ಇದೀಗ ಜಿಯೋ ನ್ಯೂಸ್ ಲಭ್ಯ; “ನಿಮ್ಮ ಸುದ್ದಿ, ನಿಮ್ಮ ಭಾಷೆ”


Team Udayavani, Apr 12, 2019, 12:26 PM IST

Jio-news

ಮುಂಬೈ: ಜಿಯೋ ಮಾರುಕಟ್ಟೆಗೆ ಹೊಸದಾಗಿ ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್ ಆಧಾರಿತ ಸೇವೆ ((www.jionews.com) ರೂಪದಲ್ಲಿ ಜಿಯೋ ನ್ಯೂಸ್ ಎಂಬ ಕ್ರಾಂತಿಕಾರಿ ಡಿಜಿಟಲ್ ಉತ್ಪನ್ನವನ್ನು ಪರಿಚಯಿಸಿದೆ. ಈ ಆ್ಯಪ್ ಅನ್ನು ಬಳಕೆದಾರರು ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್ ನಿಂದ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಜಿಯೋ ನ್ಯೂಸ್ ಉತ್ತಮ ಸಂದರ್ಭದಲ್ಲಿಯೇ ಲಾಂಚ್ ಆಗಿದ್ದು, ಭಾರತೀಯರಿಗೆ 2019ರ ಲೋಕಸಭಾ ಚುನಾವಣೆಯ ಬಗ್ಗೆ, ಐಪಿಎಲ್ 2019, ಕ್ರಿಕೆಟ್ ವಿಶ್ವಕಪ್ 2019ರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದೆ. ಇದಲ್ಲದೇ ಭಾರತ ಮತ್ತು ವಿಶ್ವದಾದ್ಯಂತದ ನಡೆಯುವ ಪ್ರಮುಖ ಘಟನೆಗಳನ್ನು ಈ ಆಪ್ ಮೂಲಕವೇ ತಿಳಿದುಕೊಳ್ಳಲು ಅವಕಾಶ ನೀಡಲಿದೆ. ಈ ಆಪ್ ಬಳಸುವವರು ಇತ್ತೀಚಿನ ಸುದ್ದಿಗಳನ್ನು ಪಡೆಯುವುದಲ್ಲದೇ. ಬ್ರೇಕಿಂಗ್ ನ್ಯೂಸ್, ಲೈವ್ ಟಿವಿ, ವೀಡಿಯೊಗಳನ್ನು, ನಿಯತಕಾಲಿಕೆಗಳನ್ನು, ಪತ್ರಿಕೆಗಳನ್ನು ಓದುವುದು ಮತ್ತು ಇನ್ನು ಹೆಚ್ಚಿನ ಸೇವೆಗಳನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಇದರಿಂದಾಗಿ ಒಂದೇ ಆಪ್‌ನಲ್ಲಿ ಸರ್ವವೂ ದೊರೆಯಲಿದೆ.

ಜಿಯೋ ನ್ಯೂಸ್ 12ಕ್ಕೂ ಹೆಚ್ಚು ಭಾರತೀಯ ಭಾಷೆಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಈ ಮೂಲಕ ತನ್ನ ಬಳಕೆದಾರರಿಗೆ ತಮ್ಮದೇ ಭಾಷೆಯಲ್ಲಿ ಸುದ್ದಿಯನ್ನು ಪಡೆಯಲು ಅವಕಾಶವನ್ನು ಮಾಡಿಕೊಟ್ಟಿದೆ. ತಮ್ಮ ಭಾಷೆಯಲ್ಲಿಯೇ ಆದ್ಯತೆಗಳನ್ನು ಆರಿಸುವ ಮೂಲಕ ಅವರ ಓದುವ ಅನುಭವವನ್ನು ವೈಯಕ್ತೀಕರಿಸಲು ಮುಂದಾಗಿದೆ. ಜಿಯೋ ನ್ಯೂಸ್ ಆಪ್ ನಲ್ಲಿ ಭಾರತ ಮತ್ತು ಜಗತ್ತಿನಾದ್ಯಂತ ಕಾರ್ಯನಿರ್ವಹಿಸುತ್ತಿರುವ 150+ ಲೈವ್ ನ್ಯೂಸ್ ಚಾನಲ್ ಗಳು, 800+ ಮ್ಯಾಗಜೀನ್ ಗಳು, 250+ ಸುದ್ದಿಪತ್ರಿಕೆಗಳು, ಪ್ರಸಿದ್ಧ ಬ್ಲಾಗ್ ಗಳು ಮತ್ತು ಸುದ್ದಿ ವೆಬ್‌ಸೈಟ್‌ಗಳನ್ನು ಕಾಣಬಹುದಾಗಿದೆ.

