ಪರಿಸರ ಸ್ನೇಹಿಯಾಗಿರಲಿ ದೀಪಾವಳಿ


Team Udayavani, Oct 26, 2019, 3:32 AM IST

a-65

ಮಹಾನಗರ: ದೀಪಗಳ ಹಬ್ಬ ದೀಪಾವಳಿಗೆ ದಿನಗಣನೆ ಶುರುವಾಗಿದೆ. ಅದರಂತೆಯೇ ಪಟಾಕಿ ಅಂಗಡಿಗಳಲ್ಲಿ ಪ್ರತೀ ವರ್ಷದಂತೆ ಈಗಾಗಲೇ ಬಿರುಸಿನ ಖರೀದಿ ಆರಂಭಗೊಂಡಿದೆ.

ನಗರದ ಅಲ್ಲಲ್ಲಿ ಪಟಾಕಿ ಸ್ಟಾಲ್‌ಗ‌ಳನ್ನು ತೆರೆಯಲಾಗಿದ್ದು, ಬೆಳಗ್ಗೆಯಿಂದಲೇ ಜನ ಪಟಾಕಿ ಖರೀದಿಸುವುದರಲ್ಲಿ ತೊಡಗಿದ್ದಾರೆ. ಆಕಾಶದೆತ್ತರಕ್ಕೆ ಹಾರಿ ಚಿತ್ತಾರವನ್ನು ಮೂಡಿಸುವಂತಹ ಪಟಾಕಿಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೇ ತುಳಸೀಕಟ್ಟೆ, ರಾಕೆಟ್‌ ಮುಂತಾದ ಹೆಚ್ಚು ಶಬ್ದವನ್ನು ಮಾಡದ ಪಟಾಕಿಗಳತ್ತ ಜನರ ಒಲವು ಹರಿದಿದೆ.

ಚೀನ ವಸ್ತುಗಳಿಗೆ ಬಹಿಷ್ಕಾರ ಹಿನ್ನೆಲೆ ಯಲ್ಲಿ ನಗರದ ಕೆಲವು ಪಟಾಕಿ ವ್ಯಾಪಾರ ಮಳಿಗೆಗಳಲ್ಲಿ ವ್ಯಾಪಾರ ಕುಸಿದಿದೆ. ಇನ್ನು ಕೆಲವು ಮಳಿಗೆಗಳ ಮಾಲಕರು ಚೀನ ಪಟಾಕಿ ಮಾರುವುದಿಲ್ಲ ಎಂದಿದ್ದಾರೆ. ಜನರೂ ಚೀನ ಪಟಾಕಿಗಳನ್ನು ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನುತ್ತಾರೆ ಕೆಲವು ವ್ಯಾಪಾರಸ್ಥರು. ಆದಾಗ್ಯೂ ನಗರದ ಕೆಲವು ಪ್ರಖ್ಯಾತ ಮಳಿಗೆಗಳಲ್ಲಿ ಎಲ್ಲ ರೀತಿಯ ಪಟಾಕಿಗಳಿಗೂ ಈ ಹಿಂದಿನಂತೆಯೇ ಬೇಡಿಕೆ ಇದೆ.

ಪಟಾಕಿ ವ್ಯಾಪಾರ ಕಡಿಮೆ
ಕೆಲವು ವರ್ಷಗಳಿಗೆ ಹೋಲಿಕೆ ಮಾಡಿದರೆ ನಗರದಲ್ಲಿ ಪಟಾಕಿ ವ್ಯಾಪಾರ ಕಡಿಮೆಯಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ಪ್ರಕಾರ ಶಬ್ದ ಮಾಡುವ ಪಟಾಕಿ ಖರೀದಿಯಲ್ಲಿ ಶೇ. 30ರಷ್ಟು ಇಳಿಕೆಯಾಗಿದೆ. ನೆಲಚಕ್ರ, ಸುರ್‌ಸುರ್‌ ಬತ್ತಿ ಸಹಿತ ಅತೀ ಹೆಚ್ಚು ಶಬ್ದ ಮಾಡದ ಪಟಾಕಿ ಖರೀದಿಯಲ್ಲಿ ಗ್ರಾಹಕರು ತೊಡಗಿದ್ದಾರೆ.

ಅಗತ್ಯ ಕ್ರಮ ಕೈಗೊಳ್ಳಲಾಗಿದೆ
ವೆನಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ಅವರು “ಸುದಿನ’ಕ್ಕೆ ಪ್ರತಿಕ್ರಿಯಿಸಿ “ಒಂದೆಡೆ ಮಳೆ ಸುರಿಯುತ್ತಿದ್ದು, ಮತ್ತೂಂದೆಡೆ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವೆನಲಾಕ್ ಆಸ್ಪತ್ರೆಯ ಎಲ್ಲ ಸಿಬಂದಿ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. ಇನ್ನು, ವೆನಲಾಕ್ ಆಸ್ಪತ್ರೆಯಲ್ಲಿ ಸುಟ್ಟಗಾಯಕ್ಕೆಂದು ಸ್ಪೆಷಲ್‌ ವಾರ್ಡ್‌ ಇದ್ದು, 9 ಬೆಡ್‌ಗಳಿವೆ. ವಿಶೇಷ ತಜ್ಞರು, ಅಗತ್ಯ ವೈದ್ಯಕೀಯ ಸಲಕರಣೆಗಳು ತಯಾರಿದೆ’ ಎನ್ನುತ್ತಾರೆ. ಇನ್ನು ನಗರದ ಇತರೇ ಖಾಸಗಿ ಕಣ್ಣಿನ ಆಸ್ಪತ್ರೆಗಳು ಕೂಡ ತುರ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಿದೆ.

ಪಟಾಕಿ ಸಿಡಿಸುವ ಮುನ್ನ ಇರಲಿ ಎಚ್ಚರ
 ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ಹಚ್ಚಬೇಡಿ
 ಪಟಾಕಿ ಹಚ್ಚುವಾಗ ಜಾಗರೂಕರಾಗಿರಿ
 ಅಪಾಯ ರಹಿತ ಪರಿಸರ ಸ್ನೇಹಿ ಪಟಾಕಿಗಳನ್ನು ಬಳಸಿ
ಒಂಟಿಯಾಗಿ ಮಕ್ಕಳ ಕೈಯಲ್ಲಿ ಪಟಾಕಿ ಹಚ್ಚಲು ಹೆತ್ತವರು ಬಿಡಬೇಡಿ
 ಅರೆಬರೆ ಸುಟ್ಟ ಪಟಾಕಿಗಳನ್ನು ಕೈಯಲ್ಲಿ ಮುಟ್ಟಲು ಹೋಗಬೇಡಿ
 ಬಯಲು ಪ್ರದೇಶದಲ್ಲಿ ಪಟಾಕಿ ಹಚ್ಚಿ
ಪಟಾಕಿಗೆ ಬೆಂಕಿ ಹಚ್ಚುವಾಗ ಉದ್ದ ಊದು ಬತ್ತಿಯನ್ನು ಬಳಸಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.