ದಕ್ಷಿಣ ಕನ್ನಡ ಮತ ಎಣಿಕೆ ನಗರದಿಂದ ಹೊರಕ್ಕೆ


Team Udayavani, Mar 27, 2019, 6:30 AM IST

NITK

ಮಂಗಳೂರು: ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್‌ ಎನ್‌ಐಟಿಕೆ ಆವರಣವನ್ನು ನಿಗದಿಪಡಿಸ ಲಾಗಿದೆ. ಮತದಾನ ನಡೆದ ಬಳಿಕ ಮತ ಎಣಿಕೆಗೆ ಬರೋಬ್ಬರಿ ಒಂದು ತಿಂಗಳು ಕಾಯಬೇಕಾಗಿದ್ದು, ಭದ್ರತೆಯ ದೃಷ್ಟಿಯಿಂದ ಮತ್ತು ವಿವಿ ಪ್ಯಾಟ್‌ಗಳನ್ನು ಇರಿಸಲು ಸೂಕ್ತ ಸ್ಥಳಾವಕಾಶ ಅಗತ್ಯವಿರುವ ಕಾರಣ ಈ ಬದಲಾವಣೆ ನಡೆದಿದೆ.

2009ರಲ್ಲಿ ದ.ಕ. ಲೋಕಸಭಾ ಚುನಾವಣೆ ಮತ ಎಣಿಕೆ ನಗರದ ಕೆನರಾ ಕಾಲೇಜು ಆವರಣದಲ್ಲಿ ನಡೆದಿತ್ತು. ಆಗ ಸಂಚಾರ ದಟ್ಟಣೆ ಉಂಟಾದ್ದರಿಂದ ಅನಂತರದ, 2014ರ ಚುನಾವಣೆಯ ಮತ ಎಣಿಕೆಯನ್ನು ಬೋಂದೆಲ್‌ ಮಹಾತ್ಮಾ ಗಾಂಧಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಸ್ಥಳಾಂತರಿಸ ಲಾಗಿತ್ತು. ಕಳೆದ ಬಾರಿಯ ವಿಧಾನಸಭಾ ಚುನಾವಣಾ ಮತ ಎಣಿಕೆಯೂ ಅಲ್ಲೇ ನಡೆದಿತ್ತು.

ಈ ಬಾರಿ ಮತದಾನ ನಡೆಯುವ ಎ.18ಕ್ಕೂ ಮತ ಎಣಿಕೆ ನಡೆಯುವ ಮೇ 23ಕ್ಕೂ ಒಂದು ತಿಂಗಳು ಸಮಯವಿದೆ. ಹೀಗಾಗಿ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‌ಗಳನ್ನು ಅತ್ಯಂತ ಭದ್ರತೆಯಿಂದ ಇರಿಸಬೇಕಾದ ಜವಾಬ್ದಾರಿ ಜಿಲ್ಲಾಡಳಿದ್ದಾಗಿದೆ. ಹೀಗಾಗಿ ಬಿಗಿ ಭದ್ರತೆಯ ದೃಷ್ಟಿಯಿಂದ ಎಣಿಕೆ ಸುರತ್ಕಲ್‌ಗೆ ಸ್ಥಳಾಂತರಿಸಲಾಗಿದೆ.

ಸ್ಥಳ ಪರಿಶೀಲನೆ
ಮತ ಎಣಿಕೆಯನ್ನು ಸುಗಮ ಮತ್ತು ಸುವ್ಯವಸ್ಥಿತ ವಾಗಿಸಲು ಎನ್‌ಐಟಿಕೆ ಆವರಣದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಮಂಗಳೂರು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಸಹಿತ ಹಿರಿಯ ಅಧಿಕಾರಿಗಳು ಎನ್‌ಐಟಿಕೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರವನ್ನು ಅಂತಿಮಗೊಳಿಸಿದ್ದಾರೆ.

ಭದ್ರತೆಯ ದೃಷ್ಟಿಯಿಂದ ಮತ್ತು ವಿವಿ ಪ್ಯಾಟ್‌ಗಳನ್ನು ಇರಿಸಲು ಸೂಕ್ತ ಸ್ಥಳಾವಕಾಶ ಅಗತ್ಯವಾದ ಕಾರಣ ಸುರತ್ಕಲ್‌ನ ಎನ್‌ಐಟಿಕೆ ಕೇಂದ್ರದಲ್ಲಿ ಈ ಬಾರಿ ಮತ ಎಣಿಕೆ ನಡೆಯಲಿದೆ. ಈ ಸಂಬಂಧ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯಿಂದ ಸೂಕ್ತ ಪರಿಶೀಲನೆ ನಡೆಸಲಾಗಿದೆ.
– ಶಶಿಕಾಂತ ಸೆಂಥಿಲ್‌, ಜಿಲ್ಲಾಧಿಕಾರಿ ದ.ಕ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.