ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ
Team Udayavani, Oct 5, 2022, 4:14 PM IST
ಮೈಸೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಜಂಬೂ ಸವಾರಿ ಅರಮನೆ ಆವರಣದಲ್ಲಿ ಆರಂಭವಾಗಿದೆ. ಕಲಾ ತಂಡಗಳಿಂದ ಕೂಡಿದ್ದ ಮೆರವಣಿಗೆಯನ್ನು ಮಾಜಿ ಕ್ಯಾಪ್ಟನ್ ಅರ್ಜುನ ಮುನ್ನಡೆಸಿದ್ದಾನೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಳು ನಿಮಿಷ ಮುಂಚೆಯೇ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿರು. ಕುಟುಂಬ ವರ್ಗದವರ ಸಮೇತ ಆಗಮಿಸಿ, ಪೂಜೆ ಸಲ್ಲಿಸಿದರು. 3.62ಕ್ಕೆ ನಿಶಾನೆ ಆನೆಯಾದ ಅರ್ಜುನನು ಮೊದಲ ಹೆಜ್ಜೆ ಇಟ್ಟು, ಸೊಂಡಿಲೆತ್ತಿ ನಮಸ್ಕರಿಸಿ, ಜಂಬೂ ಸವಾರಿ ಮುನ್ನಡೆಸಿದ. ಬಲರಾಮ ದ್ವಾರದಿಂದ ನಿಶಾನೆ ಆನೆಯಾಗಿ ಅರ್ಜುನ ಅರಮನೆಯಿಂದ ಆಚೆ ಬರುತ್ತಿದ್ದಂತೆ ಲಕ್ಷಾಂತರ ಮಂದಿ ಜೋರು, ಶಿಳ್ಳೆ, ಜೈಕಾರ ಕೂಗಿ ಸ್ವಾಗತಿಸಿದರು.
ಜಂಬೂ ಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು, ದೂರದ ಊರುಗಳಿಂದ, ದೇಶ, ವಿದೇಶಗಳಿಂದ ಲಕ್ಷಾಂತರ ಮಂದಿ ಬೆಳಗ್ಗೆ ಹತ್ತುಗಂಟೆಯಿಂದಲೇ ಬಿಸಿಲನ್ನೂ ಲೆಕ್ಕಿಸದೇ ಜಂಬೂಸವಾರಿ ವೀಕ್ಷಣೆಗೆ ಕಾಯ್ದು ಕುಳಿತಿದ್ದರು.
ಅಭಿಮನ್ಯು ಜತೆಗೆ 13 ಆನೆಗಳು, ಅಶ್ವರೋಹಿಪಡೆಗಳು, ಆನೆಗಾಡಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಇದರ ಜತೆಗೆ ಮೆರವಣಿಗೆಯಲ್ಲಿ 31 ಜಿಪಂ, ರಾಜ್ಯಮಟ್ಟದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು, ಸ್ತಬ್ಧಚಿತ್ರ ಉಪಸಮಿತಿ ಸೇರಿ 43 ಸ್ತಬ್ಧಚಿತ್ರಗಳು ಸೇರಿ 100ಕ್ಕೂ ಜಾನಪದ ತಂಡಗಳು ಭಾಗವಹಿಸಲಿವೆ.
ಕಟ್ಟಡ, ಮರ ಹತ್ತಿ ವೀಕ್ಷಿಸಿದ ಜನ: ಜಂಬೂ ಸವಾರಿ ಸಾಗುವ ರಾಜ ಮಾರ್ಗದುದ್ದಕ್ಕೂ ರಸ್ತೆ ಇಕ್ಕೆಲಗಳಲ್ಲಿನ ಮರ ಹಾಗೂ ಕಟ್ಟಡ ಏರಿ ಮೆರವಣಿಗೆ ವೀಕ್ಷಿಸಿದರು. ಕೆ.ಆರ್. ಸರ್ಕಲ್ ಬಳಿಯ ಲ್ಯಾನ್ಸ್ ಡೌನ್ ಕಟ್ಟಡ ಹಾಗೂ ದೇವರಾಜ ಮಾರುಕಟ್ಟೆ ಕಟ್ಟಡದ ಮೇಲೆ ಸಾವಿರಾರು ಮಂದಿ ಕಟ್ಟಡ ಕುಸಿದು ಬೀಳುವ ಅಪಾಯವನ್ನು ಲೆಕ್ಕಿಸದೇ ಹತ್ತಿನಿಂತಿದ್ದ ದೃಶ್ಯ ಕಂಡು ಬಂದಿತು.
ದಿಕ್ಕೆಟ್ಟು ಓಡಿದ ನಾಯಿಗಳು: ಮೆರವಣಿಗೆ ಹಿನ್ನೆಲೆಯಲ್ಲಿ ರಸ್ತೆ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಹಾಕಿದ್ದರಿಂದ ರಸ್ತೆ ಮಧ್ಯ ಸಿಲುಕಿದ ನಾಲ್ಕಾರು ನಾಯಿಗಳು ಅತ್ತಿದ್ದಿಂತ ಮೆರವಣಿಗೆ ಮಧ್ಯ ಭೀತಿಯಿಂದ ಓಡಾಡಿದ ದೃಶ್ಯ ಕಂಡುಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್