ಬಲೀಂದ್ರನೊಂದಿಗೆ ಗೋಪೂಜೆ


Team Udayavani, Nov 14, 2020, 11:05 AM IST

cow-pooja

ಕಾಪು : ತುಳುವರ ಕೃಷಿ ಪ್ರಧಾನವಾದ ಜೀವನ ಪದ್ಧತಿಯಲ್ಲಿ ದೀಪಾವಳಿ ನಿಜ ಅರ್ಥದ ಹಬ್ಬ ಅಥವಾ ಪರ್ಬ. ಕೃಷಿ – ಪಶು – ಧಾನ್ಯ ಅತಿಶಯ ಆಶಯದ ಸೊಡರ ಹಬ್ಬ. ದೀಪಾವಳಿ ಹಬ್ಬಕ್ಕೂ ಪ್ರಕೃತಿಗೂ ಅವಿನಾಭಾವವಾದ ಸಂಬಂಧವಿದೆ. ಪ್ರಕೃತಿಗೂ ಗೋವಿಗೂ ನಿಕಟ ಸಮಪರ್ಕವಿದೆ. ಈ ಕಾರಣದಿಂದಾಗಿ ದೀಪಾವಳಿಯ ಪಾಡ್ಯದಂದು ನಡೆಸುವ ಗೋಪೂಜೆ ಅತ್ಯಂತ ವಿಶೇಷ ಮಹತ್ವವನ್ನು ಪಡೆಯುತ್ತದೆ.

“ಸರ್ವೆà ದೇವಾಃ ಸ್ಥಿತಾ ದೇಹೇ’ ಎಂಬಂತೆ ಗೋವಿನ ದೇಹದಲ್ಲಿ ಸರ್ವ ದೇವಾನು ದೇವತೆಗಳು ಸನ್ನಿಹಿತರಾಗಿದ್ದಾರೆ ಎಂದು ಭಾವಿಸುತ್ತದೆ ನಮ್ಮ ದೇಶದ ಸಂಸ್ಕೃತಿ. ದೀಪಾವಳಿಯ ಪಾಡ್ಯದಂದು ಬೆಳಗ್ಗೆ ಗೋಪೂಜೆ ಎಂದೇ ವಿಶೇಷ ಪೂಜೆ ಮಾಡುವುದು ಸಂಪ್ರದಾಯ. ಮನೆ ದೇವರ ಪೂಜೆ ಮುಗಿಸಿದ ಬಳಿಕ ಸ್ನಾನ ಮಾಡಿಸಿ ಹೂಮಾಲೆ ಹಾಕಿ, ಮೈಮೇಲೆ ಜೇಡಿಮಣ್ಣಿನ ಮುದ್ರೆಗಳನ್ನು ಇರಿಸಿ ಶೃಂಗರಿಸಿ ತಿನ್ನಲು ಗೋಗ್ರಾಸವಿಟ್ಟು ಪೂಜೆ ಮಾಡುವುದು ರೂಢಿಯಲ್ಲಿದೆ. ಇದು ಒಂದು ವಿಧಾನದ ಗೋಪೂಜೆ. ಈಗ ಇದೇ ಕ್ರಮದ ಪೂಜೆಯನ್ನು ನಾವು ಸರ್ವತ್ರ ಕಾಣುತ್ತಿದ್ದೇವೆ.

ಕೃಷಿ ಸಹಾಯಿ ಪ್ರಾಣಿಗಳಲ್ಲಿ ದನವೂ ಬರುತ್ತದೆ, ಅದೂ ಹಟ್ಟಿಯಲ್ಲೇ ಇರುತ್ತದೆ. ದೀಪಾವಳಿಗೆ ಮಾಡಿದ ವಿಶೇಷ ಗಟ್ಟಿ ಮುಂತಾದ ತಿಂಡಿಗಳನ್ನು ಇರಿಸಿ ಅವುಗಳು ತಿನ್ನುತ್ತಿರುವಾಗದ ಸಂತೃಪ್ತ ಭಾವದ ವೇಳೆ ಹಟ್ಟಿ ತುಂಬ ಸೊಡರ ತೋರಿಸಿ ಬಲೀಂದ್ರನ ಕರೆದು ಪೊಲಿ ಯಾಚಿಸುವುದೇ ನಮ್ಮ ತುಳುನಾಡಿನ ಪೂರ್ವ ಪರಂಪರೆಯ ಗೋಪೂಜೆ. ಹಟ್ಟಿಯಲ್ಲಿ ದನ, ಕರು, ಎತ್ತು, ಕೋಣ , ಎಮ್ಮೆ ಎಲ್ಲವೂ ಇರುತ್ತವೆ. ಅವುಗಳೆಲ್ಲವೂ ನಮಗೆ ಜೀವಾನಾಧಾರ, ಕೃಷಿ ಸಹಾಯಿ. ತುಳುವರ ಗೋಪೂಜೆ ಹೀಗೆ ವೈಚಾರಿಕ ವೈಶಾಲ್ಯತೆಯನ್ನು ಪಡೆದಿದೆ. ಧಾನ್ಯವೇ ನಮಗೆ ‘ಧನ ಸಂಪತ್ತು’ ಆದುದರಿಂದ ಪ್ರತ್ಯೇಕ ‘ಧನಲಕ್ಷ್ಮೀ ಪೂಜೆ’ ಎಂದಿಲ್ಲ . ಗೋಪೂಜೆಯೊಂದಿಗೆ ಇದು ಕೂಡಾ ನಡೆಯುತ್ತದೆ.

ನಿರೂಪಣೆ : ರಾಕೇಶ್‌ ಕುಂಜೂರು
ಲೇಖನ : ಕೆ.ಎಲ್‌. ಕುಂಡಂತಾಯ, ಜಾನಪದ ವಿದ್ವಾಂಸರು

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.