ಅಮೇರಿಕ- ಇರಾನ್ ನಡುವೆ ಯುದ್ದ ನಡೆದರೆ ಭಾರತದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು?


Team Udayavani, Jan 9, 2020, 4:58 PM IST

—

ಮಣಿಪಾಲ: ಅಮೇರಿಕ- ಇರಾನ್ ನಡುವೆ ಯುದ್ದ ನಡೆದರೆ ಭಾರತದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ಪ್ರಶ್ನೆಯನ್ನು ಉದಯವಾಣಿಯನ್ನು ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದು ಉತ್ತರಗಳು ಇಲ್ಲಿವೆ.

ಯಾಕುಬ್ ಕಾರ್ಕಳ: ಕಚ್ಚತೈಲ ರಫ್ತು ಇದರ ಮೇಲೆ ಪರಿಣಾಮ ಆಗಬಹುದು. ಕೊಲ್ಲಿ ರಾಷ್ಟ್ರದಲ್ಲಿ ದುಡಿಯುವ ಭಾರತೀಯರಿಗೆ ತುಂಬಾ ಕಷ್ಟ ನಷ್ಟ ಆಗಬಹುದು.

ಮೊಹಮ್ಮದ್ ರಿಯಾಜ್ ಕಾರ್ಲ: ಇಲ್ಲಿ ಯುದ್ಧಕ್ಕೆ ಪ್ರಚೋದಿಸುವುದು ಬೇಡ. ಶಾಂತಿಗಾಗಿ ಪ್ರಾರ್ಥಿಸೋಣ. ಅಧ್ಯಕ್ಷರ ದುರಾಡಳಿತಕ್ಕೆ ಅಮಾಯಕರು ಬಲಿಯಾಗುವುದು ಬೇಡ.

ವೈಷ್ಣವ ವಿ; ಕೇಂದ್ರದಲ್ಲಿ ಮೋದಿಜಿ ಇರುವರೆಗೂ ಯಾವುದೇ ಪರಿಣಾಮ ಬೀರುವುದಿಲ್ಲ. ಕೊಳೆಯುತ್ತಿದ್ದ ಭಾರತದ ಆರ್ಥಿಕತೆಯನ್ನು ಈ ಸ್ಥಿತಿಗೆ ತಂದವರು ನಮ್ಮ ಮೋದಿಜಿ

ಅರುಣ್ ಬಾಬು: ಬೆಲೆ ಏರಿಕೆಗೆ ಬಿಜೆಪಿ ಗೆ ಕಾರಣ ಸಿಕ್ಕಂತಾಗುತ್ತದೆ. ಆದ್ದರಿಂದ ಬಿಜೆಪಿ ಗೆ ಒಳ್ಳೆಯದು ಮತ್ತು ನಾಗರೀಕರಿಗೆ ಕೆಟ್ಟ ಸುದ್ದಿ.

ಅನಿಲ್ ಕುಮಾರ್: ಯುದ್ಧ ಎಂದರೆ ಏನು? ಸೈನಿಕರನ್ನು ಹಿಂದಿಟ್ಟು ಮುಂದೆ ನಿಂತು ಯುದ್ಧ ಮಾಡುವನೆ ನಿಜವಾದ ರಾಜ ನಾಯಕ, ಇದುವೆ ನಿಜವಾದ ಯುದ್ಧ. ಸೈನಿಕರನ್ನು ಬಲಿ ಕೊಟ್ಟು ರಾಜನು ಗಚ್ಚಿನ ಮನೆಯಲ್ಲಿ ಕೂಡುವುದು ಇದಾವ ಯುದ್ಧ!

