ದೀಪಾವಳಿ: ಮಾರುಕಟ್ಟೆಗಳಲ್ಲಿ ಗೂಡುದೀಪಗಳ ಹವಾ!


Team Udayavani, Oct 26, 2019, 5:00 AM IST

2510SLKP4

ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಬಿರುಸು ಪಡೆದಿದೆ.

ಮನೆ-ಮನೆಗಳಲ್ಲಿ ಸಂಭ್ರಮ-ಸಡಗರದ ಹಬ್ಬ ಇದಾಗಿದ್ದು, ಈ ಹಿನ್ನೆಲೆಯಲ್ಲಿ ತಯಾರಿಗಾಗಿ ಅಗತ್ಯ ವಸ್ತುಗಳ ಖರೀದಿ ನಡೆಯುತ್ತಿದ್ದು, ಶಾಲಾ-ಕಾಲೇಜು ರಜೆ ಹಿನ್ನೆಲೆಯಲ್ಲಿ ಶುಕ್ರವಾರ ಮಾರುಕಟ್ಟೆಯಲ್ಲಿ ಜನರ ಓಡಾಟ ತುಸು ಹೆಚ್ಚಳ ಕಂಡಿತ್ತು.

ಗಮನ ಸೆಳೆದ ಗೂಡುದೀಪ
ಪಟಾಕಿ, ಗೂಡುದೀಪ, ಹೂವು, ಹಣ್ಣು, ಹಣತೆ, ವಸ್ತ್ರ ಖರೀದಿ ಹಿನ್ನೆಲೆಯಲ್ಲಿ ಮಾರುಕಟ್ಟೆ ಗ್ರಾಹಕರನ್ನು ಸೆಳೆಯಲು ಬಗೆ – ಬಗೆಯಲ್ಲಿ ಸಿದ್ಧವಾಗಿದೆ. ಗೂಡುದೀಪಗಳ ಮಾರಾಟ ನಗರದ ಅಲ್ಲಲ್ಲಿ ನಡೆಯುತ್ತಿದ್ದು, ಹೆಚ್ಚಿನ ಫ್ಯಾನ್ಸಿ ಅಂಗಡಿಗಳು ಗೂಡುದೀಪದಿಂದ ಅಲಕೃತಗೊಂಡು ಸ್ವಾಗತಿಸುತ್ತಿವೆ. 80 ರೂ.ಧಾರಣೆಯಿಂದ ತೊಡಗಿ 300 ರೂ. ತನಕದ ಗೂಡುದೀಪಗಳು ಮಾರಾಟ ಇದ್ದು, ಖರೀದಿ ಇನ್ನಷ್ಟೇ ಜಿಗಿತುಕೊಳ್ಳಬೇಕಿದೆ ಎನ್ನುತ್ತಾರೆ ವ್ಯಾಪಾರಿ ಅಖೀಲೇಶ್‌.

ಮಲ್ಲಿಗೆ ಅಟ್ಟೆಗೆ 1,200 ರೂ.
ಬಲೀಂದ್ರ, ಗೋಪೂಜೆ ಮೊದಲಾದಿ ನಡೆಯುವ ಕಾರಣ ಹೂವಿನ ಬೇಡಿಕೆ ಹೆಚ್ಚಿದ್ದು, ಧಾರಣೆ ಏರಿಕೆ ಕಂಡಿದೆ. ಮಲ್ಲಿಗೆ ಧಾರಣೆ ಅಟ್ಟೆಗೆ 1,200 ರೂ. ಇದ್ದು, ಶನಿವಾರದ ಬಳಿಕ ದರ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹೂವಿನ ವ್ಯಾಪಾರಿಗಳು. ಸೇವಂತಿ ಮಾರಿಗೆ 80 ರೂ., ತುಳಸಿ 50 ರೂ., ಸಣ್ಣ ಗುಲಾಬಿ ಮಾಲೆಗೆ 80 ರೂ. ಇದೆ.

ಹಣತೆ ದೀಪ
ಈ ಬಾರಿ ಹಣತೆ ದೀಪಕ್ಕೂ ಬೇಡಿಕೆ ಇದೆ. ಮಣ್ಣಿನ ಹಣತೆ ಜತೆಗೆ ವಿವಿಧ ಮಾದರಿಯ ದೀಪಗಳು ಮಾರುಕಟ್ಟೆ ಪ್ರವೇಶಿಸಿದೆ. ಪರಿಸರ ಸ್ನೇಹಿ ಪರಿಕರ ಬಳಸಿ ಸಾಂಪ್ರದಾಯಿಕ ಶೈಲಿಯಲ್ಲಿ ದೀಪ ಬೆಳಗಿಸುವ ಪ್ರಯತ್ನ ಪ್ರಾರಂಭಗೊಂಡಿದ್ದು, ಹಣತೆ ದೀಪಕ್ಕೆ ಬೇಡಿಕೆ ಇರಬಹುದು ಎಂದು ವ್ಯಾಪಾರಿಗಳು ನಿರೀಕ್ಷೆ ವ್ಯಕ್ತಪಡಿಸುತ್ತಾರೆ.

ಹೊಸ ಬಟ್ಟೆ ಖರೀದಿ
ಹೊಸ ಬಟ್ಟೆ ಖರೀದಿಗೆ ಜವುಳಿ ಮಳಿಗೆಗಳು ಬಗೆ-ಬಗೆಯ ಆಫರ್‌ ನೀಡಿದ ಹಿನ್ನೆಲೆಯಲ್ಲಿ ಗ್ರಾಹಕರು ಬಟ್ಟೆ ಅಂಗಡಿಗಳಿಗೆ ಭೇಟಿ ನೀಡುತ್ತಿದ್ದಾರೆ. ಗೃಹೋಪಯೋಗಿ ವಸ್ತುಗಳ ಮಳಿಗೆಗಳು ಆಫರ್‌ ಮೂಲಕ ಖರೀದಿಗೆ ಒತ್ತು ನೀಡಿದ್ದು, ಮಳಿಗೆಗಳಲ್ಲಿ ಜನರ ಭೇಟಿ ಕೊಂಚ ಹೆಚ್ಚಿದೆ.

ಪಟಾಕಿ
ದೀಪಾವಳಿಗೆ ಬಣ್ಣ ತುಂಬುವ ಪಟಾಕಿ ಖರೀದಿ ಬಿರುಸಾಗಿದೆ. ಉಳಿದ ಎಲ್ಲ ವಸ್ತುಗಳ ಖರೀದಿಗಿಂತ ಪಟಾಕಿಗೆ ಬೇಡಿಕೆ ಹೆಚ್ಚಾಗಿದೆ. ನಗರ ಹಾಗೂ ಹೊರವಲಯ ಅಲ್ಲಲ್ಲಿ ಪಟಾಕಿ ಅಂಗಡಿಗಳು ತಲೆ ಎತ್ತಿದ್ದು, ಶನಿವಾರದಿಂದ ಮಾರಾಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.