಸೆ
ಬೇಕಾಗುವ ಸಾಮಗ್ರಿ: ಬೆಳ್ತಿಗೆ ಅಕ್ಕಿ- 2 ಕಪ್‌, ಪಪ್ಪಾಯಿ (ಕಾಯಿ) ತುರಿ- 1 ಕಪ್‌, ತೆಂಗಿನ ಎಣ್ಣೆ- 4 ಚಮಚ, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ: ಅಕ್ಕಿಯನ್ನು 1-2 ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ. ಅಕ್ಕಿ ಜತೆ ಸಿಪ್ಪೆ ಮತ್ತು ತಿರುಳು ತೆಗೆದು ತುರಿದಿಟ್ಟ ಪಪ್ಪಾಯಿ, ಉಪ್ಪು ಸೇರಿಸಿ ರುಬ್ಬಿಕೊಳ್ಳಿ. ನೀರುದೋಸೆಗಿಂತ ಸ್ವಲ್ಪ ದಪ್ಪಕ್ಕಿರಲಿ ಹಿಟ್ಟು. ಕಾದ ತವಾದ ಮೇಲೆ ಎಣ್ಣೆ ಸವರಿ ದೋಸೆ ಹುಯ್ಯಿರಿ.

ಪಚ್ಚೆ ಹೆಸುರು (ಇಡಿಹೆಸುರು) ದೋಸೆ
ಬೇಕಾಗುವ ಸಾಮಗ್ರಿ:
ಬೆಳ್ತಿಗೆ ಅಕ್ಕಿ – 2 ಕಪ್‌, ಪಚ್ಚೆ ಹೆಸುರು- ಮುಕ್ಕಾಲು ಕಪ್‌, ತೆಂಗಿನ ಎಣ್ಣೆ -4 ಚಮಚ, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ: ಪಚ್ಚೆ ಹೆಸುರನ್ನು 5-6 ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ ಬಳಿಕ ನೀರು ಸೋಸಿಟ್ಟು  ಮೊಳಕೆ ಬರಿಸಿ. ಅಕ್ಕಿಯನ್ನು 1-2 ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ. ಅನಂತರ ಅವುಗಳಿಗೆ ಉಪ್ಪು  ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ. ಕಾದ ಕಾವಲಿಗೆ ಮೇಲೆ ಎಣ್ಣೆ ಸವರಿ ದೋಸೆ ಹುಯ್ಯಿರಿ.

ಪಾಲಕ್‌ ಸೊಪ್ಪಿನ ದೋಸೆ
ಬೇಕಾಗುವ ಸಾಮಗ್ರಿ: ಬೆಳ್ತಿಗೆ ಅಕ್ಕಿ- 2 ಕಪ್‌, ಸಣ್ಣಗೆ ಹೆಚ್ಚಿದ ಪಾಲಕ್‌ ಸೊಪ್ಪು- ಒಂದು ಕಪ್‌, ಕೊತ್ತಂಬರಿ- 4 ಚಮಚ, ಜೀರಿಗೆ- 1 ಚಮಚ, ಸಣ್ಣ ನೆಲ್ಲಿಕಾಯಿ ಗಾತ್ರದಷ್ಟು ಹುಣಸೆ ಹುಳಿ, ಒಣಮೆಣಸು 1-2, ತೆಂಗಿನಕಾಯಿ ತುರಿ- ಅರ್ಧ ಕಪ್‌, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ: ಬೆಳ್ತಿಗೆ ಅಕ್ಕಿಯನ್ನು ಅರ್ಧ ಗಂಟೆ ಕಾಲ ನೀರಿನಲ್ಲಿ ನೆನೆಹಾಕಿ. ಅಕ್ಕಿ, ಪಾಲಕ್‌ ಸೊಪ್ಪು, ಕೊತ್ತಂಬರಿ, ಜೀರಿಗೆ, ಹುಣಸೆಹುಳಿ, ಮೆಣಸು, ತೆಂಗಿನ ಕಾಯಿತುರಿ, ಉಪ್ಪು ಸೇರಿಸಿ ಅರೆಯಿರಿ. ಹಿಟ್ಟು ಉದ್ದಿನ ಹಿಟ್ಟಿನ ಹದಕ್ಕೆ ಇರಲಿ. ಕಾದ ತವಾಕ್ಕೆ ಎಣ್ಣೆ ಅಥವಾ ತುಪ್ಪ ಸವರಿ ಹುಯ್ಯಿರಿ, ಎರಡರಿಂದ ಮೂರು ನಿಮಿಷ ಮುಚ್ಚಿ ಇಟ್ಟು ಬಳಿಕ ದೋಸೆಯನ್ನು ಮಗುಚಿ ಹಾಕಿ ಒಂದು ನಿಮಿಷ ಬಿಟ್ಟು ತೆಗೆಯಿರಿ. ಇದನ್ನು ಯಾವುದೇ ಚಟ್ನಿಯೊಂದಿಗೆ ಸವಿಯಬಹುದು.