ಸಣ್ಣಮಾರಪ್ಪ. ಚಂಗಾವರ; ಇಂದು ದೇಶ ದೇಶಗಳ ನಡುವೆ ದೊಡ್ಡ ಮಟ್ಟದಲ್ಲಿ ರಪ್ತು ಅಮದು ನೆಡೆಯುತ್ತಿದೆ. ಯಾವುದೇ ದೇಶದಲ್ಲಿ ಕೆಟ್ಟ ಘಟನೆಗಳು ನೆಡೆದರೆ ಸಂಬಂಧ ಹೊಂದಿರುವ ಎಲ್ಲಾ ದೇಶಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಮಧುಕುಮಾರ್ ಬಿಳಿಚೋಡು: ಈಗಾಗಲೇ ಎರಡು ರಾಷ್ಟ್ರಗಳ ಮಧ್ಯೆ ಉಂಟಾಗಿರುವ ಬಿರುಕುಗಳಿಂದ ದಿನದಿಂದ ದಿನಕ್ಕೆ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತಗೊಂಡು ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಇನ್ನೂ ಯುದ್ದ ನಡೆದರೆ ಭಾರತದ ಆರ್ಥಿಕತೆ ಪರಿಸ್ಥಿತಿ ತೀವ್ರ ಹದಗೆಟ್ಟು ಪೆಟ್ರೋಲ್-ಡೀಸೆಲ್ ಮತ್ತು ಬಂಗಾರದ ಬೆಲೆ ಗಗನಕ್ಕೆರಲಿದೆ. ಮೊದಲೇ ಭಾರತದ ಆರ್ಥಿಕ ಪರಿಸ್ಥಿತಿ ಕಂಗಾಲಾಗಿದ್ದು ಯುದ್ದದಿಂದ ಇದಕ್ಕೆ ಮತ್ತಷ್ಟು ಹೊರೆಯಾಗಲಿದೆ.

ರಾಜೇಶ್ ಅಂಚನ್ ಎಂ ಬಿ: ಅಂತಹ ಯಾವುದೇ ಗಂಭೀರ ಪರಿಣಾಮ ಬೀರೋಲ್ಲ ಕೇವಲ ಇಂಧನ ಬೆಲೆಗಳಲ್ಲಿ ಸ್ವಲ್ಪ ವ್ಯತ್ಯಯ ವಾಗಬಹುದು. ಭಾರತ ಇಂಧನ ಹೊರತುಪಡಿಸಿ ಬೇರೆ ಯಾವುದಕ್ಕೂ ಕೊಲ್ಲಿ ರಾಷ್ಟ್ರಗಳನ್ನು ಹೆಚ್ಚಾಗಿ ಅವಲಂಭಿಸಿಲ್ಲ. ವಿದೇಶಿ ಕೆಲಸಗಳನ್ನೇ ನಂಬಿಕೊಂಡಿರುವ ಕೆಲ ಭಾರತೀಯರಿಗೆ ಕಷ್ಟವಾಗಬಹುದು ಅಷ್ಟೇ. ಒಟ್ಟಾರೆ ಭಾರತಕ್ಕೆ ಯಾವುದೇ ಪರಿಣಾಮ ಆಗೋಲ್ಲಾ. ನಮ್ಮ ಈಗಿನ ಸರ್ಕಾರ ಪರಿಸ್ಥಿತಿಯನ್ನು ಎದುರಿಸಲು ಸಾಕಷ್ಟು ಸಮರ್ಥವಾಗಿದೆ.

ಬಿ ಆರ್ ವಿಶ್ವನಾಥ್ ಗೌಡ; ಇರಾನ್ ಮತ್ತು ಅಮೆರಿಕ ನಡುವಿನ ಯುದ್ದ ನಡೆದರೂ ಕೂಡ ಭಾರತ ತಟಸ್ಥ ಧೋರಣೆ ಅನುಸರಿಸುತ್ತದೆ. ಇದೆ ನೆಪ ಮಾಡಿಕೊಂಡು ಪಾಕಿಸ್ತಾನ ತನ್ನ ಉದ್ದಟತನ ಪುಂಡಾಟಿಕೆ ನಡೆಸಿದರೆ ಪಾಕಿಸ್ತಾನದ ನಾಶ ಖಂಡಿತಾ.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.