ಮೈಸೂರು ದಸರಾ ವಿಶೇಷ: ಹೊಯ್ಸಳರ ವಾಸ್ತುಶಿಲ್ಪ , ಶಿಲ್ಪಕಲೆ ಅನಾವರಣ

ಖಾಲಿ ಮಳಿಗೆಗಳಲ್ಲಿ ಸ್ತಬ್ಧಚಿತ್ರ ನಿರ್ಮಾಣ ಕಾರ್ಯ ಆರಂಭವಾಗಿದ್ದು ಅ.3ಕ್ಕೆ ಮುಕ್ತಾಯವಾಗಲಿದೆ.

Team Udayavani, Sep 20, 2022, 4:13 PM IST

ಮೈಸೂರು ದಸರಾ ವಿಶೇಷ: ಹೊಯ್ಸಳರ ವಾಸ್ತುಶಿಲ್ಪ , ಶಿಲ್ಪಕಲೆ ಅನಾವರಣ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೊನೆಯ ದಿನವಾದ ವಿಜಯದಶಮಿಯಂದು ನಡೆಯುವ ಜಂಬೂಸವಾರಿ ಮೆರವಣಿಗೆಯಲ್ಲಿ ಹೊಯ್ಸಳರ ಕಾಲದ ಸೋಮನಾಥಪುರದ ಚೆನ್ನಕೇಶವ ದೇಗುಲದ ವಾಸ್ತುಶಿಲ್ಪ, ಶಿಲ್ಪಕಲೆ ಹಾಗೂ ವಿಜಯನಗರ ಸಾಮ್ರಾಜ್ಯದ ಗತಕಾಲದ ವೈಭವ ಅನಾವರಣಗೊಳ್ಳಲಿದೆ.

ಕೊರೊನಾ ಸೊಂಕು ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ದಸರಾ ಉತ್ಸವಕ್ಕೆ ಈ ಬಾರಿ ಜೀವ ಕಳೆ ಬಂದಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಸ್ತಬ್ಧಚಿತ್ರಗಳ ಮೆರವಣಿಗೆಯನ್ನು ವಿಶೇಷವಾಗಿ ನಡೆಸಲಾಗುತ್ತಿದೆ. ಈ ಬಾರಿ ರಾಜ್ಯ ಪ್ರಮುಖ ಪ್ರವಾಸಿ ತಾಣ, ಧಾರ್ಮಿಕ ಸ್ಥಳಗಳು, ರಾಜ್ಯದ ಎಲ್ಲ ಜಿಲ್ಲೆಗಳ ಐತಿಹಾಸಿಕ ಮತ್ತು ಪ್ರಾಕೃತಿಕ ತಾಣಗಳನ್ನು ಪರಿಚಿಸುವ ಹಲವು ಸ್ತಬ್ಧಚಿತ್ರಗಳು ಜನಾಕರ್ಷಿಸಲಿವೆ. ಆಯಾಯಾ ಜಿಲ್ಲೆಯ ಜಿಐ (ಜಿಯಾಗ್ರಫಿಕಲ್‌ ಇಂಡಿಕೇಷನ್‌), ಕನ್ನಡ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ.

ಈ ಬಾರಿ 43 ಸ್ತಬ್ಧಚಿತ್ರಗಳು ಭಾಗವಹಿಸಲಿದ್ದು, ಸೋಮನಾಥಪುರದ ಚನ್ನಕೇಶವ ದೇಗುಲ ಪ್ರಮುಖ ಆಕರ್ಷಣೆಯಾಗಿದೆ. ವಿಜಯದಶಮಿಯಂದು ನಡೆಯುವ ಮೆರವಣಿಗೆಯಂದು ಗಜಪಡೆಯಷ್ಟೇ ಸ್ತಬ್ಧಚಿತ್ರವೂ ಪ್ರಾಮುಖ್ಯತೆ ಪಡೆದುಕೊಂಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ತಲಾ ಒಂದರಂತೆ 31 ಸೇರಿದಂತೆ ವಿವಿಧ ಇಲಾಖೆಗಳಿಂದ ಒಟ್ಟು 43 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಭೌಗೋಳಿಕ, ಪ್ರಾಕೃತಿಕ ಮತ್ತು ಐತಿಹಾಸಿಕ ಹಿನ್ನೆಲೆಗೆ ಒತ್ತು: ಪ್ರತಿವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸರ್ಕಾರದ ವಿವಿಧ ಯೋಜನೆ ಹಾಗೂ ಪ್ರದೇಶಿಕ ಸಂಸ್ಕೃತಿ ಒಳಗೊಂಡ ಸ್ತಬ್ಧಚಿತ್ರಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದವು. ಆದರೆ ಈ ಬಾರಿ ವಿಭಿನ್ನವಾಗಿ ಸ್ತಬ್ಧಚಿತ್ರ ಮೆರವಣಿಗೆ ಆಯೋಜಿಸಲು ದಸರಾ ಉಪಸಮಿತಿ ನಿರ್ಧರಿಸಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ ಪಾಲ್ಗೊಳ್ಳುವ ಸ್ತಬ್ಧಚಿತ್ರಗಳಿಗೆ ಆಯಾ ಜಿಲ್ಲೆಯ ಭೌಗೋಳಿಕ, ಐತಿಹಾಸಿಕ ಮತ್ತು ಪ್ರಾಕೃತಿಕ ಅಂಶಗಳನ್ನೇ ವಿಷಯ ವಸ್ತುವನ್ನಾಗಿಸಿಕೊಂಡು ನಿರ್ಮಿಸುವಂತೆ ತಿಳಿಸಲಾಗಿದ್ದು, ಈಗಾಗಲೇ ನಗರದ ಎಪಿಎಂಸಿ ಆವರಭದಲ್ಲಿ ಸ್ತಬ್ಧಚಿತ್ರ ನಿರ್ಮಾಣ ಕಾರ್ಯ ಆರಂಭವಾಗಿದೆ.

