ವಿಂಡ್‌ಶೀಲ್ಡ್‌   ಸ್ಪ್ರೇಯರ್‌ ರಿಪೇರಿ ಹೇಗೆ?


Team Udayavani, Jan 10, 2020, 4:24 AM IST

30

ಪ್ರಯಾಣದ ವೇಳೆ ಕಾರಿನ ವಿಂಡ್‌ಶೀಲ್ಡ್‌ (ಮುಂಭಾಗದ ಗಾಜು) ಕೊಳೆಯಾಗಿದ್ದರೆ ನಾವು ಅದಕ್ಕೆ ಸ್ಟೀರಿಂಗ್‌ ಕೆಳಗಿನ ಸ್ಪ್ರೇಯರ್‌ ಲಿವರ್‌ ಅದುಮಿ ನೀರು ಎರಚುತ್ತೇವೆ. ಇದೇ ವೇಳೆ ವೈಪರ್‌ ಕೂಡ ಚಾಲೂ ಆಗಿ ವಿಂಡ್‌ಶೀಲ್ಡ್‌ ಶುಚಿಯಾಗುತ್ತದೆ. ಆದರೆ ಕೆಲವೊಮ್ಮೆ ಸ್ಟ್ರೇಯರ್‌ನಲ್ಲಿ ನೀರು ಬರುವುದಿಲ್ಲ. ಇದಕ್ಕೆ ಕಾರಣಗಳೇನು ನೋಡೋಣ?

ಕಸದ ಸಮಸ್ಯೆ
ಕಾರಿನ ಬಾನೆಟ್‌ ಮೇಲೆ ನೀರು ಎರಚುವ ಪುಟ್ಟ ಸ್ಪ್ರೇಯರ್‌ ಇರುತ್ತದೆ. ಇದರ ಕಣ್ಣುಗಳಲ್ಲಿ ಕಸ ಕಟ್ಟಿಕೊಂಡಿದ್ದರೆ, ನೀರು ಸರಿಯಾಗಿ ವಿಂಡ್‌ಶೀಲ್ಡ್‌ಗೆ ಸ್ಪ್ರೇ ಆಗಲಾರದು. ಇದನ್ನು ಸರಿಪಡಿಸಲು ಪುಟ್ಟ ಸೂಜಿ ತೆಗೆದುಕೊಳ್ಳಿ ಅದರಿಂದ ಸ್ಪ್ರೆಯರ್‌ಗೆ ಚುಚ್ಚಿ, ಕಸ ಹೋಗುವಂತೆ ಮಾಡಿ ಅಥವಾ ಪ್ರಶರ್‌ ಇರುವ ಗಾಳಿ ಹಿಡಿದರೂ ಆಗುತ್ತದೆ.

ಪೈಪ್‌ ಹಾಳಾಗಿದ್ದರೆ
ವಿಂಡ್‌ಶೀಲ್ಡ್‌ ಶುಚಿಗೊಳಿಸಲು ವಾಟರ್‌ ಟ್ಯಾಂಕ್‌ನಿಂದ ಪುಟ್ಟ ಪೈಪ್‌ ಒಂದು ಬರುತ್ತದೆ. ಇದು ಕಾರಿನ ಚಕ್ರದ ಎದುರಿನ ಬಂಪರ್‌ನಿಂದ ಬಾನೆಟ್‌ ಹಿಂಭಾಗದ ಮೂಲಕ ಬರುತ್ತದೆ. ಇದು ತುಂಡಾಗಿದ್ದರೆ ನೀರು ಬರಲಾರದು. ಸಮಸ್ಯೆಗಳಿದ್ದರೆ ಅದನ್ನು ಬದಲಾಯಿಸಬೇಕು.