ಜಿಯೋ ನ್ಯೂಸ್ ತನ್ನ ಬಳಕೆದಾರರಿಗೆ ಸಾಧ್ಯವಾದಷ್ಟು ವೇಗವಾಗಿ ಉತ್ತಮ ಸುದ್ದಿಯನ್ನು ತಲುಪಿಸುವ ಕಾರ್ಯ ಮಾಡಲಿದೆ. ಕ್ರೀಡೆಗಳು, ಮನರಂಜನೆ, ವ್ಯಾಪಾರ, ತಂತ್ರಜ್ಞಾನ, ಜೀವನಶೈಲಿ, ಫ್ಯಾಷನ್, ವೃತ್ತಿ, ಆರೋಗ್ಯ, ಜ್ಯೋತಿಷ್ಯ, ಹಣಕಾಸು ಮತ್ತು ಇನ್ನೂ ಹೆಚ್ಚಿನ ಆಸಕ್ತಿಗಳನ್ನು ಆಯ್ಕೆ ಮಾಡುವ ಮೂಲಕ ಬಳಕೆದಾರರು ತಮ್ಮ ಮುಖಪುಟವನ್ನು ಸಂಪೂರ್ಣವಾಗಿ ವೈಯಕ್ತಿಕಗೊಳಿಕೊಳ್ಳುವ ಅವಕಾಶವು ದೊರೆಯಲಿದೆ. ಅಐ – AI & ML (ಕೃತಕ ಬುದ್ದಿಮತ್ತೆ ಮತ್ತು ಯಾಂತ್ರಿಕ ಕಲಿಕೆ) ತಂತ್ರಜ್ಞಾನದೊಂದಿಗೆ, ಜಿಯೋ ನ್ಯೂಸ್ ಸಾವಿರಾರು ಸುದ್ದಿ ಮೂಲಗಳನ್ನು ಸ್ಕ್ಯಾನ್ ಮಾಡುತ್ತದೆ ಮತ್ತು ಅದರಿಂದ ಬಳಕೆದಾರರಿಗೆ ಬೇಕಾದ ವಿಷಯವನ್ನು ಹೆಚ್ಚು ಸೂಕ್ತವಾಗಿ ತೋರಿಸುತ್ತದೆ.

ದೇಶದಾದ್ಯಂತದ ಎಲ್ಲಾ ಪ್ರಮುಖ ಮತ್ತು ಜನಪ್ರಿಯ ಟಿವಿ ಸುದ್ದಿ ವಾಹಿನಿಗಳನ್ನು ಒಳಗೊಂಡಿರುವ 150+ ಲೈವ್ ಟಿವಿಯನ್ನು ಬಳಕೆದಾರರು ಈ ಆಪ್‌ನಲ್ಲಿ ಕಾಣಬಹುದು. ಇದಲ್ಲದೇ ಬಾಲಿವುಡ್, ಫ್ಯಾಶನ್, ಹೆಲ್ತ್, ಆಟೋಮೋಟಿವ್, ಟೆಕ್ನಾಲಜಿ, ಕ್ರೀಡಾ ಮತ್ತು ಇನ್ನು ಹೆಚ್ಚಿನ ವಿಷಯಗಳಿಗೆ ಸಂಬಂಧಿಸಿದ ಟ್ರೆಂಡಿಂಗ್ ವೀಡಿಯೊಗಳನ್ನು ಜಿಯೋ ನ್ಯೂಸ್ ಆಪ್‌ನಲ್ಲಿ ನೋಡಿ ಆನಂದಿಸಬಹುದು.