ಹೀರೆಕಾಯಿ ದೋಸೆ 
ಬೇಕಾಗುವ ಸಾಮಗ್ರಿ: ಬೆಳ್ತಿಗೆ ಅಕ್ಕಿ -2 ಕಪ್‌, ಸಾಧಾರಣ ಗಾತ್ರದ 2 ಹೀರೆಕಾಯಿ, ಕೊತ್ತಂಬರಿ-4 ಚಮಚ, ಜೀರಿಗೆ-1 ಚಮಚ, ನೆಲ್ಲಿಕಾಯಿ ಗಾತ್ರದ ಹುಣಸೆ ಹುಳಿ, ಒಣಮೆಣಸು -3, ತೆಂಗಿನ ಕಾಯಿತುರಿ- 4 ಚಮಚ, ಬೆಲ್ಲದ ತುರಿ- 2 ಚಮಚ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ: ಬೆಳ್ತಿಗೆ ಅಕ್ಕಿಯನ್ನು ಒಂದು ಗಂಟೆ ಕಾಲ ನೀರಿನಲ್ಲಿ ನೆನೆ ಹಾಕಿ. ಬಳಿಕ ಅದಕ್ಕೆ ಹುಳಿ, ಕೊತ್ತಂಬರಿ, ಜೀರಿಗೆ, ಬೆಲ್ಲ, ಒಣಮೆಣಸು, ಕಾಯಿತುರಿ, ಉಪ್ಪು ಸೇರಿಸಿ ಉದ್ದಿನ ದೋಸೆ ಹಿಟ್ಟಿನ ಹದಕ್ಕೆ ರುಬ್ಬಿ. ಅನಂತರ ಹೀರೆಕಾಯಿಯ ನಾರನ್ನು ತೆಗೆದು ಉರುಟಾಗಿ (ಚಕ್ರದ ಆಕಾರದಲ್ಲಿ) ತೆಳ್ಳಗೆ ಕತ್ತರಿಸಿಕೊಳ್ಳಿ. ಕಾದ ಕಾವಲಿಗೆಗೆ ಎಣ್ಣೆ ಸವರಿ ಕತ್ತರಿಸಿದ ಹೀರೆಕಾಯಿಯನ್ನು  ಒಂದೊಂದಾಗಿ ಹಿಟ್ಟಿನಲ್ಲಿ ಮುಳುಗಿಸಿ ಕಾವಲಿಗೆ ಮೇಲೆ ಒತ್ತೂತ್ತಾಗಿ (ದೋಸೆಯ ಆಕಾರದಲ್ಲಿ) ಇಡಿ. ಮುಚ್ಚಳ ಮುಚ್ಚಿ ಎರಡು ನಿಮಿಷ ಬೇಯಿಸಿ, ಬಳಿಕ ಮಗುಚಿ ಹಾಕಿ ಒಂದು ನಿಮಿಷ ಬೇಯಿಸಿ ಹೀರೆಕಾಯಿ ದೋಸೆ ರೆಡಿ.

