ನವರಾತ್ರಿ ಇಂದಿನ ಆರಾಧನೆ; ಜ್ಞಾನದ ಬೆಳಕು ನೀಡುವ ಕೂಷ್ಮಾಂಡ ದೇವಿ


Team Udayavani, Sep 29, 2022, 6:05 AM IST

ನವರಾತ್ರಿ ಇಂದಿನ ಆರಾಧನೆ; ಜ್ಞಾನದ ಬೆಳಕು ನೀಡುವ ಕೂಷ್ಮಾಂಡ ದೇವಿ

ಸೃಷ್ಟಿಯ ಅಸ್ತಿತ್ವವೇ ಇಲ್ಲದಿರುವಾಗ ಎಲ್ಲೆಡೆ ಅಂಧಕಾರವೇ ಪಸರಿಸಿತ್ತು. ಆಗ ತನ್ನ “ಈಶತ್‌’ ಹಾಸ್ಯದಿಂದ ಬ್ರಹ್ಮಾಂಡವನ್ನು ಸೃಷ್ಟಿಸಿದವಳೇ ಕೂಷ್ಮಾಂಡ ದೇವಿ. ಆದ್ದರಿಂದ ಇವಳೇ ಸೃಷ್ಟಿಯ ಆದಿ- ಸ್ವರೂಪ ಶಕ್ತಿಯಾಗಿದ್ದಾಳೆ. ಈಕೆಯು ಸೂರ್ಯನ ಸ್ಥಾನದಲ್ಲಿ ನಿಲ್ಲುವ ಕಾರಣದಿಂದಾಗಿ ಭೂಮಿಯ ಮೇಲಿರುವ ಅಂಧಕಾರವನ್ನೆಲ್ಲಾ ನಿವಾರಣೆ ಮಾಡುತ್ತಾಳೆ ಎನ್ನಲಾಗುತ್ತದೆ.

ಸದಾ ಮಂದಸ್ಮಿತೆಯಾಗಿರುವ ದುರ್ಗಾದೇವಿಯ ನಾಲ್ಕನೇ ಅವತಾರವೇ ಕೂಷ್ಮಾಂಡ. ಈಕೆಯ ಆರಾಧನೆಯಿಂದ ಮನದ ಕ್ಲೇಷ ಕಳೆದು ಜ್ಞಾನದ ಬೆಳಕು ಮೂಡುತ್ತದೆ. ಜ್ಞಾನದ ಹೊನಲು ಸಂತಸಕ್ಕೆ ಕಾರಣವಾಗುತ್ತದೆ. ಸಂಸ್ಕೃತದಲ್ಲಿ ಕೂಷ್ಮಾಂಡವೆಂದರೆ ಬೂದುಗುಂಬಳಕಾಯಿ ಎಂದರ್ಥ. ಆಯುರ್ವೇದ ಶಾಸ್ತ್ರದ ಪ್ರಕಾರ ಬೂದುಗುಂಬಳಕಾಯಿಯು ಜ್ಞಾನವರ್ಧಕ, ತೇಜೋ ವರ್ಧಕ. ಸಕಲ ತಾಪವನ್ನು ನಿವಾರಣೆ ಮಾಡಿ ದೇಹಕ್ಕೆ ತಂಪೆರೆವ ಶಾಕಾಹಾರ.

ಕೂಷ್ಮಾಂಡ ಪದದಲ್ಲಿ “ಕು’ ಎಂದರೆ ಚಿಕ್ಕದು, “ಉಷ್ಮ ‘ಎಂದರೆ ಶಕ್ತಿ ಮತ್ತು ಅಂಡ ಎಂದರೆ ಭ್ರೂಣ ಎಂದರ್ಥ. ಸರಳವಾಗಿ ಹೇಳುವುದಾದರೆ ಇಡೀ ಬ್ರಹ್ಮಾಂಡವೆನ್ನುವ ಚೈತನ್ಯಶಕ್ತಿಯನ್ನೇ ತನ್ನಲ್ಲಿ ಇಟ್ಟುಕೊಂಡವಳು ಎಂದರ್ಥ.

ಸೌರವ್ಯೂಹದ ಗ್ರಹಳ ಚಲನೆಯನ್ನು ನಿಯಂತ್ರಿಸುತ್ತಾಳೆ. ಆಕೆ ಇರುವಲ್ಲಿ ಬೆಳಕು ಹಾಗೂ ಜ್ಞಾನವಿದೆ. ಕೂಷ್ಮಾಂಡ ದೇವಿಯು ಸೂರ್ಯನಿಗೆ ಅಧಿಪತಿಯಾಗಿರುವ ಕಾರಣ ಆಕೆಯನ್ನು ಪೂಜಿಸುವುದರಿಂದ ಜಾತಕದಲ್ಲಿ ಸೂರ್ಯನಿಂದಾಗುವ ಕೆಡುಕನ್ನು ನಿವಾರಿಸಬಹುದು. ಜೊತೆಗೆ ಎಲ್ಲಾ ರೀತಿಯ ಸಂಕಷ್ಟಗಳೂ ನಿವಾರಣೆಯಾಗುವವು.

ಕೂಷ್ಮಾಂಡ ದೇವಿಯನ್ನು ಅರ್ಚಿಸಲು ಶ್ರೇಷ್ಠವಾದದ್ದು, ಕೆಂಪು ಬಣ್ಣದ ಹೂಗಳು. ದೇವಿಗೆ ಷೋಡಶೋಪಚಾರ ಪೂಜೆ ಅಂದರೆ, 16 ವಿಧದ ಪೂಜೆ, ಆರತಿಯೊಂದಿಗೆ ಪೂಜೆ ಮಾಡಲಾಗುತ್ತದೆ.

(ಶ್ರೀ ಲಕ್ಷ್ಮೀ ಶ್ರೀನಿವಾಸ ಗುರುಗಳು, ಶಿರ್ಡಿ ಸಾಯಿ ಭಿಕ್ಷಾಕೇಂದ್ರ ಮುಖ್ಯಸ್ಥರು, ಬೆಂಗಳೂರು )

ದೇವಿ: ಕೂಷ್ಮಾಂಡ
ಬಣ್ಣ : ಕಂದು
ದಿನಾಂಕ : 29/09/2022, ಗುರುವಾರ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.