ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ


Team Udayavani, Oct 3, 2022, 6:05 AM IST

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

ಜಗನ್ಮಾತೆ ದುರ್ಗಾ ದೇವಿಯು , ಸೃಷ್ಟಿಯನ್ನು ಕಾಪಾಡಲು ಒಂಭತ್ತು ಅವತಾರಗಳು ಎತ್ತಿ ನವರೂಪಿಣಿಯಾಗಿದ್ದಾಳೆ. ದೇಶದ ಪ್ರತಿಯೊಂದು ಕಡೆಗಳಲ್ಲೂ ವಿಭಿನ್ನ ಹೆಸರಿನಿಂದ, ವಿಭಿನ್ನ ರೀತಿಯಲ್ಲಿ ಆಚರಿಸಲ್ಪಡುವ ಈ ನವರಾತ್ರಿ ಹಬ್ಬದಲ್ಲಿ ಎಂಟನೇ ದಿನ ಆರಾಧಿಸಲ್ಪಡುವ ದೇವಿಯೆಂದರೆ ಅದು ಮಹಾಗೌರಿ.

ಮಹಾದೇವ ಶಿವನನ್ನು ವರಿಸುವ ಸಲುವಾಗಿ ಪಾರ್ವತಿ ದೇವಿ ಕಠಿಣ ತಪಸ್ಸನ್ನು ಕೈಗೊಳ್ಳುತ್ತಾಳೆ. ಸುದೀರ್ಘ‌ ದಿನಗಳ ಘೋರ ತಪಸ್ಸಿನಿಂದಾಗಿ ಆಕೆಯ ಶರೀರದ ಚರ್ಮ ಸುಟ್ಟು, ಕಪ್ಪು ಬಣ್ಣಕ್ಕೆ ಬದಲಾಗುತ್ತದೆ. ಪ್ರಕೃತಿ ವಿಕೋಪದಿಂದ ಕಪ್ಪು ಬಣ್ಣವಾಗಿದ್ದ ಅವಳ ಶರೀರವನ್ನು ಪರಮೇಶ್ವರನು, ಗಂಗಾ ನದಿಯಲ್ಲಿ ಶುದ್ಧಗೊಳಿಸುತ್ತಾನೆ.

ನಂತರ ಆಕೆಯನ್ನು ತನ್ನ ಪತ್ನಿಯಾಗಿ ಸ್ವೀಕರಿಸಿದನು ಎಂದು ಹೇಳಲಾಗುತ್ತದೆ. ಕರಿದಾದ ಬಣ್ಣದಿಂದ ಕೂಡಿದ್ದ ದೇವಿ ಗಂಗೆಯ ಸ್ನಾನದ ನಂತರ ಬಿಳಿ ವರ್ಣಕ್ಕೆ ತಿರುಗುತ್ತಾಳೆ. ಕಪ್ಪಿನಿಂದ ಗೌರ ಬಣ್ಣಕ್ಕೆ ಅಂದರೆ ಬಿಳಿ ಬಣ್ಣ ತಿರುಗಿದ ದೇವಿಯನ್ನು ಗೌರಿ ಅಥವಾ ಮಹಾಗೌರಿ ಎಂಬ ಹೆಸರಿನಿಂದ ಕರೆಯಲಾಗುತ್ತದೆ ಎಂಬ ಪ್ರತೀತಿ ಇದೆ.

ನವರಾತ್ರಿಯ ಎಂಟನೇ ದಿನದಂದು ಪೂಜಿಲ್ಪಡುವ ದೇವಿ ಮಹಾಗೌರಿಯು ನಾಲ್ಕು ತೋಳುಗಳನ್ನು ಹೊಂದಿದ್ದು, ಗೂಳಿಯ ಮೇಲೆ ಸವಾರಿ ಮಾಡುತ್ತಾಳೆ. ಬಲಗೈಲಿ ಅಭಯ ಮುದ್ರೆ, ಇನ್ನೊಂದು ಕೈಯಲ್ಲಿ ತ್ರಿಶೂಲ ಹಾಗೂ ಡಮರುಗವನ್ನು ಹಿಡಿದಿರುತ್ತಾಳೆ. ಮತ್ತೂಂದು ಕೈಯಲ್ಲಿ ವರದ ಮುದ್ರೆಯನ್ನು ಹೊಂದಿರುತ್ತಾಳೆ.

ಮಹಾಶಕ್ತಿಯ ಅವತಾರವಾದ ಮಹಾಗೌರಿ ಉಪಾಸನೆ ಭಕ್ತರಿಗೆ ಸನ್ಮಂಗಳವನ್ನು ಉಂಟುಮಾಡುತ್ತದೆ. ಒಂದೊಂದು ಪ್ರದೇಶದಲ್ಲಿ ಒಂದೊಂದು ಬಗೆಯ ನೈವೇದ್ಯವನ್ನಿಟ್ಟು ವಿಜೃಂಭಣೆಯಿಂದ ಮಹಾಗೌರಿಯನ್ನು ಪೂಜಿಸಲಾಗುತ್ತದೆ.
(ಸ್ವಾಮಿ ವಿಜಯಾನಂದ, ಆನಂದಾಶ್ರಮ, ಬೇವಿನಕೊಪ್ಪ, ಬೈಲಹೊಂಗಲ)

ದೇವಿ: ಮಹಾಗೌರಿ
ಬಣ್ಣ : ಬಿಳಿ
ದಿನಾಂಕ : 03/10/2022,
ಸೋಮವಾರ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ಉಚ್ಚಿಲ ದಸರೆಗೆ ಜನ ಸಾಗರ; ಕೇಂದ್ರ, ರಾಜ್ಯ ಸಚಿವರ ಭೇಟಿ

ಉಚ್ಚಿಲ ದಸರೆಗೆ ಜನ ಸಾಗರ; ಕೇಂದ್ರ, ರಾಜ್ಯ ಸಚಿವರ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.