Virat Kohli: ಕೊಹ್ಲಿ ಎಂಬ ಕ್ರಿಕೆಟ್‌ ದಂತಕಥೆ


Team Udayavani, Nov 13, 2023, 8:02 AM IST

Virat Kohli: ಕೊಹ್ಲಿ ಎಂಬ ಕ್ರಿಕೆಟ್‌ ದಂತಕಥೆ

2014 ರ ಇಂಗ್ಲೆಂಡ್‌ ಪ್ರವಾಸದ ವೈಫ‌ಲ್ಯದ ನಂತರ ನನ್ನ ಬ್ಯಾಟಿಂಗ್‌ನ ಬಗ್ಗೆ ಅನೇಕರು ಟೀಕೆ ಮಾಡಲಾರಂಭಿಸಿ­ದರು. ಉಳಿದೆಲ್ಲ ಏಷ್ಯನ್‌ ಆಟಗಾರರಿಗಿಂತ ಈತ ತೀರ ಭಿನ್ನವೇನಲ್ಲ. ಉಪಖಂಡದ ಒಳಗೆ ಮಾತ್ರ ಇವರೆಲ್ಲ ಹುಲಿಗಳು, ಹೊರಗೆ ಬಿದ್ದರೆ ಇಲಿಗಳಷ್ಟೇ ಎಂಬ ಧಾಟಿಯ ಮಾತುಗಳು ನನಗೆ ಕಿರಿಕಿರಿಯುಂಟು ಮಾಡಿದ್ದವು. ಅದಾಗಲೇ ಆಸ್ಟ್ರೇಲಿಯಾದ ಪ್ರವಾಸ ಕಣ್ಣೆದುರಿಗಿತ್ತು. ಸರಿಯಾದ ಪೂರ್ವತಯಾರಿ ಇಲ್ಲದೇ ಆಸ್ಟ್ರೇಲಿಯಾಕ್ಕೆ ಹೋದರೆ ನನ್ನ ಕತೆ ಮುಗಿದಂತೆಯೇ ಲೆಕ್ಕ ಎಂಬುದು ನನಗೆ ಅರ್ಥವಾಗಿ ಹೋಗಿತ್ತು. ಆಸ್ಟ್ರೇಲಿಯಾದ ಅಂಗಳಗಳು ಇಂಗ್ಲೆಂಡ್‌ ಪಿಚ್‌ಳಿಗಿಂತ ಹೆಚ್ಚು ಪುಟಿಯುವ ಪಿಚ್‌ಗಳು.

ಹಾಗಾಗಿ ಆಸಿಸ್‌ ತಂಡವನ್ನು ಎದುರಿಸಲು ಬೇಕಾದ ಎಲ್ಲಾ ತಯಾರಿಗೆ ನಾನು ಮಾನಸಿಕವಾಗಿ ಸಿದ್ಧನಾಗಿದ್ದೆ. ಸಚಿನ್‌ರಿಂದ ಕೆಲವು ಸಲಹೆ ಸೂಚನೆಗಳನ್ನು ಪಡೆದುಕೊಂಡು, ದಿನ ಬೆಳಿಗ್ಗೆಯೆದ್ದು ಸತತವಾಗಿ ಬ್ಯಾಟು ಬೀಸುತ್ತಿದ್ದೆ. ಕಠಿಣ ಪರಿಶ್ರಮವಿಲ್ಲದೇ ರಣರಂಗ ಗೆಲ್ಲುವುದು ಕಷ್ಟವಿದೆ ಎಂಬುದು ತಿಳಿದಿತ್ತು. ಸತತವಾಗಿ ಮೂರ್ನಾಲ್ಕು ಗಂಟೆಗಳ ಕಾಲ ಪ್ರಾಕ್ಟಿಸು ಮಾಡಿ ಎಷ್ಟೋ ಬಾರಿ ಮಾಂಸ ಖಂಡಗಳ ಸೆಳೆತಕ್ಕೂ ಒಳಗಾಗಿದ್ದಿದೆ. ಅದರ ಫ‌ಲವಾಗಿ ಮುಂದೆ ಆಸಿಸ್‌ ಪ್ರವಾಸದಲ್ಲಿ ನಾನು ಸಾಕಷ್ಟು ರನ್ನುಗಳನ್ನು ಗಳಿಸಿದ್ದು, ನನ್ನಲ್ಲಿ ಹೊಸ ಆತ್ಮವಿಶ್ವಾಸ ಚಿಗುರಿಸಿತ್ತು. ದೇಶದ ಹೊರಗೆ ವೇಗದ ಬೌಲರ್‌ಗಳನ್ನು ಎದುರಿಸುವ ಬಗೆ ನನಗರ್ಥವಾಗಿತ್ತು.

ನಿಜ ಹೇಳಬೇಕೆಂದರೆ, ನಾನು ಸ್ವಾಭಾವಿಕ ಪ್ರತಿಭಾನ್ವಿತ ಆಟಗಾರನಲ್ಲ. ಹಾಗಾಗಿ ಪ್ರತಿನಿತ್ಯ ನಾನು ನೆಟ್‌ ಪ್ರಾಕ್ಟಿಸ್‌ ಮಾಡುತ್ತೇನೆ. ಮ್ಯಾಚ್‌ ಇಲ್ಲದಿದ್ದರೆ ಬೆಳಿಗ್ಗೆ ಮತ್ತು ಸಂಜೆ ನಾಲ್ಕು ಗಂಟೆಗಳ ಕಾಲ ಜಿಮ್‌ನಲ್ಲಿ ಕಸರತ್ತು, ಪಂದ್ಯವಿರುವ ದಿನ ಒಂದೂವರೆ ಗಂಟೆಗಳ ಕಾಲದ ಕಸರತ್ತನ್ನು ಖಡ್ಡಾಯವಾಗಿಸಿ­ಕೊಂಡಿದ್ದೇನೆ. ಆಹಾರ ಪದ್ದತಿಯೂ ಅಷ್ಟೇ, ಪ್ರೋಟಿನ್‌ ರಿಚ್‌ ಆಹಾರ ಕ್ರಮ ನನ್ನದು. ಜಂಕ್‌ ಫ‌ುಡ್‌ ತಿನ್ನದೇ ದಶಕಗ­ ಳಾಗಿ­ರಬಹುದೇನೋ. ತಿನ್ನಬೇಕು ಎನ್ನಿಸುವು­ದಿಲ್ಲವಾ ಎಂದರೆ, ಖಂಡಿತ­ವಾಗಿಯೂ ಅನ್ನಿಸುತ್ತದೆ. ಆದರೆ ನನ್ನ ವೃತ್ತಿ ಜೀವನದೆದುರು ಇನ್ಯಾವುದೂ ನನಗೆ ಮುಖ್ಯವಲ್ಲ. ವೃತ್ತಿಜೀವನ ಮುಗಿದ ನಂತರ ತಿನ್ನುವುದು ಇದ್ದೇ ಇದೆ. ಅಲ್ಲಿಯವರೆಗೂ ನನ್ನ ಕರಿಯರ್‌ ನನ್ನ ಪ್ರಾಮುಖ್ಯತೆ..’

ವಿರಾಟ್‌ ಕೊಹ್ಲಿ ಹಿಂದೊಮ್ಮೆ ನುಡಿದ ಮಾತುಗಳು. ಆತನ ಗೆಲುವಿನ ಹಿಂದೆ, ಆತ ಇಂದು ನಿಂತಿರುವ ಔನ್ನತ್ಯದ ಹಿಂದೆ ಇರಬಹುದಾದ ಪರಿಶ್ರಮದ ಚಿತ್ರಣ.

“ಬಹುಶಃ ಹೊಸ ತಲೆಮಾರಿನ ಆಟಗಾರರ ಪೈಕಿ ನಾ ಕಂಡ ಅತ್ಯಂತ ಪರಿಶ್ರಮಿ ಬ್ಯಾಟ್ಸಮನ್‌ ಎಂದರೆ ವಿರಾಟ್‌ ಕೊಹ್ಲಿ. ಅದೊಮ್ಮೆ ಅವನುಳಿದುಕೊಂಡಿದ್ದ ಹೊಟೇಲ್ಲೊಂದರಲ್ಲಿ ನಾನು, ವಸೀಂ ಭಾಯ್‌ ಉಳಿದುಕೊಂಡಿದ್ದೆವು. ಅದು ಗೊತ್ತಾದ ತಕ್ಷಣವೇ, ಆತ ನಮ್ಮ ಬಳಿ ಸಲಹೆ ಪಡೆದುಕೊಳ್ಳುವುದಕ್ಕೆ ಬಂದಿದ್ದ. ನಮಗೆ ನಿಜಕ್ಕೂ ಖುಷಿಯಾಗಿತ್ತು. ಒಂದೆರಡು ಶತಕಗಳನ್ನು ಬಾರಿಸಿದ ಮರುಕ್ಷಣವೇ ಲೆಜೆಂಡುಗಳಂತೆ ವರ್ತಿಸುವ ಹುಡುಗರಿಗಿಂತ ವಿರಾಟ್‌ ತೀರ ವಿಭಿನ್ನವಾಗಿ ನಿಲ್ಲುತ್ತಾನೆ. ಆಟದ ಬಗೆಗಿನ ಅವನ ಆ ಸಮರ್ಪಣಾ ಭಾವವೇ ಅವನನ್ನು ಗೆಲ್ಲಿಸುತ್ತಿರುವುದು’ ಎನ್ನುತ್ತ ಇದೇ ವಿರಾಟ್‌ನನ್ನು ಹೊಗಳಿದ್ದು ಪಾಕಿಸ್ತಾನದ ಸ್ಪಿನ್‌ ದಂತಕತೆ ಸಕ್ಲೇನ್‌ ಮುಶಾ¤ಕ್‌.

ಇಂದು ವಿರಾಟ್‌ ಏರಿ ನಿಂತ ಎತ್ತರವನ್ನು ನಾವೆಲ್ಲರೂ ಬೆರಗುಗಣ್ಣು­ಗಳಿಂದ ನೋಡು­ತ್ತೇವೆ. ಆತನದ್ದು ಅದೃಷ್ಟದ ಎಂದುಬಿಡುತ್ತೇವೆ. ಆದರೆ ಜಯದ ಬೆಟ್ಟವೇರುವ ಮುನ್ನ ಬೆಟ್ಟದಷ್ಟು ಪರಿಶ್ರಮ ಆತನ ಬೆನ್ನಿಗಿದೆ ಎಂಬುದನ್ನು ಮರೆತು­ಬಿಡುತ್ತೇವೆ. ವಿಶ್ವಕಪ್‌ನಲ್ಲಿ ದಾಖಲೆಗಳ ಸರಮಾಲೆ ಬರೆಯುತ್ತಿರುವ ಕಿಂಗ್‌ ಕೋಹ್ಲಿಯ ಬಗ್ಗೆ ಹೀಗೆ ನಾಲ್ಕು ಸಾಲು ಬರೆಯ­ಬೇಕು ಅನ್ನಿಸಿತು ನೋಡಿ ಹಬ್ಬದ ಈ ಹೊತ್ತಿಗೆ.

-ಗುರುರಾಜ ಕೊಡ್ಕಣಿ, ಯಲ್ಲಾಪುರ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.