ಸೋಲಿನ ಭಯ ವಿಲ್ಲ,ಸ್ಪರ್ಧೆ ಖಚಿತ


Team Udayavani, Mar 4, 2019, 9:28 PM IST

sumalatha-ambareesh-sa.jpg

ಮಂಡ್ಯ: “ನನಗೆ ಸೋಲಿನ ಭಯವಿಲ್ಲ. ಸ್ಪರ್ಧೆ ಖಚಿತ’ ಎಂದು ಮಂಡ್ಯ ಲೋಕಸಭಾ ಚುನಾವಣೆ ಸ್ಪರ್ಧಾಕಾಂಕ್ಷಿ ಸುಮಲತಾ ಅಂಬರೀಶ್‌ ದೃಢವಾಗಿ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಹುತಾತ್ಮ ಯೋಧ ಎಚ್‌. ಗುರು ಅವರ ಕುಟುಂಬಕ್ಕೆ 20 ಗುಂಟೆ ಜಮೀನು ಹಸ್ತಾಂತರದದಾನ ಪತ್ರ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸೋಲಿಗೆ ಹೆದರುವುದಕ್ಕೆ ನಾನೇನು ಯುದಟಛಿ ಮಾಡುತ್ತಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಇಲ್ಲಿ ಸೋಲು-ಗೆಲುವು ಸಹಜ. ಸ್ಪರ್ಧೆ ಮಾಡುವುದಂತೂ ಖಚಿತ ಎಂದು ಖಡಕ್ಕಾಗಿ ಉತ್ತರಿಸಿದರು. ನಾನೀಗ ಕಾಂಗ್ರೆಸ್‌ ಟಿಕೆಟ್‌ ಕೇಳಿದ್ದೇನೆ. ಪಕ್ಷ ಯಾವ ನಿರ್ಧಾರ
ತೆಗೆದುಕೊಳ್ಳುತ್ತದೋ ನೋಡೋಣ. ಬಹುಶಃ 2-3 ದಿನದೊಳಗೆ ಪಕ್ಷದ ನಿರ್ಧಾರ ಹೊರಬೀಳಬಹುದು. ಆನಂತರ ನನ್ನ ನಿರ್ಧಾ ರ ವನ್ನು ಪ್ರಕಟಿಸುತ್ತೇನೆಂದರು. ಕಾಂಗ್ರೆಸ್‌ನ ಕೆಲವು ನಾಯಕರು ನನ್ನನ್ನು ಭೇಟಿಯಾಗಿ ಚುನಾವಣೆಗೆ ಮಂಡ್ಯವನ್ನೇ ಏಕೆ ಆಯ್ಕೆ ಮಾಡಿಕೊಂಡಿದ್ದೀರಿ, ಬೆಂಗಳೂರು ಉತ್ತರ ಅಥವಾ ದಕ್ಷಿಣ ವನ್ನೋ ಆಯ್ಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದರು. ಅಲ್ಲದೆ, 8 ತಿಂಗಳ ಹಿಂದೆ ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡುವ ಬಗ್ಗೆಯೂ ಪ್ರಸ್ತಾಪಿಸಿದ್ದರು. 3 ತಿಂಗಳ ಹಿಂದೆಯೂ ಅದನ್ನು ಪುನರುಚ್ಚರಿಸಿ ದ್ದರು. ಆದರೆ, ನಾನು ಅದನ್ನು ನಿರಾಕರಿಸಿದ್ದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕುಮಾರಸ್ವಾಮಿಗೆ ಟಾಂಗ್‌
“ಅಂಬರೀಶ್‌ ಅವರು ಅಧಿಕಾರದಲ್ಲಿದ್ದ ವೇಳೆಏನೆಲ್ಲಾ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎನ್ನುವುದನ್ನು ಜನರೇ ಹೇಳುತ್ತಾರೆ. ವಸತಿ
ಸಚಿವರಾಗಿದ್ದಾಗ ಎಷ್ಟೋ ಮನೆಗಳನ್ನು ಕೊಡಿಸಿದ್ದಾರೆ. ಆ ವೇಳೆ ಅವರ ಆರೋಗ್ಯ ಸಮಸ್ಯೆಯೂ ಕಾಡಿತ್ತು. ಆದರೂ, ಜನರಿಗಾಗಿ
ಕೆಲಸ ಮಾಡಿದ್ದಾರೆ’ ಎಂದು ಸಿಎಂ ಕುಮಾರಸ್ವಾಮಿಗೆ ಸುಮಲತಾ ಟಾಂಗ್‌ ನೀಡಿದರು. ಮಂಡ್ಯ ಜಿಲ್ಲೆಯ ಸಮುದಾಯ ಭವನ ಗಳು, ಶಾಲಾ ಕಾಂಪೌಂಡ್‌ಗಳು ಸೇರಿ  ಅನೇಕ ಕಾಮಗಾರಿಗಳಿಗೆ ಅನುದಾನ ನೀಡಿ ಅಭಿವೃದ್ಧಿಯ ಸೂತ್ರಧಾರರಾಗಿದ್ದರು. ಗ್ರಾಮೀಣ ಸೇರಿ ನಗರದ ರಸ್ತೆಗಳ ಅಭಿವೃದ್ಧಿ ಮಾಡಿದ್ದರು. ಮೆಡಿಕಲ್‌ ಕಾಲೇಜು ಮಂಜೂರಾತಿಗೆ ಪ್ರಾಮಾಣಿವಾಗಿ ಕೆಲಸ ಮಾಡಿದ್ದರು. ಅವರು ಮಾಡಿರುವ ಕೆಲಸಗಳ ಬಗ್ಗೆ ಅವ ರೆಂದೂ ಪುಕ್ಕಟ್ಟೆ ಪ್ರಚಾರ ಪಡೆಯಲಿಲ್ಲ. ಜಾಹೀರಾತು ಹಾಕಿಸಿಕೊಳ್ಳಲಿಲ್ಲ ಎಂದರು.