ವಾಶರ್‌ ಪಂಪ್‌ ಕನೆಕ್ಟರ್‌ ಮತ್ತು ಫ್ಯೂಸ್‌
ನೀರು ಹಾಯಿಸಲು ವಾಟರ್‌ ಟ್ಯಾಂಕ್‌ನಲ್ಲಿ ಒಂದು ಪುಟ್ಟದಾದ ಪಂಪ್‌ ಇರುತ್ತದೆ. ಈ ಪಂಪ್‌ಗೆ ವಿದ್ಯುತ್‌ ಸೌಕರ್ಯ ಕಲ್ಪಿಸುವ ಒಂದು ಪುಟ್ಟ ಕನೆಕ್ಟರ್‌ ಇರುತ್ತದೆ. ಕನೆಕ್ಟರ್‌ ಹಾಳಾಗಿದ್ದರೆ ಪಂಪ್‌ ಚಾಲೂ ಆಗದು. ಅಲ್ಲದೇ ಇದಕ್ಕೆ ಪ್ರತ್ಯೇಕ ಫ್ಯೂಸ್‌ ಕೂಡ ಇದ್ದು ಫ್ಯೂಸ್‌ ಹಾಳಾಗಿದ್ದರೆ ಪಂಪ್‌ ಚಾಲೂ ಆಗದು. ಡ್ಯಾಶ್‌ ಬೋರ್ಡ್‌ ತಳಭಾಗದಲ್ಲಿರುವ ಫ್ಯೂಸ್‌ ಬಾಕ್ಸ್‌ ತೆಗೆದು, ನಿರ್ದಿಷ್ಟ ಫ್ಯೂಸ್‌ ಹುಡುಕಿ ಬದಲಾಯಿಸಬೇಕು. ಕನೆಕ್ಟರ್‌ ಹಾಳಾಗಿದ್ದರೆ ಹೊಸ ಕನೆಕ್ಟರ್‌ ಹಾಕುವುದೇ ದಾರಿ.

ಪಂಪ್‌ ಕೆಟ್ಟುಹೋಗಿದ್ದರೆ
ಕೆಲವೊಮ್ಮೆ ಪಂಪ್‌ ಹಾಳಾಗುವ ಸಾಧ್ಯತೆ ಇರುತ್ತದೆ. ಇದನ್ನು ಕಂಡುಹಿಡಿಯುವುದು ಸುಲಭ. ಪಂಪ್‌ ಹಾಳಾಗಿದ್ದರೆ ನೀವು ಬಟನ್‌ ಅದುಮಿದರೂ ಪಂಪ್‌ ಚಾಲೂ ಆಗುವುದಿಲ್ಲ. ಸರಿಯಾಗಿದ್ದರೆ ಸಣ್ಣದಾದ ಶಬ್ದ ಕೇಳಿಸುತ್ತದೆ. ಪಂಪ್‌ ಹಾಳಾಗಿದ್ದರೆ ಟ್ಯಾಂಕ್‌ ಬದಿಯಲ್ಲಿರುವ ಪಂಪ್‌ ಅನ್ನು ತೆಗೆದು ಹೊಸದು ಹಾಕಿ. ಹಾಗೆಯೇ ರಿಯರ್‌ ವಿಂಡೋಗೆ ಪ್ರತ್ಯೇಕ ಮೋಟಾರ್‌ ಇದ್ದು, ಅದರ ಸಮಸ್ಯೆ ಇದ್ದರೂ ಇದೇ ರೀತಿ ಪರಿಶೀಲಿಸಬಹುದು.

ಹೀಗೆ ಮಾಡಿ
ವಿಂಡ್‌ಶೀಲ್ಡ್‌ ಶುಚಿಗೊಳಿಸಲು ವಾಟರ್‌ ಟ್ಯಾಂಕ್‌ಗೆ ಕೇವಲ ನೀರು ಹಾಕುವುದಕ್ಕಿಂತ ಸೋಪಿನ ನೀರು/ಶ್ಯಾಂಪೂ ನೀರು ಬಳಕೆ ಉತ್ತಮ. ಮೊದಲು 2 ಎಂ.ಎಲ್‌ನಷ್ಟು ಶ್ಯಾಂಪೂ ಇದಕ್ಕೆ ಹಾಕಿ ಬಳಿಕ ನೀರು ಹಾಕಿ. ಬಳಿಕ ಬಳಕೆ ವೇಳೆ ಇದು ನೊರೆಯಾಗಿ ಬರುತ್ತದೆ ಮತ್ತು ನೀರಿಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿ ಗಾಜನ್ನು ಶುಚಿಗೊಳಿಸುತ್ತದೆ.

-ಈಶ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.