ಬಾಳೆದಿಂಡಿನ ದೋಸೆ
ಬೇಕಾಗುವ ಸಾಮಗ್ರಿ:
ಬೆಳ್ತಿಗೆ ಅಕ್ಕಿ – 2 ಕಪ್‌, ಬಾಳೆದಿಂಡಿನ ಹೋಳು- 1 ಕಪ್‌, ತೆಂಗಿನ ಎಣ್ಣೆ -4 ಚಮಚ, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ: ಅಕ್ಕಿಯನ್ನು 1-2 ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ. ಬಾಳೆದಿಂಡಿನ ಹೊರಗಿನ ಸಿಪ್ಪೆ ತೆಗೆದು ಮಧ್ಯ ಭಾಗವನ್ನು ಸಣ್ಣ ಹೋಳುಗಳನ್ನಾಗಿ ಮಾಡಿ ಇಟ್ಟುಕೊಳ್ಳಬೇಕು. ಅಕ್ಕಿಯ ಜತೆ ಉಪ್ಪು, ಬಾಳೆದಿಂಡಿನ ಹೋಳು ಸೇರಿಸಿ ನುಣ್ಣಗೆ ರುಬ್ಬಿ. ಕಾದ ಕಾವಲಿಗೆ ಮೇಲೆ ಎಣ್ಣೆ ಸವರಿ ಹಿಟ್ಟನ್ನು ಹುಯ್ಯಿರಿ. ಬಾಳೆದಿಂಡಿನ ದೋಸೆ ತಯಾರು.

ಬೀಟ್ರೂಟ್‌ ದೋಸೆ
ಬೇಕಾಗುವ ಸಾಮಗ್ರಿ:
ಬೆಳ್ತಿಗೆ ಅಕ್ಕಿ – 2 ಕಪ್‌, ಬೀಟ್ರೂಟ್‌ ತುರಿ-1 ಕಪ್‌, ಉಪ್ಪು ರುಚಿಗೆ ತಕ್ಕಷ್ಟು, ತೆಂಗಿನ ಎಣ್ಣೆ – 4 ಚಮಚ.

ತಯಾರಿಸುವ ವಿಧಾನ: ಅಕ್ಕಿಯನ್ನು 1-2 ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ. ಬಳಿಕ ಉಪ್ಪು ಸೇರಿಸಿ ರುಬ್ಬಿ. ಹಿಟ್ಟು ನೀರು ದೋಸೆ ಹಿಟ್ಟಿಗಿಂತ ಸ್ವಲ್ಪ ದಪ್ಪ ಇರಲಿ. ಬೀಟ್ರೂಟ್‌ ತುರಿ ಸೇರಿಸಿ ಕಾದ ಕಾವಲಿಗೆ ಮೇಲೆ ಎಣ್ಣೆ ಸವರಿ ಹುಯ್ಯಿರಿ. ಬೀಟ್ರೂಟ್‌ ದೋಸೆಯ ಬಣ್ಣ  ಎಂತಹವರನ್ನೂ ತನ್ನ ಹತ್ತಿರ ಆಕರ್ಷಿಸುತ್ತದೆ. 

ಇನ್ನೊಂದು ವಿಧಾನ : ಅಕ್ಕಿಯನ್ನು ಅರೆಯುವ ವೇಳೆ ಎರಡು ಒಣಮೆಣಸು, 2 ಚಮಚ ಕೊತ್ತಂಬರಿ, ಒಂದು ಹದಾ ಗಾತ್ರದ ಈರುಳ್ಳಿ ಸೇರಿಸಬಹುದು. ಆದರೆ ರುಚಿ ಚೆನ್ನಾಗಿರುತ್ತದೆ. ಬಿಟ್ರೂಟ್‌ನ ಫ್ಲೆವರ್‌ ಬರುವುದಿಲ್ಲ.

ಗಣೇಶ ಕುಳವರ್ಮ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.