ಮುಖ್ಯಮಂತ್ರಿ ಫಡ್ನವೀಸ್‌ ಅವರಿಂದ 70 ರ‍್ಯಾಲಿಗಳು ಯಶಸ್ವಿ


Team Udayavani, Apr 25, 2019, 11:29 AM IST

2304MUM12

ಮುಂಬಯಿ: ಉತ್ತರ ಪ್ರದೇಶದ ಬಳಿಕ ಅತೀ ಹೆಚ್ಚು ಲೋಕಸಭಾ ಸೀಟುಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚಿನ ಸೀಟುಗಳನ್ನು ಗೆಲ್ಲಲು ಬಿಜೆಪಿ ಹಗಲಿರುಳು ಶ್ರಮಿಸುತ್ತಿದ್ದು, ಇದರ ಸಂಪೂರ್ಣ ಜವಾಬ್ದಾರಿಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು ವಹಿಸಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಅಧಿಕ ಸೀಟುಗಳನ್ನು ಗೆಲ್ಲಲು ಮಹಾರಾಷ್ಟ್ರ ಬಿಜೆಪಿ ವರಿಷ್ಠರಿಗೆ ಸೂಚಿಸಿದ್ದು, ಇಲ್ಲಿಯವರೆಗೆ ಫಡ್ನವೀಸ್‌ ಅವರು 31 ಸೀಟುಗಳ ಚುನಾವಣ ಪ್ರಚಾರಕ್ಕಾಗಿ 70 ರ್ಯಾಲಿಗಳನ್ನು ನಡೆಸಿ ಕೇಂದ್ರದ ಮೋದಿ ಸರಕಾರ ಮತ್ತು ರಾಜ್ಯ ಬಿಜೆಪಿ-ಶಿವಸೇನೆ ಸರಕಾರದ ಜನಪರ ಯೋಜನೆಗಳನ್ನು ಜನತೆಯ ಮನ-ಮನೆಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎ. 29 ರಂದು 17 ಸೀಟುಗಳಿಗಾಗಿ 4ನೇ ಹಂತದ ಚುನಾವಣೆ ನಡೆಯಲಿದ್ದು, ಎ. 27ರಂದು ಚುನಾವಣ ಪ್ರಚಾರಕ್ಕೆ ತೆರೆ ಬೀಳಲಿದೆ. ಅಲ್ಲಿಯವರೆಗೆ ಫಡ್ನವೀಸ್‌ ಅವರು 100ಕ್ಕೂ ಅಧಿಕ ರ್ಯಾಲಿಗಳಲ್ಲಿ ಭಾಗವಹಿಸಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌-ಎನ್‌ಸಿಪಿ ಮಹಾ ಘಟಬಂಧನ್‌ ಮಧ್ಯೆ ರಾಜ್ಯದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಪಕ್ಷಗಳು 48 ಸೀಟುಗಳಿಗೆ ಸ್ಪರ್ಧಿಸುತ್ತಿವೆ. ಇಲ್ಲಿಯವರೆಗೆ 31 ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಎನ್‌ಸಿಪಿಯ ಪ್ರಬಲ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಇದು ಬಿಜೆಪಿಗೆ ಮತ್ತಷ್ಟು ಅನುಕೂಲವಾಗಲಿದೆ ಎನ್ನಲಾಗಿದೆ. ಇದಕ್ಕೆ ವಿರುದ್ಧವಾಗಿ ಫಡ್ನವೀಸ್‌ ರಾಜ್ಯದ ಪ್ರಮುಖ ಸ್ಥಳಗಳಲ್ಲಿ 70 ಪ್ರಚಾರ ರ್ಯಾಲಿಗಳನ್ನು ನಡೆಸಿದ್ದಾರೆ. ವಿಶೇಷವೆಂದರೆ ಗುಜರಾತ್‌ ಮತ್ತು ಗೋವಾದಲ್ಲೂ ಫಡ್ನವೀಸ್‌ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೊಂದೆಡೆ ಪ್ರಚಾರದ ಭರಾಟೆಯಲ್ಲಿ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಮತ್ತು ಎಂಎನ್‌ಎಸ್‌ ನಾಯಕ ರಾಜ್‌ ಠಾಕ್ರೆ ಅವರ ಪ್ರತಿಯೊಂದು ಟೀಕೆಗಳಿಗೆ ಫಡ್ನವಿಸ್‌ ಸಮರ್ಪಕವಾದ ಉತ್ತರ ನೀಡಿ ಜನಾಕರ್ಷಣೆಗೆ ಒಳಗಾಗಿದ್ದಾರೆ ಎನ್ನಲಾಗಿದೆ.

