ಪ್ಲಾಸ್ಟಿಕ್‌ ತಿನ್ನುವ ಬ್ಯಾಕ್ಟಿರೀಯಾ ತಳಿಗಳನ್ನು ಪತ್ತೆ ಹಚ್ಚಿದ ಭಾರತೀಯ ವಿಜ್ಞಾನಿಗಳು


Team Udayavani, Oct 11, 2019, 5:10 PM IST

Plastic-Symbolic-01-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಇಡೀ ವಿಶ್ವವನ್ನೇ ಕಂಗೆಡಿಸಿರುವ ಪ್ಲಾಸ್ಟಿಕ್‌ ಎಂಬ ಆಧುನಿಕ ರಾಕ್ಷಸನ ನಿಯಂತ್ರಣ ಮತ್ತು ನಿರ್ಮೂಲನೆಗೆ ಜಗತ್ತಿನಾದ್ಯಂತ ವಿಭಿನ್ನ ಪ್ರಯತ್ನಗಳು ಹಾಗೂ ಅಭಿಯಾನಗಳು ನಡೆಯುತ್ತಲೇ ಇವೆ. ಇಷ್ಟೆಲ್ಲಾ ಆದರೂ ಪ್ಲಾಸ್ಟಿಕ್ ಸಮಸ್ಯೆಗೊಂದು ಮುಕ್ತಿಯೇ ಸಿಕ್ಕಿಲ್ಲ. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲೊಂದು ಶುಭ ಸಮಾಚಾರ ಸಿಕ್ಕಿದೆ.

ಪ್ಲಾಸ್ಟಿಕ್ ಎಂಬ ವಿಷಮಾರಿಯನ್ನುತಿಂದು ಜೀರ್ಣೀಸಿಕೊಳ್ಳಬಹುದಾಗಿರುವ ಎರಡು ಬ್ಯಾಕ್ಟಿರಿಯಾ ತಳಿಗಳು ಗ್ರೇಟರ್ ನೋಯ್ಡಾದ ಜೌಗು ನೆಲದಲ್ಲಿ ಪತ್ತೆಯಾಗಿದೆ. ಗ್ರೇಟರ್‌ ನೋಯಿಡಾದ ಶಿವ ನಾಡಾರ್‌ ವಿಶ್ವವಿದ್ಯಾಲಯದ ಜೀವ ವಿಜ್ಞಾನ ವಿಭಾಗದ ಸಂಶೋಧಕರ ತಂಡವೊಂದು ಈ ಬ್ಯಾಕ್ಟೀರಿಯಾ ತಳಿಗಳನ್ನು ಪತ್ತೆ ಮಾಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಒಂದು ಬಾರಿ ಬಳಸಿ ಎಸೆಯುವ ಪ್ಲಾಸ್ಟಿಕ ವಸ್ತುಗಳಲ್ಲಿರುವ ಪ್ರಮುಖ ಅಂಶವಾಗಿರುವ ಪಾಲಿಸ್ಟಿರೇನ್ ಅನ್ನು ವಿಭಜಿಸುವ ಸಾಮರ್ಥ್ಯವನ್ನು ಈ ಬ್ಯಾಕ್ಟೀರಿಯಾಗಳು ಹೊಂದಿವೆ ಎಂದು ವಿಜ್ಞಾನಿಗಳು ಪ್ರತಿಪಾದಿಸಿದ್ದಾರೆ. ವಿಶ್ವವಿದ್ಯಾನಿಲಯದ ಸಮೀಪದಲ್ಲೇ ಇರುವ ಜೌಗು ಪ್ರದೇಶದಲ್ಲಿ ಪತ್ತೆಯಾಗಿರುವ ಈ ಬ್ಯಾಕ್ಟೀರಿಯಾಗಳ ಎರಡು ತಳಿಗಳಿಗೆ ಇಲ್ಲಿನ ವಿಜ್ಞಾನಿಗಳು ಎಕ್ಸಿಗ್ಯೂಬ್ಯಾಕ್ಟೀರಿಯಂ ಸಿಬಿರಿಕಂ ಸ್ಟ್ರೈನ್ ಡಿ.ಆರ್.11 ಮತ್ತು ಎಕ್ಸಿಗ್ಯೂಬ್ಯಾಕ್ಟೀರಿಯಂ ಅನ್ ಡ್ಯಾ ಸ್ಟ್ರೈನ್ ಡಿ.ಆರ್.14 ಎಂದು ಹೆಸರನ್ನಿರಿಸಿದ್ದಾರೆ.