ಮಂಡ್ಯದಲ್ಲೇ ಮನೆ ಕಟ್ಟಿಸುವೆ
“ನಾನು ಮಂಡ್ಯದಲ್ಲೇ ಸ್ವಂತ ಮನೆ ಕಟ್ಟಿಸುತ್ತೇನೆ. ಆಗ ಖಾಲಿ ಮಾಡಿಕೊಂಡು ಹೋಗುವ ಪ್ರಶ್ನೆಯೇ ಇರುವುದಿಲ್ಲ’ ಎಂದು ಸುಮ ಲತಾ ಅಂಬರೀಶ್‌ ತಿಳಿಸಿದರು. ಇಲ್ಲಿನ ಮಂಜುನಾಥ ನಗರದಲ್ಲೇ ನನ್ನ ಪತಿಯ ಪಿತ್ರಾರ್ಜಿತ ಆಸ್ತಿ ಇದೆ. ಆ ನಿವೇಶನದಲ್ಲೇ
ಹೊಸ ಮನೆ ಕಟ್ಟಿಸುತ್ತೇನೆ. ಸದ್ಯಕ್ಕೆ ಬಾಡಿಗೆ ಮನೆಯಲ್ಲಿ ಇರಲು ನಿರ್ಧರಿಸಿದ್ದೇನೆ. ಮನೆ ಕಟ್ಟಿಸಿದ ಬಳಿಕ ಅಲ್ಲೇ ಉಳಿಯುತ್ತೇನೆ. ಜನರ ಪ್ರೀತಿ-ಬಾಂಧವ್ಯದಿಂದ ದೂರ ಹೋಗಲು ನಾನೆಂದೂ ಬಯಸುವುದಿಲ್ಲ ಎಂದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.