ಓದುವುದಕ್ಕೆ ಆದ್ಯತೆ ನೀಡುವವರಿಗೆ, ಅವರು ವಿವಿಧ ವರ್ಗಗಳಲ್ಲಿ 800+ ನಿಯತಕಾಲಿಕೆಗಳನ್ನು ಆಯ್ಕೆ ಮಾಡಿಕೊಳ್ಳುವ ಆಯ್ಕೆ ನೀಡಲಾಗಿದೆ. ದೇಶಾದ್ಯಂತದ ಪ್ರಕಟವಾಗುವ ದಿನಪತ್ರಿಕೆಗಳು ಜಿಯೋ ನ್ಯೂಸ್ನಲ್ಲಿ ಕಾಣಿಸಿಕೊಳ್ಳುತ್ತದೆ.

ಜಿಯೋ ನ್ಯೂಸ್ ಆಪ್‌ ಜಿಯೋ ಎಕ್ಸ್‌ಪ್ರೆಸ್ ನ್ಯೂಸ್, ಜಿಯೋ ಮ್ಯಾಗ್ಸ್ ಮತ್ತು ಜಿಯೋ ನ್ಯೂಸ್ ಪೇಪರ್ಸ್ ಆಪ್‌ಗಳನ್ನು ಒಳಗೊಂಡ ಸೇವೆಯಾಗಲಿದ್ದು, ಇದರಲ್ಲಿ ಹೆಚ್ಚುವರಿಯಾಗಿ ಲೈವ್ ಟಿವಿ ಮತ್ತು ವೀಡಿಯೋಗಳು ಕೊಡುಗೆಯಾಗಿ ದೊರೆಯಲಿದೆ. ಈಗಾಗಲೇ ಈ ಮೂರು ಆಪ್‌ಗಳನ್ನು ಬಳಕೆ ಮಾಡುತ್ತಿರುವವರು ಬಳಕೆದಾರರು ಜಿಯೋ ನ್ಯೂಸ್ ಆಪ್‌ಗೆ ಸೇರ್ಪಡೆಯಾಗಲಿದ್ದಾರೆ. ಇದಲ್ಲದೇ ಜಿಯೋ ಬಳಕೆದಾರರಲ್ಲದವರಿಗೂ ಪ್ರೀಮಿಯಮ್ ಆಯ್ಕೆಯ ಮೂಲಕ ಜಿಯೋ ನ್ಯೂಸ್ ಆಪ್ ಬಳಕೆಗೆ ಅವಕಾಶವನ್ನು ಮಾಡಿಕೊಟ್ಟಿದೆ.

ಜಿಯೋ ನ್ಯೂಸ್ ಬಳಕೆದಾರರು ಸುದ್ಧಿ ಓದುವ ಮತ್ತು ನೋಡುವ ವಿಧಾವನ್ನು ಬದಲಾವಣೆಯನ್ನು ಮಾಡಲಿದ್ದು, ಹೊಸ ಅನುಭವನ್ನು ನೀಡಲಿದೆ. ಜಿಯೋ ನ್ಯೂಸ್ ಆಪ್ ‘ನಿಮ್ಮ ಸುದ್ದಿ. ನಿಮ್ಮ ಭಾಷೆ’ ಎಂಬ ಸಂಕಲ್ಪದಿಂದ ಕಾರ್ಯನಿರ್ವಹಿಸಲಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.