ಪಾಲಿಸ್ಟಿರೇನ್ ನಲ್ಲಿ ಅಣುಗಳ ತೂಕ ಹೆಚ್ಚಾಗಿರುವುದರಿಂದ ಮತ್ತು ದೀರ್ಘ ಪಾಲಿಮರ್ ಸಂರಚನೆಯನ್ನು ಇದು ಹೊಂದಿರುವುದರಿಂದ ಇದನ್ನು ವಿಭಜಿಸುವುದು ಅತೀ ಕಷ್ಟಸಾಧ್ಯವಾಗಿದೆ. ಹಾಗಾಗಿ ಪಾಲಿಸ್ಟಿರೇನ್ ಅಂಶ ಹೊಂದಿರುವ ಪ್ಲಾಸ್ಟಿಕ್ ಉತ್ಪನ್ನಗಳು ಅದೆಷ್ಟೋ ಸಮಯಗಳವರೆಗೆ ಮಣ್ಣಿನಲ್ಲಿ ಕರಗದೇ ಹಾಗೆಯೇ ಉಳಿದುಕೊಂಡಿರುತ್ತದೆ. ಈ ಎಲ್ಲಾ ಅಂಶಗಳನ್ನು ರಾಯಲ್ ಸೊಸೈಟಿ ಆಫ್ ಕೆಮೆಸ್ಟ್ರಿ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ.

ಪ್ರತೀ ವರ್ಷ 16.5 ಮಿಲಿಯನ್ ಟನ್ ಗಳಷ್ಟು ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುತ್ತಿರುವ ನಮ್ಮ ದೇಶದಲ್ಲಿ, ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿರ್ಮೂಲನೆಗೆ ಬಹುದೊಡ್ಡ ಸವಾಲಾಗಿರುವ ಈ ಪಾಲಿಸ್ಟಿರೇನ್ ಅನ್ನು ಕರಗಿಸಿಕೊಳ್ಳಬಲ್ಲ ಬ್ಯಾಕ್ಟೀರಿಯಾಗಳು ಪತ್ತೆಯಾಗಿರುವುದು ಪ್ಲಾಸ್ಟಿಕ್ ಮುಕ್ತ ದೇಶದ ಕನಸನ್ನು ಕಾಣುತ್ತಿರುವ ಭಾರತಕ್ಕೆ ಬಹುದೊಡ್ಡ ಲಾಭವೆಂದೇ ವಿಶ್ಲೇಷಿಸಲಾಗುತ್ತಿದೆ.

ಈ ಬ್ಯಾಕ್ಟೀರಿಯಾಗಳು ಹೀಗೆ ಕಾರ್ಯಾಚರಿಸುತ್ತವೆ:
– ಪ್ಲಾಸ್ಟಿಕ್‌ ನಲ್ಲಿನ ಇಂಗಾಲದ ಅಣುಗಳನ್ನು ಇವು ಬಳಸಿಕೊಳ್ಳುತ್ತವೆ.

– ಪಾಲಿಸ್ಟಿರೇನ್‌ ಪ್ಲಾಸ್ಟಿಕ್‌ ಅನ್ನು ಈ ಬ್ಯಾಕ್ಟೀರಿಯಾಗಳು ಸಂತಾನಾಭಿವೃದ್ಧಿಗೆ ಬಳಸಿಕೊಳ್ಳುತ್ತವೆ.

– ಪಾಲಿಸ್ಟಿರೇನ್ ಜೈವಿಕವಾಗಿ ಕರಗುವಂತೆ ಈ ಬ್ಯಾಕ್ಟೀರಿಯಾಗಳು ಮಾಡುತ್ತವೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.