3 ಬಾರಿ ಸಿಎಂ ಸ್ಥಾನ ತಪ್ಪಿದರೂ ಕಾಂಗ್ರೆಸ್ನಲ್ಲೇ ಇದ್ದೇನೆ
Team Udayavani, Apr 13, 2019, 3:00 AM IST
ಕಲಬುರಗಿ: “ಮೂರು ಸಲ ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದೆ. ಆದರೂ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದೇನೆಯೇ’ ಎಂದು ಪ್ರಶ್ನಿಸುವ ಮೂಲಕ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ ತಮ್ಮ ನೋವು ನಿವೇದಿಸಿಕೊಂಡರು.
ಶುಕ್ರವಾರ ತಾಲೂಕಿನ ಪಟ್ಟಣ ಗ್ರಾಮದಲ್ಲಿ ಪ್ರಚಾರ ವೇಳೆ ಮಾತನಾಡಿ, “ಬೇರೆ-ಬೇರೆ ಕಾರಣಗಳಿಂದ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿದೆ. ಹಾಗಂತ ನಾನೆಲ್ಲೂ ಬಹಿರಂಗವಾಗಿ ಮಾತನಾಡಿಲ್ಲ. ನನಗೆ ಪಕ್ಷ ಹಾಗೂ ಅದರ ಸಿದ್ಧಾಂತಗಳು ಮುಖ್ಯವಾಗಿದ್ದವು.
ಕಾಂಗ್ರೆಸ್ನಿಂದ ಹೊರಗೆ ಹೋದವರು ಯಾವುದೇ ಸಿದ್ಧಾಂತ ಪಾಲಿಸದೇ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದ್ದಾರೆ. ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ನನ್ನನ್ನು 11 ಸಲ ಗೆಲ್ಲುವಂತೆ ಮಾಡಿದೆ. ಹೀಗಾಗಿ ಪ್ರಧಾನಿ ಮೋದಿ ಕಲಬುರಗಿಗೆ ಬಂದಿದ್ದರೂ ನನ್ನ ಬಗ್ಗೆ ಮಾತನಾಡಿಲ್ಲ. ಆದರೆ ಮೋದಿಯ ಇಲ್ಲಿನ ಮರಿಗಳು ನನ್ನ ಬಗ್ಗೆ ಮಾತನಾಡುತ್ತಿವೆ’ ಎಂದರು.
ನನ್ನ ವಿರುದ್ಧ ಹೊರಟ ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ, ಬಾಬುರಾವ ಚಿಂಚನಸೂರ ಅವರು ತಾವೇ ಮೊದಲು ಸೋತು ಸುಣ್ಣವಾಗಿದ್ದಾರೆ. ಆದರೆ ಈಗಲೂ ನನ್ನನ್ನು ಸೋಲಿಸುವ ಮಾತನಾಡುತ್ತಿದ್ದಾರೆ.
-ಡಾ| ಮಲ್ಲಿಕಾರ್ಜುನ ಖರ್ಗೆ, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು