ನಿಮ್ಮನ್ನು ಕರಗಿಸಿದ ಕತ್ತಲೆಗೆ ಎದುರಾಗಿ ನಿಂತು ಹೊಡೆಯುವ ಧೈರ್ಯ ನಿಮ್ಮಲ್ಲಿದೆ..!

ಬದುಕೆಂದರೇ, ಏನೇನೋ ಅಲ್ಲ. ಪದ್ಯವಾಗುವ ಅವಕಾಶ

ಶ್ರೀರಾಜ್ ವಕ್ವಾಡಿ, May 31, 2021, 8:28 PM IST

Once you replace negative thoughts with positive ones, you’ll start having positive results.

ಬದುಕಿನಲ್ಲಿ ಎಷ್ಟೋ ಮಂದಿ ತಮ್ಮನ್ನು ತಾವು ಬೇಕಂತಲೇ ಕುಗ್ಗಿಸಿಕೊಂಡು ಇಲ್ಲದೇ ಇರುವ ಚಿಂತೆಗಳನ್ನು ತಲೆ ಮೇಲೆ ಹೊತ್ತುಕೊಂಡು ಬದುಕನ್ನು ಶಪಿಸುತ್ತಾ ಜೀವನಕ್ಕೆ ಅಂತ್ಯ ಹಾಡುವವರಿದ್ದಾರೆ. ಬಹುಶಃ ನಾವು ನಮ್ಮಲ್ಲಿನ ನೈತ್ಯಾತ್ಮಿಕ ಚಿಂತನಗಳನ್ನು ಮೊದಲು ತೆಗೆದು ಹಾಕಬೇಕು. ಬದುಕಿಗೆ ಶರಣಾಗತಿಯಾಗದೇ ಬದುಕು ನಮ್ಮನ್ನು ಬದುಕಿಸುವುದಿಲ್ಲ ಎನ್ನವುದನ್ನು ನಾವು ಮೊದಲು ಅರಿಯುಕೊಳ್ಳಬೇಕು.

‘ನಿನ್ನೆ’ ಹಾಗೂ ‘ನಾಳೆ’ ಗಳು ಈ ಪ್ರಪಂಚದಲ್ಲಿರುವ ಅತ್ಯಂತ ದೊಡ್ಡ ಸುಳ್ಳು ಎಂದು ಭಾವಿಸಿದಾಗ ನಾವು ‘ಇಂದು’ ಚೆಂದಾಗಿ ಬಾಳ್ವೆ ಮಾಡುವುದಕ್ಕೆ ಸಾಧ್ಯವಿದೆ. ಬದುಕಿನ ಏರುಪೇರುಗಳನ್ನು ಆಸ್ವಾದಿಸದೇ ಬದುಕು ಬದುಕನ್ನಿಸುವುದಿಲ್ಲ. ಬದುಕನ್ನು ಬದುಕು ಅಂತನ್ನಿಸಿಕೊಳ್ಳುವುದಕ್ಕಾಗದರೂ ನಾವು ಏರುಪೇರುಗಳನ್ನು ಸಮಾನಾಹಿ ಸ್ವೀಕರಿಸುವಂತಹ ಮನಸ್ಥಿತಿಯನ್ನು ಹೊಂದಿರಬೇಕು.

ಇದನ್ನೂ ಓದಿ : ಕೋವಿಡ್ : ರಾಜ್ಯದಲ್ಲಿಂದು  44473 ಜನ ಗುಣಮುಖ; 16604 ಹೊಸ ಪ್ರಕರಣ ಪತ್ತೆ

ನಿಮ್ಮ ನೀವು ಒಂದಿಷ್ಟು ನಂಬದಿರೇ.. ಬದುಕು ಸಾಗುವುದೇ ಇಲ್ಲ. ಬದುಕನ್ನು ಬರುವ ಹಾಗೆ ಬಂದು ಬಿಡಲು ಬಿಟ್ಟಾಗಲೇ ಅದು ಸಹ್ಯವಾಗಿ ಇರುತ್ತದೆ. ಹಾಗಂತ ಬಯಕೆಗಳು ಬದುಕಿನಲ್ಲಿ ಇರಬಾರದು ಎಂದರ್ಥವಲ್ಲ. ಬಯಕೆಗಳ ಬಗ್ಗೆ ಹೆಚ್ಚು ಚಿಂತೆಗಳಿರಬಾರದು.  ಚಿಂತೆಗಳು ಬದುಕನ್ನು ಬರಡಾಗಿಸುತ್ತವೆ.

ನಿಮ್ಮನ್ನು ಕರಗಿಸಿದ ಕತ್ತಲೆಗೆ ಎದುರಾಗಿ ನಿಂತು ಹೊಡೆಯುವ ಧೈರ್ಯ ತಂದುಕೊಳ್ಳುವ ಭೀಮ ಗಾತ್ರದ ಶಕ್ತಿ ನಿಮ್ಮ ಒಳಗೆಲ್ಲೋ ಇದೆ. ಈಗ ನೀವದನ್ನು ಹೊರಗೆ ಕರೆಯಲೇ ಬೇಕು. ನಿಮಗೆ ನಾಳೆಗಳನ್ನು ಅತ್ಯಂತ ಸಂಭ್ರಮದಿಂದ ಕಾಣುವಂತಹ ಎಲ್ಲಾ ಸಾಮರ್ಥ್ಯವೂ ಇದೆ.

