ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!


Team Udayavani, May 23, 2019, 6:00 AM IST

s-28
ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಮುನ್ನವೇ ಅನುಮಾನಾಸ್ಪದವಾಗಿ ಇವಿಎಂಗಳನ್ನು ಸಾಗಾಟ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಕಾಂಗ್ರೆಸ್‌, ಎಸ್‌ಪಿ-ಬಿಎಸ್‌ಪಿ ಕಾರ್ಯಕರ್ತರು ರಾತ್ರೋರಾತ್ರಿ ‘ಚೌಕಿದಾರ’ರಾಗಿ ಬದಲಾಗಿದ್ದಾರೆ!

ಉತ್ತರಪ್ರದೇಶ, ಪಂಜಾಬ್‌, ಹರ್ಯಾಣ, ಬಿಹಾರಗಳಲ್ಲಿ ಇವಿಎಂಗಳ ಸಾಗಾಟದ ವರದಿ ಪ್ರತಿಪಕ್ಷಗಳಲ್ಲಿ ಆತಂಕ ಮೂಡಿಸಿದ್ದು, ಅನೇಕ ಕಾರ್ಯಕರ್ತರು ಇವಿಎಂಗಳನ್ನು ಇಟ್ಟಿರುವ ಸ್ಟ್ರಾಂಗ್‌ ರೂಂಗಳ ಹೊರಗೆ ಕಾವಲು ಕಾಯಲಾರಂಭಿಸಿದ್ದಾರೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯಿಡೀ ಎಸ್‌ಪಿ -ಬಿಎಸ್‌ಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸ್ಟ್ರಾಂಗ್‌ ರೂಂ ಹೊರಗೆಯೇ ಠಿಕಾಣಿ ಹೂಡಿದ್ದಾರೆ. ಉತ್ತರಪ್ರದೇಶದ ಮೀರತ್‌ ಮತ್ತು ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರಾತ್ರಿಯಿಡೀ ಸ್ಟ್ರಾಂಗ್‌ ರೂಂ ಹೊರಗೇ ಕಳೆದಿದ್ದಾರೆ. ಚಂಡೀಗಡದಲ್ಲೂ ಕಾಂಗ್ರೆಸ್‌ ಕಾರ್ಯಕರ್ತರು ಇದೇ ಕೆಲಸದಲ್ಲಿ ನಿರತರಾಗಿದ್ದು, ಇವಿಎಂಗಳು ಸ್ಟ್ರಾಂಗ್‌ರೂಂನಿಂದ ಎಲ್ಲೂ ಹೋಗದಂತೆ ನೋಡಿಕೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ ಭೋಪಾಲ್ ಕ್ಷೇತ್ರದ ಅಭ್ಯರ್ಥಿ ದಿಗ್ವಿಜಯ್‌ ಸಿಂಗ್‌, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ನಾಯಕ ಸಂಜಯ್‌ ನಿರುಪಮ್‌, ಕೇರಳದಲ್ಲಿ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಸೇರಿದಂತೆ ಪ್ರಮುಖ ಅಭ್ಯರ್ಥಿಗಳು ಸ್ಟ್ರಾಂಗ್‌ ರೂಂಗೆ ಭೇಟಿ ನೀಡಿದ್ದಾರೆ.

ವಿಪಕ್ಷಗಳ ವಿರುದ್ಧ ಶಾ ಕಿಡಿ
ಮತಯಂತ್ರಗಳ (ಇವಿಎಂ) ವಿಶ್ವಾಸ ನೀಯತೆಯ ಬಗ್ಗೆ ಪ್ರಶ್ನಿಸಲಾರಂಭಿಸಿರುವ ವಿರೋಧ ಪಕ್ಷಗಳು ದೇಶದ ಜನತೆ ನೀಡಿರುವ ತೀರ್ಪಿಗೆ ಅಪಮಾನ ಎಸಗುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಟೀಕಿಸಿದ್ದಾರೆ. ಟ್ವಿಟರ್‌ನಲ್ಲಿ ಈ ಕುರಿತಾಗಿ ಹೇಳಿರುವ ಅವರು, ಪ್ರತಿಪಕ್ಷಗಳ ಈ ಕೂಗು ಚುನಾವಣೆಯಲ್ಲಿ ಸೋಲುವ ಹತಾಶೆಯಿಂದ ಹೊರಬಿದ್ದಿದ್ದು, ದೇಶದ ಪ್ರಜಾಪ್ರಭುತ್ವವನ್ನು ಹಂತ ಹಂತವಾಗಿ ಕ್ಷೀಣಿಸುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. 6ನೇ ಸುತ್ತಿನ ಮತದಾನ ಮುಕ್ತಾಯವಾದ ನಂತರ ಇವಿಎಂಗಳ ಬಗ್ಗೆ ದೂರ ಲಾರಂಭಿಸಿದ ವಿಪಕ್ಷಗಳು, ಇತ್ತೀಚೆಗೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ನಂತರ ತಮ್ಮ ಅಸಮಾಧಾನವನ್ನು ದೊಡ್ಡ ಮಟ್ಟದಲ್ಲಿ ವ್ಯಕ್ತಪಡಿಸಲಾರಂಭಿಸಿವೆ. ಚುನಾವಣೋತ್ತರ ಸಮೀಕ್ಷೆಗಳನ್ನೇ ಆಧಾರವಾಗಿಟ್ಟು ಕೊಂಡು ಇವಿಎಂಗಳನ್ನು ದೂರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

Modi

ದೀದಿ ಕೋಟೆಯಲ್ಲಿ ಮೋದಿ ಅಲೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.