ಬೆಳಕು ಚೆಲ್ಲುವ ಸ್ತಬ್ಧಚಿತ್ರಗಳು: ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದ ಗೊಮಟೇಶ್ವರ, ಉಡುಪಿ ಜನರ ಜೀವನಾಧಾರವಾದ ಮೀನುಗಾರಿಕೆ, ಉತ್ತರ ಕನ್ನಡದ ಪ್ರಾಕೃತಿಕ ಸೊಬಗು, ಚಿಕ್ಕಮಗಳೂರಿನ ಐತಿಹಾಸಿಕ ತಾಣಗಳು, ಮಂಡ್ಯದ ಧಾರ್ಮಿಕ ಸ್ಥಳಗಳು, ಕೊಡಗು ಜಿಲ್ಲೆಯ ಕೊಡವರ ವೀರ ಪರಂಪರೆ, ಚಾಮರಾಜನರದಿಂದ ವನ್ಯಸಂಪತ್ತು, ಶಿವಮೊಗ್ಗದಿಂದ ಶರಣಪರಂಪರೆಯ ಶ್ರೇಷ್ಠ ಶರಣರಾದ ಅಕ್ಕಮಹಾದೇವಿ ಮತ್ತು ಅಲ್ಲಮಪ್ರಭು ಒಳಗೊಂಡ
ಸ್ತಬ್ಧಚಿತ್ರಗಳು ಪ್ರಮುಖ ಆಕರ್ಷಣೆಯಾಗಿರಲಿವೆ.ಇದರ ಜತೆಗೆ ಉಳಿದ ಜಿಲ್ಲೆಗಳಿಂದ ಒಂದು ಜಿಲ್ಲೆ-ಒಂದು ಒಂದು ಉತ್ಪನ್ನ ಕುರಿತು ಬೆಳಕು ಚೆಲ್ಲುವ ಸ್ತಬ್ಧಚಿತ್ರಗಳೂ ಇರಲಿವೆ.

ಯುನೆಸ್ಕೊ ವಿಶ್ವ ಪಾರಂಪರಿಕ ತಾಣ ಪಟ್ಟಿಯಲ್ಲಿ ಸೇರ್ಪಡೆಗೆ ತಜ್ಞರು ತಿ.ನರಸೀಪುರ ತಾಲೂಕಿನ ಸೋಮನಾಥಪುರದಲ್ಲಿರುವ ಅತ್ಯದ್ಭುತ ವಾಸ್ತುಶಿಲ್ಪ, ಕಲೆಯನ್ನು ಹೊಂದಿರುವ ಚನ್ನಕೇಶವ ದೇಗುಲ ಪರಿಶೀಲಿಸಿರುವ ಹಿನ್ನೆಲೆ ಈ ಬಾರಿ ದಸರಾ ಉತ್ಸವದಲ್ಲಿ ದೇಗುಲದ ಪ್ರತಿಕೃತಿ ಇರುವ ಸ್ತಬ್ಧಚಿತ್ರ ನಿರ್ಮಾಣ ಮಾಡಲಾಗಿತ್ತಿದೆ. ಒಟ್ಟಾರೆ ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಚನ್ನಕೇಶವ ದೇಗುಲ ಪ್ರಮುಖ ಆಕರ್ಷಣೆಯಾಗಿದೆ.

