2ನೇ ಹಂತ ಚುನಾವಣೆ: ನಾಮಪತ್ರ ಸಲ್ಲಿಕೆ ;ಬಿ.ವೈ.ಆರ್‌ ಭರ್ಜರಿ ರೋಡ್‌ ಶೋ


Team Udayavani, Mar 29, 2019, 7:56 AM IST

190328kpn94

ಲೋಕಸಭಾ ಚುನಾವಣೆಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ್‌, ಶಿವಮೊಗ್ಗದಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ, ಬೆಳಗಾವಿಯಿಂದ ಬಿಜೆಪಿ ಅಭ್ಯರ್ಥಿ ಸುರೇಶ್‌ ಅಂಗಡಿ ಗುರುವಾರ ನಾಮಪತ್ರ ಸಲ್ಲಿಸಿದ ಪ್ರಮುಖರು.

ಬಿ.ವೈ. ರಾಘವೇಂದ್ರ ಭರ್ಜರಿ ರೋಡ್‌ ಶೋ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು. ಅಪಾರ ಬೆಂಬಲಿಗರು, ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಬಿ.ವೈ.ರಾಘವೇಂದ್ರ ಅವರಿಗೆ ಶಾಸಕ ಕೆ.ಎಸ್‌. ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌. ರುದ್ರೇಗೌಡ, ಪತ್ನಿ ತೇಜಸ್ವಿನಿ, ಶಾಸಕ ಹಾಲಪ್ಪ ಸಾಥ್‌ ನೀಡಿದರು.

ನಾಮಪತ್ರ ಸಲ್ಲಿಸುವ ಮುನ್ನ ರಾಘವೇಂದ್ರ ಅವರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆದಿಚುಂಚನಗಿರಿ ಶಾಖಾ
ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಶಾಸಕ ಹಾಗೂ ಹಿರಿಯ ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ಅವರ ಆಶೀರ್ವಾದ ಪಡೆದರು.

12 ಕೋಟಿ ರೂ. ಹೆಚ್ಚಳ
ಬಿ.ವೈ. ರಾಘವೇಂದ್ರ ಅವರ ಕುಟುಂಬದ ಚರಮತ್ತು ಸ್ಥಿರಾಸ್ತಿಯ ಮೌಲ್ಯವು ಕೇವಲ ಐದು ತಿಂಗಳಲ್ಲಿ 12 ಕೋಟಿ ರೂ. ಏರಿಕೆಯಾಗಿದೆ. 2014ರ ವಿಧಾನಸಭೆ ಉಪ ಚುನಾವಣೆಗೆ ಹೋಲಿಕೆ ಮಾಡಿದರೆ ಅವರ ಆಸ್ತಿಯು 3 ಪಟ್ಟು ಹೆಚ್ಚಳವಾಗಿದೆ.
2014ರಲ್ಲಿ 18.34 ಕೋಟಿ ರೂ. ಚರ ಮತ್ತು 15.22 ಕೋಟಿ ರೂ. ಸ್ಥಿರಾಸ್ತಿ, ಅಕ್ಟೋಬರ್‌ನಲ್ಲಿ ನಡೆದ ಲೋಕಸಭೆ ಉಪ ಚುನಾವಣೆ ಸಂದರ್ಭದಲ್ಲಿ 32.09
ಕೋಟಿ ರೂ. ಚರ ಮತ್ತು 30.91ಕೋಟಿ ರೂ.ಸ್ಥಿರಾಸ್ತಿಗೆ ಏರಿಕೆಯಾಗಿತ್ತು. ಅಲ್ಲಿಂದ ಈಚೆಗೆ ಐದೇ ತಿಂಗಳಲ್ಲಿ 32 ಕೋಟಿ ರೂ. ಚರ ಮತ್ತು 43 ಕೋಟಿ ರೂ. ಸ್ಥಿರಾಸ್ತಿಗೆ ಏರಿಕೆಯಾಗಿದೆ.

ಸಂಸದ ಸುರೇಶ ಅಂಗಡಿ 14 ಕೋಟಿ ಆಸ್ತಿ ಒಡೆಯ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ 4ನೇ ಬಾರಿಗೆ ಆಯ್ಕೆ ಬಯಸಿ ಬಿಜೆಪಿಯ ಸುರೇಶ ಅಂಗಡಿ ಗುರುವಾರ ನಾಮಪತ್ರ ಸಲ್ಲಿಸಿದರು. ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಸುರೇಶ ಅಂಗಡಿ, ಚುನಾವಣಾ ಆಯೋ ಗಕ್ಕೆ ತಮ್ಮ ಕುಟುಂಬದ
ಆಸ್ತಿ ವಿವರ ಸಹ ಸಲ್ಲಿಸಿದರು.

