ಹೊಸಾ ಸ್ವೀಟು ಏನಿದೆ ಅಂದ್ರಾ?


Team Udayavani, Oct 9, 2019, 4:08 AM IST

cooking

ದಸರಾ ರಜೆ ಇರೋದ್ರಿಂದ ನೆಂಟರು ಮನೆಗೆ ಬಂದಿದ್ದಾರೆ. ಅವರು ಮೆಚ್ಚುವಂಥ ತಿಂಡಿ ಮಾಡಬೇಕು. ಏನು ಮಾಡ್ಹೋದು ಎಂದು ಬಹಳಷ್ಟು ಮಹಿಳೆಯರು ಯೋಚನೆಯಲ್ಲಿದ್ದಾರೆ. ದಸರೆಯ ಮೆನುವಿಗೆ ಯಾವೆಲ್ಲಾ ಹೊಸ ತಿಂಡಿ ಸೇರಿಸಬಹುದು ಅಂತ ಯೋಚಿಸುತ್ತಿರುವವರಿಗೆ ಇಲ್ಲೊಂದಿಷ್ಟು ರೆಸಿಪಿಗಳಿವೆ ನೋಡಿ…

ನವಣೆ ಅಕ್ಕಿಯ ಹೋಳಿಗೆ
ಬೇಕಾಗುವ ಸಾಮಗ್ರಿ: ನವಣೆ- ಅರ್ಧ ಕೆ.ಜಿ, ಹೆಸರುಬೇಳೆ ಮತ್ತು ಕಡಲೆಬೇಳೆ- ಅರ್ಧ ಕೆ.ಜಿ., ಬೆಲ್ಲ- ಅರ್ಧ ಕೆ.ಜಿ., ಮೈದಾ ಹಿಟ್ಟು – ಅರ್ಧ ಕೆ.ಜಿ., ಏಲಕ್ಕಿ ಪುಡಿ, ಶುಂಠಿ ಪುಡಿ, ತುಪ್ಪ.

ಮಾಡುವ ವಿಧಾನ: ನವಣೆ, ಹೆಸರುಬೇಳೆ, ಕಡಲೆಬೇಳೆಯನ್ನು ಹುರಿದು, ಹಿಟ್ಟು ಮಾಡಿಕೊಳ್ಳಿ. ಮೂರನ್ನೂ ಮಿಶ್ರಣ ಮಾಡಿ, ಏಲಕ್ಕಿ ಮತ್ತು ಚೂರು ಶುಂಠಿ ಪುಡಿಯನ್ನು ಸೇರಿಸಿ. ಬೆಲ್ಲಕ್ಕೆ ನೀರು ಹಾಕಿ ಪಾಕ ಬರುವವರೆಗೆ ಕುದಿಸಿ. ಪಾಕ ಬಂದ ನಂತರ ಅದಕ್ಕೆ, ನವಣೆ ಹಿಟ್ಟಿನ ಮಿಶ್ರಣ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಮೈದಾ ಹಿಟ್ಟಿಗೆ ಸ್ವಲ್ಪ ನೀರು ಮತ್ತು ಎಣ್ಣೆ ಬೆರೆಸಿ, ಚಪಾತಿ ಹಿಟ್ಟಿನ ಹದಕ್ಕೆ ಕಲಸಿ, ಹೂರಣವನ್ನು ಇಟ್ಟು ಲಟ್ಟಿಸಿ, ಕಾವಲಿಯ ಮೇಲಿಟ್ಟು ಬೇಯಿಸಿ.
* ರೇಣುಕಾ ತಳವಾರ

ರಸ್‌ಮಲಾಯಿ
ಬೇಕಾಗುವ ಸಾಮಗ್ರಿ: ಹಾಲು-2 ಲೀ., ಸಕ್ಕರೆ-1 ಕೆ.ಜಿ., ಲಿಂಬೆರಸ- 3 ಚಮಚ, ಏಲಕ್ಕಿಪುಡಿ, ಕೇಸರಿ, ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ.