ಮೆರವಣಿಗೆಯಲ್ಲಿ ಒಟ್ಟು 43 ಸ್ತಬ್ಧಚಿತ್ರ ಭಾಗಿ
ವಿಜಯದಶಮಿ ಜಂಬೂಸವಾರಿಯಂದು ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ರಾಜ್ಯದ 31 ಜಿಲ್ಲೆಗಳಿಂದ ತಲಾ ಒಂದರಂತೆ 31 ಸ್ಥಬ್ಧಚಿತ್ರ ಸ್ತಬ್ಧಚಿತ್ರ ಉಪಸಮಿತಿಯಿಂದ 03, 106 ವರ್ಷಗಳ ಸಂಸ್ಥಾಪನಾ ದಿನಾಚರಣೆ ಆಚರಿಸಿಕೊಂಡ ಮೈಸೂರು ವಿಶ್ವವಿದ್ಯಾಲಯ, ಸೆಸ್ಕಾಂ, ಸಮಾಜ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಲಿಡಕರ್‌, ಕೌಶಲ್ಯ ಕರ್ನಾಟಕ, ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳಿ, ಕಾವೇರಿ ನೀರಾವರಿ ನಿಗಮ ಹಾಗೂ ವಾರ್ತಾ ಇಲಾಖೆಯಿಂದ ತಲಾ ಒಂದರಂತೆ ಒಟ್ಟು 43 ಸ್ತಬ್ಧಚಿತ್ರಗಳು ಇರಲಿವೆ. ಸೆ.19ರಿಂದ ಮೈಸೂರಿನ ಎಪಿಎಂಸಿ ಬಳಿಯಿರುವ ಖಾಲಿ ಮಳಿಗೆಗಳಲ್ಲಿ ಸ್ತಬ್ಧಚಿತ್ರ ನಿರ್ಮಾಣ ಕಾರ್ಯ ಆರಂಭವಾಗಿದ್ದು ಅ.3ಕ್ಕೆ ಮುಕ್ತಾಯವಾಗಲಿದೆ.

ವಾಹನಗಳ ಸುಸ್ತಿತಿಗೆ ಒತ್ತು
ದಸರಾ ಸ್ತಬ್ಧಚಿತ್ರ ಮೆರವಣಿಗೆ ವೇಳೆ ವಾಹನಗಳು ಕೆಟ್ಟುನಿಂತು ಮೆರವಣಿಗೆಗೆ ತೊಡಕಾಗುವುದನ್ನು ತಡೆಯುವ ಸಲುವಾಗಿ ಈ ಬಾರಿ ಸ್ತಬ್ಧಚಿತ್ರದಲ್ಲಿ ಭಾಗವಹಿಸುವ ವಾಹನಗಳ ಸುಸ್ತಿತಿ, ಎಫ್ಸಿ, ಫಿಟ್ನೆಸ್ ಸರ್ಟಿ ಫಿಕೆಟ್‌ಗಳನ್ನು ಪರಿಶೀಲಿಸಿ ಬಳಿಕ ಸ್ತಬ್ಧಚಿತ್ರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಜತೆಗೆ ಪ್ರತಿ ಜಿಲ್ಲೆಯಿಂದ ಬರುವ ಸ್ತಬ್ಧಚಿತ್ರಗಳೊಂದಿಗೆ ಇಬ್ಬರು ಚಾಲಕರು ಮತ್ತು ಸಂಯೋಜನಾಧಿಕಾರಿ ಇರಲಿದ್ದಾರೆ. ಒಂದು ವೇಳೆ ಸ್ತಬ್ಧಚಿತ್ರದ ವಾಹನ ಕೆಟ್ಟುನಿಂತರೆ ಅದನ್ನು ಬೇರೆಡೆ ಸಾಗಿಸಲು ಮುಂಜಾಗ್ರತಾ ಕ್ರಮವಾಗಿ ಕ್ರೇನ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಬಾರಿಯ ದಸರಾ ಉತ್ಸವದಲ್ಲಿ ನಡೆಯುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಒಟ್ಟು 43 ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿದ್ದು, ಇಗಾಗಲೇ ನಿರ್ಮಾಣ ಕಾರ್ಯವು ನಡೆಸಿದೆ. ಅ.3ರ ಹೊತ್ತಿಗೆ ಸ್ತಬ್ಧಚಿತ್ರ ಸಂಪೂರ್ಣ ಸಿದ್ಧಗೊಳಿಸಿರುವಂತೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆಗಳು ಐತಿಹಾಸಿಕ, ಪ್ರಾಕೃತಿಕ, ಭೌಗೋಳಿಕ ಮತ್ತು ಪಾರಂಪರಿಕ ಅಂಶಗಳನ್ನು ಇಟ್ಟುಕೊಂಡು ಸ್ತಬ್ಧಚಿತ್ರ ನಿರ್ಮಾಣ ಮಾಡಲಿವೆ.
● ಧನುಷ್‌, ಉಪ ವಿಶೇಷಾಧಿಕಾರಿ, ಸ್ತಬ್ಧಚಿತ್ರ ಉಪಸಮಿತಿ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.