ಇಂಟರ್ನೆಟ್ ಸ್ಥಗಿತ ; ಈ ಎರಡು ಆ್ಯಪ್ ಗಳಿಗೆ ಬಂತು ಸಿಕ್ಕಾಪಟ್ಟೆ ಬೇಡಿಕೆ!


Team Udayavani, Dec 22, 2019, 5:06 PM IST

Mobile-Network-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಪ್ರತಿಭಟನೆಗಳು ಹಿಂಸಾರೂಪವನ್ನು ತಾಳುತ್ತಿರುವ ಕಡೆಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳುತ್ತಾರೆ. ಅವುಗಳಲ್ಲಿ ಒಂದು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸುವುದು.

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳುಸುದ್ದಿ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಡಿ ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಪ್ಪಿಸಲು ಪೊಲೀಸರು ಮತ್ತು ಸ್ಥಳೀಯಾಡಳಿತ ಈ ಕ್ರಮದ ಮೊರೆ ಹೋಗುತ್ತದೆ.

ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಪ್ರತಿಭಟನಕಾರರು ರಂಗೋಲಿ ಕೆಳಗೆ ತೂರಿದರು ಎಂಬಂತೆ, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಸಿದರೂ ಆಪ್ ಲೈನ್ ಮೆಸೇಜಿಂಗ್ ಆ್ಯಪ್ ಗಳ ಮೂಲಕ ಇಂಟರ್ನೆಟ್ ಸೇವೆಗಳು ಲಭ್ಯವಿರದ ಭಾಗಗಳ ಜನರು ಪರಸ್ಪರ ಸಂವಹನ ಸಾಧಿಸುತ್ತಿದ್ದಾರೆ.

ಬ್ರಿಡ್ಜ್ ಫೈ ಹಾಗೂ ಫೈರ್ ಚಾಟ್ ಎಂಬೆರಡು ಇನ್ ಸ್ಟಂಟ್ ಮೆಸೇಜಿಂಗ್ ಆ್ಯಪ್ ಗಳ ಮೂಲಕ ನೀವು ಇಂಟರ್ನೆಟ್ ಇಲ್ಲದೆಯೂ ಸಹ ಪರಸ್ಪರ ಸಂವಹನ ಸಾಧಿಸಲು ಸಾಧ್ಯ. ಹೀಗಾಗಿ ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಈ ಎರಡು ಆ್ಯಪ್ ಗಳು ಭಾರೀ ಪ್ರಮಾಣದಲ್ಲಿ ಡೌನ್ ಲೋಡ್ ಆಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಯು.ಎಸ್. ಆ್ಯಪ್ ಇಂಟೆಲಿಜೆನ್ಸ್ ಸಂಸ್ಥೆಯಾಗಿರುವ ಆ್ಯಪ್ಟೋಪಿಯಾ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಡಿಸೆಂಬರ್ 12ರ ಬಳಿಕ ಭಾರತದಲ್ಲಿ ಬ್ರಿಡ್ಜ್ ಫೈ ಡೌನ್ ಲೋಡ್ ಸಂಖ್ಯೆ 80ರಷ್ಟು ಹೆಚ್ಚಾಗಿದೆ. ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿದ ಡಿಸೆಂಬರ್ 12ರಂದು ಈ ಆ್ಯಪ್ ನ ಡೌನ್ ಲೋಡ್ ಪ್ರಮಾಣ 2609ಕ್ಕೆ ಏರಿಕೆಯಾಗಿದ್ದು ಇದು ಪ್ರತೀದಿನದ ಡೌನ್ ಲೋಡ್ ಪ್ರಮಾಣಕ್ಕಿಂತ ಅಧಿಕವಾಗಿದೆ. ಹಾಗೆಯೇ ದೆಹಲಿ ಮತ್ತು ದೇಶದ ಇತರೇ ಭಾಗಗಳಲ್ಲಿಯೂ ಇಂಟರ್ನೆಟ್ ಸೇವೆಗಳು ಸ್ಥಗಿತಗೊಂಡಿದ್ದ ಸಂದರ್ಭದಲ್ಲೂ ಈ ಆ್ಯಪ್ ಗಳ ಡೌನ್ಲೋಡ್ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡಿತ್ತು.

ಹಾಗೆಯೇ ಫೈರ್ ಚಾಟ್ ಗಳ ಡೌನ್ಲೋಡ್ ಪ್ರಮಾಣದಲ್ಲೂ ಏರಿಕೆ ಕಂಡಿದೆ. ಇನ್ನು ಇವೆರಡು ಆ್ಯಪ್ ಗಳನ್ನು ಹೊರತುಪಡಿಸಿ ಸಿಗ್ನಲ್ ಆಫ್ ಲೈನ್ ನಂತಹ ಆ್ಯಪ್ ಗಳೂ ಸಹ ಇಂಟರ್ನೆಟ್ ಇಲ್ಲದ ಸಂದರ್ಭಗಳಲ್ಲಿ ಬಳಕೆಯಾಗುತ್ತವೆ.

ಗೂಗಲ್ ಹಾಗೂ ಆ್ಯಪಲ್ ಪ್ಲೇಸ್ಟೋರ್ ಗಳಲ್ಲಿ ಲಭ್ಯವಿರುವ ಬ್ರಿಡ್ಜ್ ಫೈ ಆ್ಯಪ್ ಮೂರು ವಿಧಗಳಲ್ಲಿ ಕಾರ್ಯನಿರ್ವಹಿಸುತ್ತದೆ. 330 ಅಡಿಗಳಷ್ಟು ದೂರದಲ್ಲಿರುವ ಮೊಬೈಲ್ ಬಳಕೆದಾರರು ಬ್ಲೂಟೂತ್ ಮೂಲಕ ಪರಸ್ಪರ ಸಂದೇಶಗಳನ್ನು ಕಳುಹಿಸಲು ಇದರಲ್ಲಿ ಸಾಧ್ಯವಾಗುತ್ತದೆ.

ಇನ್ನು ದೂರದಲ್ಲಿರುವ ಬಳಕೆದಾರರಿಗೆ ಸಂದೇಶಗಳನ್ನು ಈ ಆ್ಯಪ್ ಮೂಲಕ ಕಳುಹಿಸಬೇಕಾದಲ್ಲಿ ಮೆಶ್ ನೆಟ್ ವರ್ಕನ್ನು ಇದು ಬಳಸಿಕೊಳ್ಳುತ್ತದೆ. ಇದಕ್ಕೆ ಒಂದು ನಿರ್ಧಿಷ್ಟ ಪ್ರದೇಶದಲ್ಲಿ ಹಲವಾರು ಮೊಬೈಲ್ ಗಳು ಏಕಕಾಲದಲ್ಲಿ ಈ ಆ್ಯಪ್ ಅನ್ನು ಬಳಸುತ್ತಿರುವುದು ಅಗತ್ಯವಾಗಿರುತ್ತದೆ. ಈ ಆ್ಯಪ್ ಮೂಲಕ ಸಂದೇಶಗಳನ್ನು ಕಳುಹಿಸಲು ಇರುವ ಇನ್ನೊಂದು ವಿಧಾನವೆಂದರೆ ‘ಬ್ರಾಡ್ ಕಾಸ್ಟ್’. ಇದರಲ್ಲಿ ಬ್ರಿಡ್ಜ್ ಫೈ ಆ್ಯಪ್ ಬಳಸುತ್ತಿರುವವರಿಗೆಲ್ಲ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.