ಮಾಡುವ ವಿಧಾನ: ಮೂರ್ನಾಲ್ಕು ಚಮಚ ಹಾಲಿನಲ್ಲಿ ಕೇಸರಿ ದಳಗಳನ್ನು ನೆನೆಯಲು ಇಡಿ. ನಂತರ ಬಾಣಲೆಯಲ್ಲಿ ಒಂದು ಲೀಟರ್‌ ಹಾಲು ಹಾಕಿ ಚೆನ್ನಾಗಿ ಕುದಿಸಿ. ಆ ಹಾಲಿಗೆ ಸ್ವಲ್ಪಸ್ವಲ್ಪವೇ ಲಿಂಬೆ ರಸ ಬೆರೆಸಿರಿ. ಹೀಗೆ ಮಾಡಿದಾಗ ಹಾಲು ಒಡೆಯಲು ಆರಂಭಿಸುತ್ತದೆ. ಒಂದು ತೆಳ್ಳನೆಯ ಬಟ್ಟೆಯ ಸಹಾಯದಿಂದ ಒಡೆದ ಹಾಲಿನಿಂದ ನೀರಿನಂಶವನ್ನು ಸೋಸಿ, ಗಟ್ಟಿ ಭಾಗವನ್ನು ಬೇರ್ಪಡಿಸಿ. ಆ ಪನೀರ್‌ ಅನ್ನು ಚೆನ್ನಾಗಿ ಮಿಶ್ರಣ ಮಾಡಿ, ಚಿಕ್ಕ ಚಿಕ್ಕ ಉಂಡೆ ಕಟ್ಟಿ. ನಂತರ ಬಾಣಲೆಯಲ್ಲಿ 3-4 ಚಮಚ ತುಪ್ಪ ಹಾಕಿ ಬಾದಾಮಿ, ಒಣದ್ರಾಕ್ಷಿ, ಗೋಡಂಬಿ ಹಾಕಿ ಹುರಿಯಿರಿ.

ಈಗ ಇನ್ನೊಂದು ಪಾತ್ರೆಯಲ್ಲಿ ಅರ್ಧ ಕೆ.ಜಿಯಷ್ಟು ಸಕ್ಕರೆ ಮತ್ತು ಒಂದು ಕಪ್‌ ನೀರು ಹಾಕಿ 10-15 ನಿಮಿಷ ಕಾಲ ಚೆನ್ನಾಗಿ ಪಾಕ ಮಾಡಿಕೊಳ್ಳಿ. ಈಗಾಗಲೇ ತಯಾರಿಸಿದ ಪನೀರ್‌ ಉಂಡೆಗಳನ್ನು ಇದರೊಳಗೆ ಹಾಕಿ 10 ನಿಮಿಷಗಳ ಕಾಲ ಕುದಿಸಿ, ಪ್ರತ್ಯೇಕವಾಗಿ ತೆಗೆದಿಡಿ. ಈಗ ಇನ್ನೊಂದು ಪಾತ್ರೆಯಲ್ಲಿ ಉಳಿದ ಹಾಲಿಗೆ ಅರ್ಧ ಕೆ.ಜಿ ಸಕ್ಕರೆ ಹಾಕಿ ಅದು ಹದವಾಗಿ ಗಟ್ಟಿಯಾಗುವವರೆಗೆ ಕುದಿಸಿ, ಪನೀರ್‌ ಉಂಡೆಗಳನ್ನು ಸಕ್ಕರೆ ಪಾಕದಿಂದ ತೆಗೆಯಿರಿ. ನಂತರ, ಹಾಲಿನಲ್ಲಿ ನೆನೆಸಿಟ್ಟ ಕೇಸರಿ, ತುಪ್ಪದಲ್ಲಿ ಹುರಿದಿಟ್ಟ ದ್ರಾಕ್ಷಿ ಗೋಡಂಬಿ­ಗಳನ್ನು ಸೇರಿಸಿ ಚೆನ್ನಾಗಿ ಕಲಸಿ.
* ಸುಮನಾ ಆಚಾರ್‌

ಗಸಗಸೆ ಹಲ್ವ
ಬೇಕಾಗುವ ಸಾಮಗ್ರಿ: ಗಸಗಸೆ- 1/4 ಕೆ.ಜಿ., ಹಾಲು – 1ಕಪ್‌, ಒಣಕೊಬ್ಬರಿ -ಅರ್ಧ ಕಪ್‌, ಸಕ್ಕರೆ -1/4 ಕೆ.ಜಿ., ದ್ರಾಕ್ಷಿ, ಗೋಡಂಬಿ, ಏಲಕ್ಕಿ ಪುಡಿ, ತುಪ್ಪ.

ಮಾಡುವ ವಿಧಾನ: ಗಸೆಗಸೆಯನ್ನು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಟ್ಟು, ನಂತರ ಅದಕ್ಕೆ ಕೊಬ್ಬರಿ ತುರಿ ಹಾಗೂ ಹಾಲು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಆ ಮಿಶ್ರಣವನ್ನು ಒಂದು ಬಾಣಲೆಗೆ ಹಾಕಿ, ಸಕ್ಕರೆ ಸೇರಿಸಿ ಮಿಶ್ರಣ ಮಾಡುತ್ತಾ, ಬೇಯಿಸಿ. ಅದು ಗಟ್ಟಿಯಾಗುತ್ತಾ ಬಂದಂತೆ, ದ್ರಾಕ್ಷಿ, ಗೋಡಂಬಿ, ಏಲಕ್ಕಿ ಪುಡಿ ಹಾಕಿ ಮಧ್ಯೆ ಮಧ್ಯೆ ತುಪ್ಪ ಸೇರಿಸುತ್ತಾ ಫ್ರೈ ಮಾಡಿದರೆ ಗಸಗಸೆ ಹಲ್ವ ಸಿದ್ಧ.

ತೆಂಗಿನ ತುರಿ ಲಡ್ಡು
ಬೇಕಾಗುವ ಸಾಮಗ್ರಿ: ತೆಂಗಿನ ತುರಿ- 4 ಕಪ್‌, ಕಂಡೆನ್ಸ್‌$x ಮಿಲ್ಕ್- ಅರ್ಧ ಲೀಟರ್‌, ಸಕ್ಕರೆ, ಒಣ ದ್ರಾಕ್ಷಿ.

ಮಾಡುವ ವಿಧಾನ: ತೆಂಗಿನತುರಿಯನ್ನು ಬಾಣಲೆಗೆ ಹಾಕಿ, ಸಣ್ಣ ಉರಿಯಲ್ಲಿ ಐದಾರು ನಿಮಿಷ ಹುರಿಯಿರಿ. ಗರಿಗರಿಯಾದ ತೆಂಗಿನತುರಿಯನ್ನು ಮಿಕ್ಸಿಗೆ ಹಾಕಿ ಒಂದು ಸುತ್ತು ತಿರುಗಿಸಿ, ಪುಡಿ ಮಾಡಿ. ನಂತರ, ಒಂದು ಪಾತ್ರೆಗೆ ಕಂಡೆನ್ಸ್‌ ಮಿಲ್ಕ್, ಸಕ್ಕರೆ, ತೆಂಗಿನ ತುರಿ ಹಾಕಿ ಚೆನ್ನಾಗಿ ಮಗುಚಿ, ಉಂಡೆ ಕಟ್ಟಿ, ಒಣದ್ರಾಕ್ಷಿಯಿಂದ ಅಲಂಕರಿಸಿ. ಬೇಕಿದ್ದರೆ ಏಲಕ್ಕಿ ಪುಡಿ, ಬಾದಾಮಿ, ಗೋಡಂಬಿ ಸೇರಿಸಬಹುದು.
* ನೀತಾ ಎಸ್‌.ಎನ್‌

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.