ಬೆಳಗ್ಗೆ ರ‍್ಯಾಲಿ-ರಾತ್ರಿ ಸಭೆ
ಫಡ್ನವೀಸ್‌ ದಿನಂಪ್ರತಿ ಬೆಳಗ್ಗೆಯಿಂದ ಸಂಜೆಯವರೆಗೆ ರಾಜ್ಯದ ವಿವಿಧೆಡೆಗಳಲ್ಲಿ ಪ್ರಚಾರ ರ್ಯಾಲಿಗಳಲ್ಲಿ ಪಾಲ್ಗೊಂಡರೆ, ರಾತ್ರಿಯ ಹೊತ್ತು ತಮ್ಮ ವರ್ಷಾ ಬಂಗ್ಲೆಯಲ್ಲಿ ಪಕ್ಷದ ನೇತಾರರೊಂದಿಗೆ ಸಭೆಯಲ್ಲಿ ಬ್ಯುಸಿಯಾಗಿ ದ್ದಾರೆ. ಮುಖ್ಯಮಂತ್ರಿಗಳ ಚುನಾವಣ ಜವಾಬ್ದಾರಿ ಎಷ್ಟಿದೆ ಎಂದರೆ ದಿನದಲ್ಲಿ 3-4 ಚುನಾವಣ ಪ್ರಚಾರ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ರಾತ್ರಿ 2 ಗಂಟೆಯವರೆಗೂ ಪಕ್ಷದ ನೇತಾರರೊಂದಿಗೆ ಮಹತ್ವದ ಸಭೆ ಯನ್ನು ನಡೆಸಿ ಚರ್ಚೆಯನ್ನು ಮಾಡಲಾಗುತ್ತಿದೆ. ಬೆಳಗ್ಗೆ ಮತ್ತೆ ಅದೇ ರಾಗ ಎಂಬಂತೆ ರ್ಯಾಲಿಯಲ್ಲಿ ಮುಖ್ಯಮಂತ್ರಿಗಳು ನಿರತರಾಗಿ ಪಕ್ಷದ ಗೆಳುವಿಗಾಗಿ ಶ್ರಮಿಸುತ್ತಿದ್ದಾರೆ.

ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಫಡ್ನವೀಸ್‌
ಬಿಜೆಪಿಯು ಹೊರಡಿಸಿರುವ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರ ಹೆಸರು ಮೊದಲಿಗಿರುವುದು ವಿಶೇಷವಾಯಾಗಿದೆ. ರಾಜ್ಯದ ಗಡಿcರೋಳಿಯಿಂದ ಹಿಡಿದು ವಾರ್ಧಾ, ನಾಗ್ಪುರ, ಭಂಡಾರ, ಗೋಂಡಿಯಾ, ಬುಲಾzಣ, ಅಮರಾವತಿ, ನಾಂದೇಡ್‌, ಉಸ್ಮನಾಬಾದ್‌, ಸಾಂಗ್ಲಿ, ಸತಾರ, ಲಾತೂರ್‌, ಮಾಡಾ, ಕೊಲ್ಲಾಪುರ ಸೇರಿದಂತೆ ಪ್ರಥಮ, ದ್ವಿತೀಯ, ತೃತೀಯ ಹಂತದಲ್ಲಿ ನಡೆಯಲಿರುವ ಎಲ್ಲಾ ಕ್ಷೇತ್ರಗಳಲ್ಲಿ ಫಡ್ನವೀಸ್‌ ಪ್ರಚಾರ ನಡೆಸಿದ್ದಾರೆ. ಮುಖ್ಯಮಂತ್ರಿ ಫಡ್ನವೀಸ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಭಾಗವಹಿಸಿದ ಎಲ್ಲ ರ್ಯಾಲಿಗಳಲ್ಲಿ ಪ್ರಮುಖರಾಗಿದ್ದರು. ರಾಜ್ಯದ ಗ್ರಾಮೀಣ ಪ್ರದೇಶಗಳಿಂದ ಹಿಡಿದು ಎಲ್ಲ ಆಯಾಯ ಕ್ಷೇತ್ರಗಳ ಚುನಾವಣ ಪ್ರಚಾರಕ್ಕೆ ಸಂಬಂಧಿಸಿ ಫಡ್ನವೀಸ್‌ ಅವರ ನೇತೃತ್ವದಲ್ಲೇ ಕಾರ್ಯಕ್ರಮಗಳು ನಡೆಯುತ್ತಿರುವುದು ವಿಶೇಷ ಎನ್ನಬಹುದು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ರಾಜ್ಯದಲ್ಲೇ ಬಿಜೆಪಿಯ ಅತ್ಯಂತ ಪ್ರಸಿದ್ಧಿಯ ನೇತಾರರಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಜಯ ಗಳಿಸುವ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ರ್ಯಾಲಿಗಳನ್ನು ನಡೆಸಲಾಗುತ್ತಿದೆ. ಮುಖ್ಯಮಂತ್ರಿಗಳ ಎಲ್ಲಾ ರ್ಯಾಲಿಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದು, ಇದು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂಬುಂದಕ್ಕೆ ನಿದರ್ಶನವಾಗಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ-ಶಿವಸೇನೆ ಮೈತ್ರಿ ಪಕ್ಷಗಳು ಪಡೆಯುವುದರಲ್ಲಿ ಸಂಶಯವಿಲ್ಲ.
– ಕೇಶವ ಉಪಾಧ್ಯೆ,ಬಿಜೆಪಿ ಪ್ರದೇಶ ಪ್ರವರ್ತಕ

ಫಡವೀಸ್‌ ಅವರ ಭ್ರಷ್ಟಾಚಾರ ಮುಕ್ತ ಸರಕಾರ ಮತ್ತು ವಿಕಾಸ ಕಾರ್ಯಗಳಿಂದ ಜನರು ಪ್ರೇರಿತರಾಗಿ ಅವರ ಭಾಷಣವನ್ನು ಕೇಳಲು ಮುಗಿಬೀಳುತ್ತಿದ್ದಾರೆ. ಇಲ್ಲಿಯವರೆಗೆ ಕಾಂಗ್ರೆಸ್‌-ಎನ್‌ಸಿಪಿಯ ಯಾವುದೇ ನಾಯಕರು ಚುನಾವಣೆಗಾಗಿ ಇಷ್ಟೊಂದು ಪ್ರಚಾರದಲ್ಲಿ ತೊಡಗಿಲ್ಲ. ಮುಖ್ಯಮಂತ್ರಿಗಳು ಎಲ್ಲವನ್ನೂ ಸಾಧಿಸಿ ತೋರಿಸಿದ್ದಾರೆ. ಇದರಿಂದ ಬಿಜೆಪಿಗೆ ಬಹಳಷ್ಟು ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ. ಫಲಿತಾಂಶ ಮುಂದಿನ ದಿನಗಳಲ್ಲಿ ತಿಳಿಯಲಿದೆ.
– ಮೋಹಿತ್‌ ಭಾರತೀಯ,ಅಧ್ಯಕ್ಷರು, ಮುಂಬಯಿ ಬಿಜೆಪಿ ಉತ್ತರ ಭಾರತೀಯ ಮೋರ್ಚಾ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.