ಯಾಕೆ..? ಅನುಮಾನನಾ..?

ನಿಮ್ಮ ನಿಧಾನದಲ್ಲಿ ವೇಗವಿದೆ, ನಿಮ್ಮ ಮೌನದಲ್ಲಿ ಹರ್ಷವಿದೆ, ನಿಮ್ಮ ದುಃಖದಲ್ಲಿ ಸುಖವಿದೆ. ನಿಮಗೆ ಹತ್ತಿರದಲ್ಲೇ ಒಂದು ತಿರುವಿದೆ. ಅಲ್ಲಿ ತಿರುಗಬೇಕಷ್ಟೇ. ನಿರ್ಧಾರಗಳು ಕುಸಿಯದಿರಲಿ. ಸಮಸ್ತ ಭಾವ ಇಷ್ಟಕಾವ್ಯ ನಿಮ್ಮ ಎದೆ ತೆಕ್ಕೆಯಲ್ಲೇ ಇದೆ. ಅವುಗಳಿಗೆ ನಿಮ್ಮದೇ ಯಜಮಾನಿಕೆ.

‘ಭಾವುಕತೆಯ ತೀವ್ರತೆ’ ನಿಮಗೆ ಗೊತ್ತಿಲ್ಲ ಸ್ವಾಮಿ’ ಎಂದು ನೀವು ಹೇಳಬಹುದು. ಆದರೇ, ನಿಮ್ಮ ಬದುಕಿನಲ್ಲಿ ಆ ಅನುಭವವನ್ನು ವಿಸ್ತರಿಸುವ ಅಥವಾ ಕಡಿತಗೊಳಿಸುವ ತೀರ್ಮಾನ ಮಾಡಬೇಕಾದದವರು ನೀವೇ. ಮತ್ಯಾರೂ ಅದನ್ನು ಮಾಡಲಾರರು. ನಿಮ್ಮ ಮನಸ್ಸಿಗೆ, ನಿಮ್ಮ ಒಳಮನಸ್ಸಿನ ಕ್ರಿಯೆಗೆ ಕಾಯುವಷ್ಟು ತಾಳ್ಮೆ ಇಲ್ಲ. ನೀವೇನೂ ನಿರ್ಣಯ ಕೈಗೊಂಡಿಲ್ಲವೆಂದರೇ, ನಿಮ್ಮನ್ನು ಅದು ಕೊರೆಯಲಾರಂಭಿಸುತ್ತದೆ.

ನಿಮ್ಮ ಮನಸ್ಸು, ನಿಮ್ಮ ಮೌನದ ತೀವ್ರವಾದ ವಿಸ್ತಾರವನ್ನು ಕಂಡು ನಿಮ್ಮನ್ನು ಕೊಲ್ಲುವುದಕ್ಕೆ ಕತ್ತಿ, ಚೂರಿ, ತಲ್ವಾರು, ಪಿಸ್ತೂಲು ಹಿಡಿದುಕೊಂಡು ತಯಾರಾಗುತ್ತದೆ. ಹಾಗಾಗಿ, ಮೌನ ಎಲ್ಲದಕ್ಕೂ ಉತ್ತರವಲ್ಲ. ಲವಲವಿಕೆ ನಿಮ್ಮನ್ನು ನೀವು ಊಹಿಸಿಕೊಳ್ಳಲಾರದಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ ಎನ್ನುವುದರಲ್ಲಿ ಏನು ಅಚ್ಚರಿ ಇಲ್ಲ.

ಕೊನೆ ಹಾಡಬೇಕಾಗಿರುವುದು ನಿಮ್ಮೊಳಗಿನ ನೈತ್ಯಾತ್ಮಿಕ ಹೊಲಸುಗಳಿಗೆ. ನಿಮಗೆ ಗೊತ್ತಿಲ್ಲದೇ ಅವಿತಿದೆ ನಿಮ್ಮ ಎದೆಯಾಳದಲ್ಲಿ ಜಗ ಗೆಲ್ಲುವ ಶಕ್ತಿ. ನಿಮಗೆ ಖಂಡಿತ ಗೊತ್ತಿಲ್ಲ, ನೀವೀಗ ಏನಿದ್ದೀರಿ ಅದಲ್ಲ ನೀವು. ನೀವೆಂದರೇ, ಧನಾತ್ಮಕತೆಯ ತೊಟ್ಟಿಲು ತೂಗುವ ಕೈಗಳು.

ನಕ್ಷತ್ರಗಳ ನಗುವಿನ ಸಾರೂಪ್ಯ ನಿಮ್ಮಲ್ಲೇ ಇದೆ. ನೀವು ನೀವಾದ ಮೇಲೆ ಖಂಡಿತ ಅದು ಮಿನುಗುತ್ತದೆ. ಬದುಕೆಂದರೇ, ಏನೇನೋ ಅಲ್ಲ. ಪದ್ಯವಾಗುವ ಅವಕಾಶ.

-ಶ್ರೀರಾಜ್ ವಕ್ವಾಡಿ 

ಇದನ್ನೂ ಓದಿ : ಲಾಕ್‌ಡೌನ್‌ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ: ಡಾ. ಸುಧಾಕರ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.