ಆ ಪ್ರಕಾರ ಐದು ವರ್ಷಗಲ್ಲಿ ಅವರ ಆಸ್ತಿ ಮೌಲ್ಯ ಸುಮಾರು 2 ಕೋಟಿ ಹೆಚ್ಚಾಗಿದೆ.
ಸುರೇಶ ಅಂಗಡಿ ತಮ್ಮ ಹೆಸರಿನಲ್ಲಿ 14.37 ಕೋಟಿ ಆಸ್ತಿ ಘೋಷಿಸಿದ್ದಾರೆ. ತಮ್ಮ ಹೆಸರಿನಲ್ಲಿ 56.91 ಲಕ್ಷ ನಗದು, ಪತ್ನಿ ಮಂಗಳಾ 69.23 ಲಕ್ಷ ನಗದು ಹೊಂದಿದ್ದಾರೆ. ವಿವಿಧ ಬ್ಯಾಂಕ್‌ ಗಳಲ್ಲಿ 17.32 ಲಕ್ಷ ನಗದು, ವಿವಿಧೆಡೆ ಹೂಡಿಕೆ, ಚಿನ್ನಾಭರಣ, ವಾಹನಗಳು ಸೇರಿ 2.12 ಕೋಟಿ ಚರಾಸ್ತಿ ಮತ್ತು 12.24 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ.

7.69 ಕೋಟಿ ರೂ. ಸಾಲವಿದೆ. ಸಂಸದರು, ಕೋಟ್ಯಧಿಪತಿಯಾದರೂ ಅವರ ಬಳಿ ಸ್ವಂತ ಕಾರಿಲ್ಲ. 4 ಸ್ಕೂಟರ್‌, ಒಂದು ಬೈಸಿಕಲ್‌ ಮಾತ್ರ ಅವರ ಹೆಸರ ಲ್ಲಿದೆ.
300 ಗ್ರಾಂ. ಚಿನ್ನಾಭರಣವಿದೆ. ಪತ್ನಿ ಹೆಸರಲ್ಲಿ 2 ಕಾರು ಸೇರಿ 36 ಸ್ಕೂಟರ್‌ ಹಾಗೂ ಇತರ ವಾಹನಗಳಿವೆ. ಅವರು 1,300 ಗ್ರಾಂ. ಚಿನ್ನಾಭರಣ ಹೊಂದಿದ್ದಾರೆ.

ವೀಣಾ ಕಾಶಪ್ಪನವರ ಉಮೇದುವಾರಿಕೆ

ಬಾಗಲಕೋಟೆ: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ
ಜಿಪಂ ಮಾಜಿ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ ಗುರುವಾರ ಜಿಲ್ಲಾ
ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಸಿದರು. ಮಾಜಿ ಸಚಿವ ಎಚ್‌.
ವೈ. ಮೇಟಿ, ನರಗುಂದ ಮಾಜಿ ಶಾಸಕ ಬಿ.ಆರ್‌. ಯಾವಗಲ್‌, ಕೆಪಿಸಿಸಿ
ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ಎಂ.ಎಲ್‌. ಶಾಂತಗೇರಿ,ಹೈಕೋರ್ಟ್‌ ವಕೀಲ ಗಂಗಾಧರಪ್ಪ ಸೇರಿದಂತೆ ಕುಟುಂಬ ಸದಸ್ಯರು ಸಾಥ್‌ ನೀಡಿದರು.
ಏ.1ಕ್ಕೆ ಮತ್ತೆ ನಾಮಪತ್ರ: ಗುರುವಾರ

ಶುಭ ದಿನವಾದ್ದರಿಂದ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಏ.1ರಂದು
ಮತ್ತೂಂದು ನಾಮಪತ್ರ ಸಲ್ಲಿಸಲಾಗುವುದು ಎಂದು ವೀಣಾ ಕಾಶಪ್ಪನವರ ತಿಳಿಸಿದರು.

4 ಕೋಟಿ ಆಸ್ತಿಯ ಒಡತಿ
ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ 4 ಕೋಟಿ ಆಸ್ತಿಯ ಒಡತಿ. 66,55,753
ರೂ. ಚರಾಸ್ತಿ, 3,35,80,000 ರೂ. ಸ್ಥಿರಾಸ್ತಿ ಹೊಂದಿದ್ದು, 200 ಗ್ರಾಂ. ಚಿನ್ನದ ಒಡವೆ
ಹೊಂದಿದ್ದಾರೆ. ವಿವಿಧ ಬ್ಯಾಂಕ್‌ಗಳಲ್ಲಿ 1,62,72,759 ರೂ. ಸಾಲ ಹೊಂದಿದ್ದು, ಒಟ್ಟು
4,02,35,753 ಆಸ್ತಿಯ ಒಡತಿಯಾಗಿದ್ದಾರೆ. 1,62,72,759 ರೂ. ಸಾಲ: ಬೆಂಗಳೂರಿನ ಎಸ್‌ಬಿಐ ಬ್ಯಾಂಕ್‌ (ಮೈಸೂರು ಬ್ಯಾಂಕ್‌ ವೃತ್ತ)ನಲ್ಲಿ 1,23,11,206 ರೂ. ಹೌಸಿಂಗ್‌ ಲೋನ್‌, ಹುನಗುಂದದ ಶಂಕರ ಬ್ಯಾಂಕ್‌ ನಲ್ಲಿ 2.50 ಲಕ್ಷ ವಾಹನ ಸಾಲಸೇರಿ ಒಟ್ಟು 1,62,72,759 ರೂ. ಸಾಲ ಹೊಂದಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.