ಎಲ್ಲಾ ನಾಮ್ಕಾವಾಸ್ತೆ
ಗಾಸಿಪ್
Team Udayavani, Apr 11, 2019, 3:00 AM IST
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಡಿ ಸೀಟು ಹೊಂದಾಣಿಕೆ ಮಾಡಿಕೊಂಡು ಸ್ಪರ್ಧೆ ಮಾಡಿರುವ ವಿಚಾರ ಐದಾರು ಕ್ಷೇತ್ರಗಳಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸುತಾರಾಂ ಇಷ್ಟವಾಗುತ್ತಿಲ್ಲವಂತೆ.
ಎರಡೂ ಪಕ್ಷಗಳ ನಾಯಕರು ಎಷ್ಟೇ ಪ್ರಯತ್ನ ಮಾಡಿದರೂ, ಕಾರ್ಯಕರ್ತರು ತಮ್ಮ ಅಸಮಾಧಾನ ತೊರೆಯಲು ಸಿದ್ಧರಿಲ್ಲವಂತೆ. ಈ ಒಂದು ಚುನಾವಣೆಯಲ್ಲಿ ನಮ್ಮನ್ನು ನಮ್ಮ ಪಾಲಿಗೆ ಬಿಟ್ಟು ಬಿಡಿ. ಆಮೇಲೆ ನೀವು ಹೇಳಿದಂತೆ ಕೇಳುತ್ತೇವೆ ಎಂದು ಹೇಳುತ್ತಿದ್ದಾರಂತೆ.
ಮಂಡ್ಯದಲ್ಲಿ ಕಾಂಗ್ರೆಸ್ನವರು, ಮೈಸೂರಿನಲ್ಲಿ ಜೆಡಿಎಸ್ನವರು ತಮ್ಮ ನಾಯಕರ ಮುಂದೆಯೇ ಇಂತದ್ದೊಂದು ಬೇಡಿಕೆ ಇಡುತ್ತಿದ್ದಾರಂತೆ. ಇದು ಹಿರಿಯ ನಾಯಕರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸುತ್ತಿದೆಯಂತೆ. ಇತ್ತ, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಕಳೆದುಕೊಳ್ಳುವಂತೆಯೂ ಇಲ್ಲ, ಅತ್ತ, ಅವರ ಮೇಲೆ ಕ್ರಮ ಕೈಗೊಳ್ಳದೆ ಸುಮ್ಮನಿರುವಂತೆಯೂ ಇಲ್ಲ ಎಂಬಂತಾಗಿದೆಯಂತೆ ನಾಯಕರ ಸ್ಥಿತಿ.
ಅದಕ್ಕೆ ನಾನು ಹೊಡೆದಂಗೆ ಮಾಡ್ತೇನೆ, ನೀವು ಅತ್ತಂಗೆ ಮಾಡಿ ಎಂದು ನಾಮ್ಕಾವಾಸ್ತೆ ಶಿಸ್ತು ಕ್ರಮ, ನೋಟಿಸ್ ಜಾರಿ, ಅಮಾನತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆಯಂತೆ. ಚುನಾವಣಾ ಫಲಿತಾಂಶ ಹೊರ ಬರುತ್ತಿದ್ದಂತೆ ಈಗಿನ ಆದೇಶಗಳನ್ನು ಹಿಂದಕ್ಕೆ ಪಡೆಯುವ ಕೆಲಸವೂ ಆಗಲಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು