ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಅಪ್ಪುಮಯವಾದ ಯುವ ದಸರಾ....

Team Udayavani, Sep 28, 2022, 10:03 PM IST

1-ssdsaa

ಮೈಸೂರು: ವಿಶ್ವವಿಖ್ಯಾತ ಹಬ್ಬ ಎಂದೇ ಪ್ರಸಿದ್ಧಿ ಪಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಸಮಾರಂಭವನ್ನು ಅಪ್ಪು ನಮನದ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ದೀಪವನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ರಾಘವೇಂದ್ರ ರಾಜ್ ಕುಮಾರ್ ಅವರು ಮಾತನಾಡಿ, ಅಂದು ಅಪ್ಪುವನ್ನು ಪ್ರೀತಿಸುತ್ತಿದ್ದಿರಿ. ಇಂದು ಪೂಜಿಸುತ್ತಿದ್ದಿರಾ. ಹೀಗಾಗಿ ಇಂದು ಅಪ್ಪುವನ್ನು ಎಲ್ಲರಲ್ಲೂ ನೋಡಲಾಗುತ್ತಿದೆ ಎಂದು ಹೇಳಿದರು.

ಶಾಸಕ ಎಲ್.ನಾಗೇಂದ್ರ ಅವರು ಮಾತನಾಡಿ, ಕನ್ನಡ, ಕನ್ನಡಿಗರು, ಸೂರ್ಯ ಹಾಗೂ ಚಂದ್ರ ಇರುವವರೆಗೂ ಅಪ್ಪು ಅಜರಾಮರರಾಗಿರುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅದರಂತೆ ದಸರಾ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.

ಅಭಿಮಾನಿಗಳನ್ನು ದೇವರು ಅಂದವರು ಅಪ್ಪು. ಆದರೆ ಇಂದು ಅವರೆ ಅಭಿಮಾನಿಗಳಿಗೆ ದೇವರಾಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳುವುದರ ಜೊತೆಗೆ ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜಕುಮಾರ, ದಯವಿಟ್ಟು ಗಮನಿಸಿ ಚಿತ್ರದ ಮರೆತು ಹೋದೆನು…. ಹಾಡನ್ನು ಹಾಗೂ ಟಗರು ಚಿತ್ರದ ಡೈಲಾಗ್ ಹೊಡೆಯುವ ಮೂಲಕ ನಟ ವಶಿಷ್ಠ ಸಿಂಹ ಅಭಿಮಾನಿಗಳನ್ನು ರಂಜಿಸಿದರು.

ಗಾಯಕಿ ಅನುರಾಧ ಭಟ್ ಅವರು ಡಾ.ಪುನೀತ್ ರಾಜ್ ಕುಮಾರ್ ಹಾಗೂ ರಮ್ಯ ನಟನೆಯ ಆಕಾಶ್ ಚಿತ್ರದ ಆಹಾ ಎಂತ ಆಕ್ಷಣ ನೆನೆದರೆ ತಲ್ಲಣ ಎಂಬ ಹಾಡನ್ನು ಹಾಡಿದರು. ನಂತರ ಗುರುಕಿರಣ್ ಅವರು ಮೈಲಾರಿ ಚಿತ್ರದ ಮೈಲಾಪುರದ ಮೈಲಾರಿ ಹಾಗೂ ಅಪ್ಪು ಚಿತ್ರದ ತಾಲಿಬಾನ್ ಅಲ್ಲಾ ಅಲ್ಲಾ…. ಬಿನ್ ಲಾಡೆನ್ ಅಲ್ವೆ ಅಲ್ಲ ಹಾಗೂ ಅಭಿ ಚಿತ್ರದ ಮಾಮಾ ಮಜಾ ಮಾಡು ಹಾಡನ್ನು ಮತ್ತು ಮೌರ್ಯ ಚಿತ್ರದ ಅಮ್ಮಾ ಅಮ್ಮಾ ಐ ಲವ್ ಯೂ ಚಿತ್ರದ ಹಾಡನ್ನು ಹಾಡಿ ಅಭಿಮಾನಿಗಳನ್ನು ಕುಣಿಸಿ ರಂಜಿಸಿದರು.

ನಂತರ ಗುರುಕಿರಣ್ ಅವರು ಮಾತನಾಡಿ, ಅಪ್ಪು ಅವರೊಂದಿಗೆ ಕಳೆದ ಸುಮಧರ ನೆನಪುಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡರು. ನನ್ನ ಹಾಗೂ ಪುನೀತ್ ಸ್ನೇಹಕ್ಕೆ ರಾಘವೇಂದ್ರ ರಾಜ್ ಕುಮಾರ್ ಅವರೇ ಕಾರಣ ಎಂದು ಹೇಳಿದರು. ಇದರಿಂದ ವೇದಿಕೆ ಹಾಗೂ ಮೈದಾನದ ತುಂಬಾ ಅಪ್ಪು ಅಪ್ಪು ಹೆಸರು ಮಾರ್ಧನಿಸಿತು.

ರಾಘವೇಂದ್ರ ರಾಜ್ ಕುಮಾರ್ ಅವರು ಪುನೀತ್ ರಾಜ್ ಕುಮಾರ್ ಅವರಿಗಾಗಿ ಡಾ.ರಾಜ್ ಕುಮಾರ್ ನಟಿಸಿರುವ ಕಸ್ತೂರಿ ನಿವಾಸ ಚಿತ್ರದ ಆಡಿಸಿ ನೋಡು ಬಿಳಿಸಿ ನೋಡು ಉರುಳಿ ಹೋಗದು ಹಾಗೂ ರಾಜಕುಮಾರ ಚಿತ್ರದ ಹಾಡನ್ನು ಅಭಿಮಾನಿಗಳನ್ನು ರಂಜಿಸಿದರು.

ಭಾವನ ಹಾಗೂ ಇಬ್ರಾಹಿಂ ತಂಡದವರು ನಟ ಸಾರ್ವಭೌಮ ಚಿತ್ರದ ಹಾಡಿಗೆ ಹಾಗೂ ಪವರ್ ಚಿತ್ರದ ಧಮ್ ಪವರೆ ಹಾಡಿಗೆ ನೃತ್ಯ ಮಾಡಿ ನೆರೆದಿದ್ದ ಪ್ರೇಕ್ಷಕರನ್ನು ಕುಣಿದು ಕುಪ್ಪಳಿಸುವಂತೆ ಮನರಂಜಿಸುವುದರ ಜೊತೆಗೆ ಎದೆ ತುಂಬಿ ಹಾಡುವೇನು ತಂಡದವರು ಪುನೀತ್ ರಾಜ್ ಕುಮಾರ್ ನಟನೆಯ ಪವರ್ ಚಿತ್ರದ ಧಮ್ ಪವರೇ ಹಾಡನ್ನು ಹಾಗೂ ರಾಜಕುಮಾರ ಚಿತ್ರದ ಹಾಡನ್ನು ಹಾಡುವ ಮೂಲಕ ನೆರೆದಿದ್ದ ಸಭಿಕರನ್ನು ಮೈ ಮರೆಸುವಂತೆ ಹಾಡಿದರು.

ಯುವ ಸಂಭ್ರಮದಲ್ಲೂ ಅಪ್ಪು ಹವಾ:- ಕಾರ್ಯಕ್ರಮದ ಉದ್ಘಾಟನೆಗೂ ಮೊದಲು ಮೈಸೂರು ನೃತ್ಯ ಕಲಾವಿದರ ಕಲಾತಂಡವು ಡಾ.ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಾದ ಯುವರತ್ನ, ಜಾಕಿ, ಪವರ್, ಅಣ್ಣಾಬಾಂಡ್ ಸೇರಿದಂತೆ ಅನೇಕ ಚಿತ್ರಗಳಿಗೆ ನೃತ್ಯ ಮಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರಿಗೆ ರಂಜಿಸುವುದರ ಮೂಲಕ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದರು.

ಡಾ.ಪುನೀತ್ ರಾಜ್ ಕುಮಾರ್ ಹೆಸರು ಹಾಗೂ ಹಾಡುಗಳು ಬರುತ್ತಿದ್ದಂತೆ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಕುಣಿದು ಕುಪ್ಪಳಿಸಿ ಯುವ ಸಂಭ್ರಮದಲ್ಲಿ ಸಡಗರದಿಂದ ಪಾಲ್ಗೊಂಡರು. ಹಾಡು ಮುಗಿದ ಬಳಿಕವು ಮೈದಾನದಲ್ಲಿ ಅಪ್ಪು ಅಪ್ಪು ಎನ್ನುವ ಮೂಲಕ ಅಭಿಮಾನಿಗಳೂ ಸಹ ಅಪ್ಪು ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ನಿರೂಪಕಿ ಹಾಗೂ ನಟಿ ಅನುಶ್ರೀ, ವಿನಯ್ ರಾಜ್ ಕುಮಾರ್, ಧೀರನ್ ರಾಮ್ ಕುಮಾರ್, ಗಂಧದ ಗುಡಿ ಚಿತ್ರದ ನಿರ್ದೇಶಕರಾದ ಅಮೋಘ ವರ್ಷ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ್ ನಾರಾಯಣ್, ಶಾಸಕರಾದ ಎಲ್.ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಮಹಾಪೌರರಾದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪೋಲಿಸ್ ವರೀಷ್ಠಾಧಿಕಾರಿ ಹಾಗೂ ಯುವ ದಸರಾದ ಉಪ ವಿಶೇಷಾಧಿಕಾರಿಯೂ ಆದ ಆರ್.ಚೇತನ್, ಅಧ್ಯಕ್ಷ ಕಿರಣ್ ಗೌಡ, ಜಿಲ್ಲಾ ಪಂಚಾಯತಿಯ ಸಿಇಒ ಬಿ.ಆರ್.ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರಾದ ಆದ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ

ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.